Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೇಸಿಗೆಗೆ ಮಂಡ್ಯದ 239 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಸಾಧ್ಯತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೇಸಿಗೆಗೆ ಮಂಡ್ಯದ 239 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಸಾಧ್ಯತೆ

Districts

ಬೇಸಿಗೆಗೆ ಮಂಡ್ಯದ 239 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಸಾಧ್ಯತೆ

Public TV
Last updated: March 5, 2026 2:54 pm
Public TV
Share
3 Min Read
DRINKING WATER 1
SHARE

ಮಂಡ್ಯ: ಪಂಚ ನದಿಗಳ ಬೀಡು ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಬೇಸಿಗೆಯಲ್ಲಿ (Summer) ಕುಡಿಯುವ ನೀರಿನ ಅಭಾವ ಹೆಚ್ಚಾಗುವ ಸಾಧ್ಯತೆಯಿದೆ. ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಉದ್ಭವಿಸಬಹುದಾದ 239 ಸಂಭವನೀಯ ಗ್ರಾಮಗಳನ್ನ ಪಟ್ಟಿ ಮಾಡಿದ್ದು, ಮುಂದಿನ ದಿನಗಳಲ್ಲಿ ಈ ಸಮಸ್ಯೆ ಮತ್ತಷ್ಟು ಜಟಿಲವಾದರೂ ಆಶ್ಚರ್ಯ ಪಡುವಂತಿಲ್ಲ.

ಬೇಸಿಗೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ (Drinking Water) ಅಭಾವ ಉಂಟಾಗುವ ಗ್ರಾಮಗಳನ್ನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಈಗಾಗಲೇ ಪಟ್ಟಿ ಮಾಡಿಕೊಂಡಿದ್ದು, ಬೇಸಿಗೆಯಲ್ಲಿ ನೀರಿನ ದಾಹ ನೀಗಿಸಲು ಸಿದ್ಧತೆ ಕೈಗೊಂಡಿದ್ದಾರೆ. ಆದ್ರೆ ಟ್ಯಾಂಕರ್ (Tanker Water) ಮೂಲಕ ನೀರು ಸರಬರಾಜು ಮಾಡಲಾಗುವ ಗ್ರಾಮಗಳ ಸಂಖ್ಯೆ ಪಟ್ಟಿಯಲ್ಲಿ ಇಲ್ಲದಿರುವುದು ಸಮಾಧಾನದ ಸಂಗತಿಯಾಗಿದೆ. ಆದರೆ, ಈ ನಡುವೆ ಮಂಡ್ಯ ತಾಲ್ಲೂಕಿನ ಮೊಳೆಕೊಪ್ಪಲು ಗ್ರಾಮದಲ್ಲಿ ಈಗಾಗಲೇ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದು ಎಚ್ಚರಿಕೆ ಗಂಟೆಯಾಗಿದೆ.

Mandya River

ಬೇಸಿಗೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉದ್ಭವಿಸಬಹುದಾದ ಒಟ್ಟು 239 ಗ್ರಾಮಗಳನ್ನ ಗುರುತು ಮಾಡಿದ್ದು, 206 ಖಾಸಗಿ ಬೋರ್‌ವೆಲ್‌ಗಳನ್ನ ಗುರುತಿಸಲಾಗಿದೆ. ಉಳಿದಂತೆ ಜಿಲ್ಲೆಯಲ್ಲಿ 33 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಉದ್ದೇಶಿಸಿರುವ ಗ್ರಾಮಗಳನ್ನ ಗುರುತು ಮಾಡಲಾಗಿದೆ. ಈ ಗ್ರಾಮಗಳಿಗೆ ಯಾವುದೇ ಸಂದರ್ಭದಲ್ಲೂ ಕುಡಿಯುವ ನೀರಿಗೆ ಅಭಾವ ಸೃಷ್ಟಿಯಾಗುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ. ಅದಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇರುವ ಸಂಭಾವ್ಯ ಗ್ರಾಮಗಳನ್ನು ಗುರುತಿಸಿ ನೀರಿನ ದಾಹ ನೀಗಿಸಲು ಸಿದ್ಧತೆ ಮಾಡಿಕೊಂಡಿದೆ.

ಮುಂದಿನ ದಿನಗಳಲ್ಲಿ ಇದೇ ರೀತಿ ಬಿಸಿಲಿನ ವಾತಾವರಣವಿದ್ದಿದ್ದೆ ಆದಲ್ಲಿ, ಈ ಸಮಸ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಹೆಚ್ಚಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಪಂಚ ನದಿಗಳು ಹರಿದರೂ ಕುಡಿಯುವ ನೀರಿಗೆ ಅಭಾವ ಸೃಷ್ಟಿಯಾಗುತ್ತಿರುವುದು ವಿಪಾರ್ಯಸವೇ ಸರಿ.

Siddaramaiah govt hikes drinking water Tax BWSSB

ಜಿಲ್ಲೆಯಲ್ಲಿ ಬೇಸಿಗೆಗೆ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಬಹುದಾದ 239 ಗ್ರಾಮಗಳನ್ನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ತಾಲ್ಲೂಕುವಾರು ಪಟ್ಟಿ ಮಾಡಿದೆ. ಕೆ.ಆರ್ ಪೇಟೆ 67, ಮದ್ದೂರು 29, ಮಳವಳ್ಳಿ 31, ಮಂಡ್ಯ 32, ನಾಗಮಂಗಲ 43, ಪಾಂಡವಪುರ 27 ಹಾಗೂ ಶ್ರೀರಂಗಪಟ್ಟಣ 10 ಗ್ರಾಮಗಳಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗುವ ಸಾಧ್ಯತೆ ಇರುವ ಬಗ್ಗೆ ಪಟ್ಟಿ ತಯಾರಿಸಿ, ಮುಂಜಾಗ್ರತ ಕ್ರಮ ಅನುಸರಿಸಿದೆ.

ಪಂಚ ನದಿಗಳ ಬೀಡಲ್ಲು ನೀಗದ ದಾಹ:
ಜಿಲ್ಲೆಯಲ್ಲಿ ಕಾವೇರಿ, ಹೇಮಾವತಿ, ಲೋಕಪಾವನಿ, ಶಿಂಷಾ ಹಾಗೂ ವೀರ ವೈಷ್ಣವಿ ಪಂಚ ನದಿಗಳು ಜಿಲ್ಲಾ ವ್ಯಾಪ್ತಿಯಲ್ಲಿ ಹರಿದರೂ ಪ್ರತಿ ವರ್ಷ ಬೇಸಿಗೆಗೆ ಕುಡಿಯುವ ನೀರಿಗೆ ಅಭಾವ ಉಂಟಾಗುತ್ತಿರುವುದು ಮಾತ್ರ ದುರ್ದೈವವೇ ಸರಿ.

Mandya Girl Murder Hemavati River 6

206 ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್‌ಗಳೇ ಗತಿ:
ಕುಡಿಯುವ ನೀರಿಗೆ ಸಮಸ್ಯೆ ಉದ್ಭವಿಸುವ ಸಾಧ್ಯತೆ ಇರುವುದರಿಂದ ಜಿಲ್ಲಾ ಪಂಚಾಯಿತಿ 206 ಖಾಸಗಿ ಕೊಳವೆ ಬಾವಿಗಳನ್ನ ಗುರುತಿಸಿಕೊಂಡಿದೆ. ಗ್ರಾಮಗಳಿಗೆ ಕುಡಿಯುವ ನೀರು ಅಭಾವ ಸೃಷ್ಟಿಯಾದರೆ ಖಾಸಗಿ ಬೋರ್‌ವೆಲ್‌ಗಳ ಮೂಲ ನೀರು ಪೂರೈಸಲು ಸಿದ್ದತೆ ಮಾಡಿಕೊಂಡಿದೆ. ತಾಲ್ಲೂಕುವಾರು ಖಾಸಗಿ ಬೋರ್‌ವೆಲ್ ಗುರುತಿಸಿದ್ದು, ಕೆ.ಆರ್ ಪೇಟೆ 55, ಮದ್ದೂರು 29, ಮಳವಳ್ಳಿ 30, ಮಂಡ್ಯ 32, ನಾಗಮಂಗಲ 43, ಪಾಂಡವಪುರ 21 ಹಾಗೂ ಶ್ರೀರಂಗಪಟ್ಟಣ 4 ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನ ಗುರುತಿಸಲಾಗಿದೆ.

ನಿಷ್ಕೃಯಗೊಂಡ 42 ಶುದ್ಧ ಕುಡಿಯುವ ನೀರಿನ ಘಟಕಗಳು:
ಜಿಲ್ಲೆಯಲ್ಲಿ ಒಟ್ಟು 677 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಈ ಪೈಕಿ 615 ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, 42 ಶುದ್ಧ ಕುಡಿಯುವ ನೀರಿನ ಘಟಕಗಳು ವಿವಿಧ ಕಾರಣಗಳಿಂದ ಸ್ಥಗಿತಗೊಂಡಿವೆ. ಕೆ.ಆರ್.ಪೇಟೆಯಲ್ಲಿ 83 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಪೈಕಿ 3 ನಿಷ್ಕ್ರಿಯಗೊಂಡಿವೆ. ಮದ್ದೂರಲ್ಲಿ 98 ಘಟಕಗಳಿದ್ದು, 2 ಘಟಕಗಳು ಸ್ಥಗಿತಗೊಂಡಿವೆ. ಮಳವಳ್ಳಿಯಲ್ಲಿ ಒಟ್ಟು 88 ಘಟಕಗಳಿದ್ದು, 13 ರಿಪೇರಿಗೆ ಬಂದಿವೆ. ಮಂಡ್ಯ ತಾಲ್ಲೂಕಿನಲ್ಲಿ 165 ನೀರಿನ ಘಟಕಗಳಿದ್ದು, ಅದರಲ್ಲಿ 5 ರಿಪೇರಿಯಾಗಬೇಕಿದೆ. ನಾಗಮಂಗಲದಲ್ಲಿ 87 ಶುದ್ದ ನೀರಿನ ಘಟಕಗಳಿದ್ದು, ಈ ಪೈಕಿ 8 ಘಟಕಗಳು ಸ್ಥಗಿತಗೊಂಡಿವೆ. ಪಾಂಡವಪುರ 81 ಶುದ್ಧ ನೀರಿನ ಘಟಕಗಳಿದ್ದು, 5 ರಿಪೇರಿ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕು ವ್ಯಾಪ್ತಿಯಲ್ಲಿ 75 ಶುದ್ದ ನೀರಿನ ಘಟಕಗಳಿದ್ದು, 6 ಘಟಕಗಳು ಕೆಲಸ ನಿರ್ವಹಿಸುತ್ತಿಲ್ಲ.

Student Drinking Water

ಇದರಲ್ಲಿ ಕೆಲವು ಕಡೆ ಶುದ್ದ ಕುಡಿಯುವ ನೀರಿನ ಕಾಯಿನ್ ಬಾಕ್ಸ್‌ಗಳೇ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಕೆಲವು ವಿದ್ಯುತ್ ಸಮಸ್ಯೆ ಹಾಗೂ ತಾಂತ್ರಿಕ ಸಮಸ್ಯೆಯಿಂದ ನೆನೆಗುದಿಗೆ ಬಿದ್ದಿವೆ.

ಪ್ರತೀ ಸೋಮವಾರ ಕ್ಷೇತ್ರ ಭೇಟಿ ನಡೆಸಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಇನ್ನಿತರೆ ಸಮಸ್ಯೆಗಳ ಬಗ್ಗೆ ಪರಿಶೀಲಿಸಲಾಗುವುದು. ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಕಡೆ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನೀರು ಪೂರೈಸಲಾಗುವುದು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಸಿದ್ದತೆ ಕೈಗೊಳ್ಳಲಾಗಿದೆ. ಕುಡಿಯುವ ನೀರಿನ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಎಂದು ಜಿಪಂ ಸಿಇಓ ಕೆ.ಆರ್.ನಂದಿನಿ ತಿಳಿಸಿದ್ದಾರೆ.

TAGGED:drinking watermandyaRiverssummerಕುಡಿಯುವ ನೀರುನದಿಗಳುಬೇಸಿಗೆಮಂಡ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

peacock
Districts

ತುಮಕೂರಿನಲ್ಲಿ 32 ನವಿಲುಗಳ ಸಾವು – ಹೀಟ್‌ಸ್ಟ್ರೋಕ್ ಶಂಕೆ

Public TV
By Public TV
4 minutes ago
S Madhu Bangarappa
Bengaluru City

SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

Public TV
By Public TV
17 minutes ago
Basava Kalyana jatre
Bidar

ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಇಬ್ಬರ ಸ್ಥಿತಿ ಗಂಭೀರ

Public TV
By Public TV
28 minutes ago
public tv vidhyapeeta
Bengaluru City

ʻಪಬ್ಲಿಕ್‌ ಟಿವಿʼ ವಿದ್ಯಾಪೀಠದಲ್ಲಿ ಭಾಗಿಯಾಗಲಿವೆ 125ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು

Public TV
By Public TV
31 minutes ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
47 minutes ago
Thalapathy Vijay 1
Latest

TamilNadu Elections 2026 | ಮತದಾನ ಜೋರು – ಹಕ್ಕು ಚಲಾಯಿಸಿದ ತಲೈವಾ, ದಳಪತಿ, ತ್ರಿಶಾ, ಕಮಲ್ ಹಾಸನ್

Public TV
By Public TV
54 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?