Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಐತಿಹಾಸಿಕ ಹಾಸನಾಂಬೆ ದೇವಾಲಯದ ಬಾಗಿಲು ಓಪನ್: ಫೋಟೋಗಳಲ್ಲಿ ನೋಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಐತಿಹಾಸಿಕ ಹಾಸನಾಂಬೆ ದೇವಾಲಯದ ಬಾಗಿಲು ಓಪನ್: ಫೋಟೋಗಳಲ್ಲಿ ನೋಡಿ

Districts

ಐತಿಹಾಸಿಕ ಹಾಸನಾಂಬೆ ದೇವಾಲಯದ ಬಾಗಿಲು ಓಪನ್: ಫೋಟೋಗಳಲ್ಲಿ ನೋಡಿ

Public TV
Last updated: October 12, 2017 9:01 pm
Public TV
Share
3 Min Read
HSN HASANAMBA
SHARE

ಹಾಸನ: ಒಂದು ವರ್ಷಕೊಮ್ಮೆ ಬಾಗಿಲು ತೆಗೆಯುವ ಮತ್ತು ಪವಾಡ ಮಹಿಮೆಗಳಿಂದ ಮನೆಮಾತಾಗಿರುವ ಹಾಸನಾಂಬೆಯ ಗರ್ಭಗುಡಿಯ ಬಾಗಿಲನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗುರುವಾರ ಮಧ್ಯಾಹ್ನ ತೆರೆಯಲಾಗಿದೆ.

ನಗರದ ಹೃದಯ ಭಾಗದಲ್ಲಿರುವ ದೇವಾಲಯದ ಬಾಗಿಲನ್ನು ಇಂದು ಮಧ್ಯಾಹ್ನ ಶಾಸ್ತ್ರೋಕ್ತವಾಗಿ ತೆರೆಯಲಾಗಿದ್ದು, ಸಿದ್ದೇಶ್ವರ ಜಾತ್ರೆ ಹಾಗೂ ಹಾಸನಾಂಬೆಯ ದರ್ಶನೋತ್ಸವದಿಂದ ಹಾಸನದಲ್ಲಿ ಈಗ ಹಬ್ಬದ ವಾತಾವರಣ ಸೃಷ್ಟಿಯಾಗಿದೆ.

ಹಾಸನಾಂಬೆ, ಹಾಸನಮ್ಮ, ಹಾಸನದಮ್ಮ, ಹಸನ್‍ಬಿ ಎಂಬ ಹಲವಾರು ಹೆಸರುಗಳಿಂದ ಕರೆಯಲ್ಪಡುವ ದೇವಾಲಯವನ್ನು ಹಿಂದೂ ಪಂಚಾಗದ ಆಶ್ವೀಜ ಮಾಸದ ಹುಣ್ಣಿಮೆಯ ನಂತರದ ಮೊದಲ ಗುರುವಾರದಂದು ಗರ್ಭಗುಡಿಯ ಬಾಗಿಲು ತೆಗೆಯುವುದು ವಾಡಿಕೆ. ಅದರಂತೆ ಮಧ್ಯಾಹ್ನ 12:32ರಲ್ಲಿ ಆರ್ಧ ನಕ್ಷತ್ರದ ಸಂದರ್ಭದಲ್ಲಿ ತಳವಾರ ವಂಶಸ್ಥರು ಬನ್ನಿ ಎಲೆಗಳು ಮತ್ತು ಬಾಳೆಕಂದನ್ನು ಕತ್ತರಿಸಿದ ಬಳಿಕ ಗರ್ಭಗುಡಿಯ ಬಾಗಿಲು ತೆರೆಯಲಾಗಿದೆ. ಪ್ರತಿವರ್ಷದಂತೆಯೂ ಈ ವರ್ಷವೂ ಕಳೆದ ವರ್ಷ ಹಚ್ಚಿರುವ ದೀಪ ಹಾಗೇ ಉರಿಯುತಿತ್ತು.

ಪೌರಾಣಿಕ ಹಿನ್ನಲೆ ಏನು?
ಉತ್ತರದ ಕಾಶಿಯಿಂದ ದಕ್ಷಿಣದ ಕಡೆಗೆ ವಾಯುವಿಹಾರಕ್ಕೆ ಹೊರಟ ಸಪ್ತಮಾತೃಕೆಯರು ಹಾಸನದ ಸೌಂದರ್ಯ ನೋಡಿ ಇಲ್ಲಿಯೇ ನೆಲೆಸುತ್ತಾರೆ. ಇಲ್ಲಿಯ ಪಾಳೇಗಾರನಾಗಿದ್ದ ಕೃಷ್ಣಪ್ಪನಾಯಕ ಮಾತೆಯರ ಆದೇಶದಂತೆ ದೇವಾಲಯ ಮತ್ತು ಕಲ್ಯಾಣಿಯನ್ನು ನಿರ್ಮಿಸಿದ ಎಂದು ಕಥೆ ಹೇಳುತ್ತದೆ.

ಶಾಸ್ತ್ರೋಕ್ತವಾಗಿ ಪಂಚಾಂಗದ ಪ್ರಕಾರ ಕನಿಷ್ಟ 9 ದಿನ ಮತ್ತು ಗರಿಷ್ಟ 14 ದಿನಗಳು ಮಾತ್ರ ದೇವಿಯ ದರ್ಶನದ ಭಾಗ್ಯ ಲಭಿಸುತ್ತದೆ. ಇದರಿಂದ ದರ್ಶನಕ್ಕಾಗಿ ಭಕ್ತರು ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಈ ಬಾರಿಯೂ ಜಿಲ್ಲಾಡಳಿತದ ವತಿಯಿಂದ ಭಕ್ತರಿಗಾಗಿ ಸರದಿ ಸಾಲುಗಳ ವ್ಯವಸ್ಥೆ, ಪ್ರಸಾದ, ಗಣ್ಯರ ದರ್ಶನ, ಕುಡಿಯುವ ನೀರಿನ ಸೌಲಭ್ಯ, ಹೀಗೆ ಹಲವಾರು ಸಿದ್ಧತೆಗಳನ್ನು ಮಾಡಲಾಗಿದೆ.

ಕಳೆದ ಬಾರಿ ಅಂದಾಜು 10 ಲಕ್ಷ ಮಂದಿ ದರ್ಶನ ಪಡೆದಿದ್ದರು. ಈ ಬಾರಿ ದರ್ಶನ ಕೇವಲ 9 ದಿನಗಳಷ್ಟೇ ಆಗಿದ್ದು, ನೈವೇದ್ಯ, ಅಭಿಷೇಕ ಹೊರತುಪಡಿಸಿದಂತೆ 24 ಗಂಟೆಯ ದರ್ಶನ ಸೌಲಭ್ಯ ವ್ಯವಸ್ಥೆ ಮಾಡಲಾಗಿದೆ.

ಹಾಸನಾಂಬೆ ಹಲವು ಪವಾಡ ಸದೃಶ ಮಹಿಮೆಗಳನ್ನು ಮೈಗೂಡಿಸಿಕೊಂಡಿದ್ದಾಳೆ. ಇಷ್ಟಾರ್ಥವನ್ನು ಸಿದ್ಧಿಸುತ್ತಾಳೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ಷದ ಹಿಂದೆ ಬಾಗಿಲು ಮುಚ್ಚುವ ವೇಳೆ ಹಚ್ಚಿಟ್ಟ ಹಣತೆ ಹಾಗೆಯೇ ಉರಿಯಲಿದೆ. ದೇವಿಯ ಮಹಿಮೆ ಅಪಾರ ಎನ್ನುವುದು ಅಸಂಖ್ಯಾತ ಭಕ್ತರ ನಂಬಿಕೆ. ಪರಂಪರೆ ಈಗಲೂ ನಡೆದುಕೊಂಡು ಬಂದಿರುವುದರಿಂದ ಪ್ರತಿ ವರ್ಷದಂತೆ ಈ ವರ್ಷವೂ ಭಕ್ತಸಾಗರವೇ ಹರಿದು ಬರುವ ಸಾಧ್ಯತೆ ಇದೆ.

ದೇವಿಯ ದರ್ಶನಕ್ಕೆ ಬರುವ ಭಕ್ತರಿಗಾಗಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುವಾಗ ಮಳೆ-ಬಿಸಿಲಿನ ತಾಪ ತಪ್ಪಸಿಕೊಳ್ಳಲು ನೆರಳಿನ ವ್ಯವಸ್ಥೆಯನ್ನೂ ಮಾಡಲಾಗಿದೆ. ಉಳಿದಂತೆ ಲಾಡು-ಪ್ರಸಾದಕ್ಕೂ ವ್ಯವಸ್ಥೆ ಮಾಡಲಾಗಿದೆ.

1 ಸಾವಿರ ರೂ. ಶುಲ್ಕ: ಶೀಘ್ರ ದರ್ಶನಕ್ಕೆ 300 ಮತ್ತು ಗಣ್ಯರು ಪ್ರವೇಶದ್ವಾರದಲ್ಲೇ ತೆರಳಿ ನೇರ ದರ್ಶನ ಪಡೆಯಲು ಇದೇ ಮೊದಲ ಬಾರಿ 1 ಸಾವಿರ ರೂ. ಶುಲ್ಕ ನಿಗದಿಪಡಿಸಲಾಗಿದೆ. ಈ ಬಾರಿ 9 ದಿನಗಳ ದರ್ಶನ ಇರುವುದರಿಂದ ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಅಪರಾಧ ಪತ್ತೆಗಾಗಿ ಸಿಸಿ ಕ್ಯಾಮೆರಾ ಅಳವಡಿಕೆ, ವೈದ್ಯಕೀಯ ವ್ಯವಸ್ಥೆ ಜೊತೆಗೆ ಒಟ್ಟು ಮೂರು ಶಿಫ್ಟ್ ಗಳಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಕ್ಟೋಬರ್ 21 ರ ಮಧ್ಯಾಹ್ನ ಅಂದ್ರೆ ಬಲಿಪಾಡ್ಯಮಿಯ ಮಾರನೇ ದಿನ ಹಾಸನಾಂಬೆ ಬಾಗಿಲು ಮುಚ್ಚಲಿದೆ. ನೂಕು ನುಗ್ಗಲು ತಡೆಯುವ ಉದ್ದೇಶದಿಂದ ಅಂದೂ ಸಹ ಭಕ್ತರ ದರ್ಶನವನ್ನು ನಿರ್ಬಂಧಿಸಲಾಗಿದೆ.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾತನಾಡಿ, ಆಶ್ವೀಜ ಮಾಸದ ಮೊದಲ ಗುರುವಾರದಂದು ಆರಂಭವಾಗುವ ದರ್ಶನ ಬಲಿಪಾಡ್ಯಮಿಯ ಮಾರನೆ ದಿನ ಅಂತಿಮವಾಗಲಿದೆ. ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಗಣ್ಯರಾದಿಯಾಗಿ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ. ಸದ್ಯ ಅಧಿದೇವತೆ ಹಾಸನಾಂಬೆಯ ಮೊದಲ ದಿನದ ದರ್ಶನ ಮುಗಿದಿದ್ದು, ಶುಕ್ರವಾರ ಮುಂಜಾನೆ 5 ಗಂಟೆಯಿಂದ ವಿಶೇಷ ಪೂಜೆ ಅಲಂಕಾರದೊಂದಿಗೆ ದೇವಿಯ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ. ಇದರೊಂದಿಗೆ ದೇಶದಲ್ಲಿ ಸುಖಃ ಶಾಂತಿ ನೆಲೆಸಲಿ ಎಂಬುದು ನಮ್ಮ ಆಶಯ ಎಂದು ತಿಳಿಸಿದರು.

ಮೊದಲ ದಿನ ಪಶುಸಂಗೋಪನಾ ಸಚಿವ ಎ ಮಂಜು, ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

ಇದನ್ನೂ ಓದಿ: ಮೋದಿಗೆ ಗಂಡಾಂತರ ಕಾದಿದೆಯಂತೆ, ಎಚ್.ಡಿ.ಕೆ ಕಿಂಗ್ ಮೇಕರ್ ಆಗ್ತಾರಂತೆ: ಬ್ರಹ್ಮಾಂಡ ಗುರೂಜಿ ಭವಿಷ್ಯ

HASANAMBE 1

HASANAMBE 2

HASANAMBE 5

HASANAMBE 6

HASANAMBE 7

HASANAMBE 8

HASANAMBE 9

HASANAMBE 10

HASANAMBE 12

hsn 3

hsn 1 1

hsn 2

Hasanamba temple 11

Hasanamba temple 10

Hasanamba temple 9

Hasanamba temple 8

Hasanamba temple 7

Hasanamba temple 3

Hasanamba temple 4

Hasanamba temple 5

Hasanamba temple 6

Hasanamba temple n1

hasanamba

TAGGED:hassanHassanbeJatraRohini Sindhuriಜಾತ್ರೆರೋಹಿಣಿ ಸಿಂಧೂರಿಹಾಸನಹಾಸನಾಂಬೆ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
2 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
14 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
46 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
56 minutes ago
WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
1 hour ago
siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?