ಬೆಂಗಳೂರು: ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ವಿಶ್ವವಿದ್ಯಾಲಯದಲ್ಲಿ ಭ್ರಷ್ಟಾಚಾರ ನಡೆದಿದೆ ಅಂತ ಆರೋಪಿಸಿ ಎಬಿವಿಪಿ ಸಂಘಟನೆ ಜೊತೆ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ಉಪ ಕುಲಪತಿಗಳ ಕಚೇರಿ ಮುಂದೆ ನೂರಾರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.
ವಿವಿಯ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಇನ್ವೈಟಿ ಟ್ಯಾಕ್ಸ್ ಕಾರ್ಯಕ್ರಮದ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿದೆ. ಸುಮಾರು 1 ಕೋಟಿ ಹಗರಣ ಅಂತ ವಿದ್ಯಾರ್ಥಿಗಳು ಆರೋಪಿಸಿದರು. ಈ ಬಗ್ಗೆ ಲೋಕಾಯುಕ್ತ ತನಿಖೆ ಮಾಡಬೇಕು ಅಂತ ಒತ್ತಾಯ ಮಾಡಿದರು. ಇದನ್ನೂ ಓದಿ: ಚರಂತಿಮಠ ಪ್ರಚಾರಕ್ಕೆ ಯತ್ನಾಳ್ ಎಂಟ್ರಿ – ಬಿಎಸ್ವೈ ಗ್ರೀನ್ ಸಿಗ್ನಲ್
ವಿವಿ ಕ್ಯಾಂಪಸ್ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಕುಡಿಯುವ ನೀರು, ಶೌಚಾಲಯ, ಫ್ಯಾನ್, ಸಿಸಿಟಿವಿ ವ್ಯವಸ್ಥೆ ಇಲ್ಲ. ಉಪನ್ಯಾಸಕರು ಇಲ್ಲ. ಇದರಿಂದ ವಿದ್ಯಾರ್ಥಿನಿಯರಿಗೆ ಸಮಸ್ಯೆ ಆಗ್ತಿದೆ ಅಂತ ತಿಳಿಸಿದರು. ವಿಸಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಉಪ ಕುಲಪತಿಗಳು ಒಂದು ವಾರದೊಳಗೆ ಮೂಲಭೂತ ಸೌಕರ್ಯಗಳನ್ನ ಒದಗಿಸುವ ಭರವಸೆ ಕೊಟ್ಟರು. ಒಂದು ವಾರದಲ್ಲಿ ಸಮಸ್ಯೆ ಬಗೆಹರಿಯದೇ ಹೋದರೆ ಮತ್ತೆ ಪ್ರತಿಭಟನೆ ಮಾಡುವುದಾಗಿ ಎಬಿವಿಪಿ ಎಚ್ಚರಿಕೆ ಕೊಟ್ಟಿದೆ.

