Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮಿಳುನಾಡಿಗೆ ನೀರು ಬಿಟ್ಟು ಬೆಂಗಳೂರಿಗೆ ಅಂದ್ರು- ಸತ್ಯ ತಿಳಿದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ತಮಿಳುನಾಡಿಗೆ ನೀರು ಬಿಟ್ಟು ಬೆಂಗಳೂರಿಗೆ ಅಂದ್ರು- ಸತ್ಯ ತಿಳಿದ ರೈತರಿಂದ ರಸ್ತೆ ತಡೆದು ಪ್ರತಿಭಟನೆ

Districts

ತಮಿಳುನಾಡಿಗೆ ನೀರು ಬಿಟ್ಟು ಬೆಂಗಳೂರಿಗೆ ಅಂದ್ರು- ಸತ್ಯ ತಿಳಿದ ರೈತರಿಂದ ರಸ್ತೆ ತಡೆದು ಪ್ರತಿಭಟನೆ

Public TV
Last updated: June 30, 2017 4:12 pm
Public TV
Share
2 Min Read
PROTEST
SHARE

ಮಂಡ್ಯ/ಮೈಸೂರು: ಕೆ.ಆರ್.ಎಸ್ ಜಲಾಶಯ ತುಂಬುವ ಮೊದಲೇ ತಮಿಳುನಾಡಿಗೆ ನೀರು ಹರಿಸ್ತಿರೋ ಶಂಕೆ ವ್ಯಕ್ತವಾಗ್ತಿದೆ.

ರಾತ್ರೋರಾತ್ರಿ ನೀರಾವರಿ ಇಲಾಖೆ ಜಲಾಶಯದ ಹೊರ ಹರಿವಿನ ಪ್ರಮಾಣ ಹೆಚ್ಚಿಸಿದೆ. ಸಾವಿರ ಕ್ಯೂಸೆಕ್ ಇದ್ದ ಹೊರ ಹರಿವಿನ ಪ್ರಮಾಣ 2,300 ಕೂಸೆಕ್ ಗೆ ಏರಿಕೆಯಾಗಿದೆ. ಜಲಾಶಯ ತುಂಬುವ ಮೊದಲೇ ನದಿಗೆ ಹೆಚ್ಚಿನ ನೀರು ಬಿಡುತ್ತಿರೋ ಬಗ್ಗೆ ರೈತರು ಅಸಮಧಾನ ವ್ಯಕ್ತಪಡಿಸಿದ್ದಾರೆ. ನಾಲೆಗೆ ನೀರು ಬಿಡಿ ಎಂದ್ರೆ ನದಿಗೆ ನೀರು ಬಿಟ್ಟ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

MND PROTEST

ರೈತರ ಪ್ರತಿಭಟನೆ, ಎಚ್ಚರಿಕೆಯ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಪೊಲೀಸ್ ಹೈ ಅಲರ್ಟ್ ಘೋಷಿಸಲಾಗಿದೆ. ಮಂಡ್ಯ, ಮಳವಳ್ಳಿ, ಮದ್ದೂರು, ಶ್ರೀರಂಗಪಟ್ಟಣದಲ್ಲಿ ಹೈ ಅಲರ್ಟ್ ಇದ್ದು, ಎಸ್‍ಪಿ ಜಿ. ರಾಧಿಕಾ ನೇತೃತ್ವದಲ್ಲಿ ಹೆಚ್ಚಿನ ಗಸ್ತು ನಿಯೋಜಿಸಲಾಗಿದೆ. ಹೊರ ಜಿಲ್ಲೆಗಳಿಂದಲೂ ಪೊಲೀಸರ ಆಗಮನವಾಗಿದೆ.

ತಮಿಳುನಾಡಿಗೆ ನೀರು ಬಿಟ್ಟರೆ ಬಲಿಯಾಕ್ತೀವಿ ಎಂದು ನೀರಾವರಿ ಇಲಾಖೆ ಅಧಿಕಾರಿಗೆ ಮಾಜಿ ಸಂಸದ, ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಾ.ಜಿ.ಮಾದೇಗೌಡ ಖಡಕ್ ಎಚ್ಚರಿಕೆ ನೀಡಿದ್ದಾರೆ. ನೀರಾವರಿ ಇಲಾಖೆ ಸೂಪರಿಂಟೆಂಡೆಂಟ್ ಎಂಜಿನಿಯರ್ ವಿಜಯ್ ಕುಮಾರ್ ಜೊತೆ ದೂರವಾಣಿ ಸಂಭಾಷಣೆ ನಡೆಸಿದ ಅವರು, ಹೊರ ಹರಿವು ಹೆಚ್ಚಳದ ಬಗ್ಗೆ ಮಾಹಿತಿ ಕೇಳಿದ್ರು. ಈ ವೇಳೆ ಅಧಿಕಾರಿಗಳು ಮಾದೇಗೌಡರಿಗೆ ಸುಳ್ಳು ಮಾಹಿತಿ ನೀಡಿದ್ದು, ಬೆಂಗಳೂರು ಜನರ ಕುಡಿಯುವ ಉಪಯೋಗಕ್ಕೆಂದು ಹೇಳಿದ್ದಾರೆ. ಈಗಾಗಲೇ ರೈತರು ಹೋರಾಟ ಮಾಡ್ತಿದ್ದಾರೆ. ನೀರು ಬಿಟ್ಟರೆ ರೋಡಲ್ಲಿ ಓಡಾಡೋಕೆ ಬಿಡಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

MND 5

ತಮಿಳುನಾಡಿಗೆ ನೀರು ಬಿಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾವೇರಿ ಕಣಿವೆಯಲ್ಲಿ ಹೋರಾಟ ಶುರುವಾಗಿದೆ. ಮಂಡ್ಯದ ರೈತ ಸಂಘದಿಂದ ಪ್ರತ್ಯೇಕ ಹೋರಾಟ ನಡೆದಿದೆ. ಮಂಡ್ಯದ ಸರ್.ಎಂ.ವಿ ಪ್ರತಿಮೆ ಬಳಿ ರೈತರಿಂದ ಹೆದ್ದಾರಿ ತಡೆ ತಡೆದು ಪ್ರತಿಭಟಿಸಲಾಗಿದ್ದು, ಮತ್ತೊಂದು ಬಣದಿಂದ ನೀರಾವರಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲಾಗಿದೆ. ಬೆಂಗಳೂರಿನ ಮೈಸೂರು ಹೆದ್ದಾರಿ ತಡೆದು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅತ್ತ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನಲ್ಲಿನ ಕಬಿನಿ ಡ್ಯಾಂ ನಿಧನವಾಗಿ ಭರ್ತಿಯಾಗುತ್ತಿದೆ. ಇದರಿಂದ ರೈತರ ಮುಖದಲ್ಲಿ ಸಂತಸ ಮನೆ ಮಾಡಿದೆ. ಆದರೆ, ಅಷ್ಟರಲ್ಲೇ ಕಬಿನಿ ಜಲಾಶಯದ ಅಧಿಕಾರಿಗಳು ಅನಧಿಕೃತವಾಗಿ ಜಲ ವಿದ್ಯುತ್ ಕಂಪನಿ ಬಳಕೆಗಾಗಿ ಡ್ಯಾಂನಿಂದ ನೀರು ಹರಿಸಿದ್ದು, ಇದರಿಂದ ರೈತರು ಸಿಟ್ಟಿಗೆದ್ದಿದ್ದಾರೆ.

ಜಲಾಶಯದ ಗರಿಷ್ಟ ಮಟ್ಟ 2284 ಅಡಿ ಇದೆ. ಇವತ್ತು ಜಲಾಶಯದ ನೀರಿನ ಮಟ್ಟ 2260 ಅಡಿ ಇದೆ. ಒಳಹರಿವಿನ ಪ್ರಮಾಣ 7,500 ಕ್ಯೂಸೆಕ್ ಇದ್ದು, ಅಧಿಕೃತವಾಗಿ ಹೊರ ಹರಿವು 1,100 ಕ್ಯೂಸೆಕ್ ಇದೆ. ಆದರೆ ಡ್ಯಾಂನಿಂದ ನೀರು ಹರಿಯುತ್ತಿರುವ ಪ್ರಮಾಣ ನೋಡಿದರೆ ಹೊರ ಹರಿವು 3 ಸಾವಿರ ಕ್ಯೂಸೆಕ್ ಗಿಂತಾ ಹೆಚ್ಚಿತ್ತು.

vlcsnap 2017 06 30 15h51m30s49

ಇದರಿಂದ ಸಿಟ್ಟಿಗೆದ್ದ ಸ್ಥಳೀಯ ರೈತರು ಜಲಾಶಯದ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು. ಯಾವಾಗ ಪ್ರತಿಭಟನೆ ಬಿಸಿ ಜೋರಾಯಿತೋ ಆ ತಕ್ಷಣ ಅಧಿಕಾರಿಗಳು ಡ್ಯಾಂನ ಹೊರ ಹರಿವು ಪ್ರಮಾಣವನ್ನು ತಗ್ಗಿಸಿದ್ದಾರೆ. ಖಾಸಗಿ ಕಂಪನಿ ಜೊತೆ ಶಾಮೀಲಾಗಿರೋ ಅಧಿಕಾರಿಗಳು ಕಂಪನಿಗಾಗಿ ಡ್ಯಾಂ ನೀರು ಹರಿಸಿ ರೈತರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

MND PROTEST 2

MND PROTEST 3

MND PROTEST 4

MND 6

MND 7

MND 8

MND 9

MND 10

MND 11

MYS 1 1

TAGGED:kabini damkrsmandyamysurupublictvtamilnaduwaterಕಬಿನಿ ಜಲಾಶಯಕೆಆರೆಸ್ತಮಿಳುನಾಡುನೀರುಪಬ್ಲಿಕ್ ಟಿವಿಮಂಡ್ಯಮೈಸೂರು
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Zameer Ahmed Khan
Bengaluru City

ನಾನು ಜೆಡಿಎಸ್ ಗೆ ಹೋಗ್ತೀನಿ ಅನ್ನೋದು ಊಹಾಪೋಹ – ಜಮೀರ್ ಅಹ್ಮದ್ ಸ್ಪಷ್ಟನೆ

Public TV
By Public TV
35 seconds ago
UP teen murder case
Crime

ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಬರ್ಬರ ಹತ್ಯೆ

Public TV
By Public TV
20 minutes ago
SN Narayanaswamy Bangarpet MLA
Bengaluru City

ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
28 minutes ago
Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
59 minutes ago
Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
2 hours ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?