ರಾಂಚಿ: ಜಾರ್ಖಂಡ್ (Jharkhand) ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಮತ್ತು ನಗರಾಭಿವೃದ್ಧಿ ಸಚಿವ ಸುದಿವ್ಯ ಕುಮಾರ್ ಸೋನು (Sudivya Kumar Sonu) ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ.
ಗಿರಿಧಿಹ್ನ ಶಾಸಕಿ ಸೋನು ಪ್ರವಾಸೋದ್ಯಮ, ಕಲೆ, ಸಂಸ್ಕೃತಿ, ಕ್ರೀಡೆ ಮತ್ತು ಯುವಜನ ವ್ಯವಹಾರಗಳ ಇಲಾಖೆಗಳ ಉಸ್ತುವಾರಿ ವಹಿಸಿದ್ದರು. ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿದ ಜೆಎಂಎಂ ಪಕ್ಷ ಸಂತಾಪ ಸೂಚಿಸಿದೆ. ಈ ಬಗ್ಗೆ ಎಕ್ಸ್ನಲ್ಲಿ, ಜೆಎಂಎಂ ಪಕ್ಷದ (Jharkhand Mukti Morcha) ಒಡನಾಡಿ ಮತ್ತು ಜಾರ್ಖಂಡ್ ಸರ್ಕಾರದ ಸಚಿವರಾಗಿದ್ದ ಸುದಿವ್ಯ ಕುಮಾರ್ ಅವರ ಅಕಾಲಿಕ ನಿಧನದಿಂದ ಜಾರ್ಖಂಡ್ ಮುಕ್ತಿ ಮೋರ್ಚಾ ಕುಟುಂಬ ದಿಗ್ಭ್ರಮೆಗೊಂಡಿದೆ. ಅವರ ನಿಧನವು ಕುಟುಂಬದ ಸದಸ್ಯರನ್ನು ದುಃಖಕ್ಕೆ ದೂಡಿದೆ. ಸರ್ಕಾರ ಮತ್ತು ರಾಜ್ಯ ಎರಡಕ್ಕೂ ಅವರ ನಷ್ಟವನ್ನು ಭರಿಸಲಾಗದು. ಪಕ್ಷಕ್ಕೆ ಅವರು ನೀಡಿದ ಕೊಡುಗೆ ಅಪಾರ ಎಂದು ಪಕ್ಷ ಬರೆದುಕೊಂಡಿದೆ. ಇದನ್ನೂ ಓದಿ: ಪೌರಕಾರ್ಮಿಕರು ಕರ್ತವ್ಯಕ್ಕೆ ಸಮರ್ಪಕವಾಗಿ ಹಾಜರಾಗದಿದ್ದರೆ ಕೆಲಸದಿಂದ ವಜಾ: ಕೃಷ್ಣ ಬೈರೇಗೌಡ
ಸುದಿವ್ಯ ಕುಮಾರ್ ಅವರ ನಿಧನಕ್ಕೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಂತಾಪ ಸೂಚಿಸಿದ್ದು, ಈ ಸಾವು ನನಗೆ ವೈಯಕ್ತಿಕ ನಷ್ಟ ಉಂಟುಮಾಡಿದೆ. ರಾಜ್ಯದ ಗುರುತು ಮತ್ತು ಹಕ್ಕುಗಳಿಗೆ ನೀಡಿದ ಕೊಡುಗೆಗಳನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದಿದ್ದಾರೆ.
ಜಾರ್ಖಂಡ್ ಸಾರಿಗೆ, ಕಂದಾಯ ಮತ್ತು ಭೂ ಸುಧಾರಣಾ ಸಚಿವ ದೀಪಕ್ ಬಿರುವಾ ಅವರು, ನನ್ನ ಸಹ ಸಚಿವರಾಗಿದ್ದ ಸಹೋದರ ಸುದಿವ್ಯ ಸೋನು ಅವರ ನಿಧನದಿಂದ ನನಗೆ ತೀವ್ರ ದುಃಖವಾಗಿದೆ. ಸೆ.5ರ ರಾತ್ರಿ ಅವರ ಆರೋಗ್ಯ ಹದಗೆಟ್ಟಿತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಚಿಕಿತ್ಸೆಯ ಸಮಯದಲ್ಲಿ ನಿಧನರಾದರು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
2019 ರಲ್ಲಿ ಗಿರಿದಿಹ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಕುಮಾರ್, ಅವರ ಪತ್ನಿ, ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗನನ್ನು ಅಗಲಿದ್ದಾರೆ.
ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ವಿಶ್ವಾಸಾರ್ಹ ಸಹಾಯಕರಾಗಿದ್ದರು. 2024 ರಲ್ಲಿ ಭೂ ವಂಚನೆ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ಸೋರೆನ್ ಬಂಧನದ ನಂತರದ ಅವಧಿ ಸೇರಿದಂತೆ ಹಲವಾರು ರಾಜಕೀಯ ಸವಾಲುಗಳ ಸಮಯದಲ್ಲಿ ಜೆಎಂಎಂ ಪಕ್ಷ ಮುನ್ನಡೆಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.
ಅವರ ಸಾವಿಗೆ ಕೆಲವೇ ದಿನಗಳ ಮೊದಲು ಪ್ರವಾಸೋದ್ಯಮ ಮೂಲಸೌಕರ್ಯ ಮತ್ತು ನಿರ್ವಹಣಾ ಪದ್ಧತಿಗಳನ್ನು ಅಧ್ಯಯನ ಮಾಡಲು ಜಾರ್ಖಂಡ್ ಸರ್ಕಾರದ ನಿಯೋಗದ ನೇತೃತ್ವ ವಹಿಸಿ, ಕರ್ನಾಟಕಕ್ಕೆ ಬಂದಿದ್ದರು. ಭೇಟಿಯ ಸಮಯದಲ್ಲಿ, ಪ್ರವಾಸೋದ್ಯಮ ಮತ್ತು ಅರಣ್ಯ ನಿರ್ವಹಣೆಯಲ್ಲಿ ಸಂಭಾವ್ಯ ಸಹಯೋಗವನ್ನು ಚರ್ಚಿಸಲು ಅವರು ಕರ್ನಾಟಕ ಪ್ರವಾಸೋದ್ಯಮ ಸಚಿವ ಕೆ ಜೆ ಜಾರ್ಜ್ ಅವರನ್ನು ಭೇಟಿಯಾಗಿದ್ದರು. ಇದನ್ನೂ ಓದಿ: ಗುಜರಾತ್ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ ನೇಮಕ
