ಮೈಸೂರು: ಆರ್ಎಸ್ಎಸ್ (RSS) ಚಿಂತನೆಯ ಶೈಕ್ಷಣಿಕ ಅಧಿವೇಶನಕ್ಕೆ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (Karnataka State Open University) ಸಹಯೋಗಕ್ಕೆ ಸರ್ಕಾರ ತಕರಾರು ತೆಗೆದಿದೆ. ಸರ್ಕಾರದ ಆಕ್ಷೇಪ ಬೆನ್ನಲ್ಲೇ ಕಾರ್ಯಕ್ರಮ ಸಹಯೋಗದಿಂದ ವಿವಿ ಹೊರಕ್ಕೆ ಬಂದಿದೆ.
ರಾಜ್ಯ ಮುಕ್ತ ವಿವಿ ಸಹಯೋಗ ಮತ್ತು ಹಣಕಾಸಿನ ನೆರವಿನೊಂದಿಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ರಾಜ್ಯ ಮುಕ್ತ ವಿವಿ ಉದ್ದೇಶಕ್ಕೆ ಸಂಬಂಧ ಇಲ್ಲದ ಅಧಿವೇಶನ ಇದು. ಇದನ್ನು ರದ್ದು ಮಾಡಿ ಎಂದು ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಆದೇಶಿಸಿದ್ದರು. ಆದೇಶದ ಬೆನ್ನಲ್ಲೇ ಕಾರ್ಯಕ್ರಮದ ಸಹಯೋಗದಿಂದ ವಿವಿ ಹೊರಬಂದಿದೆ. ಇದನ್ನೂ ಓದಿ: ಇಂದಿನಿಂದ ಗ್ಯಾಸ್ ಬುಕ್ಕಿಂಗ್ಗೆ ಹೊಸ ನಿಯಮ – ಗಡುವು ಮುಗಿಯೋ ಮೊದಲೇ ಬುಕ್ ಮಾಡಿದ್ರೆ ಅಕೌಂಟ್ ಬ್ಲಾಕ್
ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ನೆನಪಿನ ಶೈಕ್ಷಣಿಕ ಕಾರ್ಯಕ್ರಮ ಇದಾಗಿತ್ತು. ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನಸಂಘದ ಅತಿ ಪ್ರಮುಖ ನಾಯಕರು. ಮೈಸೂರಿನ ರಾಜ್ಯ ಮುಕ್ತ ವಿವಿಯಲ್ಲಿ ಮೂರು ದಿನಗಳ ಅಂತರರಾಷ್ಟ್ರೀಯ ಶೈಕ್ಷಣಿಕ ಅಧಿವೇಶನ ಆಯೋಜಿಸಲಾಗಿತ್ತು.
ಆರ್ಎಸ್ಎಸ್ ಸಂಘಟನೆಯ ಜೊತೆ ಇರುವ ಪ್ರಜ್ಞಾ ಪ್ರವಾಹ ಹಾಗೂ ಶ್ಯಾಮ್ ಪ್ರಸಾದ್ ಮುಖರ್ಜಿ ಫೌಂಡೇಶನ್ನಿಂದ ಮಾತ್ರ ಈಗ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇಂದಿನಿಂದ ಮೂರು ದಿನ ಅಧಿವೇಶನಕ್ಕೆ ರಾಜ್ಯಪಾಲರು ಉದ್ಘಾಟನೆ ನೆರವೇರಿಸಲಿದ್ದಾರೆ. ಇದನ್ನೂ ಓದಿ: ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಬಳಿ ಅಪಘಾತ – ಯುವಕ ಪ್ರಜ್ಞೆ ತಪ್ಪಿ ಬಿದ್ದು ಮುಕ್ಕಾಲು ಗಂಟೆಯಾದ್ರೂ ಬಾರದ ಅಂಬುಲೆನ್ಸ್

