Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
Last updated: April 3, 2026 3:56 pm
Public TV
Share
3 Min Read
pralhad joshi
SHARE

ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರ (Karnataka Congress Government) ಸಂಪೂರ್ಣ ದಿವಾಳಿಯಾದ ಪರಿಣಾಮ ಸಿಕ್ಕ ಸಿಕ್ಕಲ್ಲಿ ಹಣ ಹೊಂದಿಸಲು ಕೈ ಹಾಕುತ್ತಿದೆ. ಧನ ದಾಹದಿಂದ ಆತ್ಮನಿರ್ಭರ ಭಾರತಕ್ಕೆ ಕೊಡಲಿ ಪೆಟ್ಟು ಕೊಡುತ್ತಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ, ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಕಿಡಿ ಕಾರಿದರು.

ನಮ್ಮ ದೇಶದ ಪ್ರಗತಿಯ ದಿಕ್ಸೂಚಿ ‘ಜನಗಣತಿ-2027’ ಪ್ರಕ್ರಿಯೆ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ @narendramodi ಅವರ ಡಿಜಿಟಲ್ ಇಂಡಿಯಾ ಆಶಯದಂತೆ ಈ ಬಾರಿ ನೀವೇ ನೇರವಾಗಿ ‘ಸ್ವಯಂ-ಗಣತಿ’ (Self-Enumeration) ಮಾಡಲು ಅವಕಾಶವಿದೆ. ಏಪ್ರಿಲ್ 15ರ ಒಳಗಾಗಿ ಆನ್‌ಲೈನ್ (https://t.co/qEhNWqBmVM) ಮೂಲಕ ನಿಮ್ಮ ವಿವರ ದಾಖಲಿಸಿ, ಸುಭದ್ರ… pic.twitter.com/iYO2q5IQm4

— Pralhad Joshi (@JoshiPralhad) April 3, 2026

ದೆಹಲಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ, ಹಣ ಕ್ರೋಢೀಕರಣ ದಾಹ ಇದೀಗ ಎಲೆಕ್ಟ್ರಿಕ್ ವಾಹನಗಳನ್ನೂ (Electric Vehicle) ಬಿಟ್ಟಿಲ್ಲ. ಇದು ಸ್ವಾವಲಂಬಿ ಭಾರತದ ಕಾರ್ಯಾನುಷ್ಠಾನಕ್ಕೆ ತೊಡಕಾಗಿದೆ. ಮಧ್ಯಪ್ರಾಚ್ಯ ಸಂಘರ್ಷದಲ್ಲಿ ಜಗತ್ತೇ ಗ್ಯಾಸ್, ಕಚ್ಚಾ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳಿಲ್ಲದೆ ತತ್ತರಿಸುತ್ತಿದೆ. ಭಾರತ ಪೆಟ್ರೋಲಿಯಂ ಉತ್ಪನ್ನಗಳ ಆಮದು ತಗ್ಗಿಸಲು ನವೀಕರಿಸಬಹುದಾದ ಇಂಧನ ಹಾಗೂ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಆದ್ಯತೆ, ಅಗತ್ಯ ಪ್ರೋತ್ಸಾಹ ನೀಡುತ್ತಿದೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಕೇಂದ್ರದ ಇಂಥ ಸ್ವಾವಲಂಬಿ ಯೋಜನೆಗಳನ್ನ ಹಾಳುಗೆಡವುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಎಲೆಕ್ಟ್ರಿಕ್ ವಾಹನಗಳಿಗೆ ನೀಡಿದ್ದ ತೆರಿಗೆ ವಿನಾಯಿತಿ (Tax Exemption) ಹಿಂಪಡೆದು ಪರಿಸರ ಸ್ನೇಹಿ ವಾಹನಗಳನ್ನು ದೂರವಿಡುತ್ತಿದೆ. ಜನತೆ ಮತ್ತೆ ಪೆಟ್ರೋಲ್, ಡಿಸೇಲ್ ವಾಹನಗಳತ್ತ ಹಿಂತಿರುಗಲು ದಾರಿ ಮಾಡಿ ಕೊಟ್ಟಂತಾಗಿದೆ. ಸರ್ಕಾರ ಇದನ್ನು ಅರ್ಥ ಮಾಡಿಕೊಳ್ಳಲಿ ಎಂದು ಜೋಶಿ ತಿವಿದರು. ಇದನ್ನೂ ಓದಿ: Electric Car Market| ಫಸ್ಟ್‌ ಟೈಂ ಎಂಜಿ ಹಿಂದಿಕ್ಕಿದ ಮಹೀಂದ್ರಾ – ಟಾಟಾ ಮೋಟಾರ್ಸ್‌ಗೆ ಅಗ್ರಸ್ಥಾನ

ಮೂರೂವರೆ ಲಕ್ಷ ಕೋಟಿ ರೂಪಾಯಿ ಬಜೆಟ್ ಮಂಡಿಸಿದಂತಹ ರಾಜ್ಯ ಸರ್ಕಾರ ಇದೀಗ ಕೇವಲ 250 ಕೋಟಿ ರೂ. ಆದಾಯ ಸಂಗ್ರಹಕ್ಕಾಗಿ EV ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದೆ. ಇಷ್ಟು ಸಣ್ಣ ಸಣ್ಣ ಮೊತ್ತ ಕ್ರೋಢೀಕರಣಕ್ಕೂ ಜನಸಾಮಾನ್ಯರ ಮೇಲೆ ಬರೆ ಎಳೆಯುತ್ತಿದೆ ಎಂದರೆ ರಾಜ್ಯ ಸರ್ಕಾರ ಅದೆಷ್ಟರ ಮಟ್ಟಿಗೆ ಆರ್ಥಿಕವಾಗಿ ದಿವಾಳಿಯಾಗಿದೆ ಎಂಬುದನ್ನು ಸೂಚಿಸುತ್ತದೆ ಎಂದು ಹೇಳಿದರು. ಇದನ್ನೂ ಓದಿ: LPG ಸಿಲಿಂಡರ್ ವದಂತಿಗೆ ಕೇಂದ್ರ ಕಡಿವಾಣ – ಪ್ರತಿನಿತ್ಯ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯಗಳಿಗೆ ಸಲಹೆ

electric vehicles
ಸಾಂದರ್ಭಿಕ ಚಿತ್ರ

EV ವಾಹನಗಳಿಗೆ ಲೈಫ್ ಟೈಮ್ ಟ್ಯಾಕ್ಸ್ ಹಾಕುವ ಮೂಲಕ ಸರ್ಕಾರ ಹಣ ಸಂಪಾದನೆ ದಾರಿ ಮಾಡಿಕೊಂಡಿದೆ. ಆರ್ಥಿಕ ದಿವಾಳಿತನ ತಪ್ಪಿಸಿಕೊಳ್ಳಲು ಸಿಕ್ಕ ಸಿಕ್ಕಲ್ಲಿ ಹೆಚ್ಚಿನ ವ್ಯಾಟ್ ಸಂಗ್ರಹಕ್ಕೆ ಮುಂದಾಗಿದೆ. ಪೆಟ್ರೋಲ್, ಡೀಸೆಲ್ ಮೇಲೆ ಹೆಚ್ಚು ತೆರಿಗೆ ಅಂದರೆ, ರಾಜ್ಯದ ಪಾಲಿನ ಕಮರ್ಷಿಯಲ್ ಟ್ಯಾಕ್ಸ್ ವಿಧಿಸಲು ಅವಕಾಶವಿದ್ದು, ಇದರಿಂದ ಆದಾಯ ಹೆಚ್ಚುತ್ತದೆಂಬ ಏಕ ಆಲೋಚನೆಯಲ್ಲಿ ಕರ್ನಾಟಕ ಸರ್ಕಾರ ಈ ರೀತಿ ವರ್ತಿಸುತ್ತಿದೆ. ಭಾರತ 2030 ರ ವೇಳೆಗೆ ಶೇ.50ರಷ್ಟು ಇಂಗಾಲ ಹೊರಸೂಸುವಿಕೆ ಕಡಿಮೆ ಮಾಡುವ ಗುರಿ ಹೊಂದಿದ್ದರೆ, ರಾಜ್ಯ ಸರ್ಕಾರ ಇದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಹರಿಹಾಯ್ದರು.

‎ಭಾರತ ಇಂದು ಶುದ್ಧ ಇಂಧನ ಮತ್ತು ಎಲೆಕ್ಟ್ರಿಕ್ ವಾಹನಗಳತ್ತ ಸಾಗುತ್ತಿದ್ದು, ಜಗತ್ತೇ ನಮ್ಮ ದೇಶವನ್ನ ಅನುಸರಿಸುತ್ತಿದೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರ, ದೇಶದ ಸುಸ್ಥಿರ ಭವಿಷ್ಯದ ಆಶಯಗಳಿಗೆ ತಣ್ಣೀರೆರಚುತ್ತಿದೆ. ಕಚ್ಚಾ ತೈಲ ಬೆಲೆ ಆಕಾಶಕ್ಕೇರಿದ ಪ್ರಸ್ತುತ ಸಂದರ್ಭದಲ್ಲಿ ಇವಿ ವಾಹನಗಳು ಜನಸಾಮಾನ್ಯರ ಕೈಗೆಟುಕದಂತೆ ದುಬಾರಿ ಮಾಡುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಕೇಂದ್ರದಿಂದ ಯೂಟರ್ನ್‌ – ವಿಮಾನಗಳಲ್ಲಿ 60% ಸೀಟು ಉಚಿತ ಆಯ್ಕೆ ನಿಯಮಕ್ಕೆ ತಾತ್ಕಾಲಿಕ ತಡೆ

TAGGED:Central GovernmentcongressElectric VehicleKarnataka GovernmentPralhad JoshiTax exemptionಎಲೆಕ್ಟ್ರಿಕ್ ವಾಹನಕರ್ನಾಟಕ ಸರ್ಕಾರಕಾಂಗ್ರೆಸ್ಕೇಂದ್ರ ಸರ್ಕಾರತೆರಿಗೆ ವಿನಾಯಿತಿಪ್ರಹ್ಲಾದ್ ಜೋಶಿ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

bjp flag
Latest

Tamilnadu Assembly Elections | ಬಿಜೆಪಿಯಿಂದ 27 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

Public TV
By Public TV
6 minutes ago
BE 6 Mahindra
Automobile

Electric Car Market| ಫಸ್ಟ್‌ ಟೈಂ ಎಂಜಿ ಹಿಂದಿಕ್ಕಿದ ಮಹೀಂದ್ರಾ – ಟಾಟಾ ಮೋಟಾರ್ಸ್‌ಗೆ ಅಗ್ರಸ್ಥಾನ

Public TV
By Public TV
14 minutes ago
Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
15 minutes ago
ಸಾಂದರ್ಭಿಕ ಚಿತ್ರ
Karnataka

LPG ಸಿಲಿಂಡರ್ ವದಂತಿಗೆ ಕೇಂದ್ರ ಕಡಿವಾಣ – ಪ್ರತಿನಿತ್ಯ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯಗಳಿಗೆ ಸಲಹೆ

Public TV
By Public TV
20 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
29 minutes ago
fighter jet was destroyed
Latest

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ: ಇರಾನ್‌

Public TV
By Public TV
41 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?