ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ- ಕತ್ತು ಹಿಸುಕಿ ಕೊಲೆ ಮಾಡಿದ ಪಾಪಿ ಪತಿ

Public TV
1 Min Read
MURDER

ಬೆಂಗಳೂರು: ವರದಕ್ಷಿಣೆಗಾಗಿ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಯಶವಂತಪುರದ ತ್ರಿವೇಣಿ ನಗರದಲ್ಲಿ ನಡೆದಿದೆ.

ಈ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಕಳೆದ ಒಂದೂವರೆ ವರ್ಷದ ಹಿಂದೆ ಹೆಬ್ಬಾಳದ ನಿವಾಸಿಗಳಾದ ಸುನಂದ ಮತ್ತು ಶಂಕರ್ ದಂಪತಿಯ ಮಗಳು ಚಂದ್ರಿಕಾ ಎಂಬಾಕೆಯನ್ನು ರಾಜೇಶ್ ಎಂಬಾತನ ಜೊತೆ ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಮದುವೆ ಆದಾಗಿನಿಂದಲೂ ರಾಜೇಶ್ ವರದಕ್ಷಿಣೆ ತರುವಂತೆ ಪತ್ನಿಗೆ ನಿತ್ಯವೂ ಕಿರುಕುಳ ಹಾಗೂ ಚಿತ್ರ ಹಿಂಸೆ ನೀಡುತ್ತಿದ್ದನು.

ನಿನ್ನೆ ರಾತ್ರಿ ಕೂಡ ಇದೇ ವಿಚಾರಕ್ಕೆ ಇಬ್ಬರ ನಡುವಿನ ಜಗಳ ತಾರಕಕ್ಕೇರಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಅಂತಾ ಚಂದ್ರಿಕಾ ಪೋಷಕರು ಆರೋಪಿಸುತ್ತಿದ್ದಾರೆ.

ಸದ್ಯ ಚಂದ್ರಕಾರ ಮೃತದೇಹ ಖಾಸಗಿ ಆಸ್ಪತ್ರೆಯೊಂದರಲ್ಲಿ ಇರಿಸಲಾಗಿದೆ. ಮೃತ ಚಂದ್ರಿಕಾಗೆ ಒಂದು ವರ್ಷದ ಗಂಡು ಮಗು ಇದೆ. ಗಂಡು ಮಗುವನ್ನು ಲೆಕ್ಕಿಸದೇ ಗಂಡ, ಅತ್ತೆ, ಮಾವ ಸೇರಿ ಕೊಲೆ ಮಾಡಿದ್ದಾರೆಂದು ಪೋಷಕರ ಆರೋಪಿಸುತ್ತಿದ್ದಾರೆ. ಅಲ್ಲದೇ 25 ಲಕ್ಷ ವರದಕ್ಷಿಣೆ ತರುವಂತೆ ಪತಿ ರಾಜೇಶ್ ಕಿರುಕುಳ ನೀಡ್ತಾ ಇದ್ದ ಅಂತ ಪೋಷಕರು ದೂರಿದ್ದಾರೆ.

BNG 5 1

BNG 6 1

BNG 8

BNG 7

BNG 4 1

BNG 3 1

BNG 2 2

BNG 1 1

Share This Article
Leave a Comment

Leave a Reply

Your email address will not be published. Required fields are marked *