Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏನೇ ಪರಿಹಾರ ಕೊಟ್ರೂ ಮಗ ಮರಳಿ ಬರೋದಿಲ್ಲ – ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಕುದುರೆ ರೈಡರ್‌ ತಂದೆ ಕಣ್ಣೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಏನೇ ಪರಿಹಾರ ಕೊಟ್ರೂ ಮಗ ಮರಳಿ ಬರೋದಿಲ್ಲ – ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಕುದುರೆ ರೈಡರ್‌ ತಂದೆ ಕಣ್ಣೀರು

Latest

ಏನೇ ಪರಿಹಾರ ಕೊಟ್ರೂ ಮಗ ಮರಳಿ ಬರೋದಿಲ್ಲ – ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಕುದುರೆ ರೈಡರ್‌ ತಂದೆ ಕಣ್ಣೀರು

Public TV
Last updated: April 21, 2026 3:57 pm
Public TV
Share
3 Min Read
Horse Rider
SHARE

– ಆದಿಲ್‌ ಕುಟುಂಬಕ್ಕೆ ಸರ್ಕಾರಿ ಉದ್ಯೋಗ, 5 ಲಕ್ಷ ನೆರವು, ಸ್ವಂತ ಮನೆ ಪರಿಹಾರ
– ಉಗ್ರರಿಂದ ರೈಫಲ್‌ ಕಸಿದುಕೊಳ್ಳಲು ಹೋಗಿ ಆದಿಲ್‌ ಸಾವು

2025ರ ಏಪ್ರಿಲ್‌ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ(Pahalgam) ಉಗ್ರರು ಅಟ್ಟಹಾಸ ಮೆರೆದಿದ್ದರು. ಸುಂದರ ತಾಣದಲ್ಲಿ ವಿಹರಿಸುತ್ತಿದ್ದ ಪ್ರವಾಸಿಗರ ಮೇಲೆ ಗುಂಡಿನ ಮಳೆಗರೆದು ನೆತ್ತರು ಹರಿಸಿದ್ದರು ಪಾಕ್‌ ಉಗ್ರರು (Pak Terrorist). ಇದಕ್ಕೆ ಹೆಜ್ಜೆ-ಹೆಜ್ಜೆಗೂ ದಿಟ್ಟ ಉತ್ತರ ನೀಡುತ್ತಲೇ ಬಂದಿದ್ದ ಭಾರತೀಯ ಸೇನೆ, ಪ್ರತೀಕಾರಕ್ಕಾಗಿ ಕಾಯುತ್ತಲೇ ಇತ್ತು. ಕೊನೆಗೂ ಸಿಕ್ಕ ಸಮಯ ಬಳಸಿಕೊಂಡ ಭಾರತೀಯ ಸೇನೆ (Indian Army) ನರಮೇಧ ನಡೆಸಿದ್ದ ಪಾತಕಿಗಳನ್ನು ಹತ್ಯೆಗೈದಿತು. ಶ್ರೀನಗರದ ದಚಿಗಮ್‌ ಅರಣ್ಯ ಪ್ರದೇಶದಲ್ಲಿ ʻಆಪರೇಷನ್‌ ಮಹಾದೇವ್‌ʼ ಕಾರ್ಯಾಚರಣೆ ವೇಳೆ ಮೂವರು ಉಗ್ರರನ್ನ ಭಾರತೀಯ ಸೇನೆಯ ಚಿನಾರ್‌ ಕಾರ್ಪ್ಸ್‌ ಹತ್ಯೆಗೈದಿತು.

ಇದೀಗ ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ ಸಮೀಪಿಸುತ್ತಿದ್ದು, ಹಳೆಯ ನೆನೆಪುಗಳು ಮತ್ತೆ ಮರುಕಳಿಸುತ್ತಿವೆ. ಆ ದಿನ ಪ್ರವಾಸಿಗರ ಮೇಲೆ ದಾಳಿ ನಡೆಸುತ್ತಿದ್ದ ಕುದುರೆ ರೈಡರ್‌ ಸೈಯದ್ ಆದಿಲ್ ಹುಸೇನ್ ಶಾ (Syed Adil Hussain Shah) ಧೈರ್ಯ ಮಾಡಿ ಓರ್ವನ ಉಗ್ರನಿಂದ ರೈಫಲ್‌ ಕಸಿದುಕೊಳ್ಳಲು ಯತ್ನಿಸಿ ಸಾವನ್ನಪ್ಪಿದ್ದರು. ಮೃತರ ಕುಟುಂಬಕ್ಕೆ ಸರ್ಕಾರದಿಂದ ಎಲ್ಲಾ ಪರಿಹಾರ ನೀಡಲಾಗಿದ್ದರೂ, ಮನೆ ಮಗ ಜೀವ ಕಳೆದುಕೊಂಡಿದ್ದನ್ನ ನೆನೆದು ಪೋಷಕರು ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಬರ್ಬರ ಹತ್ಯೆ

Pahalgam Terror Attack 2 1

ಉಗ್ರರ ಗುಂಡಿಗೆ ಬಲಿಯಾದ ಮಗನ ತಂದೆ ಸೈಯದ್ ಹೈದರ್ ಶಾ ಮಾಧ್ಯಮವೊಂದರಲ್ಲಿ ಮಾತನಾಡುತ್ತಾ, ಇದ್ದ ಒಬ್ಬ ಮಗನನ್ನ ಕಳೆದುಕೊಂದು ದಿಕ್ಕಿಲ್ಲದಂತಾಗಿದ್ದ ನಮಗೆ ಸರ್ಕಾರ ಎಲ್ಲಾ ಪರಿಹಾರ ಕಲ್ಪಿಸಿದೆ. ಆರ್ಥಿಕ ಪರಿಹಾರ, ಶಾಶ್ವತ ಸರ್ಕಾರಿ ಉದ್ಯೋಗ, ಮನೆ ಮತ್ತು ಪುನರ್ವಸತಿಗಾಗಿ ಎಲ್ಲಾ ರೀತಿಯ ಸಹಕಾರಗಳನ್ನ ನೀಡಿದೆ. ಇಂದು ಏನೇ ಪರಿಹಾರ ಸಿಕ್ಕಿದ್ದರು, ನಮ್ಮ ಮಗ ಮರಳಿ ಬರೋದಿಲ್ಲ ಅನ್ನೋದಂತೂ ಸತ್ಯ. ಇದು ನೆನೆಸಿಕೊಂಡಾಗ ನಮ್ಮ ಮನಸ್ಸಿಗೂ ಶಾಂತಿ ಸಿಗಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ರಾಜಕಾರಣಿಗಳ ಮಕ್ಕಳು ರಾಜಕಾರಣಿಯಾದರೆ, ಜಡ್ಜ್‌ ಮಕ್ಕಳು ವಕೀಲರಾಗುವುದರಲ್ಲಿ ತಪ್ಪೇನಿಲ್ಲ: ಕೇಜ್ರಿವಾಲ್‌ ವಿರುದ್ಧ ಜಡ್ಜ್‌ ಗರಂ

ಆ ದಿನ ಆದಿಲ್‌ ಪ್ರವಾಸಿಗರ ಜೀವ ಉಳಿಸಲು ಪಣ ತೊಟ್ಟಿದ್ದ, ಯಾವುದೇ ಧರ್ಮ ಅಥವಾ ಜಾತಿಯ ಜನ ಎಂಬುದನ್ನ ಅವನು ನೋಡಲಿಲ್ಲ. ಯಾವತ್ತೂ ಹಿಂದೂ, ಮುಸ್ಲಿಂ ಅಥವಾ ಸಿಖ್ ಅನ್ನೋ ಭೇದ ಭಾವ ಮಾಡಲಿಲ್ಲ. ಮಾನವೀಯತೆಗೆ ಬೆಲೆ ನೀಡಿದ್ದವನು ನನ್ನ ಮಗ. ಪರರ ಜೀವ ಉಳಿಸಲು ತನ್ನ ಪ್ರಾಣವನ್ನೇ ಅರ್ಪಿಸಿದ. ಮನುಷ್ಯರನ್ನ ಮನುಷ್ಯರಾಗಿಯೇ ನೋಡುತ್ತಿದ್ದ ಎಂದು ಭಾವುಕರಾಗಿದ್ದಾರೆ.

Pahalgam Horse Rider Syed Adil Hussain Shah Bravely Tried To Snatch Terrorists Rifle Was Shot Dead

ಮನೆಯ ಹಿರಿಯ ಮಗನಾಗಿದ್ದ ಆದಿಲ್‌, ಇಡೀ ಮನೆ ಜವಾಗದಾರಿ ಹೊತ್ತಿದ್ದ. ಏನೇ ಕೆಲಸ ಇದ್ದರೂ ತಾನೇ ನಿಂತು ನಿಭಾಯಿಸುತ್ತಿದ್ದ. ಆದ್ರೆ ಇಂದು ಮನೆಯ ಗೋಡೆಗಳ ಮೇಲಷ್ಟೇ ಅವನ ಫೋಟೋಗಳನ್ನ ನೋಡುವಂತಾಗಿದೆ ಎಂದು ಕಣ್ಣೀರಿಟ್ದಿದ್ದಾರೆ. ಇದನ್ನೂ ಓದಿ:  ನಿಲ್ಲದ ಮಧ್ಯಪ್ರಾಚ್ಯ ಸಂಘರ್ಷ – ಭಾರತದಲ್ಲಿ LPG ಬಳಕೆ 13% ಕುಸಿತ

ಕುಟುಂಬಕ್ಕೆ ಸಕಲ ಪರಿಹಾರ
ಮಗನನ್ನು ಕಳೆದುಕೊಂಡು ಕಂಗೆಟ್ಟಿದ್ದ ಕುರುರೆ ರೈಡರ್‌ ಆದಿಲ್ ಹುಸೇನ್ ಶಾ ಕುಟುಂಬಕ್ಕೆ ಮಹಾರಾಷ್ಟ್ರ ಡಿಸಿಎಂ ಏಕನಾಥ್‌ ಶಿಂಧೆ, ಮನೆ ಹಸ್ತಾಂತರಿಸಿದ್ರು. ಅಲ್ಲದೇ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಆದಿಲ್‌ ಪತ್ನಿಗೆ 5 ಲಕ್ಷ ರೂಪ ಆರ್ಥಿಕ ಪರಿಹಾರ ಮತ್ತು ಶಾಶ್ವತ ಸರ್ಕಾರಿ ಉದ್ಯೋಗವನ್ನು ಕಲ್ಪಿಸಿತು. ಆದಿಲ್ ಅವರ ಕಿರಿಯ ಸಹೋದರನಿಗೆ ವಕ್ಫ್ ಮಂಡಳಿಯಲ್ಲಿ ಕೆಲಸ ನೀಡಲಾಗಿದೆ.

Pahalgam Terrorists 1

ರೈಫಲ್‌ ಕಸಿದುಕೊಳ್ಳಲು ಹೋಗಿ ಉಗ್ರರ ಗುಂಡೇಟಿಗೆ ಬಲಿ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಸೈಯದ್ ಆದಿಲ್ ಹುಸೇನ್ ಶಾ (Syed Adil Hussain Shah) ಪ್ರಾಣ ಕಳೆದುಕೊಂಡರು. ಪ್ರವಾಸಿಗರ ಮೇಲೆ ದಾಳಿ ನಡೆಸುತ್ತಿದ್ದಾಗ, ಸೈಯದ್‌ ಧೈರ್ಯ ಮಾಡಿ ಓರ್ವನ ಉಗ್ರನಿಂದ ರೈಫಲ್‌ ಕಸಿದುಕೊಳ್ಳಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ಸೈಯದ್‌ ಮೇಲೆ ಗುಂಡು ಹಾರಿಸಿದ್ದರು.

ಸೈಯದ್‌ ಆದಿಲ್‌ ಪಹಲ್ಗಾಮ್‌ ಕಾರು ಪಾರ್ಕಿಂಗ್ ಸ್ಥಳದಿಂದ ಕುದುರೆಯ ಮೇಲೆ ಪ್ರವಾಸಿಗರನ್ನು ಬೈಸರನ್‌ಗೆ ಕರೆದುಕೊಂಡು ಬರುವ ಕೆಲಸ ಮಾಡುತ್ತಿದ್ದರು. ನರಮೇಧದಲ್ಲಿ ಸೈಯದ್‌ ಜೊತೆ 25 ಪುರುಷ ಪ್ರವಾಸಿಗರನ್ನು ಉಗ್ರರು ಹತ್ಯೆ ಮಾಡಿದ್ದರು. ಕುಟುಂಬದ ಏಕೈಕ ಜೀವನಾಧಾರ ಸೈಯದ್‌ ಆಗಿದ್ದರು.

TAGGED:Horse Riderindian armyjammu kashmirPahalgam Terror Attackterroristಕುದುರೆ ರೈಡರ್‌ಪರಿಹಾರಪಹಲ್ಗಾಮ್ ದಾಳಿಸೈಯದ್ ಆದಿಲ್ ಹುಸೇನ್ ಶಾ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Operation Sindoor 1
Latest

ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ – `ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ

Public TV
By Public TV
36 seconds ago
Zameer Ahmed Khan
Bengaluru City

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ – ಜಮೀರ್ ಅಹ್ಮದ್ ಸ್ಪಷ್ಟನೆ

Public TV
By Public TV
1 hour ago
UP teen murder case
Crime

ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಬರ್ಬರ ಹತ್ಯೆ

Public TV
By Public TV
1 hour ago
SN Narayanaswamy Bangarpet MLA
Bengaluru City

ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
2 hours ago
Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
2 hours ago
Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?