ಕೋಲಾರ: ತಾಲೂಕಿನ (Kolar) ಬೆಳಗಾನಹಳ್ಳಿ ಬಳಿ ಇರುವ ಕೋಲಾರ ಹಾಲು ಒಕ್ಕೂಟ (KOMUL) ಕಚೇರಿ ಮೇಲೆ ದಿಢೀರ್ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿ ಮಹತ್ವದ ಕಡತಗಳ ಪರಿಶೀಲನೆ ನಡೆಸಿದ್ದಾರೆ.
ನಾಗರಾಜ್ ಎಂಬವವರು ನೀಡಿರುವ ದೂರನ್ನು ಆಧರಿಸಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಂವಿಕೆ ಗೋಲ್ಡನ್ ಡೈರಿ, ಸೋಲಾರ್ ಪ್ಲಾಂಟ್, ಐಸ್ ಕ್ರೀಂ ಘಟಕ, ಮೆಗಾ ಡೈರಿಗಳಲ್ಲಿ ಸಾಕಷ್ಟು ಅವ್ಯವಹಾರ ಸೇರಿದಂತೆ ಸೆ-2023ರಲ್ಲಿ ನಡೆದ ನೇಮಕಾತಿಯಲ್ಲೂ ಹಗರಣ ನಡೆದಿದೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ ಅವರು ದೂರು ಸಲ್ಲಿಸಿದ್ದರು. ಇದನ್ನೂ ಓದಿ: ಲಂಚಕ್ಕೆ ಕೈಯೊಡ್ಡಿ ರೆಡ್ಹ್ಯಾಂಡ್ ಆಗಿ `ಲೋಕಾ’ ಬಲೆಗೆ ಬಿದ್ದ ಪಿಎಸ್ಐ
ದೂರಿನ ಅನ್ವಯ ಲೋಕಾಯುಕ್ತ ಅಧಿಕಾರಿಗಳಾದ ಲೋಕೇಶ್ ನೇತೃತ್ವದ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ. ಇನ್ನೂ ಭೇಟಿ ವೇಳೆ ಹಾಜರಾಗಲು ದೂರುದಾರ ನಾಗರಾಜ್ ಎಂಬವರಿಗೆ ಲೋಕಾ ಅಧಿಕಾರಿಗಳು ನೊಟೀಸ್ ಸಹ ನೀಡಿದ್ದಾರೆ. ಏ.24ರ ವರೆಗೂ ದಾಖಲೆಗಳ ಪರಿಶೀಲನೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: 24 ಗಂಟೆಯ ಒಳಗಡೆ ಉತ್ತರಿಸಿ – ಖರ್ಗೆಗೆ ಆಯೋಗ ನೋಟಿಸ್



