Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Exclusive: ಡಿಕೆಶಿ ಗುರು, ಜ್ಯೋತಿಷಿ ದ್ವಾರಕಾನಾಥ್ ಯಾರು? ರಾಜ್ಯದಲ್ಲಿ ಅಷ್ಟೊಂದು ಪ್ರಭಾವಿಯೇ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Exclusive: ಡಿಕೆಶಿ ಗುರು, ಜ್ಯೋತಿಷಿ ದ್ವಾರಕಾನಾಥ್ ಯಾರು? ರಾಜ್ಯದಲ್ಲಿ ಅಷ್ಟೊಂದು ಪ್ರಭಾವಿಯೇ?

Bengaluru City

Exclusive: ಡಿಕೆಶಿ ಗುರು, ಜ್ಯೋತಿಷಿ ದ್ವಾರಕಾನಾಥ್ ಯಾರು? ರಾಜ್ಯದಲ್ಲಿ ಅಷ್ಟೊಂದು ಪ್ರಭಾವಿಯೇ?

Public TV
Last updated: August 3, 2017 6:11 pm
Public TV
Share
4 Min Read
astrologer dwarakanath dk shivakumar
SHARE

ಬೆಂಗಳೂರು: ಸಾಧಾರಣವಾಗಿ ಸಚಿವರ ಮನೆ ಮೇಲೆ ಐಟಿ ದಾಳಿ ನಡೆಸಿದ ಬಳಿಕ ಅವರ ಸಂಬಂಧಿಕರು, ಆಪ್ತರು, ಕಚೇರಿಗಳ ಮೇಲೆ ದಾಳಿ ನಡೆಸುವುದು ಸಾಮಾನ್ಯ. ಆದರೆ ಸಚಿವ ಡಿಕೆ ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದ ಬಳಿಕ ಕೇಳಿ ಬಂದ ಮತ್ತೊಂದು ಹೆಸರು ಜ್ಯೋತಿಷಿ ದ್ವಾರಕಾನಾಥ್. ಹೌದು. ದ್ವಾರಕಾನಾಥ್ ಗೂ ಡಿಕೆಶಿಗೂ ಏನು ಸಂಬಂಧ? ದ್ವಾರಕಾನಾಥ್ ಕರ್ನಾಟಕದಲ್ಲಿ ಅಷ್ಟೊಂದು ಪ್ರಭಾವಿ ವ್ಯಕ್ತಿಯೇ ಎಂದು ನೀವು ಕೇಳಬಹುದು. ನಿಮ್ಮ ಎಲ್ಲ ಪ್ರಶ್ನೆಗಳಿಗೆ ಉತ್ತರ ಎನ್ನುವಂತೆ ಇಲ್ಲಿ ದ್ವಾರಕಾನಾಥ್ ಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಪವರ್‍ಫುಲ್ ಗುರು:
ದ್ವಾರಕಾನಾಥ್ ಅವರು ಇಡೀ ರಾಜ್ಯದಲ್ಲೇ ಅತ್ಯಂತ ಪವರ್‍ಫುಲ್ ಜ್ಯೋತಿಷಿ ಎಂದೇ ಪ್ರಸಿದ್ಧಿಯಾಗಿದ್ದಾರೆ. ಆದರೆ ವಿವಾದಕ್ಕೆ ಗುರಿಯಾಗಿದ್ದು ಇದೇ ಮೊದಲ ಬಾರಿಯಲ್ಲ. ಇವರ ಮನೆಯಲ್ಲೇ ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ನಿಧನರಾಗಿದ್ದರು. ಈ ಸಾವು ಸಹಜ ಸಾವಲ್ಲ, ಸಂಶಯಾಸ್ಪದ ಸಾವು. ಇದರ ಬಗ್ಗೆ ತನಿಖೆಯಾಗಬೇಕು ಎಂದು ಅರಸು ಕುಟುಂಬಸ್ಥರು ಆಗ್ರಹಿಸಿದ್ದರು. ಈ ಮೂಲಕ ಮೊದಲ ಬಾರಿಗೆ ದ್ವಾರಕಾನಾಥ್ ವಿವಾದದಲ್ಲಿ ಸಿಲುಕಿಕೊಂಡರು. ಆದರೆ ಪವರ್‍ಫುಲ್ ಶಿಷ್ಯಂದಿರ ಸಹಕಾರದಿಂದಾಗಿ ಈ ಪ್ರಕರಣದಲ್ಲಿ ಬಚಾವಾಗಿದ್ದರು.

 ಶಿಷ್ಯಂದಿರು ಯಾರೆಲ್ಲ ಇದ್ದಾರೆ?
ಮಾಜಿ ಸಿಎಂ ದೇವರಾಜು ಅರಸು, ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಮಾಜಿ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ, ಸೋನಿಯಾ ರಾಜಕೀಯ ಕಾರ್ಯದರ್ಶಿ ಪ್ರಸ್ತುತ ಗುಜರಾತ್ ಕಾಂಗ್ರೆಸ್ಸಿನ ರಾಜ್ಯಸಭಾ ಅಭ್ಯರ್ಥಿ ಅಹ್ಮದ್ ಪಟೇಲ್, ಮಾಜಿ ವಿದೇಶಾಂಗ ಸಚಿವ ನಟವರ್ ಸಿಂಗ್, ಪಂಜಾಬ್ ಸಿಎಂ ಅಮರಿಂದರ್ ಸಿಂಗ್, ಮಹಾರಾಷ್ಟ್ರ ಮಾಜಿ ಸಿಎಂ ವಿಲಾಸ್ ರಾವ್ ದೇಶ್‍ಮುಖ್, ಎಸ್‍ಬಿ ಚವ್ಹಾಣ್, ಆಂಧ್ರ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ, ವಿಜಯ ಭಾಸ್ಕರ್ ರೆಡ್ಡಿ, ಧರಂ ಸಿಂಗ್, ಮಾಜಿ ಸಿಎಂ ಎಸ್‍ಎಂ ಕೃಷ್ಣ, ನಫೀಜ್ ಪಾಜಲ್, ಪ್ರೊ. ಬಿಕೆ ಚಂದ್ರಶೇಖರ್, ಉದ್ಯಮಿ ಅನಿಲ್ ಅಂಬಾನಿ, ಬಾಲಿವುಡ್ ನಟ-ನಟಿಯರು ದ್ವಾರಕನಾಥ್ ಬಳಿ ಜ್ಯೋತಿಷ್ಯ ಕೇಳುತ್ತಾರೆ ಎನ್ನುವ ಮಾಹಿತಿ ಸಿಕ್ಕಿದೆ.

Public Tv

ಪ್ರಭಾವಿಯಾಗಲು ಕಾರಣ ಏನು?
ದ್ವಾರಕಾನಾಥ್ ತಂದೆ ಹೆಸರಾಂತ ಜ್ಯೋತಿಷಿ ಬೆಳ್ಳೂರು ಶಂಕರನಾರಾಯಣ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ತಂದೆ ವಾಸವಿದ್ದ ಮನೆಯ ರಸ್ತೆಗೆ ಬಿ.ಎಸ್.ಶಂಕರನಾರಾಯಣ ರಸ್ತೆ ಅಂತ ನಾಮಕರಣ ಮಾಡಿಸಿದ್ದರು. ಈ ನಾಮಕರಣ ಕಾರ್ಯಕ್ರಮಕ್ಕೆ ಧರಂ ಸಿಂಗ್, ವಿಲಾಸ್‍ರಾವ್ ದೇಶ್‍ಮುಖ್, ಸುಶೀಲ್‍ಕುಮಾರ್ ಶಿಂಧೆ, ನಟವರ್ ಸಿಂಗ್ ಭಾಗವಹಿಸಿದ್ದರು. ಸದ್ಯ ಜ್ಯೋತಿಷಿ ದ್ವಾರಕಾನಾಥ್ ಬೆಂಗಳೂರಿನ ಆರ್ ಟಿ ನಗರದಲ್ಲಿ ವಾಸವಾಗಿದ್ದಾರೆ. ವೃತ್ತಿಯಲ್ಲಿ ವೈದ್ಯರಾಗಿರುವ ಓರ್ವ ಪುತ್ರಿ, ಓರ್ವ ಪುತ್ರನಿದ್ದು ಇವರಿಬ್ಬರು ವೈದ್ಯರನ್ನೇ ಮದುವೆಯಾಗಿದ್ದಾರೆ. ಇವರು ಶೀಘ್ರದಲ್ಲೇ ಕೋರಮಂಗಲದಲ್ಲಿ ಕೋಟ್ಯಂತರ ರೂಪಾಯಿ ಬೆಲೆಬಾಳುವ ಡಯಾಬಿಟಿಕ್ ಕೇಂದ್ರ ಪ್ರಾರಂಭಿಸಲಿದ್ದು, ಈ ಕೇಂದ್ರದ ವ್ಯವಹಾರವೇ ಜ್ಯೋತಿಷಿಗೆ ಮುಳುವಾಗುವ ಸಾಧ್ಯತೆ ಇದೆ.

ಜ್ಯೋತಿಷಿ ಆಗುವುದಕ್ಕೂ ಮೊದಲು ಏನಾಗಿದ್ರು?
ಈ ಹಿಂದೆ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಕ್ಲರ್ಕ್ ಆಗಿ ದ್ವಾರಕಾನಾಥ್ ಕೆಲಸ ಮಾಡುತ್ತಿದ್ದರು. ಅವ್ಯವಹಾರ ಆರೋಪದ ಮೇಲೆ ಮೂರು ದಶಕಗಳ ಹಿಂದೆ ಅಮಾನತುಗೊಂಡಿದ್ದರು. ಅವ್ಯವಹಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪ್ರಸ್ತುತ ಗ್ರಾಮೀಣಭಿವೃದ್ಧಿ ಸಚಿವರಾಗಿರುವ ಹೆಚ್‍ಕೆ ಪಾಟೀಲ್ ಅವರ ತಂದೆ ಕೆ ಎಚ್ ಪಾಟೀಲ್ ಅಮಾನತು ಮಾಡಿಸಿದ್ದರು. ಆದರೆ ನಂತರ ಕೋರ್ಟ್ ನಲ್ಲಿ ದೋಷಮುಕ್ತರಾದ ಬಳಿಕ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಬಳಿಕ ಜ್ಯೋತಿಷ್ಯ ವೃತ್ತಿಗಿಳಿದ ದ್ವಾರಕಾನಾಥ್ ಬಳಿಕ ಶೃಂಗೇರಿ ಶ್ರೀಶಂಕರ ಮಠಕ್ಕೆ ಆಪ್ತರಾದರು.

ನಿಖರ ಭವಿಷ್ಯಕ್ಕೆ ಫೇಮಸ್:
ಮೊದಲು ಇವರಿಗೆ ಮಾಜಿ ಸಿಎಂ ದೇವರಾಜು ಅರಸು ಅವರ ಪರಿಚಯವಾಗಿ ನಂತರ ಪರಮಾಪ್ತರಾದರು. ಅರಸು ಮೂಲಕ ಮಾಜಿ ಪ್ರಧಾನಿ ಇಂದಿರಾಗಾಂಧಿ ಪರಿಚಯವೂ ಆಯಿತು. ತುರ್ತು ಪರಿಸ್ಥಿತಿ ಬಳಿಕ ಚಿಕ್ಕಮಗಳೂರು ಚುನಾವಣೆಯಲ್ಲಿ ವೇಳೆ ಇಂದಿರಾ ಗೆಲುವಿನ ಭವಿಷ್ಯವನ್ನು ನಿಖರವಾಗಿ ನುಡಿದಿದ್ದ ಕಾರಣ ಇವರು ಮತ್ತಷ್ಟು ಕೈ ನಾಯಕರಿಗೆ ಹತ್ತಿರವಾದರು. 2014ರ ಲೋಕಸಭಾ ಚುನಾವಣೆಯ ವೇಳೇ ಅಮೆರಿಕದ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಗೆ ಸಂದರ್ಶನ ನೀಡಿದ್ದರು. ಈ ಸಂದರ್ಶನದಲ್ಲಿ, ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗುತ್ತಾರೆ. ಕಾಂಗ್ರೆಸ್ ಗೆ ಹೀನಾಯ ಸೋಲಾಗುತ್ತದೆ ಎಂದು ದ್ವಾರಕಾನಾಥ್ ಭವಿಷ್ಯ ನುಡಿದಿದ್ದರು.

ಡಿಕೆಶಿಗೆ ಪರಿಚಯವಾಗಿದ್ದು ಹೇಗೆ?ಪವರ್‍ಫುಲ್ ಮಿನಿಸ್ಟರ್‍ಗೂ ಪವರ್‍ಫುಲ್ ಜ್ಯೋತಿಷಿ ದ್ವಾರಕಾನಾಥ್ ಅವರಿಗೂ ಕೆಲ ವರ್ಷಗಳಿಂದ ಆರಂ ಭಗೊಂಡ ಸ್ನೇಹವಲ್ಲ. ಎಸ್‍ಜೆಆರ್‍ಸಿ ಕಾಲೇಜಿನಲ್ಲಿ ಡಿಕೆಶಿ ವಿದ್ಯಾರ್ಥಿ ನಾಯಕರಾಗಿದ್ದಾಗಲೇ ದ್ವಾರಕಾನಾಥ್ ಪರಿಚಯವಾಗಿತ್ತು. ಈ ಮೂಲಕ ದೇವರಾಜು ಅರಸು ಸೇರಿದಂತೆ ಪ್ರಭಾವಿ ಕಾಂಗ್ರೆಸ್ಸಿಗರ ಡಿಕೆಶಿಗೆ ಸಿಕ್ಕಿತ್ತು. ಜ್ಯೋತಿಷಿ ಪ್ರಭಾವದಿಂದಾಗಿ 25ನೇ ವಯಸ್ಸಿನಲ್ಲೇ ಡಿಕೆ ಶಿವಕುಮಾರ್ ಅವರಿಗೆ ಸಾತನೂರು ಕ್ಷೇತ್ರದ ಟಿಕೆಟ್ ಸಿಕ್ಕಿತ್ತು. ಮೊದಲ ಚುನಾವಣೆಯಲ್ಲಿ ದೇವೇಗೌಡರ ವಿರುದ್ಧ ಸೋತರೂ ಉಪ ಚುನಾವಣೆಯಲ್ಲಿ ಡಿಕೆಶಿ ಗೆದ್ದಿದ್ದರು. ಮೊದಲ ಬಾರಿಗೆ ಶಾಸಕರಾದ ಬೆನ್ನಲ್ಲೇ ಶಿಷ್ಯ ಡಿಕೆಶಿ ಅವರನ್ನು ಜ್ಯೋತಿಷಿ ದ್ವಾರಕಾನಾಥ್ ಸಚಿವರನ್ನಾಗಿ ಮಾಡುವಲ್ಲಿ ಯಶಸ್ವಿಯಾಗಿದ್ದರು. ತಮ್ಮ ದೆಹಲಿಯ ಪ್ರಭಾವ ಬಳಸಿ ಬಂಗಾರಪ್ಪ ಸಂಪುಟದಲ್ಲಿ ಶಿವಕುಮಾರ್ ಅವರನ್ನು ಬಂಧಿಖಾನೆ ಸಚಿವರನ್ನಾಗಿ ನೇಮಿಸುವಲ್ಲೂ ಮಹತ್ವದ ಪಾತ್ರವಹಿಸಿದ್ದರು.

ಸಿಬಿಐ ಬಲೆಗೆ ಬಿದ್ದ ಜ್ಯೋತಿಷಿ:
ಮಗಳನ್ನು ಡಾಕ್ಟರ್ ಮಾಡಲು ಹೋಗಿ ಸಿಬಿಐ ಬಲೆಗೂ ಬಿದಿದ್ದ ಜ್ಯೋತಿಷಿ ದ್ವಾರಕಾನಾಥ್ ಬಿದ್ದಿದ್ದರು. ಪರಮಾಪ್ತ ಶಿಷ್ಯ ಧರಂ ಸಿಂಗ್ ಸಿಎಂ ಆಗಿದ್ದಾಗ ಅವಧಿಯಲ್ಲಿ ರಾಜೀವ್‍ಗಾಂಧಿ ಆರೋಗ್ಯ ವಿವಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ತಮ್ಮ ಮಗಳಿಗೆ ಪಿಜಿ ಸೀಟ್ ಕೊಡಿಸಿದ್ದು ದೊಡ್ಡ ವಿವಾದವಾಗಿ ಸಿಬಿಐ ತನಿಖೆಯೂ ನಡೆದಿತ್ತು. ತಮ್ಮ ಮಗಳನ್ನು ಡಾಕ್ಟರ್ ಮಾಡಲು ತಮ್ಮ ಆಪ್ತರನ್ನೇ ದ್ವಾರಕಾನಥ್ ಆರೋಗ್ಯ ವಿವಿಯ ಉಪಕುಲಪತಿ ಮಾಡಿಸಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಉಪ ಕುಲಪತಿ ಡಾ.ಪ್ರಭಾಕರ್, ಜ್ಯೋತಿಷಿ ಪುತ್ರಿಯೂ ಸಿಬಿಐ ತನಿಖೆ ಎದುರಿಸಬೇಕಾಯಿತು.

ಜ್ಯೋತಿಷಿ ದ್ವಾರಕನಾಥ್ ಅವರು ತಮ್ಮ ಬಿ ಎಸ್ ರಾಘವನ್‍ಗೂ ಪ್ರಭಾವಿ ಹುದ್ಡೆ ಕೊಡಿಸಿದ್ದರು ಎಂದು ಹೇಳಲಾಗುತ್ತಿದೆ. ರಾಮಕೃಷ್ಣ ಹೆಗಡೆ ಅವಧಿಯಲ್ಲಿ ರಾಘವನ್‍ಗೆ ಕರ್ನಾಟಕ ರಾಜ್ಯ ಕ್ರೀಡಾ ಸಮಿತಿ ಅಧ್ಯಕ್ಷರೂ ಆಗಿದ್ದರು. ನಂತರ ಬಿ ಎಸ್ ರಾಘವನ್ ಕೆಲವೊಂದಿಷ್ಟು ಪೊಲೀಸ್ ತನಿಖೆಯನ್ನೂ ಎದುರಿಸಬೇಕಾಯಿತು.

ಇದನ್ನೂ ಓದಿ: ಗಾಲ್ಫ್ ಆಡೋ ನೆಪದಲ್ಲಿ ಎಂಟ್ರಿಕೊಟ್ಟು ಡಿಕೆಶಿಗೆ ಐಟಿ ಅಧಿಕಾರಿಗಳು ಶಾಕ್ ಕೊಟ್ಟಿದ್ದು ಹೀಗೆ

 

dk shivakumar it raid timeline 1

dk shivakumar it raid timeline 2

dk shivakumar it raid timeline 3

dk shivakumar it raid timeline 4

dk shivakumar it raid timeline 5

dk shivakumar it raid timeline 6

dk shivakumar it raid timeline 7

dk shivakumar it raid timeline 8

dk shivakumar it raid timeline 9

dk shivakumar it raid timeline 10

dk shivakumar it raid timeline 11

dk shivakumar it raid timeline 12

dk shivakumar it raid timeline 13

dk shivakumar it raid timeline 14

dk shivakumar it raid timeline 15

dk shivakumar it raid timeline 16

dk shivakumar it raid timeline 17

#DKShivakumar ನಿವಾಸದಲ್ಲಿ ಸಿಕ್ಕಿತು 7.5 ಕೋಟಿ ರೂ. ಹಣ: ಮುಂದೆ ಈ ನಾಯಕರ ಮನೆ ಮೇಲೆ ದಾಳಿ? https://t.co/TvqVnCBVkd #congress #karnataka #itraid pic.twitter.com/psKI4nX2na

— PublicTV (@publictvnews) August 2, 2017

Bangalore: D.K.Shivakumar's Wife Usha Under Interrogation Inside Sadashivanagar Residence: https://t.co/Gn3hG51oFK via @YouTube

— PublicTV (@publictvnews) August 2, 2017

ಎಬಿವಿಪಿ, ಆರ್‍ಎಸ್‍ಎಸ್, ಬಜರಂಗದಳದ ರೀತಿಯಲ್ಲೇ ಐಟಿ, ಇಡಿ, ಸಿಬಿಐ ಬಿಜೆಪಿಗೆ ಕಾರ್ಯನಿರ್ವಹಿಸುತ್ತಿವೆ: ದಿನೇಶ್ ಗುಂಡೂರಾವ್ https://t.co/SPwWJLpGDl#Bengaluru pic.twitter.com/CR2xB8WCLS

— PublicTV (@publictvnews) August 2, 2017

ಪ್ರಜಾಪ್ರಭುತ್ವದ ಕೊಲೆ, ತನ್ನ ವಿರುದ್ಧ ಧ್ವನಿ ಎತ್ತುವವರ ಮೇಲೆ ಬಿಜೆಪಿಯಿಂದ ಐಟಿ ದಾಳಿ: ಸಿಎಂ ಕಿಡಿ https://t.co/7TR7FArmjv @Cm#ITRaid #DKShivakumar pic.twitter.com/OFGVv2iSOw

— PublicTV (@publictvnews) August 2, 2017

ಬಿಜೆಪಿಯ ಸಿದ್ದೇಶ್ವರ್ ಮನೆ ಮೇಲೆ ಐಟಿ ದಾಳಿ ನಡೆದಿದೆ: ಕೈ ಆರೋಪಕ್ಕೆ ಸಿಟಿ ರವಿ ಸಮರ್ಥನೆ https://t.co/oeGr0rJM89@withDKS @ArshadRizwan @CTRavi_BJP pic.twitter.com/SihMzkjFCW

— PublicTV (@publictvnews) August 2, 2017

ನನ್ನ ಮನೆ ಮೇಲೆ #ITraid ನಡೆಸಿದ್ರೆ ಐಟಿ ಅಧಿಕಾರಿಗಳಿಗೆ ಹೂ ಗುಚ್ಛ ನೀಡಿ ಸ್ವಾಗತಿಸುತ್ತೇನೆ: @reachmbp https://t.co/EGLSdvXH5c #DKShivakumar pic.twitter.com/i22ZOdHaSf

— PublicTV (@publictvnews) August 2, 2017

Gujrat Congress MLAs Press Meet In Eagleton Resort, Was This The Reason For Today's IT Raid?: https://t.co/ENWUtXZXen via @YouTube

— PublicTV (@publictvnews) August 2, 2017

Rs. 7.5 crore recovered during IT raids at two flats of Karnataka Minister DK Shivakumar in Delhi.: https://t.co/zhfdWWGqx6 via

— PublicTV (@publictvnews) August 2, 2017

TAGGED:bengalurucongressDK Shivakumardwarakanathkarnatakaಆದಾಯ ತೆರಿಗೆಕಾಂಗ್ರೆಸ್ಡಿಕೆ ಶಿವಕುಮಾರ್ದ್ವಾರಕನಾಥ್ಸಿಬಿಯ
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

davanagere attack on constable 3 son arrested
Crime

ಪೊಲೀಸರ ಮೇಲೆ ಹಲ್ಲೆ ಪ್ರಕರಣ – ತಲೆಮರೆಸಿಕೊಂಡಿದ್ದ `ಕೈ’ ಮುಖಂಡನ ಮತ್ತಿಬ್ಬರು ಪುತ್ರರು ಅರೆಸ್ಟ್

Public TV
By Public TV
10 minutes ago
asia cup team india pakistan suryaklumar yadav
Cricket

ಭಾರತ-ಪಾಕ್‌ ಪಂದ್ಯ ರದ್ದಾದ್ರೆ 2,200 ಕೋಟಿ ಲಾಸ್‌!

Public TV
By Public TV
10 minutes ago
ಸಾಂದರ್ಭಿಕ ಚಿತ್ರ
Bengaluru City

ಮಲ್ಲೇಶ್ವರಂನ 7 ರಸ್ತೆಗಳಲ್ಲಿ ಶೀಘ್ರವೇ ಪೇ ಅಂಡ್ ಪಾರ್ಕಿಂಗ್

Public TV
By Public TV
13 minutes ago
Donald Trump Narendra Modi
Latest

ಚೀನಾ, ಪಾಕ್‌, ಬಾಂಗ್ಲಾಗೆ ಹೋಲಿಸಿದ್ರೆ ಭಾರತಕ್ಕೆ ಈಗ ಕಡಿಮೆ ಸುಂಕ

Public TV
By Public TV
1 hour ago
Maharashtra Man Kills 6 Year Old Daughter To Contest Panchayat Elections
Crime

ಚುನಾವಣೆಗೆ ಸ್ಪರ್ಧಿಸಲು ಮಗಳನ್ನೇ ಕೊಂದ ಪಾಪಿ ತಂದೆ!

Public TV
By Public TV
2 hours ago
GBA
Karnataka

7 ಸಾವಿರ ಆಸ್ತಿಗಳ ಹರಾಜಿಗೆ ಮುಂದಾದ ಜಿಬಿಎ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?