Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಭಾರತವನ್ನು ಟೀಕಿಸಲು ಹೋಗಿ ತನ್ನ ಮಾನವನ್ನು ತಾನೇ ಹರಾಜು ಹಾಕಿತು ಪಾಕಿಸ್ತಾನ!

Public TV
Last updated: November 16, 2017 1:42 pm
Public TV
Share
3 Min Read
pak un
SHARE

ನ್ಯೂಯಾರ್ಕ್: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ವಿರುದ್ಧ ಆರೋಪಗಳನ್ನು ಮಾಡಲು ಹೋಗಿ ತನ್ನ ಮಾನವನ್ನೇ ಹರಾಜು ಹಾಕಿ ನಗೆಪಾಟಲಿಗೆ ಪಾಕಿಸ್ತಾನ ಗುರಿಯಾಗಿದೆ.

0c577b54 a0ed 11e7 9c3b 8e901839ece0

ವಿಶ್ವ ಸಂಸ್ಥೆಯ 72ನೇ ಮಹಾ ಅಧಿವೇಶನದಲ್ಲಿ ಭಾರತದ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನದ ನೈಜ ಬಣ್ಣವನ್ನು ತೆರೆದಿಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಭಾರತ ಭಯೋತ್ಪಾದನೆಯ ತವರು ನೆಲ ಎಂಬ ಆರೋಪವನ್ನು ಮಾಡಿತ್ತು. ಆದರೆ ಈ ಆರೋಪವನ್ನು ಮಾಡಿದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಮಾನ ವಿಶ್ವಸಂಸ್ಥೆಯಲ್ಲಿ ತನ್ನ ಅಧಿಕಾರಿಯ ಮೂಲಕ ಹರಾಜು ಆಗಿದೆ.

pellet gun victim

ಪಾಕಿಸ್ತಾನ ಪ್ರತಿನಿಧಿ ಮಲೇಹಾ ಲೋಧಿ ಭಾರತದಲ್ಲಿ ಹೇಗೆ ಹಿಂಸಾಚಾರ ನಡೆಯುತ್ತಿದೆ ಎನ್ನುವುದನ್ನು ವಿಶ್ವಕ್ಕೆ ತೋರಿಸಲು ಪೆಲೆಟ್ ಗನ್‍ನಿಂದ ಗಾಯಗೊಂಡಿದ್ದ ಯುವತಿ ಫೋಟೋವನ್ನು ಪ್ರದರ್ಶಿಸಿದ್ದರು. ಆದರೆ ಈ ಫೋಟೋ ಗಾಜಾ ಯುದ್ಧ ಸಂದರ್ಭದಲ್ಲಿನ ಫೋಟೋ ಎಂದು ಮಾಧ್ಯಮಗಳು ಪ್ರಕಟಿಸುವ ಮೂಲಕ ಪಾಕ್ ನೈಜ ಬಣ್ಣವನ್ನು ಬಯಲು ಮಾಡಿವೆ.

ಗಾಜಾ ಯುದ್ಧದ ಸಂದರ್ಭದಲ್ಲಿ ದಾವಿ ಅಬು ಜೊಮ್(17) ಯುವತಿ ಗಾಯಗೊಂಡಿದ್ದಳು. ಈ ಫೋಟೋವನ್ನು ಪಾಕ್ ಅಧಿಕಾರಿ ಪ್ರದರ್ಶಿಸಿದ ಬಳಿಕ ವಿಶ್ವದಾದ್ಯಂತ ಪಾಕ್ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿದೆ.

sushma swaraj at un

 

ಮಲೇಹಾ ಲೋಧಿ ಹೇಳಿದ್ದು ಏನು?
ಸುಷ್ಮಾ ಸ್ವರಾಜ್ ಅವರಿಗೆ ತಿರುಗೇಟು ನೀಡಿದ ಲೋಧಿ ಏಷ್ಯಾ ಖಂಡದಲ್ಲಿ ಭಾರತ ಭಯೋತ್ಪದನೆಯ ತವರು ನೆಲ ಎಂಬ ಆರೋಪವನ್ನು ಮಾಡಿದರು. ಭಾರತದ ವಿವಿಧ ಭಾಗಗಳಲ್ಲಿ ಭಯೋತ್ಪಾದನ ನೆಲೆಗಳಿವೆ ಎಂದಿದ್ದಾರೆ.

ಸುಷ್ಮ ಸ್ವರಾಜ್ ಅವರು ಶನಿವಾರ ಪಾಕಿಸ್ತಾನದಲ್ಲಿ ನೆಲೆಯುರಿರುವ ಭಯೋತ್ಪಾದನ ಸಂಸ್ಥೆಗಳಾದ ಲಷ್ಕರ್ ಎ ತೋಯ್ಬಾ, ಜೈಷ್ ಎ ಮೊಹಮ್ಮದ್, ಹಿಜ್ಜುಲ್ ಮುಜಾಹಿದೀನ್, ಹಕ್ಕಾನಿಯಂತಹ ಹಲವು ಸಂಘಟನೆಗಳ ಕುರಿತು ವಿಸ್ತಾರವಾದ ಮಾಹಿತಿಯನ್ನು ನೀಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಲೋಧಿ, ಅಂತರಾಷ್ಟ್ರೀಯ ಸಂಸ್ಥೆಗಳು ಭಾರತ ಹಾಗೂ ಪಾಕಿಸ್ತಾನದ ನಡುವೆ ಶಾಂತಿ ಹಾಗೂ ಸೌರ್ಹದತೆಯನ್ನು ಬಯಸಿದರೆ, ಭಾರತವು ಗಡಿಯಲ್ಲಿ ಉಂಟುಮಾಡುತ್ತಿರುವ ಪ್ರಚೋದನೆ ಹಾಗೂ ಅಕ್ರಮಾಣಕಾರಿ ಪ್ರವೃತ್ತಿಯನ್ನು ಸಂಪೂರ್ಣವಾಗಿ ಕೊನೆಗೊಳಿಸಬೇಕು. ಅಲ್ಲದೇ ಭಾರತದ ನೆಲದಲ್ಲಿ ಭಯೋತ್ಪಾದನೆಗೆ ನೀಡುತ್ತಿರುವ ಬೆಂಬಲವನ್ನು ನಿಲ್ಲಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಭಾರತದ ರಕ್ಷಣಾ ಸಲಹೆಗಾರ ಅಜಿತ್ ದೋವಲ್ ಪಾಕ್ ಆಕ್ರಮಿತ ಕಾಶ್ಮೀರದ ಬಾಲುಚಿಸ್ತಾನ ವಿಷಯದಲ್ಲಿ ಮಧ್ಯ ಪ್ರವೇಶಿಸುವ ಕುರಿತು ಸಹ ಪಾಕಿಸ್ತಾನದಿಂದ ಆಕ್ಷೇಪ ವ್ಯಕ್ತಪಡಿಸಿತು.

ಯಾವುದೇ ಸಮಸ್ಯೆಯನ್ನು ಎರಡು ದೇಶಗಳು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳದಿದ್ದರೆ ಇದರ ವಿಚಾರಣೆಯನ್ನು ನಡೆಸುವ ಅಧಿಕಾರ ವಿಶ್ವಸಂಸ್ಥೆ ಮತ್ತು ಅಂತರಾಷ್ಟ್ರೀಯ ಸಂಸ್ಥೆಗಳಿಗಿದೆ. ಆದರೆ ಇಂತಹ ನಿಯಮಗಳು ಸಮಯಕ್ಕೆ ಸರಿಯಾಗಿ ಕೈಗೊಳ್ಳಲಾಗುತ್ತಿಲ್ಲ. ನ್ಯಾಯಲಯಕ್ಕೆ ಯಾವುದೇ ಅಂತಿಮ ದಿನವಿರುದಿಲ್ಲ. ಹಾಗೆಯೇ ಮಾನವಿಯತೆಯನ್ನು ಸಮಯದ ಅಧಾರವಾಗಿ ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು. ಭಾರತವು ವಿಶ್ವ ಸಂಸ್ಥೆಯ ನಿರ್ಧಾರಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು.

Rawya Abu Jom’a was wounded during the 2014 war in #Gaza. Credit: Heidi Levine راوية ابو جمعة من #غزة عقب اصابتها pic.twitter.com/WGCctdCZwS

— Ramy Abdu| رامي عبده (@RamAbdu) March 27, 2015

ಇದೇ ಸಂದರ್ಭದಲ್ಲಿ ಭಾರತದ ಆರೋಪಗಳನ್ನು ತಳ್ಳಿ ಹಾಕಿದ ಅವರು ವಿಶ್ವ ಸಂಸ್ಥೆಯೇ ಭಯೋತ್ಪಾದನೆಯ ವ್ಯಾಖ್ಯಾನವನ್ನು ನೀಡಬೇಕು ಎಂದು ಕೋರಿದರು. ಭಾರತವು ತನ್ನ ನೆರೆಯ ದೇಶಗಳ ಮೇಲೆ ದಾಳಿಯನ್ನು ಮಾಡಲು ಭಯೋತ್ಪಾದನೆಯನ್ನು ಮಾಡಲು ಪೋಷಣೆ ಮಾಡುತ್ತಿದೆ. ಪಾಕಿಸ್ತಾನದ ವಿವಿಧೆಡೆ ವಿದ್ವಾಂಸಕ ಕೃತ್ಯಗಳನ್ನು ನಡೆಸಲು ಯೋಜನೆ ರೂಪಿಸಿದೆ. ಈ ಎಲ್ಲಾ ಅಂಶಗಳನ್ನು ಗಮನಿಸಿದರೆ ಭಾರತವು ಭಯೋತ್ಪಾದನೆಯ ತವರು ನೆಲ ಎಂಬ ಸ್ಪಷ್ಟವಾಗುತ್ತದೆ. ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ಎಂಬುವುದು ವಿಶ್ವ ದೊಡ್ಡ ಬುಟಾಟಿಕೆಯಾಗಿದೆ. ಫ್ಯಾಸಿಸ್ಟ್ ಸಿದ್ಧಾಂತವನ್ನು ಅನುಸರಿಸುವ ಮೂಲಕ ಭಾರತ ತನ್ನ ಅಡಳಿತವನ್ನು ನಡೆಸುತ್ತಿದೆ ಎಂದರು.

ಪಾಕಿಸ್ತಾನದ ಸ್ಥಾಪಕ ಜಿನ್ನಾ ಅವರ ಕುರಿತ ಹೇಳಿಕೆಗಳನ್ನು ನಿರಾಕರಿಸಿದ ಲೋಧಿ, ಪಾಕಿಸ್ತಾನ ಜಮ್ಮು ಕಾಶ್ಮೀರ ವಿಚಾರವಾಗಿ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡಲು ಮಾತುಕತೆಗೆ ಸಿದ್ಧ ಎಂದು ತಿಳಿಸಿದರು.

TAGGED:ChargesGreat ConferenceindiapakistanPublic TVSushma swarajUnited Nationsಆರೋಪಪಬ್ಲಿಕ್ ಟಿವಿಪಾಕಿಸ್ತಾನಭಾರತಮಹಾ ಅಧಿವೇಶನವಿಶ್ವಸಂಸ್ಥೆಸುಷ್ಮಾ ಸ್ವರಾಜ್
Share This Article
Facebook Whatsapp Whatsapp Telegram

You Might Also Like

Iran Attack
Latest

ಇಸ್ರೇಲ್‌ ಮೇಲೆ ಮತ್ತೆ ಬ್ಯಾಲಿಸ್ಟಿಕ್ ಮಿಸೈಲ್‌ಗಳ ಸುರಿಮಳೆ – ಅಮೆರಿಕ ದಾಳಿಗೂ ಜಗ್ಗದ ಇರಾನ್‌

Public TV
By Public TV
7 minutes ago
Chethan
Districts

ಹಾಸನ | ಊಟಕ್ಕೆ ಕುಳಿತಾಗ ಕಾಣಿಸಿಕೊಂಡ ಎದೆ ನೋವು – ಮೇಲೇಳುತ್ತಿದ್ದಂತೆ ಕುಸಿದುಬಿದ್ದ ವ್ಯಕ್ತಿ ಸಾವು

Public TV
By Public TV
34 minutes ago
Ayatollah Ali Khamenei
Latest

ಅಮೆರಿಕನ್ನರು ಹಿಂದೆಂದೂ ನೋಡಿರದ ದಾಳಿ ಎದುರಿಸಲು ಸಿದ್ಧರಾಗಿ – ಖಮೇನಿ ಬಿಗ್‌ ವಾರ್ನಿಂಗ್‌

Public TV
By Public TV
52 minutes ago
operation sindhu 11 kannadigas return safely to bengaluru from war hit iran
Bengaluru City

ಆಪರೇಷನ್ ಸಿಂಧು – ಯುದ್ಧ ಪೀಡಿತ ಇರಾನ್‌ನಿಂದ 11 ಕನ್ನಡಿಗರು ವಾಪಸ್

Public TV
By Public TV
1 hour ago
Bunker Buster
Latest

ವಿಶ್ವದ ಪವರ್‌ಫುಲ್‌ ವೆಪೆನ್‌ ʻಬಂಕರ್‌ ಬಸ್ಟರ್‌ʼ – 14,000 ಕೆಜಿ ತೂಕದ ಬಾಂಬ್‌ ಬಳಸಿ ಇರಾನ್‌ ಪರಮಾಣು ಕೇಂದ್ರದ ಮೇಲೆ ಅಮೆರಿಕ ದಾಳಿ

Public TV
By Public TV
1 hour ago
Iran Nuclear Sites
Latest

ಇದು ಅಂತಾರಾಷ್ಟ್ರೀಯ ಕಾನೂನಿಗೆ ವಿರುದ್ಧವಾದ ಕ್ರೂರ ಕೃತ್ಯ – ಅಮೆರಿಕ ದಾಳಿ ಒಪ್ಪಿಕೊಂಡ ಇರಾನ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?