ಮಂಡ್ಯ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ

Public TV
0 Min Read
MANDYA MURDER

ಮಂಡ್ಯ: ಯುವಕನನ್ನು ಕಟ್ಟಿ ಹಾಕಿ ನಂತರ ಅವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ.

MANDYA MURDER 4

28 ವರ್ಷದ ನವೀನ್ ಕೊಲೆಯಾದ ದುರ್ದೈವಿ. ಕನಕಪುರ ಮೂಲದ ನವೀನ್ ಮಂಡ್ಯದಲ್ಲಿ ವಾಸಿಸುತ್ತಿದ್ದರು. ಲಾರಿಗಳಿಗೆ ಮೂಟೆ ಹೊರುವ ಕೂಲಿ ಕೆಲಸ ಮಾಡಿಕೊಂಡಿದ್ದರು. ನವೀನ್ ಕೊಲೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.

MANDYA MURDER 3

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

MANDYA MURDER 2

Share This Article
Leave a Comment

Leave a Reply

Your email address will not be published. Required fields are marked *