ಹಾವೇರಿ: ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ (Woman) ನೇಣಿಗೆ ಶರಣಾಗಿದ್ದು, ಗಂಡನ ಮನೆಯ ಸದಸ್ಯರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಗಂಡನ ಮನೆಯ ಮುಂದೆ ಮಹಿಳೆಯ ಮೃತದೇಹ ಇಟ್ಟು ಪ್ರತಿಭಟನೆ ಮಾಡಿದ ಘಟನೆ ಹಾವೇರಿ (Haveri) ಜಿಲ್ಲೆ ಹಾನಗಲ್ (Hanagal) ತಾಲೂಕಿನ ಕಾಲ್ವೇಕಲ್ಲಾಪೂರ ಗ್ರಾಮದಲ್ಲಿ ನಡೆದಿದೆ.

ನೀಲಮ್ಮ ನೀರಲಗಿ (24) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಮಹಿಳೆ. ಕಳೆದ ಮೂರು ತಿಂಗಳ ಹಿಂದೆ ಗಂಡ ಶಿವಾನಂದ ಸಾವನ್ನಪ್ಪಿದ್ದ. ಆಸ್ತಿ ವಿಚಾರವಾಗಿ ಗಂಡನ ಮನೆಯವರು ಮಹಿಳೆಯನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. 5 ಎಕರೆ ಜಮೀನು ಕೊಡಬೇಕಲ್ಲ ಎಂಬ ದುರಾಸೆಯಿಂದ ಮಹಿಳೆಯನ್ನ ಕೊಲೆ ಮಾಡಿದ್ದಾರೆ. ನೀಲಮ್ಮ ಕುಟುಂಬಸ್ಥರಿಂದ ಮನೆ ಮುಂದೆ ಶವವಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದರ್ಶನ್ಗೆ ತಾತ್ಕಾಲಿಕ ರಿಲೀಫ್ – ಒಂದು ವಾರ ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸದಂತೆ ಕೋರ್ಟ್ ಸೂಚನೆ
ಇಬ್ಬರು ಮಕ್ಕಳನ್ನ ಕರೆದುಕೊಂಡು ಬರಬೇಕು, ತಪ್ಪಿತಸ್ಥರನ್ನು ಬಂಧನ ಮಾಡಬೇಕು, ಅಲ್ಲಿಯವರೆಗೂ ಶವ ತೆಗೆಯಲ್ಲ ಎಂಬ ಪಟ್ಟು ಹಿಡಿದು ಕುಟುಂಬದ ಸದಸ್ಯರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಆಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸುಪ್ರಿಯಾ ಸುಳೆ ಪುತ್ರಿಯ ರಿಸೆಪ್ಷನ್ನಲ್ಲಿ ಮೋದಿ, ಸೋನಿಯಾ, ಅಮಿತ್ ಶಾ, ರಾಗಾ ಸೇರಿ ಗಣ್ಯರು ಭಾಗಿ
