Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಹಿಂದಕ್ಕೆ ಅನ್ಯಾಯ ಎಸಗಿದ ಕಾಂಗ್ರೆಸ್‌ ಸರ್ಕಾರವನ್ನು ತಿರಸ್ಕರಿಸಿ: ಸುನಿಲ್‌ ಕುಮಾರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಅಹಿಂದಕ್ಕೆ ಅನ್ಯಾಯ ಎಸಗಿದ ಕಾಂಗ್ರೆಸ್‌ ಸರ್ಕಾರವನ್ನು ತಿರಸ್ಕರಿಸಿ: ಸುನಿಲ್‌ ಕುಮಾರ್‌

Bagalkot

ಅಹಿಂದಕ್ಕೆ ಅನ್ಯಾಯ ಎಸಗಿದ ಕಾಂಗ್ರೆಸ್‌ ಸರ್ಕಾರವನ್ನು ತಿರಸ್ಕರಿಸಿ: ಸುನಿಲ್‌ ಕುಮಾರ್‌

Public TV
Last updated: April 1, 2026 6:09 pm
Public TV
Share
3 Min Read
Sunilkumar
SHARE

– ಘೋಷಣೆ ಮಾಡಿದ ಅನುದಾನವನ್ನೇ ಬಿಡುಗಡೆ ಮಾಡಿಲ್ಲ
– ಸೆಪ್ಟೆಂಬರ್‌ ಸಮೀಕ್ಷಾ ವರದಿಯ ಬಗ್ಗೆ ಮಾತೇ ಆಡುತ್ತಿಲ್ಲ

ಬೆಂಗಳೂರು: ಅಹಿಂದ (Ahinda) ವರ್ಗದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ (Siddaramaiah) ಅವರು ಅಹಿಂದ ವರ್ಗಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಾ ಬಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳನ್ನು ಪೂರೈಸಿದರೂ ಜನಸಾಮಾನ್ಯರ ಯಾವುದೇ ವರ್ಗಕ್ಕೆ ನ್ಯಾಯ ಕೊಡುವಲ್ಲಿ ವಿಫಲವಾಗಿದೆ ಎಂದು ಶಾಸಕ ವಿ ಸುನಿಲ್ ಕುಮಾರ್ (Sunil Kumar) ವಾಗ್ದಾಳಿ ನಡೆಸಿದರು.

ಉಪ ಚುನಾವಣೆ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರೆ ಬೇರೆ ಸಮಾರಂಭದಲ್ಲಿ ನಾನು ಅಹಿಂದದ ಹಿತವನ್ನು ಕಾಪಾಡುತ್ತೇನೆ, ಅಹಿಂದ ವರ್ಗವನ್ನು ಉಳಿಸುತ್ತೇನೆ ಎಂದು ಹೇಳುತ್ತಾ ಬಂದ ಮುಖ್ಯಮಂತ್ರಿಗಳು ನಿರಂತರವಾಗಿ ಅಹಿಂದ ವರ್ಗಕ್ಕೆ ಮೋಸ ಮಾಡುತ್ತಿದ್ದಾರೆ ಎಂದು ದೂರಿದರು.

ತಮ್ಮ ರಾಜಕೀಯ ಭಾಷಣಕ್ಕೆ ಅಹಿಂದವನ್ನು ಬಳಸಿಕೊಂಡ ಸಿಎಂ ಆ ವರ್ಗಕ್ಕೆ ಯಾವುದೇ ರೀತಿ ನ್ಯಾಯ ಕೊಡಲಿಲ್ಲ. ಈ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಸಂಪೂರ್ಣ ವಿಫಲವಾಗಿದೆ. ಕಳೆದ ವರ್ಷದ ಯೋಜನೆಯಲ್ಲಿ ಹಿಂದುಳಿದ ವರ್ಗದ ಬೇರೆ ಬೇರೆ ನಿಗಮಗಳಿಗೆ ಘೋಷಣೆ ಮಾಡಿದ ಹಣವನ್ನು ಬಿಡುಗಡೆ ಮಾಡಲಿಲ್ಲ. ಇದನ್ನು ಸರ್ಕಾರದ ಅಂಕಿ ಅಂಶಗಳೇ ಹೇಳುತ್ತಿವೆ. ಘೋಷಣೆಯಲ್ಲಿ ದೊಡ್ಡ ಪ್ರಚಾರ ಪಡೆಯುವ ಸರ್ಕಾರ, ನಿಗಮದ ಹತ್ತಾರು ಯೋಜನೆಗಳಿಗೆ ಅನುದಾನ ಕಡಿತ ಮಾಡಿದೆ. ಸಿದ್ದರಾಮಯ್ಯ ಅವರು ಘೋರ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

 

ದಾವಣಗೆರೆಗೆ ಬಂದ ಸಿದ್ದರಾಮಯ್ಯ ಅವರು ಅಹಿಂದ ವರ್ಗಕ್ಕೆ ನಾನು ದೊಡ್ಡ ಸಹಾಯ ಮಾಡಿದೆ ಎಂದು ಹೇಳುತ್ತಾರೆ. ಅಹಿಂದಕ್ಕೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಅನ್ಯಾಯ ಮಾಡುವ ಕಾಂಗ್ರೆಸ್ ಅನ್ನು, ಈ ವರ್ಗದ ಹಿತ ಕಾಪಾಡದ ಸರ್ಕಾರವನ್ನು ಈ ಬಾರಿ ಚುನಾವಣೆಯಲ್ಲಿ ಮತದಾರರು ತಿರಸ್ಕರಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

ಸಮೀಕ್ಷಾ ವರದಿಗಳು ಮೂಲೆಗುಂಪು
ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮಧುಸೂಧನ್ ನಾಯಕ್ ವರದಿ ಮೂಲೆ ಗುಂಪಾಗಿದೆ. ಸೆಪ್ಟೆಂಬರ್ ನಲ್ಲಿ ಸಮೀಕ್ಷೆ ಮಾಡಿ ಒಂದು ತಿಂಗಳಲ್ಲಿ ವರದಿ ನೀಡುತ್ತೇವೆ ಎಂದಿದ್ದರು. ಈಗ ಏಪ್ರಿಲ್ ಬಂದಿದ್ದು ಸಿಎಂ ಅವರು ಸಮೀಕ್ಷೆಯ ವರದಿ ಬಗ್ಗೆ ಚಕಾರ ಎತ್ತುತ್ತಿಲ್ಲ. ಇದೇ ರೀತಿ 2014 ರ ಕಾಂತರಾಜು ವರದಿ, 2025 ರ ಜಯಪ್ರಕಾಶ್ ಹೆಗ್ಡೆ ವರದಿಗಳನ್ನು ಕಾರಣ ಇಲ್ಲದೇ ಕಸದ ಬುಟ್ಟಿಗೆ ಹಾಕಿದರು. ಅದೇ ರೀತಿ ಪರಿಸ್ಥಿತಿ ಮಧುಸೂಧನ್ ನಾಯಕ್ ವರದಿಗೂ ಬರಲಿದೆ. ರಾಜ್ಯದ ಜನರ 500 ಕೋಟಿ ರೂ. ತೆರಿಗೆ ಹಣ ಬಳಸಿ ಈ ಸಮೀಕ್ಷೆ ಮಾಡಿದ್ದರು. ಬಜೆಟ್‍ನಲ್ಲೂ ಈ ಬಗ್ಗೆ ಪ್ರಸ್ತಾಪ ಮಾಡಿಲ್ಲ. ನಾವು ಈ ಬಗ್ಗೆ ಕೇಳಿದರೂ ಮೌನಜಾಣ ಮಾಡಿದ್ದಾರೆ. ಈ ಮೂಲಕವೂ ರಾಜ್ಯದ ಹಿಂದುಳಿದ ವರ್ಗಕ್ಕೆ ದೊಡ್ಡ ಪ್ರಮಾಣ ಅನ್ಯಾಯ ಮಾಡಲಾಗಿದೆ ಎಂದರು.

ಸದ್ದಿಲ್ಲದೆ ಹೊರ ಗುತ್ತಿಗೆ ನೌಕರರನ್ನು ಕೈ ಬಿಡುವ ಹುನ್ನಾರವನ್ನು ಈ ಸರ್ಕಾರ ನಡೆಸಿದೆ. ಆಡಳಿತದಲ್ಲಿ ಗೊಂದಲ ಆಗಿದೆ. ಎರಡೂ ಮುಕ್ಕಾಲು ಲಕ್ಷ ಖಾಲಿ ಹುದ್ದೆ ಭರ್ತಿ ಮಾಡದೇ ಮೀನಮೇಷ ಏಣಿಸುತ್ತಿದೆ. 25 ಸಾವಿರ ಹುದ್ದೆ ಭರ್ತಿ ಮಾಡುತ್ತೇವೆ ಅಂತ ಹೇಳಿದರು. ಅದಕ್ಕೂ ಹಣ ಇಲ್ಲ ಎಂದರು.

ಬಿಪಿಲ್ ಕಾರ್ಡ್‍ಗಳನ್ನು ರದ್ದು ಮಾಡಿದ್ದಾರೆ. ಬೇರೆ ಬೇರೆ ನೆಪ ಹೇಳಿ ಪಿಂಚಣಿ ಕಡಿತ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಾಣಿಕೆ ಮಾಡಲು ಸರ್ಕಾರ ಇದನ್ನೆಲ್ಲ ಮಾಡುತ್ತಿದೆ. ಬಿಜೆಪಿ ಸರ್ಕಾರದ ಎಲ್ಲಾ ಯೋಜನೆ ಕೈ ಬಿಟ್ಟು. ಗ್ಯಾರಂಟಿಯೇ ಅಭಿವೃದ್ಧಿ ಎಂಬ ಭಮೆಯಲ್ಲಿ ಈ ಸರ್ಕಾರ ಇದೆ ಸಿಟ್ಟು ಹೊರಹಾಕಿದರು.

TAGGED:bagalkotedavanagerekarnatakasiddaramaiahSunil Kumarಕರ್ನಾಟಕದಾವಣಗೆರೆಬಾಗಲಕೋಟೆಸಿದ್ದರಾಮಯ್ಯಸುನಿಲ್ ಕುಮಾರ್
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Belagavi Fraud
Belgaum

ಇನ್‌ಸ್ಟಾದಲ್ಲಿ ಲವ್, ಮದ್ವೆ ಹೆಸರಲ್ಲಿ ಸೆಕ್ಸ್ – ವಿಡಿಯೋ ವೈರಲ್ ಮಾಡುವ ಬೆದರಿಕೆಯೊಡ್ಡಿ 150 ಗ್ರಾಂ ಚಿನ್ನ, 19 ಲಕ್ಷ ಪಡೆದು ವಂಚನೆ

Public TV
By Public TV
31 minutes ago
Bidar Accident
Bidar

ವೇಗವಾಗಿ ಬಂದು ಕಾರು ಡಿಕ್ಕಿ – ರಸ್ತೆ ದಾಟುತ್ತಿದ್ದ 9 ವರ್ಷದ ಬಾಲಕ ದುರ್ಮರಣ

Public TV
By Public TV
58 minutes ago
kkr vs pbks rain
Cricket

IPL 2026: ಕೋಲ್ಕತ್ತಾ ನೈಟ್‌ ರೈಡರ್ಸ್‌ vs ಪಂಜಾಬ್‌ ಕಿಂಗ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
1 hour ago
IIT Baba Abhay Singh ties with bengaluru engineer
Bengaluru City

ಬೆಂಗಳೂರು ಹುಡುಗಿ ಮದುವೆಯಾದ ಮಹಾಕುಂಭಮೇಳ ಖ್ಯಾತಿಯ ಐಐಟಿ ಬಾಬಾ

Public TV
By Public TV
2 hours ago
Siddaramaiah 6
Bengaluru City

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಕೇಸ್‌ – ಬಿ ರಿಪೋರ್ಟ್‌ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ED ಅರ್ಜಿ

Public TV
By Public TV
2 hours ago
9 Tamil Nadu Cops Get Death Sentence In Father Son Custodial Torture Case
Court

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?