Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ, ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ: ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ, ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ: ಅಶೋಕ್

Bengaluru City

ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ, ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ: ಅಶೋಕ್

Public TV
Last updated: March 26, 2026 6:22 pm
Public TV
Share
4 Min Read
R Ashok 1
SHARE

– ಅರಣ್ಯ ಭೂಮಿಯನ್ನು ಉಳಿಸಿ, ರಕ್ಷಣಾ ಸಚಿವಾಲಯದಿಂದ ಭೂಮಿ ವಾಪಸ್ ಪಡೆಯಲು ಕ್ರಮವಹಿಸಿ
– ಕಲ್ಯಾಣ ಕರ್ನಾಟಕದಂತೆ ಕರಾವಳಿ ಭಾಗಕ್ಕೆ ಪ್ರತ್ಯೇಕ ಅಭಿವೃದ್ಧಿ ನೀತಿ ತನ್ನಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ವಿಧಾನಸಭಾ ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು ತಾರ್ಕಿಕ ಅಂತ್ಯಕ್ಕೆ ಒಯ್ದು ಸರ್ಕಾರದಿಂದ ಕ್ರಮ ಕೈಗೊಳ್ಳುವಂತೆ ಮಾಡಿದ್ದೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್  (R.Ashok) ಹೇಳಿದರು.

ಅಧಿವೇಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಅಧಿವೇಶನದಲ್ಲಿ ಸರ್ಕಾರದ ತಪ್ಪುಗಳನ್ನು ಎತ್ತಿ ತೋರಿಸಿದ್ದೇವೆ. ಇ-ಖಾತಾ ವ್ಯವಸ್ಥೆಯಲ್ಲಿ ಫೋನ್ ಪೇ ಮೂಲಕ ಲಂಚ ಪಡೆಯುವುದನ್ನು ಬಹಿರಂಗಪಡಿಸಿದ್ದು, ಆ ಅಧಿಕಾರಿಯ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದೆ. ಬೆಂಗಳೂರಿನ ಅಭಿವೃದ್ಧಿ ಕುರಿತು ಸುದೀರ್ಘ ಚರ್ಚೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್‌ನಲ್ಲಿ ಸಾಲದ ಕೂಪ ಸೃಷ್ಟಿಸಿರುವುದರ ಬಗ್ಗೆ ಎಳೆಎಳೆಯಾಗಿ ತಿಳಿಸಿದ್ದೇವೆ. ಸರ್ಕಾರ ತನ್ನ ತಪ್ಪುಗಳನ್ನು ಒಪ್ಪಿಕೊಳ್ಳುವಂತೆ ಮಾಡಿದ್ದೇವೆ. ಮುಂದಿನ ವರ್ಷವೂ ಈ ಸರ್ಕಾರ ಸಾಲ ಮಾಡಲಿದೆ. ಕಾಂಗ್ರೆಸ್‌ನವರು ಸಾಲ ಮಾಡುವುದರಲ್ಲಿ ನಿಸ್ಸೀಮರು ಹಾಗೂ ಅಭಿವೃದ್ಧಿಯಲ್ಲಿ ಶೂನ್ಯ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದರು. ಇದನ್ನೂ ಓದಿ: ಇರಾನ್‌ನಿಂದ ನಾವು ಕಚ್ಚಾ ತೈಲ ಖರೀದಿಸಿಲ್ಲ: ರಿಲಯನ್ಸ್‌ ಇಂಡಸ್ಟ್ರೀಸ್‌

ಜಕ್ಕೂರಿನ ವಾಯುಯಾನ ತರಬೇತಿ ಶಾಲೆಯನ್ನು ಉಳಿಸಿಕೊಳ್ಳಲು ಈ ಸದನದಲ್ಲಿ ಹೋರಾಟ ಮಾಡಿದ್ದೇವೆ. ಇದರ ಪರಿಣಾಮವಾಗಿ ಭೂಮಿ ಉಳಿದಿದೆ. ಟಿ.ನರಸೀಪುರದ ರೇಷ್ಮೆ ನೂಲು ತೆಗೆಯುವ ಕಾರ್ಖಾನೆಯನ್ನು ಕೂಡ ಉಳಿಸಿದ್ದೇವೆ. ಈ ಎಲ್ಲ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿದ್ದೇವೆ ಎಂದು ಹೇಳಿದರು.

ಈ ತಿಂಗಳ ಅಂತ್ಯದಲ್ಲಿ ಹಾಗೂ ಏಪ್ರಿಲ್‌ನಲ್ಲಿ ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತಿದ್ದೇನೆ. ಈ ಚುನಾವಣೆಯನ್ನು ಗೆಲ್ಲಲು ಬಿಜೆಪಿಯ ತಂಡ ಒಂದಾಗಿ ಕೆಲಸ ಮಾಡಲಿದೆ ಎಂದು ತಿಳಿಸಿದರು.

ಕರಾವಳಿ ನೀತಿ ತನ್ನಿ:
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ಕರಾವಳಿ ಭಾಗದಲ್ಲಿ ಹಲವಾರು ಸಮಸ್ಯೆಗಳಿವೆ. ಬೇರೆ ಪ್ರದೇಶಗಳಂತೆ ಅಲ್ಲಿ ರಸ್ತೆಗಳು ಬಹುಕಾಲ ಉಳಿಯುವುದಿಲ್ಲ. ಅಲ್ಲಿ ಬೇರೆ ತರಹದ ಆರೋಗ್ಯ ಸಮಸ್ಯೆಗಳಿವೆ. ಮಂಗಳೂರಿಂದ ಹೆಚ್ಚು ತೆರಿಗೆ ಸಂಗ್ರಹವಾಗುತ್ತಿದೆ. ಆದ್ದರಿಂದ ಕಲ್ಯಾಣ ಕರ್ನಾಟಕಕ್ಕೆ ನೀಡಿದಂತೆ ಕರಾವಳಿ ಭಾಗಕ್ಕೆ ಪ್ರತ್ಯೇಕ ಅಭಿವೃದ್ಧಿ ನೀತಿಯನ್ನು ತರಬೇಕಿದೆ. ಇರುವ ಅನುದಾನದಲ್ಲೇ ಈ ನೀತಿಯನ್ನು ತರಬಹುದು. ಸ್ಪೀಕರ್ ಯು.ಟಿ.ಖಾದರ್ ಕೂಡ ಅದೇ ಭಾಗದವರಾಗಿದ್ದು, ಅವರು ಕೂಡ ಈ ಬಗ್ಗೆ ಸಲಹೆ ನೀಡಬೇಕು ಎಂದು ಸಲಹೆ ನೀಡಿದರು.

ಅರಣ್ಯ ಭೂಮಿ ಉಳಿಸಿ:
ಜಾಲಹಳ್ಳಿ ಸರ್ಕಲ್‌ನಲ್ಲಿ 452 ಎಕರೆ ಮೀಸಲು ಅರಣ್ಯವಿದೆ. ರಾಮಕೃಷ್ಣ ಹೆಗಡೆ ಸರ್ಕಾರ ಅದನ್ನು ಕಂದಾಯ ಇಲಾಖೆಯ ಜಾಗವಾಗಿ ಗುರುತಿಸಿ ಅದನ್ನು ವಾಯಪಡೆಗೆ ನೀಡಿತ್ತು. ನಾನು ಈ ಬಗ್ಗೆ ಅಧಿಕಾರಿಗಳ ಬಳಿ ವಿಚಾರಿಸಿದ್ದೆ. ಈಗ ಅರಣ್ಯ ಪ್ರದೇಶಗಳನ್ನು ನಾವು ಉಳಿಸಬೇಕಿದೆ. ಅರಣ್ಯ ಪ್ರದೇಶದಲ್ಲಿ ಬೇರೆ ಯಾವುದೇ ಯೋಜನೆಗಳನ್ನು ರೂಪಿಸಲು ಆಗುವುದಿಲ್ಲ. ಇದಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶಗಳು ಕೂಡ ಇದೆ. ಆದರೆ ವಾಯಪಡೆ ಅಧಿಕಾರಿಗಳು ಈ ಜಾಗದ ಸುತ್ತಮುತ್ತ ಯಾವುದೇ ಮೂಲಸೌಕರ್ಯ ಅಭಿವೃದ್ಧಿ ಮಾಡಲು ಬಿಡುತ್ತಿಲ್ಲ. ಯಾವುದೇ ರಸ್ತೆ, ಅಂಡರ್‌ಪಾಸ್ ಮಾಡಲು ಅವಕಾಶ ಕೊಡುವುದಿಲ್ಲ. ಈ ಜಮೀನನ್ನು ಯಾವುದೇ ಕಾರಣಕ್ಕೂ ಪರಭಾರೆ ಮಾಡಬಾರದು. ಇಲ್ಲಿ ಈಗ ಕೆಲವು ಅಭಿವೃದ್ಧಿ ಕಾರ್ಯಗಳು ವಾಯುಪಡೆಯಿಂದ ನಡೆಯುತ್ತಿವೆ. ಆದರೆ ಜನರು ಜಾಲಹಳ್ಳಿ ಸರ್ಕಲ್‌ನಲ್ಲಿ ಓಡಾಡಲು ಕೂಡ ಸಾಧ್ಯವಿಲ್ಲದಂತಾಗಿದೆ. ವಾಯುಪಡೆಯವರು ಅನಧಿಕೃತವಾಗಿ ಇಲ್ಲಿ ಅಭಿವೃದ್ಧಿ ಕಾರ್ಯ ಮಾಡುತ್ತಿದ್ದಾರೆ. ಈ ಒತ್ತುವರಿಯನ್ನು ಯಾವಾಗ ತೆರವು ಮಾಡಲಾಗುವುದೆಂದು ಸರ್ಕಾರ ತಿಳಿಸಬೇಕು ಎಂದು ಆಗ್ರಹಿಸಿದರು.ಇದನ್ನೂ ಓದಿ: ‌ರಷ್ಯಾದ 10 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಹೊತ್ತೊಯ್ಯುತ್ತಿದ್ದ ಟರ್ಕಿ ಚಾಲಿತ ಟ್ಯಾಂಕರ್‌ ಮೇಲೆ ದಾಳಿ

ಮೀಸಲು ಅರಣ್ಯವನ್ನು ಯಾರಿಗೂ ನೀಡಲು ಆಗುವುದಿಲ್ಲ. ವಾಯುಪಡೆಗೆ ಸ್ವಾಧೀನ ಮಾಡಲು ಬೇಕಾದಷ್ಟು ಜಮೀನು ಲಭ್ಯವಿದೆ. ಅರಣ್ಯ ಇಲಾಖೆ ತಮ್ಮ ಜಮೀನನ್ನು ಬಿಟ್ಟು ಕೊಡಬಾರದು. ಅರಣ್ಯ ಇಲಾಖೆಯ ಜಮೀನು ಯಾರಾದರೂ ಕೇಳಿದರೆ ಅದು ಕೇಂದ್ರ ಪರಿಸರ ಸಚಿವಾಲಯದ ಬಳಿ ಹೋಗಬೇಕಾಗುತ್ತದೆ. ಆದರೂ ಅರಣ್ಯ ಜಮೀನನ್ನು ನೀಡಲು ಸಾಧ್ಯವಾಗುವುದಿಲ್ಲ. ಸಾವಿರಾರು ಎಕರೆ ಅರಣ್ಯ ಭೂಮಿ ಇನ್ನೂ ವಾಯುಪಡೆಯ ಬಳಿಯೇ ಇದೆ. ಬೆಂಗಳೂರಿನಲ್ಲಿ ರಕ್ಷಣಾ ಸಚಿವಾಲಯದ ಜಮೀನಿನ ಸಮೀಪ ಒಂದು ರಸ್ತೆ ನಿರ್ಮಿಸಲು ಪರದಾಡಬೇಕಾಗುತ್ತದೆ. ಅವರ ಭೂಮಿಯಲ್ಲಿ ಒಂದು ಅಡಿ ಜಾಗವನ್ನು ಕೂಡ ಪಡೆಯಲು ಸಾಧ್ಯವಿಲ್ಲ. ಆದರೆ ನಮ್ಮ ಭೂಮಿಯನ್ನು ಪಡೆಯಲು ಅಂಗಲಾಚಬೇಕಾಗುತ್ತದೆ. ಸಾರ್ವಜನಿಕ ಬಳಕೆಗಾಗಿ ಭೂಮಿ ಬಳಸಿಕೊಳ್ಳಲು ರಕ್ಷಣಾ ಸಚಿವಾಲಯ ಅವಕಾಶ ನೀಡುವುದೇ ಇಲ್ಲ. ಆದ್ದರಿಂದ ಅರಣ್ಯ ಇಲಾಖೆಗೆ ಸೇರಿದ ಜಮೀನುಗಳನ್ನು ವಾಪಸ್ ಪಡೆಯಬೇಕು. ಈ ಹಿಂದೆ ಮುನಿರೆಡ್ಡಿ ಪಾಳ್ಯದಲ್ಲಿದ್ದ 60 ವರ್ಷ ಹಳೆಯ ಸರ್ಕಾರಿ ಶಾಲೆಯ ಜಾಗವನ್ನು ರಕ್ಷಣಾ ಸಚಿವಾಲಯದ ಯೋಧರು ಗನ್ ಹಿಡಿದುಕೊಂಡು ಬಂದು ವಶಪಡಿಸಿಕೊಂಡಿದ್ದರು. ನಂತರ ಅಲ್ಲಿ ಶಾಲೆ ನಿರ್ನಾಮವಾಗಿದೆ. ಆದ್ದರಿಂದ ಅರಣ್ಯ ಭೂಮಿಯನ್ನು ಅರಣ್ಯವಾಗಿಯೇ ಉಳಿಸಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಶ್ರೀಗಂಧ ಬೆಳೆಯಲು ಸರ್ಕಾರ ಪ್ರೋತ್ಸಾಹ ನೀಡಬೇಕು. ಹರಾಜು ಸಮಯದಲ್ಲಿ ತಮಿಳುನಾಡಿನಲ್ಲಿ ಶ್ರೀಗಂಧ ಬೆಳೆಯುವವರಿಗೆ 22,000 ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ಆದರೆ ಶ್ರೀಗಂಧದ ನಾಡಾದ ಕರ್ನಾಟಕದಲ್ಲಿ 7,000 ರೂ. ನೀಡಲಾಗುತ್ತಿದೆ. ಆದ್ದರಿಂದ ರಾಜ್ಯದಲ್ಲೂ ಅಧಿಕ ಪ್ರೋತ್ಸಾಹಧನ ನೀಡಬೇಕು ಎಂದು ತಿಳಿಸಿದರು.ಇದನ್ನೂ ಓದಿ: ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣ ಉಚಿತ – ಕೇಂದ್ರದ ಮಹತ್ವದ ನಿರ್ಣಯ

TAGGED:bengalurubjpcongress govtkarnatakar ashokಆರ್‌.ಅಶೋಕ್‌ಕರ್ನಾಟಕಕಾಂಗ್ರೆಸ್ಕಾಂಗ್ರೆಸ್ ಸರ್ಕಾರಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
9 minutes ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
15 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
41 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
42 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
56 minutes ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?