ನವದೆಹಲಿ: ನೈಋತ್ಯ ದೆಹಲಿಯ (Delhi) ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಕಟ್ಟಡದಿಂದ ಈವರೆಗೆ ಆರು ಜನರನ್ನು ರಕ್ಷಿಸಲಾಗಿದೆ. ಅವಶೇಷಗಳಡಿ ಸಿಲುಕಿರುವವರಿಗಾಗಿ ಹುಡುಕಾಟ ನಡೆಯುತ್ತಿದೆ. ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ, ಅಂಬುಲೆನ್ಸ್ ಮತ್ತು ಇತರ ತುರ್ತು ಸೇವೆಗಳನ್ನು ಸ್ಥಳದಲ್ಲಿ ಕಲ್ಪಿಸಲಾಗಿದೆ. ಇದನ್ನೂ ಓದಿ: ಜೆಎನ್ಯು ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ – 10 ವಿದ್ಯಾರ್ಥಿಗಳಿಂದ ದೂರು
75 ಹಾಸಿಗೆಗಳ ಪೇಯಿಂಗ್ ಗೆಸ್ಟ್ ವಸತಿ ಸೌಕರ್ಯವಾಗಿದ್ದ ಕಟ್ಟಡ ಮಧ್ಯಾಹ್ನ 1:30 ರ ಸುಮಾರಿಗೆ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಟ್ಟಡ ಕುಸಿದಾಗ ಕನಿಷ್ಠ 50 ವಿದ್ಯಾರ್ಥಿಗಳು ಒಳಗೆ ಇದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಕುಸಿದ ಕಟ್ಟಡವು ‘ಹಾಸ್ಟೆಲ್ ಡೇಜ್’ ಹೆಸರಿನ ಪುರುಷರ ಪಿಜಿ ಎಂದು ತಿಳಿದುಬಂದಿದೆ.
ಕನಿಷ್ಠ 12 ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ರಕ್ಷಣಾ ಕಾರ್ಯಕ್ಕಾಗಿ ಈಗಾಗಲೇ ಜೆಸಿಬಿ ಯಂತ್ರವನ್ನು ನಿಯೋಜಿಸಲಾಗಿದ್ದು, ಚಪ್ಪಡಿಗಳು ಮತ್ತು ಗಿರ್ಡರ್ಗಳನ್ನು ತೆಗೆದುಹಾಕಲು ಹೆಚ್ಚಿನ ಯಂತ್ರೋಪಕರಣಗಳನ್ನು ತರಲಾಗುತ್ತಿದೆ. ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಗ್ನಿಶಾಮಕ ತಂಡಗಳಿಗೆ ಸಹಾಯ ಮಾಡಲು ವಿಪತ್ತು ಪ್ರತಿಕ್ರಿಯೆ ತಂಡಗಳನ್ನು ಸಹ ನಿಯೋಜಿಸಲಾಗಿದೆ. ಇದನ್ನೂ ಓದಿ: ಲಂಡನ್ಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ – ತುಮಕೂರು ಬಳಿ ಗಿರಕಿ ಹೊಡೆದು ಬೆಂಗ್ಳೂರಿಗೆ ವಾಪಸ್
ಕಟ್ಟಡ ಕುಸಿತದ ಬಗ್ಗೆ ಸಿಎಂ ರೇಖಾ ಗುಪ್ತ ಮಾಹಿತಿ ಪಡೆದುಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ತ್ವರಿತಗತಿಯಲ್ಲಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
