ಬೀದರ್: ಅನ್ಯ ರಾಜ್ಯಕ್ಕೆ ಅಕ್ರಮವಾಗಿ ಸಾಗಾಣೆಯಾಗುತ್ತಿದ್ದ ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿಯನ್ನು ಬೀದರ್ ಪೊಲೀಸರು (Bidar Police) ಜಪ್ತಿ ಮಾಡಿದ್ದಾರೆ.
ಬೀದರ್ ಜಿಲ್ಲೆಯ ಚಿಟಗುಪ್ಪ ಪಟ್ಟಣದ ಶಿವಾಜೀ ವೃತ್ತದಲ್ಲಿ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ರಾಜಾರೋಷವಾಗಿ ಬೀದರ್ನಿಂದ ಪಡಿತರ ಅಕ್ಕಿ ಸಾಗಾಟ ಮಾಡಿ, ಬಳಿಕ ಮಹಾರಾಷ್ಟ್ರ ಸೇರಿದಂತೆ ಅನ್ಯರಾಜ್ಯದ ಕಾಳ ಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಹೃದಯಾಘಾತದಿಂದ ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಸಾವು
ಪಡಿತರಿಗೆ ಸೇರಬೇಕಿದ್ದ ಅಕ್ಕಿ ಚೀಲಗಳು ಕಾಳಸಂತೆಗೆ ಅಕ್ರಮವಾಗಿ ಸಾಗಾಟ ಮಾಡಿ, ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಮತ್ತು ಪೊಲೀಸರಿ ಜಂಟಿ ಕಾರ್ಯಚರಣೆ ನಡೆಸಿದ್ದಾರೆ.
ಸದ್ಯ ಚಿಟಗುಪ್ಪ ಪೊಲೀಸರು ಪಡಿತರ ಅಕ್ಕಿ ಹಾಗೂ ವಾಹನ ಜಪ್ತಿ ಮಾಡಿದ್ದಾರೆ. ಈ ಕುರಿತು ಚಿಟಗುಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.ಇದನ್ನೂ ಓದಿ: ಹಾಸನದ ಯೋಧ ಅಸ್ಸಾಂನಲ್ಲಿ ಅನಾರೋಗ್ಯದಿಂದ ನಿಧನ

