ವಿಜಯಪುರ: ಬಹಿರ್ದೆಸೆಗೆ ಹೋಗಿದ್ದ ಎರಡು ವರ್ಷದ ಮಗು ಮೇಲೆ ಹುಚ್ಚು ನಾಯಿಯೊಂದು ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ನಗರದ ಅಂಬೇಡ್ಕರ್ ನಗರದ ನಿವಾಸಿ ಕರೀಷ್ಮಾ ಎಂಬ ಬಾಲಕಿ ಹುಚ್ಚು ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿ. ಕರೀಷ್ಮಾ ಮನೆಯಿಂದ ಬಹಿರ್ದೆಸೆಗೆಂದು ಬಂದಿದ್ದಾಳೆ. ಈ ಸಂದರ್ಭದಲ್ಲಿ ಬಾಲಕಿ ಮೇಲೆ ಹುಚ್ಚು ನಾಯಿ ಎರಗಿ ಕೈ ಕಾಲು, ಹೊಟ್ಟೆ ಭಾಗ ಸೇರಿದಂತೆ ದೇಹದ ಹಲವು ಭಾಗಗಳಿಗೆ ಕಚ್ಚಿ ಗಾಯಗೊಳಿಸಿದೆ. ಕೂಡಲೇ ಸ್ಥಳದಲ್ಲಿದ್ದ ಕೆಲವರು ಬಾಲಕಿಯ ಸಹಾಯಕ್ಕೆ ಬಂದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಅಂಬೇಡ್ಕರ್ ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಾಯಿಗಳ ದಾಳಿಗೆ ನಗರದ ನಿವಾಸಿಗರು ಬೇಸತ್ತಿದ್ದಾರೆ. ಅಲ್ಲದೇ ಈಗಾಗಲೇ ಹುಚ್ಚು ನಾಯಿ ದಾಳಿಯಿಂದ ನಗರದ ನಾಲ್ಕು ಜನ ಗಾಯಗೊಂಡಿದ್ದಾರೆ. ಪದೇ ಪದೇ ನಾಯಿ ದಾಳಿ ಆಗುತ್ತಿರುವುದರ ಬಗ್ಗೆ ಮಹಾನಗರ ಪಾಲಿಕೆಗೆ ದೂರು ನೀಡಿದ್ದೇವೆ. ಆದರೆ ಪಾಲಿಕೆ ಅಧಿಕಾರಿಗಳು ಮಾತ್ರ ನಾಯಿಗಳ ದಾಳಿ ತಡೆಯುವಲ್ಲಿ ದಿವ್ಯ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಅಲ್ಲಿನ ನಿವಾಸಿಗರು ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.