ಚಿಕ್ಕಬಳ್ಳಾಪುರ: ಲಾಡ್ಜ್ನಲ್ಲಿ (Lodge) ಹೆಂಡತಿಯನ್ನು (Wife) ಕೊಲೆ ಮಾಡಿ ಪರಾರಿಯಾಗಿದ್ದ ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದುಗೆರೆ ಗ್ರಾಮದಲ್ಲಿ ನಡೆದಿದೆ.
ದೊಡ್ಡಬಳ್ಳಾಪುರದಲ್ಲಿ ಪತ್ನಿ ವಿದ್ಯಾಳನ್ನು ಕೊಲೆ ಮಾಡಿದ್ದ ಆನಂದ್, ಗೌರಿಬಿದನೂರು ತಾಲೂಕಿನ ಸ್ವಗ್ರಾಮ ಮದುಗೆರೆ ಗ್ರಾಮದ ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೆಪ್ಟಂಬರ್ 15ರಂದು ದೊಡ್ಡಬಳ್ಳಾಪುರದ ಲಾಡ್ಜ್ನಲ್ಲಿ 23 ವರ್ಷದ ವಿದ್ಯಾಳನ್ನು ಐಡಿ ಕಾರ್ಡ್ ಟ್ಯಾಗ್ನಿಂದ ಕತ್ತು ಬಿಗಿದು ಕೊಲೆ ಮಾಡಿದ್ದ ಆನಂದ್ ಬಳಿಕ ಪರಾರಿಯಾಗಿದ್ದ. ಸೆಪ್ಟೆಂಬರ್ 16ರಂದು ಪ್ರಕರಣ ಬೆಳಕಿಗೆ ಬಂದಿತ್ತು. ಪರಾರಿಯಾಗಿದ್ದ ಆನಂದ್ ಇದೀಗ ಸ್ವಗ್ರಾಮ ಮದುಗೆರೆ ಗ್ರಾಮದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಇದನ್ನೂ ಓದಿ: ಪ್ರೀತಿಸಿ ಮದುವೆ – ಲಾಡ್ಜ್ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ
ಕೆರೆಯ ಬಳಿ ಬೈಕ್ ಬಿಟ್ಟು, ಮದ್ಯ ಸೇವಿಸಿ ಜಾಲಿ ಮರ ಹತ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಾಲಿ ಮರದ ಬುಡದಲ್ಲಿ ಮದ್ಯದ ಬಾಟಲಿ, ಸಿಗರೇಟ್ ಪ್ಯಾಕೆಟ್ ಪತ್ತೆಯಾಗಿದ್ದು, ಆನಂದ್ ಜೇಬಿನಲ್ಲಿ ಆತನ ಹಾಗೂ ವಿದ್ಯಾಳ ಮೊಬೈಲ್ಗಳು ಸಿಕ್ಕಿವೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: KPSC Scam | ಕಿಂಗ್ಪಿನ್ ಕನ್ನಾಳೆ, ಗ್ಯಾನೇಂದ್ರ ಜೈಲಲ್ಲೇ ಅರೆಸ್ಟ್ – ಕಸ್ಟಡಿಗೆ ಪಡೆದ ಇಡಿ

