Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾಂಗ್ರೆಸ್ ನಾಯಕರ ಜೊತೆಗೆ ನಾನು ಕುಳಿತದ್ದು ಯಾಕೆ: ನಳಿನ್ ಕುಮಾರ್ ಹೇಳಿದ್ದು ಇಷ್ಟು

Public TV
Last updated: July 15, 2017 7:30 pm
Public TV
Share
3 Min Read
nalin kumar 1
SHARE

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಶಾಸಕ ಜೆ.ಆರ್.ಲೋಬೋ, ಐವನ್ ಡಿಸೋಜಾ ಅವರು ಒಂದೇ ಕಾರಿನಲ್ಲಿ ಪ್ರಯಾಣಿಸಿದ ಫೋಟೋ ಮತ್ತು ಸಚಿವ ಬಿ.ರಮಾನಾಥ ರೈಯವರೊಂದಿಗೆ ಸರ್ಕೂಟ್ ಹೌಸಿನಲ್ಲಿ ಕುಳಿತು ಮಾತನಾಡುತ್ತಿರುವ ಫೋಟೋ ಹರಿದಾಡುತ್ತಿರುವ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲು ಸ್ಪಷ್ಟನೆ ನೀಡಿದ್ದಾರೆ.

ಫೇಸ್ ಬುಕ್ ನಲ್ಲಿ ಸ್ಪಷ್ಟನೆ ನೀಡಿದ ಅವರು, ಈ ಫೋಟೋಗಳು ಈಗ ತೆಗೆದಿರುವುದು ಅಲ್ಲ. ನನ್ನ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಅವರ ಜೊತೆ ಮಾತುಕತೆ ನಡೆಸಿದಾಗ ತೆಗೆದಿರುವ ಫೋಟೋಗಳು ಎಂದು ತಿಳಿಸಿದ್ದಾರೆ.

nalin kumar 3

ಫೇಸ್ ಬುಕ್ ನಲ್ಲಿ ನಳಿನ್ ಕುಮಾರ್ ಕಟೀಲು ಬರೆದಿದ್ದು ಹೀಗೆ:
ಇತ್ತೀಚೆಗೆ ಸಾಮಾಜಿಕ ತಾಣಗಳಲ್ಲಿ ನಾನು, ಶಾಸಕರಾದ ಜೆ.ಆರ್.ಲೋಬೋ, ಐವನ್ ಡಿಸೋಜಾ ಅವರು ಒಂದೇ ಕಾರಿನಲ್ಲಿ ಪ್ರಯಾಣಿಸಿದ ಫೋಟೋ ಮತ್ತು ನಾನು ಸಚಿವ ಬಿ ರಮಾನಾಥ ರೈಯವರೊಂದಿಗೆ ಸರ್ಕೂಟ್ ಹೌಸಿನಲ್ಲಿ ಕುಳಿತು ಮಾತನಾಡುತ್ತಿರುವ ಫೋಟೋ ಹರಿದಾಡುತ್ತಿದೆ. ಅದಕ್ಕೆ ಕೆಲವರು ವಿವಿಧ ಅರ್ಥದ ಅಭಿಪ್ರಾಯವನ್ನು ಬರೆದು ಹಾಕುತ್ತಿದ್ದಾರೆ. ಇದರಿಂದ ನನ್ನ ಮನಸ್ಸಿಗೆ ಒಂದಿಷ್ಟು ಬೇಸರವಾಗಿದೆ. ಆ ಫೋಟೋಗಳ ಬಗ್ಗೆ, ಅದು ತೆಗೆದ ಸಂದರ್ಭದ ಬಗ್ಗೆ ವಿಶ್ಲೇಷಣೆ ಮಾಡದೆ ಮನಸ್ಸಿಗೆ ತೋಚಿದಂತೆ ಗೀಚಿದರೆ ಅದರಿಂದ ವಸ್ತು ಸ್ಥಿತಿಯ ಬಗ್ಗೆ ಅಪಾರ್ಥ ಮೂಡುತ್ತದೆ ವಿನಾ: ಬೇರೆ ಏನೂ ಸಾಧಿಸದಂತೆ ಆಗುವುದಿಲ್ಲ.

ನಾನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ. ನನ್ನ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ನಾನು ಅಷ್ಟೂ ಪ್ರದೇಶಗಳಿಗೆ ಭೇಟಿ ಕೊಟ್ಟು ವಿಭಿನ್ನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಂದರ್ಭಗಳು ಇರುತ್ತವೆ. ನಿಮಗೆ ಗೊತ್ತಿರುವಂತೆ ಈ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಏಳರಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಜಿಲ್ಲೆಯ ಅಭಿವೃದ್ಧಿಯ ವಿಷಯ ಬಂದಾಗ ನಾನು ಮತ್ತು ಅವರುಗಳು ಒಂದೇ ವೇದಿಕೆಯಲ್ಲಿ ಸೇರಬೇಕಾಗುತ್ತದೆ. ಏಕೆಂದರೆ ಒಂದು ಅಭಿವೃದ್ಧಿ ಯೋಜನೆ ಎಂದರೆ ಅದರಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರದ ಸಮಪ್ರಮಾಣದ ಪಾಲುಗಳು ಕೂಡ ಇದ್ದೇ ಇರುತ್ತದೆ. ಅನೇಕ ಬಾರಿ ಕೇವಲ ಕೇಂದ್ರದ ಯೋಜನೆಗಳಾಗಿದ್ದರೂ ಅದಕ್ಕೆ ಬೇಕಾಗುವ ಜಾಗ, ಇತರೆ ಸೌಲಭ್ಯಗಳನ್ನು ರಾಜ್ಯ ಪೂರೈಸಿದ್ದರೆ ಮಾತ್ರ ಅಭಿವೃದ್ಧಿ ಸಾಧ್ಯ. ಹಾಗಿರುವಾಗ ಪರಸ್ಪರ ಭೇಟಿ ಅಗತ್ಯ ಮತ್ತು ಅನಿವಾರ್ಯ.

nalin kumar 2

ಬೇಕಾದರೆ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೆ ತೆಗೆದುಕೊಂಡು ಹೋಗುವ ಕಾರ್ಯ ಇರಬಹುದು. ಇದಕ್ಕೆ ಇಲ್ಲಿನ ಸ್ಥಳೀಯ ಶಾಸಕರ ಸಲಹೆ, ಅಭಿಪ್ರಾಯ ಕೂಡ ಬೇಕಾಗುತ್ತದೆ. ಅದೇ ರೀತಿಯಲ್ಲಿ ನೇತ್ರಾವತಿ ನದಿ ತಿರುವು ಯೋಜನೆ ಇರಬಹುದು, ಆಗ ಸಚಿವರೊಂದಿಗೆ ಮಾತನಾಡಿ ರಾಜ್ಯ ಸರಕಾರದ ಮೇಲೆ ಒತ್ತಡ ತರುವಂತಹ ಕೆಲಸ ಮಾಡುವುದು ಒಬ್ಬ ಜನಪ್ರತಿನಿಧಿಯಾಗಿ ನನ್ನ ಜವಾಬ್ದಾರಿ. ಅವರು ನಮ್ಮ ಯೋಜನೆಗಳಿಗೆ ಎಷ್ಟು ಸಹಕಾರ ಕೊಡುತ್ತಾರೆ ಎನ್ನುವುದು ಅವರವರ ಆತ್ಮಸಾಕ್ಷಿಗೆ ಬಿಟ್ಟಿದ್ದು. ಆದರೆ ಭೇಟಿಯೇ ಆಗದೇ ಹೋದರೆ ಕೆಲಸ ಮುಂದುವರಿಯುವುದೇ ಇಲ್ಲ.

Capture 4

ಇನ್ನು ಸೈದ್ಧಾಂತಿಕವಾಗಿ ನಾನು ಅವರ ನಿಲುವಿಗೆ ಬದ್ಧ ವಿರೋಧಿ. ಕಾಂಗ್ರೆಸ್ ಸಚಿವ, ಶಾಸಕರು ಮಾಡುವ ಸ್ವಜಾತಿ ಪ್ರೇಮ, ಅಲ್ಪಸಂಖ್ಯಾತರ ವಿಪರೀತ ಒಲೈಕೆ, ಧರ್ಮ ಬಿಟ್ಟು ನಡೆಯುವ ನಡೆಗಳಿಗೆ ನಾನು ಯಾವತ್ತೂ ವಿರೋಧ ವ್ಯಕ್ತಪಡಿಸಿದ್ದೇನೆ. ಅದನ್ನು ನನ್ನ ರಾಜಕೀಯ ಜೀವನದುದ್ದಕ್ಕೂ ಪಾಲಿಸಿಕೊಂಡು ಬಂದಿದ್ದೇನೆ. ಅದನ್ನು ಮುಂದೆಯೂ ಪಾಲಿಸಿಕೊಂಡು ಬರುವುದಕ್ಕೆ ಯಾವತ್ತೂ ಬದ್ಧ. ಹಾಗೆಂದು ನಾನು ಅವರೊಂದಿಗೆ ಕುಳಿತ, ನಿಂತ ಫೋಟೋಗಳನ್ನು ಹಾಕಿ ನಾನು ಅವರೊಂದಿಗೆ ಶಾಮೀಲಾಗಿ ನಾನು ಕೂಡ ಕಾಂಗ್ರೆಸ್ಸಿನವರೊಂದಿಗೆ ಚೆನ್ನಾಗಿದ್ದೇನೆ ಎಂದು ಅಪಾರ್ಥ ಸುದ್ದಿ ಹರಡಿಸುವ ಕೆಲಸವನ್ನು ಯಾರೂ ಕೂಡ ಮಾಡುವುದು ಸರಿಯಲ್ಲ ಎನ್ನುವುದು ನನ್ನ ಭಾವನೆ.

Captureff

 

ರಾಜಕೀಯ ಎಂದರೆ ಅಭಿವೃದ್ಧಿ ಕೆಲಸಗಳಿಗೆ ಸಿಕ್ಕ ಅವಕಾಶ ಎಂದು ಭಾವಿಸಿದವ ನಾನು. ಅಭಿವೃದ್ಧಿ ಯೋಜನೆಗಳಿಗೆ ಯಾವ ಪಕ್ಷದ ಮುಖಂಡರ ಸಲಹೆ, ಅಭಿಪ್ರಾಯಗಳಿಗೆ ನನ್ನ ಸ್ವಾಗತವಿದೆ. ಹಾಗಂತ ಅವರು ಮಾಡುವ ಸಮಾಜ ವಿರೋಧಿ ಚಟುವಟಿಕೆಗಳಿಗೆ ನನ್ನ ಉಸಿರು ಇರುವ ತನಕ ನಾನು ಬಾಗುವುದಿಲ್ಲ.

 

TAGGED:congressNalin KumarPublic TVRamanath Raiಕಾಂಗ್ರೆಸ್ನಳಿನ್ ಕುಮಾರ್ಪಬ್ಲಿಕ್ ಟಿವಿರಮಾನಾಥ್ ರೈ
Share This Article
Facebook Whatsapp Whatsapp Telegram

You Might Also Like

Missiles launched from Iran towards Israel
Latest

ಕ್ಷಿಪಣಿ ದಾಳಿ, ಪ್ರತಿದಾಳಿ – ಇರಾನ್‌, ಇಸ್ರೇಲ್‌ನಲ್ಲಿ 80 ಮಂದಿ ಸಾವು

Public TV
By Public TV
20 minutes ago
Chikkaballapur Accident
Chikkaballapur

ಚಿಕ್ಕಬಳ್ಳಾಪುರ | ಟಿಪ್ಪರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

Public TV
By Public TV
22 minutes ago
Ahmedabad Air India Plane Crash Vijay Rupani
Latest

ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹದ ಗುರುತು ಇನ್ನೂ ಪತ್ತೆಯಾಗಿಲ್ಲ

Public TV
By Public TV
33 minutes ago
Shringeri Gudda Kusitha
Chikkamagaluru

ಶೃಂಗೇರಿಯಲ್ಲಿ ವರುಣಾರ್ಭಟ – ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ

Public TV
By Public TV
55 minutes ago
Narendra Modi
Latest

ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ – ಕೆನಡಾ ಸೇರಿ ಮೂರು ರಾಷ್ಟ್ರಗಳಿಗೆ ಭೇಟಿ

Public TV
By Public TV
1 hour ago
Uttarakhand Kedarnath Helicopter Crash
Crime

ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ – ಪೈಲೆಟ್, ಮಗು ಸೇರಿ 6 ಮಂದಿ ಸಜೀವ ದಹನ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?