Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇದು ನನ್ನ ಸತ್ಯಾಗ್ರಹ – ಹಿಂದೆ ಸರಿಯಲ್ಲ ಎಂದು ಜಡ್ಜ್‌ ಹೇಳಿದ ಬೆನ್ನಲ್ಲೇ ವಿಚಾರಣೆಗೆ ಬರಲ್ಲ ಎಂದ ಕೇಜ್ರಿವಾಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಇದು ನನ್ನ ಸತ್ಯಾಗ್ರಹ – ಹಿಂದೆ ಸರಿಯಲ್ಲ ಎಂದು ಜಡ್ಜ್‌ ಹೇಳಿದ ಬೆನ್ನಲ್ಲೇ ವಿಚಾರಣೆಗೆ ಬರಲ್ಲ ಎಂದ ಕೇಜ್ರಿವಾಲ್‌

Court

ಇದು ನನ್ನ ಸತ್ಯಾಗ್ರಹ – ಹಿಂದೆ ಸರಿಯಲ್ಲ ಎಂದು ಜಡ್ಜ್‌ ಹೇಳಿದ ಬೆನ್ನಲ್ಲೇ ವಿಚಾರಣೆಗೆ ಬರಲ್ಲ ಎಂದ ಕೇಜ್ರಿವಾಲ್‌

Public TV
Last updated: April 27, 2026 11:50 am
Public TV
Share
3 Min Read
Justice Swarana Kanta Sharma Arvind Kejriwal
SHARE

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ (Delhi Excise Policy Case) ಸಂಬಂಧಿಸಿದಂತೆ ರಾಜಕೀಯ ಮತ್ತು ನ್ಯಾಯಾಂಗ ವಲಯದಲ್ಲಿ ಭಾರೀ ಸಂಚಲನ ಮೂಡಿಸುವ ಬೆಳವಣಿಗೆಯೊಂದರಲ್ಲಿ, ದೆಹಲಿ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (AAP) ಸಂಚಾಲಕ ಅರವಿಂದ ಕೇಜ್ರಿವಾಲ್ (Arvind Kejriwal) ಅವರು ಹೈಕೋರ್ಟ್ ವಿಚಾರಣೆಯಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.

ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ (Justice Swarana Kanta Sharma) ಅವರ ಪೀಠದ ಮುಂದೆ ನಡೆಯುತ್ತಿರುವ ವಿಚಾರಣೆಗೆ ತಾವು ಅಥವಾ ತಮ್ಮ ಪರ ವಕೀಲರು ಹಾಜರಾಗುವುದಿಲ್ಲ ಎಂದು ಕೇಜ್ರಿವಾಲ್ ಲಿಖಿತವಾಗಿ ತಿಳಿಸಿದ್ದಾರೆ.  ಪತ್ರದಲ್ಲಿ ಕೇವಲ ಸತ್ಯಾಗ್ರಹದ(Satyagraha) ಘೋಷಣೆಯಷ್ಟೇ ಅಲ್ಲದೆ ತಮ್ಮ ನಿರ್ಧಾರದ ಹಿಂದಿನ ನೈತಿಕ ಮತ್ತು ವೈಯಕ್ತಿಕ ಕಾರಣಗಳನ್ನು ಸವಿಸ್ತಾರವಾಗಿ ವಿವರಿಸಿದ್ದಾರೆ.

ವಿಚಾರಣೆಗೆ ಹಾಜರಾಗದಿದ್ದರೆ ಕಾನೂನಾತ್ಮಕವಾಗಿ ತನಗೆ ತೊಂದರೆಯಾಗಬಹುದು ಮತ್ತು ಏಕಪಕ್ಷೀಯ ಆದೇಶ ಹೊರಬರಬಹುದು ಎಂಬ ಅರಿವು ತನಗಿದೆ. ಹೀಗಿದ್ದರೂ “ತಪ್ಪು ವ್ಯವಸ್ಥೆಯ” ಮುಂದೆ ಮಂಡಿಯೂರುವುದಕ್ಕಿಂತ ಆ ಶಿಕ್ಷೆಯನ್ನು ಅನುಭವಿಸಲು ಸಿದ್ಧ ಎಂದು ಹೇಳಿದ್ದಾರೆ.

ಈ ನಿರ್ಧಾರವನ್ನು ʻಸತ್ಯಾಗ್ರಹʼ ಎಂದು ಬಣ್ಣಿಸಿದ ಅವರು ನ್ಯಾಯಾಂಗದ ನೈತಿಕತೆಯನ್ನು ಎತ್ತಿ ಹಿಡಿಯಲು ನಾನು ಈ ಅಹಿಂಸಾತ್ಮಕ ಮಾರ್ಗವನ್ನು ಅನುಸರಿಸುತ್ತಿರುವುದಾಗಿ ತಿಳಿಸಿದ್ದಾರೆ. ಸತ್ಯಾಗ್ರಹವೆಂದರೆ ಕೇವಲ ಪ್ರತಿರೋಧವಲ್ಲ, ಬದಲಾಗಿ ಅಧಿಕಾರದಲ್ಲಿರುವವರು ತಮ್ಮ ತಪ್ಪನ್ನು ತಿದ್ದಿಕೊಳ್ಳಲು ನೀಡುವ ಅವಕಾಶ ಎಂದು ಅವರು ಗಾಂಧಿ ತತ್ವಗಳನ್ನು ಉಲ್ಲೇಖಿಸಿದ್ದಾರೆ. ಮೊದಲು ಅನ್ಯಾಯವನ್ನು ಸರಿಪಡಿಸಲು ಅಧಿಕೃತವಾಗಿ ವಿನಂತಿಸುವುದು. ಮನವಿ ವಿಫಲವಾದಾಗ ಮಾತ್ರ ಅಹಿಂಸಾತ್ಮಕವಾಗಿ ಸಹಕರಿಸದಿರುವುದು ಸತ್ಯಾಗ್ರಹದ ನಿಜವಾದ ಶಿಸ್ತು ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ನ್ಯಾಯ ಸಿಗುವುದು ಮಾತ್ರವಲ್ಲ, ಅದು ಸಿಗುತ್ತಿದೆ ಎಂದು ಜನರಿಗೆ ಕಾಣಿಸಬೇಕು ಎಂಬ ಸುಪ್ರೀಂ ಕೋರ್ಟ್‌ನ ತತ್ವವನ್ನು ಪತ್ರದಲ್ಲಿ ಉಲ್ಲೇಖಿಸಿ ಈ ಪ್ರಕರಣದಲ್ಲಿ ಆ ತತ್ವವನ್ನು ಪಾಲಿಸಲಾಗುತ್ತಿಲ್ಲ ಎಂದು ದೂರಿದ್ದಾರೆ. ಇದನ್ನೂ ಓದಿ: ರಾಜಕಾರಣಿಗಳ ಮಕ್ಕಳು ರಾಜಕಾರಣಿಯಾದರೆ, ಜಡ್ಜ್‌ ಮಕ್ಕಳು ವಕೀಲರಾಗುವುದರಲ್ಲಿ ತಪ್ಪೇನಿಲ್ಲ: ಕೇಜ್ರಿವಾಲ್‌ ವಿರುದ್ಧ ಜಡ್ಜ್‌ ಗರಂ

delhi high court

ನ್ಯಾಯಾಧೀಶರು ಈ ಪ್ರಕರಣದಿಂದ ಹಿಂದೆ ಸರಿಯಬೇಕು ಎಂದು ತಾನು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವಾಗ ನ್ಯಾಯಾಲಯವು ಅದನ್ನು “ವೈಯಕ್ತಿಕ ದಾಳಿ” ಎಂದು ಪರಿಗಣಿಸಿರುವುದು ತನಗೆ ನೋವುಂಟು ಮಾಡಿದೆ. ನ್ಯಾಯದ ನಿರೀಕ್ಷೆಯು ವೈಯಕ್ತಿಕ ಘರ್ಷಣೆಯಾಗಿ ಬದಲಾಗಿರುವುದು ದುರದೃಷ್ಟಕರ ಎಂದು ಅವರು ಹೇಳಿದ್ದಾರೆ.

ಯಾವುದೇ ಸಿಟ್ಟು ಅಥವಾ ದ್ವೇಷದಿಂದ ಈ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ, ಬದಲಾಗಿ ತನ್ನ ಅಂತರಾತ್ಮದ ಧ್ವನಿಗೆ ಓಗೊಟ್ಟು, ನೈತಿಕ ಹೊಣೆಗಾರಿಕೆಯಿಂದ ವಿಚಾರಣೆಯಿಂದ ದೂರ ಉಳಿಯುತ್ತಿದ್ದೇನೆ. ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮೇಲಿನ ತಮ್ಮ ಅಪನಂಬಿಕೆಯು ಕೇವಲ ಈ ಅಬಕಾರಿ ನೀತಿ ಹಗರಣಕ್ಕೆ ಮಾತ್ರ ಸೀಮಿತವಾಗಿದ್ದು, ಇತರ ವಿಷಯಗಳಲ್ಲಿ ಇದು ಅನ್ವಯಿಸುವುದಿಲ್ಲ ಎಂದು ಕೇಜ್ರಿವಾಲ್‌ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.

ಹೈಕೋರ್ಟ್ ನ್ಯಾಯಮೂರ್ತಿಗಳು ತನ್ನ ಅರ್ಜಿಯನ್ನು ವಜಾಗೊಳಿಸಿರುವುದನ್ನು ಪ್ರಶ್ನಿಸಿ ತಾವು ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದಾರೆ. ಉನ್ನತ ನ್ಯಾಯಾಲಯದಿಂದ ತಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಅವರು ಪರೋಕ್ಷವಾಗಿ ಹೇಳಿದ್ದಾರೆ. ಇದನ್ನೂ ಓದಿ: ನೀವು ಆರ್‌ಎಸ್‌ಎಸ್‌ ಸಂಯೋಜಿತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೀರಿ: ದೆಹಲಿ ಹೈಕೋರ್ಟ್‌ನಲ್ಲಿ ಕೇಜ್ರಿವಾಲ್‌ ವಾದ

ಕೇಜ್ರಿವಾಲ್ ಅವರ ಈ ನಡೆ ನ್ಯಾಯಾಂಗ ಇತಿಹಾಸದಲ್ಲಿ ಅತ್ಯಂತ ಅಪರೂಪದ ಮತ್ತು ಸಂಘರ್ಷಾತ್ಮಕ ಹೆಜ್ಜೆಯಾಗಿದೆ. ಹೈಕೋರ್ಟ್ ನ್ಯಾಯಾಧೀಶರ ಮೇಲೆಯೇ ಅಪನಂಬಿಕೆ ವ್ಯಕ್ತಪಡಿಸಿ, ವಿಚಾರಣೆಯನ್ನು ಬಹಿಷ್ಕರಿಸುವ ಮೂಲಕ ಅವರು ನೇರವಾಗಿ ನ್ಯಾಯಾಂಗ ವ್ಯವಸ್ಥೆಯ ಸ್ವರೂಪವನ್ನು ಪ್ರಶ್ನಿಸಿದ್ದಾರೆ.  ತಮ್ಮ ನಿರ್ಧಾರವನ್ನು ‘ಸತ್ಯಾಗ್ರಹ’ ಎಂದು ಕರೆಯುವ ಮೂಲಕ ಹೊಸ ರಾಜಕೀಯ ಆಯಾಮವನ್ನೂ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಸುಪ್ರೀಂ ಕೋರ್ಟ್ ಈ ವಿಷಯವನ್ನು ಹೇಗೆ ಪರಿಗಣಿಸುತ್ತದೆ ಮತ್ತು ಹೈಕೋರ್ಟ್ ಏಕಪಕ್ಷೀಯವಾಗಿ ವಿಚಾರಣೆ ಮುಂದುವರಿಸುತ್ತದೆಯೇ ಎಂಬುದು ಕುತೂಹಲಕಾರಿಯಾಗಿದೆ.

ಫೆಬ್ರವರಿ 2026 ರಲ್ಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ದೆಹಲಿ ನ್ಯಾಯಾಲಯವು ಅರವಿಂದ ಕೇಜ್ರಿವಾಲ್ ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಿತ್ತು. ಇದರ ವಿರುದ್ಧ ಸಿಬಿಐ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನ್ಯಾ. ಸ್ವರ್ಣ ಕಾಂತ ಶರ್ಮಾ ಅವರ ಏಕಸದಸ್ಯಪೀಠದಲ್ಲಿ ನಡೆಯುತ್ತಿದೆ.

TAGGED:Arvind KejriwaldelhiExcise Policy Casehigh courtSatyagrahaಅರವಿಂದ ಕೇಜ್ರಿವಾಲ್ದೆಹಲಿ ಅಬಕಾರಿ ನೀತಿಸತ್ಯಾಗ್ರಹಹೈಕೋರ್ಟ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

ಸಾಂದರ್ಭಿಕ ಚಿತ್ರ
Bengaluru City

PGCET ಅರ್ಜಿ ಸಲ್ಲಿಸಲು ಏ.30ರವರೆಗೆ ವಿಸ್ತರಣೆ – ಕೆಇಎ

Public TV
By Public TV
4 minutes ago
Techie Dies Of Brain Stroke
Bengaluru City

ತಾಯಿ ಜೊತೆ ನಗುತ್ತಾ ಮಾತನಾಡುತ್ತಿರುವಾಗಲೇ ಬ್ರೈನ್‌ ಸ್ಟ್ರೋಕ್ – 25 ವರ್ಷದ ಟೆಕ್ಕಿ ಸಾವು

Public TV
By Public TV
19 minutes ago
kids illegally ridding scooter 1
Bengaluru City

ಒಂದೇ ಸ್ಕೂಟರ್‌ನಲ್ಲಿ 6 ಅಪ್ರಾಪ್ತರ ಸವಾರಿ – ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿ ಪೋಷಕರ ವಿರುದ್ಧ ಆಕ್ರೋಶ

Public TV
By Public TV
20 minutes ago
Chinnaswamy Stadium RCB
Bengaluru City

ಆರ್‌ಸಿಬಿ ಪಂದ್ಯದಂದೇ 240 ಸಿಸಿಟಿವಿ ಕೇಬಲ್‌ ಕಟ್‌ – ಚಿನ್ನಸ್ವಾಮಿಯಲ್ಲಿ ಭಾರೀ ಭದ್ರತಾ ಲೋಪ!

Public TV
By Public TV
2 hours ago
kunal ghosh TMC
Latest

ಬಿಜೆಪಿಗಾಗಿ ರಾಹುಲ್‌ ಗಾಂಧಿ ಕೆಲಸ, ಪಪ್ಪು ಅನ್ನೋದ್ರಲ್ಲಿ ತಪ್ಪಿಲ್ಲ: ಕುನಾಲ್ ಘೋಷ್ ಕಿಡಿ

Public TV
By Public TV
3 hours ago
kea
Bengaluru City

2026ರ ಸಿಇಟಿ ಪರೀಕ್ಷೆ ಕೀ ಉತ್ತರ ಪ್ರಕಟಿಸಿದ ಕೆಇಎ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?