Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರ ಒಂದು ಬಾರಿ ಏಳುತ್ತೆ, ಮತ್ತೊಮ್ಮೆ ಮಲಗುತ್ತೆ: ಸಿಎಂ ವಿರುದ್ಧ ಎಚ್‍ಡಿಕೆ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರ ಒಂದು ಬಾರಿ ಏಳುತ್ತೆ, ಮತ್ತೊಮ್ಮೆ ಮಲಗುತ್ತೆ: ಸಿಎಂ ವಿರುದ್ಧ ಎಚ್‍ಡಿಕೆ ವಾಗ್ದಾಳಿ

Bengaluru City

ಸರ್ಕಾರ ಒಂದು ಬಾರಿ ಏಳುತ್ತೆ, ಮತ್ತೊಮ್ಮೆ ಮಲಗುತ್ತೆ: ಸಿಎಂ ವಿರುದ್ಧ ಎಚ್‍ಡಿಕೆ ವಾಗ್ದಾಳಿ

Public TV
Last updated: July 11, 2017 5:40 pm
Public TV
Share
3 Min Read
kumaraswamy
SHARE

ಬೆಂಗಳೂರು: ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸೌಹಾರ್ಧತೆಗೆ ಧಕ್ಕೆ ಬಂದಿದೆ. ಹೀಗಾಗಿ ರಾಜ್ಯದಲ್ಲಿ ಸರ್ಕಾರ ಇದ್ಯಾ ಎಂದು ಪ್ರಶ್ನೆ ಮಾಡುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಒಂದು ಬಾರಿ ಏಳುತ್ತದೆ, ಮತ್ತೊಂದು ಬಾರಿ ಮಲಗುತ್ತಿದೆ ಹೀಗಾಗಿ ಸಿಎಂ ಸಿದ್ದರಾಮಯ್ಯ ಅನ್ನೋದಕ್ಕಿಂತ ಅವರನ್ನು ನಿದ್ದೆರಾಮಯ್ಯ ಎನ್ನುವ ವಿಶ್ಲೇಷಣೆಗಳು ಸಹ ಬರುತ್ತಿವೆ ಎಂದು ಎಚ್‍ಡಿಕೆ ಹೇಳಿದರು.

ಬಿಜೆಪಿ, ಹಾಗೂ ಕಾಂಗ್ರೆಸ್ ನಾಯಕರು ಕುಳಿತು ಆತ್ಮಾವಲೋಕನ ಮಾಡಿಕೊಳ್ಳಬೇಕು. ನಿಮ್ಮ ರಾಜಕೀಯ ಲಾಭಕ್ಕೆ ಅಥವಾ ಶಕ್ತಿ ವೃದ್ಧಿಸಿಕೊಳ್ಳಲು ಅಮಾಯಕ ಕುಟುಂಬಗಳನ್ನು ಬಲಿ ತೆಗೆದುಕೊಳ್ಳಬೇಡಿ ಎಂದರು.

ಗುಪ್ತಚರ ಇಲಾಖೆ ಡಿಜಿಪಿ ಮಂಗಳೂರಿನ ವಿಷಯವನ್ನ ಸಿಎಂ ಅವರಿಗೆ ತಿಳಿಸಿಲ್ವಾ, ಇದನ್ನು ಸರ್ಕಾರ ಅಂತ ಕರಿಬೇಕಾ.? ಕುಮಾರಸ್ವಾಮಿಗೆ ಜೈಲಿಗೆ ಕಳುಹಿಸ್ತಿನಿ ನನಗೆ ಅಧಿಕಾರ ಕೊಡಿ ಅಂತ ಹೇಳೋಕೆ ಗುಪ್ತಚರ ಇಲಾಖೆಯ ಐಜಿ ಇದ್ದಾರೋ ಅಥವಾ ಇಲ್ವಾ.? ಸುಳ್ಳು ಸರ್ಟಿಫಿಕೇಟ್ ಕೊಟ್ಟು ಕೆಲಸ ಗಿಟ್ಟಿಸಿಕೊಂಡ ಅವರನ್ನು ಸಭೆಯಲ್ಲಿ ಕುರಿಸಿಕೊಂಡು ಅಂಥವರಿಂದ ಆದೇಶ ಕೊಡಿಸ್ತಾ ಇದ್ದೀರಾ.? ಇದನ್ನು ಹಿರಿಯ ಅಧಿಕಾರಿಗಳು  ಕೇಳಬೇಕಾ.? ನನಗೆ ಕೆಲಸ ಮಾಡಲು ಆಗೋದಿಲ್ಲ ಎಂದು ವಿಆರ್‍ಎಸ್ ಕೊಟ್ಟವರಿಂದ ಪಲೀಸ್ ಇಲಾಖೆ ಆಡಳಿತ ನಡೆಸ್ತಾ ಇದ್ದೀರಾ.? ಎಂದು ಸಿಎಂ ಅವರನ್ನು ಪ್ರಶ್ನಿಸಿದರು.

ಶೋಭಾ ಕರಂದ್ಲಾಜೆ ಅವರು ದಕ್ಷಿಣ ಕನ್ನಡದವರು. ತಾಯಿ ಹೃದಯ ಇರಬೇಕಾದ ಹೆಣ್ಣು ಮಗಳು ಷಂಡರಾ ಎನ್ನುವ ರೀತಿಯಲ್ಲಿ ಮಾತಾಡೋದು ಸರಿನಾ.? ಜನಪ್ರತಿನಿಧಿಗಳಾಗಿ ನೀವು ಸಾಮರಸ್ಯ ಮೂಡಿಸಬೇಕೆ ಹೊರತು ಹೇಳಿಕೆ ಕೊಟ್ಟು ಪ್ರೇರೇಪಿಸುವುದು ಅಲ್ಲ ಎಂದು ಕರಂದ್ಲಾಜೆ ಅವರ ಹೇಳಿಕೆಗೆ ಎಚ್‍ಡಿಕೆ ಪ್ರತಿಕ್ರಿಯಿಸಿದರು.

ಮರಳು ದಂಧೆ, ಅಕ್ರಮ ಲಾಟರಿಗೆ ಕುಮ್ಮಕ್ಕು, ಮರಳು ದಂಧೆ ತಡೆಯಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ ನಡೆದ್ರೂ ಅಂತಹ ಅಧಿಕಾರಿಗಳಿಗೆ ರಕ್ಷಣೆ ಕೊಟ್ಟಿದ್ದೀರಾ.? ಕಲ್ಲಪ್ಪ ಹಂಡಿಬಾಗ್ ರಕ್ಷಣೆ ಮಾಡಿದ್ರಾ ಎಂದು ಸರ್ಕಾರಕ್ಕೆ ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದರು.

ಸೋಮವಾರ ಕರಾವಳಿ ಕೋಮುಗಲಾಟೆಗೆ ಸಂಬಂಧಿಸಿದಂತೆ ಎಚ್‍ಡಿಕೆ ಫೇಸ್‍ಬುಕ್‍ನಲ್ಲಿ ಪೋಸ್ಟ್ ಪ್ರಕಟಿಸಿ ಬಿಜೆಪಿ, ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಕರಾವಳಿಯ ಕೋಮುದಳ್ಳುರಿಯಲ್ಲಿ ಬೇಳೆ ಬೇಯಿಸಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಿರುವ ರಾಷ್ಟ್ರೀಯ ಪಕ್ಷಗಳು.

ಕೋಮು ವೈಷಮ್ಯದ ದಳ್ಳುರಿಗೆ ಸಿಲುಕಿರುವ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಖಾತರಿ ಪಡಿಸಿಕೊಳ್ಳುವುದಕ್ಕೆ ಅಗತ್ಯ ಪ್ರಯತ್ನ ಮಾಡಬೇಕು. ಇದಕ್ಕೆ ಆಡಳಿತ ಮತ್ತು ವಿರೋಧ ಪಕ್ಷಗಳೆಂಬ ವ್ಯತ್ಯಾಸವಿಲ್ಲ ಆದರೆ ಕರಾವಳಿಯಲ್ಲಿ ಕೋಮು ದಳ್ಳುರಿಯಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳೋವುದಕ್ಕೆ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪ್ರಯತ್ನ ಮಾಡುತ್ತಿವೆ. ಬಿಜೆಪಿ ಕೋಮು ನಡೆದರೆ ತನಗೆ ಲಾಭವೆಂದು ಯೋಚಿಸುತ್ತುದೆ. ಸಾವಿನಲ್ಲೂ ಇವರ ವಿಭಜನೆಯ ರಾಜಕಾರಣವಿದೆ.

ಸದಾನಂದ ಗೌಡರವರು ಮುಖ್ಯಮಂತ್ರಿಗೆ, ಮೃತಪಟ್ಟ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ನ ತಂದೆಯ ಸ್ಥಾನದಲ್ಲಿ ಕಲ್ಪಿಸಿಕೊಂಡು ನ್ಯಾಯ ದೊರಕಿಸಿಕೊಡಲು ಕೋರಿದ್ದಾರೆ. ಶರತ್ ನ ತಂದೆಯ ಮುಖವನ್ನು ನೆನೆಸಿಕೊಂಡು ಸಂಕಟ ಪಟ್ಟಿದ್ದಾರೆ.ವಿಶ್ವ ಮಾನವನಾಗಿ ಹುಟ್ಟುವ ಮನುಷ್ಯ ಅಲ್ಪ ಮಾನವನಾಗಿ ಬೆಳೆದು, ಅಲ್ಪ ಮಾನವನಾಗಿ ಸಾಯಿಸಲು ಪ್ರಯತ್ನಿಸುತ್ತಿರುವ ಕರಾಳ ರಾಜಕೀಯ ವ್ಯವಸ್ಥೆ ಕರಾವಳಿಯಲ್ಲಿ ಕೋಮು ಗಲಭೆ ಸೃಷ್ಟಿಸುತ್ತಿದೆ.

ಕಳೆದ 3 ವರ್ಷಗಳಲ್ಲಿ ಕರಾವಳಿಯಲ್ಲಿ ಕೊಲೆಗೀಡಾದ ವಿನಾಯಕ ಬಾಳಿಗಾ, ಪ್ರವೀಣ್ ಪೂಜಾರಿ, ಪ್ರತಾಪ್ ಮುರಳಿ, ಭಾಸ್ಕರ್ ಕುಂಬ್ಳೆ, ಶ್ರೀನಿವಾಸ್ ಬಜಾಲ್, ಹರೀಶ್ ಬಂಡಾರಿ ಕುಳಾಯಿ, ಶಿವರಾಜ್ ಕೊಡಿಕೆರೆ, ಪ್ರಕಾಶ್ ಕುಳಾಯಿ, ಮಣಿಕಂಠ ಸೂರತ್ಕಲ್, ಹೇಮಂತ್ ಸೂರತ್ಕಲ್, ಕೇಶವ್ ಪೂಜಾರಿ ಸೂರಿಂಜೆ, ಹರೀಶ್ ಪೂಜಾರಿ ಬಂಟ್ವಾಳ, ನಾಸಿರ್ ಸಜೀಪ, ಮುಸ್ತಪಾ ಕಾವುರು, ಅಶ್ರಫ್ ಕಲಾಯಿ, ಜಲೀಲ್ ಕರೋಪಾಡಿ, ಶಾಹುಲ್ ಅಮೀತ್ ಮಡಿಕೇರಿ, ಸಪ್ಪಾನ್ ಪಿಲಾರ್, ಕಬೀರ್ ಕುದ್ರೋಳಿ,ಸುಲೆಮಾನ್ ಕಾರ್ಕಳ ಮತ್ತು ಕಬೀರ್ ಪೋಲಾಳಿ.. ಸತ್ತ ಇವರ್ಯಾರು ಯಾವುದೇ ರಾಜಕಾರಿಣಿ ಅಥವಾ ಕೋಮು ಸಂಘಟನೆಗಳ ಮುಖಂಡರ ಮಕ್ಕಳಲ್ಲ.ಕೊಲೆಗಡುಕರಿಗೆ ಯಾವುದೇ ಧರ್ಮವಿಲ್ಲ. ವಯಕ್ತಿಕ ಹಿತಾಸಕ್ತಿ ಅಷ್ಟೇ ಇಲ್ಲಿ ಪ್ರಾಧಾನ್ಯ.ಇವರೆಲ್ಲ ಅಮಾಯಕ ಬಡವರು.

ಕೊಲೆಗಡುಕರನ್ನು ತಮ್ಮವರು ಎಂಬ ಕಾರಣಕ್ಕೆ ಬೆಂಬಲಿಸುವ ಈ ಎರಡು ಪಕ್ಷಗಳ ರಾಜಕಾರಣದಿಂದ ನೆತ್ತರು ಹರಿಯುತ್ತಿದೆ. ಸತ್ತವರ ಹೆಸರು ಮತ್ತು ಧರ್ಮವನ್ನು ನೋಡಿ, ಪ್ರತಿಕ್ರಿಯಿಸುವುದಕ್ಕಿಂತ ದೊಡ್ಡದಾದ ಕ್ರೌರ್ಯ ಬೇರೆ ಇಲ್ಲ .ಕೊಂದವನು ತನ್ನ ಧರ್ಮ ಅಥವಾ ತನ್ನ ಪಕ್ಷವೆಂಬ ಕಾರಣಕ್ಕೆ ಬೆಂಬಲಿಸಿದರೆ, ಅದರಂತಹ ಆತ್ಮ ವಂಚನೆ ಮತ್ತೊಂದಿಲ್ಲ.ಕೋಮು ಗಲಭೆ ಎಬ್ಬಿಸಿ, ಸತ್ತವರ ರಕ್ತದ ಮೇಲೆ ರಾಜಕಾರಣ ಮಾಡಹೊರಟಿರುವ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೆರಡಕ್ಕೂ ಜನತೆ ಕೋಮು ಸೌಹಾರ್ದತೆಯಿಂದ ಬದುಕುವ ಮೂಲಕ ಪ್ರತ್ತ್ಯುತ್ತರ ನೀಡಬೇಕು. ನಿಷ್ಕ್ರಿಯ ಗೊಂಡಿರುವ ಕಾನೂನು ಮತ್ತು ಸುವ್ಯವಸ್ಥೆಯನ್ನು ಸರಿ ದಾರಿಗೆ ತರಲು ಸರ್ಕಾರ ಪ್ರಯತ್ನಿಸಲಿ.

HD KUMARSWAMY FB POST

TAGGED:bengaluruhd kumaraswamyKomugalatePublic TVshobha karandlajeಕೋಮುಗಲಾಟೆಪಬ್ಲಿಕ್ ಟಿವಿಬೆಂಗಳೂರುಶೋಭಾ ಕರಂದ್ಲಾಜೆಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Shivanna Gilli 1
ಶಿವಣ್ಣನ ಭೇಟಿಯಾದ ಬಿಗ್‌ಬಾಸ್ 12ರ ವಿನ್ನರ್ ಗಿಲ್ಲಿನಟ
Bengaluru City Cinema Districts Karnataka Latest Sandalwood Top Stories
Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows
pavithra gowda 1
ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌
Bengaluru City Cinema Court Karnataka Latest Main Post
BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows

You Might Also Like

Bidar Protest
Bidar

ವೈದ್ಯರ ನಿರ್ಲಕ್ಷ್ಯ ಆರೋಪ – ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವು –

Public TV
By Public TV
26 seconds ago
CP Radhakrishnan 2
Bengaluru City

ಬೆಂಗ್ಳೂರಿಗೆ ಉಪರಾಷ್ಟ್ರಪತಿ ಆಗಮನ – ಇಂದು ರಾಜ್ಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

Public TV
By Public TV
11 minutes ago
Belagavi 2
Belgaum

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ – ಸುಪ್ರೀಂ ಕೋರ್ಟ್‌ನಲ್ಲಿಂದು ಅರ್ಜಿ ವಿಚಾರಣೆ

Public TV
By Public TV
53 minutes ago
Sunita Williams 1
Latest

608 ದಿನ, 3 ಮಿಷನ್‌, 9 ಬಾಹ್ಯಾಕಾಶ ನಡಿಗೆ – 27 ವರ್ಷಗಳ ನಾಸಾ ಜರ್ನಿಗೆ ಸುನಿತಾ ವಿಲಿಯಮ್ಸ್‌ ಗುಡ್‌ಬೈ

Public TV
By Public TV
1 hour ago
Lady Influencer Arrest
Bengaluru City

ಲೇಡಿ ಫಿಟ್ನೆಸ್ ಇನ್‌ಫ್ಲೂಯೆನ್ಸರ್‌ಗೆ ಅಶ್ಲೀಲ ಮೆಸೇಜ್ – ಯುವತಿಗಾಗಿ ಹರಿಯಾಣದಿಂದ ಕರ್ನಾಟಕಕ್ಕೆ ಬಂದಿದ್ದ ಆರೋಪಿ ಅರೆಸ್ಟ್

Public TV
By Public TV
1 hour ago
Hebbagodi
Bengaluru City

ಬೆಂಗಳೂರು | ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?