ಆಟೋ ಮೇಲೆ ಹರಿದ ಲಾರಿ – ಮೂವರು ಸ್ಥಳದಲ್ಲೇ ಸಾವು

Public TV
1 Min Read
ckb accident 9

ಚಿಕ್ಕಬಳ್ಳಾಪುರ: ದೇವರ ದರ್ಶನಕ್ಕೆ ಅಂತ ತೆರಳುತ್ತಿದ್ದವರ ಮೇಲೆ ಬೆಳ್ಳಂಬೆಳಿಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರ ಹೊರವಲಯದ ಮಾಡಿಕೆರೆ ಕ್ರಾಸ್ ಬಳಿ ಆಟೋ ಮೇಲೆ ಲಾರಿ ಹರಿದ ಪರಿಣಾಮ ಆಟೋದಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ckb accident 8

ಕುರಟಹಳ್ಳಿ ಗ್ರಾಮದ 45 ವರ್ಷದ ಮುರುಳಿ, 55 ವರ್ಷದ ಅಶ್ವತ್ಥಪ್ಪ ಹಾಗೂ ರಾಮಪುರ ಗ್ರಾಮದ 35 ವರ್ಷದ ಚಲಪತಿ ಮೃತ ದುರ್ದೈವಿಗಳು. ಆಂಧ್ರದ ಬಾಯಿಕೊಂಡ ಗಂಗಮ್ಮ ದೇವಸ್ಥಾನಕ್ಕೆ ಆಟೋ ಮೂಲಕ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ckb accident 6

ಆಟೋದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೋರ್ವ ವ್ಯಕ್ತಿ ಕಾಚಹಳ್ಳಿ ಗ್ರಾಮದ 50 ವರ್ಷದ ನಂಜಂಡಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ckb accident 7

ಲಾರಿ ಚಾಲಕ ನಿದ್ದೆಗೆ ಜಾರಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಮೊದಲು ಆಟೋ ಮೇಲೆ ಹರಿದ ಲಾರಿ ನಂತರ ರಸ್ತೆ ಬದಿಯ ಸಿಮೆಂಟ್ ತಡೆಗೋಡೆಗಳಿಗೆ ಡಿಕ್ಕಿ ಹೊಡೆದು ಮುಂದೆ ಹೋಗಿ ನಿಂತಿದೆ. ಘಟನೆ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ.

ckb accident 5

ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ckb accident 4

ckb accident 3

ckb accident 2

ckb accident 1

 

Share This Article
Leave a Comment

Leave a Reply

Your email address will not be published. Required fields are marked *