Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಣಪತಿ ಕೇಸ್- ಸಾಕ್ಷ್ಯ ನಾಶಪಡಿಸುವಲ್ಲಿ ಕೆಂಪಯ್ಯ ಪಾತ್ರವಿದೆ: ಬಿಎಸ್‍ವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗಣಪತಿ ಕೇಸ್- ಸಾಕ್ಷ್ಯ ನಾಶಪಡಿಸುವಲ್ಲಿ ಕೆಂಪಯ್ಯ ಪಾತ್ರವಿದೆ: ಬಿಎಸ್‍ವೈ

Bengaluru City

ಗಣಪತಿ ಕೇಸ್- ಸಾಕ್ಷ್ಯ ನಾಶಪಡಿಸುವಲ್ಲಿ ಕೆಂಪಯ್ಯ ಪಾತ್ರವಿದೆ: ಬಿಎಸ್‍ವೈ

Public TV
Last updated: August 24, 2017 5:10 pm
Public TV
Share
2 Min Read
BSY
SHARE

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ದುರ್ಬಳಕೆ ಆಗುತ್ತಿದ್ದು ಎಸಿಬಿ, ಸಿಐಡಿಗಳ ದುರ್ಬಳಕೆಗೆ ಸಾಕ್ಷಿಗಳು ಸಿಕ್ಕಿವೆ. ಗಣಪತಿ ಸಾವಿನ ಕೇಸ್‍ನಲ್ಲಿ ಸಿಐಡಿ ತನಿಖೆ ಸರಿಯಾಗಿ ಆಗಿಲ್ಲ. ಪೋನ್ ಕಾಲ್‍ಗಳು, ಮೆಸೇಜ್‍ಗಳು, ಡಾಕ್ಯೂಮೆಂಟ್‍ಗಳು,ಫೋಟೋಗಳು ನಾಪತ್ತೆಯಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾಕ್ಷ್ಯ ನಾಶಪಡಿಸುವಲ್ಲಿ ಗೃಹ ಸಚಿವಾಲಯದ ಸಲಹೆಗಾರ ಕೆಂಪಯ್ಯ ಪಾತ್ರ ಇದೆ. ಅಷ್ಟೇ ಅಲ್ಲ ಆಡಳಿತ ಪಕ್ಷದ ಕೆಲ ನಾಯಕರ ಕೈವಾಡ ಸಹ ಇದೆ. ಜಾರ್ಜ್ ರಾಜೀನಾಮೆ ನೀಡಿದ್ರೂ ಮತ್ತೆ ತರಾತುರಿಯಲ್ಲಿ ಸಂಪುಟಕ್ಕೆ ಸೇರಿಕೊಂಡಿದ್ದಾರೆ. ಈ ಸಾಕ್ಷಿ ನಾಶದ ಹಿಂದೆ ಆಡಳಿತ ಪಕ್ಷದ ಮುಖಂಡರ ಪ್ರಭಾವ ಇದೆ ಎಂದು ಬಿಎಸ್‍ವೈ ಅವರು ಆರೋಪಿಸಿದರು.

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಾಟಕೀಯ. ತನಿಖೆಯನ್ನು ಸಿಐಡಿ ಸರ್ಕಾರದ ಇಚ್ಛೆಗೆ ತಕ್ಕಂತೆ ನಡೆಸಿದೆ. ವಿಧಿವಿಜ್ಞಾನ ಪ್ರಯೋಗಾಲಯ ಮೂಲಕ ಈ ಸತ್ಯ ಬಹಿರಂಗವಾಗಿದೆ. ಪ್ರಕರಣ ಕುರಿತು ದೊರೆತಿದ್ದ ಸಾಕ್ಷ್ಯಗಳು ನಾಶವಾಗಿವೆ. ಆರೋಪ ಕೇಳಿ ಬಂದ ನಾಯಕರನ್ನು ರಕ್ಷಿಸಲು ಪ್ರಮುಖ ದಾಖಲೆಗಳನ್ನು ನಾಶಮಾಡಲಾಗಿದೆ. ಈ ಸಾಕ್ಷ್ಯ ನಾಶ ಕುರಿತು ಸರ್ಕಾರ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ಪ್ರಕರಣ ಮುಚ್ಚಿಹಾಕಲು ಪೊಲೀಸ್ ಅಧಿಕಾರಿಗಳ ಮತ್ತು ಸರ್ಕಾರದ ನಡುವೆ ಸಂಚು ನಡೆದಿದೆ. ಈ ಎಲ್ಲ ಬೆಳವಣಿಗೆಗೆ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊರಬೇಕು. ಕೂಡಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದರು. ತನಿಖೆ ವೇಳೆ ಕೊಠಡಿಯಲ್ಲಿ ಮೂರು ಗುಂಡು ಹಾರಿಸಿದ್ದ ಬಗ್ಗೆ ಸ್ಪಷ್ಟನೆ ಇಲ್ಲ. ಪ್ರಕರಣದಲ್ಲಿ ಸರ್ಕಾರದ ಪ್ರಭಾವಿ ನಾಯಕರ ಕೈವಾಡವಿದೆ. ಸಾಕ್ಷ್ಯ ನಾಶ ಪತ್ತೆ ಹಚ್ಚಿ ನ್ಯಾಯ ಸಿಗಬೇಕು ಅನ್ನೋದು ಬಿಜೆಪಿಯ ಕೆಲಸ ಎಂದರು.

ಸಾವಿಗೂ ಮುನ್ನ ಗಣಪತಿ ಪೊಲೀಸ್ ಅಧಿಕಾರಿಗಳ ಮತ್ತು ಜಾರ್ಜ್ ಹೆಸರನ್ನು ಉಲ್ಲೇಖ ಮಾಡಿದ್ದರು. ಪ್ರಾಮಾಣಿಕ ಅಧಿಕಾರಿಗಳಿಗೆ ರಾಜ್ಯದಲ್ಲಿ ಕೆಲಸ ಮಾಡದಂತೆ ವಾತಾವರಣವಿದೆ. ಈ ಪ್ರಕರಣದಲ್ಲಿ ಸಾಕ್ಷ್ಯ ನಾಶ ಮಾಡಿದವರು ಯಾರು ಎಂದು ಪತ್ತೆ ಹಚ್ಚಬೇಕು. ಸಚಿವ ಸ್ಥಾನಕ್ಕೆ ಜಾರ್ಜ್ ಕೂಡಲೇ ರಾಜೀನಾಮೆ ನೀಡಬೇಕು. ಸಿಎಂ ಮತ್ತು ಕೆಜೆ ಜಾರ್ಜ್ ರಾಜೀನಾಮೆ ನೀಡದೆ ಇದ್ದಲ್ಲಿ ಬಿಜೆಪಿಯಿಂದ ಶೀಘ್ರದಲ್ಲೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು. ಜಾರ್ಜ್ ರಾಜೀನಾಮೆ ನೀಡದೇ ಇದ್ದರೆ ಆ.26 ರಂದು ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಪ್ರಕರಣ ಕುರಿತು ಮುಂದಿನ ಕ್ರಮ ಕೈಗೊಳ್ಳುತ್ತೇವೆ.

ಈ ಪ್ರಕರಣದಲ್ಲಿ ಕೇಂದ್ರ ಸಚಿವ ಸದಾನಂದಗೌಡ ಅವರ ಪುತ್ರನ ಹೆಸರು ಕೂಡ ಕೇಳಿ ಬಂದಿದೆ ಎನ್ನುವ ಪ್ರಶ್ನೆಗೆ ಸಾವಿಗೆ ಯಾರದೇ ಪಾತ್ರ ಇದ್ದರೂ ತನಿಖೆ ಪೂರ್ಣಗೊಂಡ ಬಳಿಕ ಗೊತ್ತಾಗಲಿದೆ ಎಂದು ಹೇಳಿದರು.

ಅರ್ಕಾವತಿ ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಸಿಎಂ ಕ್ಲೀನ್ ಚಿಟ್ ವಿಚಾರದಲ್ಲಿ ನ್ಯಾ.ಕೆಂಪಣ್ಣ ಆಯೋಗದ ವರದಿಗೆ ಕಿಮ್ಮತ್ತಿಲ್ಲ. ಕೆಂಪಣ್ಣ, ಕೆಂಪಯ್ಯ ಎಲ್ಲಾ ಒಂದೇ ಅಲ್ವಾ? ತರಾತುರಿಯಲ್ಲಿ ವರದಿ ಕೊಟ್ಟಿದ್ದಾರೆ. ವರದಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಬಿಎಸ್‍ವೈ ಹೇಳಿದರು.

TAGGED:bengalurubjpbs yeddyurappaDYSP GanapatiKJ GeorgePublic TVsiddaramaiahಕೆಜೆ ಜಾರ್ಜ್ಡಿವೈಎಸ್‍ಪಿ ಗಣಪತಿಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

gas leak fire accident in kanakapura three dies
Crime

ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
17 minutes ago
Nepali
Bengaluru City

18 ಕೋಟಿ ದರೋಡೆ ಕೇಸ್‌ | ಮನೆ ಕೆಲಸಕ್ಕೆ ಸೇರಿ ಸಂಚು – ಕೆಲಸ ಬಿಟ್ಟು ದರೋಡೆ ಮಾಡಿದ್ದ ನೇಪಾಳಿ ಗ್ಯಾಂಗ್‌!

Public TV
By Public TV
21 minutes ago
CJ Roy
Bengaluru City

ಪಿಸ್ತೂಲ್‌ನಿಂದ ಶೂಟ್ ಮಾಡಿದ್ರೂ ಯಾರಿಗೂ ಗೊತ್ತಾಗಿಲ್ಲ ಯಾಕೆ? – ಚರ್ಚೆಗೆ ಗ್ರಾಸವಾಗಿದ್ದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
22 minutes ago
Pakistan Cricket Team
Cricket

ಭಾರತದ ವಿರುದ್ಧ ಪಂದ್ಯವಾಡದೇ ಇದ್ದರೆ ಪಾಕಿಗೆ 200 ಕೋಟಿ ನಷ್ಟ

Public TV
By Public TV
2 hours ago
CPI video of fighting for arrest of Davangere riot accused goes viral
Crime

ʻಕೈʼ ಮುಖಂಡನ ಮಕ್ಕಳಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ -‌ ಬಂಧನಕ್ಕೆ ಹೋರಾಡಿದ್ದ ಲೇಡಿ ಸಿಪಿಐ ವಿಡಿಯೋ ವೈರಲ್‌

Public TV
By Public TV
3 hours ago
Groom stabbed in Kollegal Bride lover arrested murder plot
Chamarajanagar

ಕೊಳ್ಳೇಗಾಲದಲ್ಲಿ ವರನಿಗೆ ಚಾಕು ಇರಿತ – ಹತ್ಯೆಗೆ ಸುಪಾರಿ ಕೊಟ್ಟಿದ್ದೇ ವಧು!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?