ತುಮಕೂರು: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಸ್ವಿಫ್ಟ್ ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದಬ್ಬೆಘಟ್ಟ ಬಳಿ ನಡೆದಿದೆ.
35 ವರ್ಷದ ದೇವರಾಜು ಮೃತ ದುರ್ದೈವಿ. ದೇವರಾಜು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಜೆಡಿಎಸ್ ಅಧ್ಯಕ್ಷರಾಗಿದ್ದರು. ದಾವಣಗೆರೆಯಲ್ಲಿ ನಡೆಯಲಿರುವ ಜೆಡಿಎಸ್ ಎಸ್ಟಿ ಸಮಾವೇಶಕ್ಕೆಂದು ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಬಡವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.