ಅ.29 ರಂದು ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ

Public TV
1 Min Read
TEMPLE

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ತಿಂಗಳ 29ಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ವಿಶೇಷ ವಿಮಾನದಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ಬಳಿಕ ಅಲ್ಲಿಂದ ಹೆಲಿಕಾಪ್ಟರ್ ಮುಖಾಂತರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯಕ್ಕೆ ತೆರಳಲಿದ್ದಾರೆ. ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಉಜಿರೆಯಲ್ಲಿ ನಡೆಯಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

Dharmasthala Temple

ಇಂದು ಮೋದಿ ವಿಶ್ವಪ್ರಸಿದ್ಧ ಕೇದಾರನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ರು. ಆ ಬಳಿಕ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೋದಿ ಶಂಕುಸ್ಥಾಪನೆ ಮಾಡಿದ್ರು. ಬಳಿಕ ಕೇದಾರನಾಥ ದೇವಸ್ಥಾನದಲ್ಲೇ ಬಿಜೆಪಿ ಕಾರ್ಯಕರ್ತರೊಂದಿಗೆ ದೀಪಾವಳಿ ಹಬ್ಬ ಆಚರಿಸಿದ್ರು.

ಯೋಧರೊಂದಿಗೆ ದೀಪಾವಳಿ ಆಚರಣೆ: ಬುಧವಾರದಂದು ಮೋದಿ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿ ಯೋಧರೊಂದಿಗೆ ದೀಪಾವಳಿ ಆಚರಣೆ ಮಾಡಿದ್ರು. ಶ್ರೀನಗರದಿಂದ 200 ಕಿಮಿ ದೂರದಲ್ಲಿರೋ ಬಂಡೀಪೋರ ಜಿಲ್ಲೆಯ ಗುರೇಜ್ ಸೆಕ್ಟರ್ ಗೆ ಭೇಟಿ ನೀಡಿದ ಮೋದಿ ಅಲ್ಲಿನ ಗಡಿ ನಿಯಂತ್ರಣಾ ರೇಖೆ (ಎಲ್‍ಒಸಿ) ಪ್ರದೇಶದಲ್ಲಿ ಸಹಿ ಹಂಚಿ ದೇಶ ಕಾಯುವ ಯೋಧರಿಗೆ ದೀಪಾವಳ ಹಬ್ಬದ ಶುಭಾಶಯ ಕೋರಿದರು.

ನನಗೆ ನಿಮ್ಮೊಂದಿಗೆ ದೀಪಾವಳಿ ಆಚರಿಸಲು ಒಂದು ಒಳ್ಳೆಯ ಅವಕಾಶ ಸಿಕ್ಕಿದೆ. ಹಬ್ಬದ ರಜೆಯಲ್ಲಿರೋ ಯೋಧರೊಂದಿಗೆ ಗಡಿಯಲ್ಲಿ ದೀಪಾವಳಿ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಿದ್ದೇನೆ ಅಂತ ವಿಸಿಟರ್ಸ್ ಬುಕ್ ನಲ್ಲಿ ಮೋದಿ ಬರೆದಿದ್ದಾರೆ.

ಈ ಮೊದಲು ಅಂದರೆ 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರಧಾನಿ ಮೋದಿ ಅವರು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿ ಹಬ್ಬದ ಶುಭಾಶಯ ತಿಳಿಸಿದ್ದರು. ಇದೀಗ ಮೋದಿ ಮತ್ತೆ ಭೇಟಿ ನೀಡುವ ಮೂಲಕ ಪ್ರತೀ ವರ್ಷದಂತೆ ಈ ಬಾರಿಯೂ ಯೋಧರೊಂದಿಗೆ ದೀಪಾವಳಿ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ರು.

Share This Article
Leave a Comment

Leave a Reply

Your email address will not be published. Required fields are marked *