ಒಬ್ಬನನ್ನು ರಕ್ಷಿಸಲು ಹೋಗಿ ಮತ್ತೊಬ್ಬನೂ ಕೃಷಿ ಹೊಂಡಕ್ಕೆ ಬಿದ್ದು ಸಾವು

Public TV
1 Min Read
mnd death

ಮಂಡ್ಯ: ಕೃಷಿ ಹೊಂಡದೊಳಗೆ ಬಿದ್ದು ಹೊರಬಾರದೇ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.

ಜಿಲ್ಲೆಯ ಮದ್ದೂರು ತಾಲೂಕಿನ ಆತಗೂರು ಗ್ರಾಮದಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ. 18 ವರ್ಷದ ಚಂದನ್ ಮತ್ತು 12 ವರ್ಷದ ಕಿರಣ್ ಮೃತ ದುದೈರ್ವಿಗಳು. ಇವರಿಬ್ಬರು ಜಮೀನಿನಲ್ಲಿ ಟೊಮ್ಯಾಟೊ ಬಿಡಿಸಿದ್ದಾರೆ. ನಂತರ ಕಿರಣ್ ಕೈ ಕಾಲು ತೊಳೆಯಲು ಕೃಷಿ ಹೊಂಡದ ಬಳಿ ಹೋಗಿದ್ದಾನೆ. ಆದ್ರೆ ಈ ವೇಳೆ ಕಾಲು ಜಾರಿ ಕೃಷಿಹೊಂಡದೊಳಗೆ ಬಿದ್ದಿದ್ದಾನೆ. ಇದನ್ನ ಗಮನಿಸಿದ ಚಂದನ್, ಕಿರಣ್‍ನನ್ನು ರಕ್ಷಿಸಲು ಹೋಗಿ ಕಾಲು ಜಾರಿ ಆತನೂ ಕೂಡ ಒಳಗೆ ಬಿದ್ದಿದ್ದಾನೆ.

mnd 1

ಇಬ್ಬರೂ ಈಜಲು ಬಾರದೇ ನೀರಿನೊಳಗೆ ಮುಳುಗಿ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರ ಶವವನ್ನು ಮದ್ದೂರು ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದ್ದು, ಆಸ್ಪತ್ರೆಯ ಬಳಿ ಮೃತರ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು.

mnd 2

Share This Article
Leave a Comment

Leave a Reply

Your email address will not be published. Required fields are marked *