Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಜುರಾಯಿ ದೇವಾಲಯಗಳಲ್ಲಿ ವ್ಯವಸ್ಥಾಪನಾ ಸಮಿತಿ ರಚನೆ: ಏನಿದು ವಿವಾದ? ಸಮಿತಿಯಲ್ಲಿ ಯಾರು ಇರುತ್ತಾರೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮುಜುರಾಯಿ ದೇವಾಲಯಗಳಲ್ಲಿ ವ್ಯವಸ್ಥಾಪನಾ ಸಮಿತಿ ರಚನೆ: ಏನಿದು ವಿವಾದ? ಸಮಿತಿಯಲ್ಲಿ ಯಾರು ಇರುತ್ತಾರೆ?

Districts

ಮುಜುರಾಯಿ ದೇವಾಲಯಗಳಲ್ಲಿ ವ್ಯವಸ್ಥಾಪನಾ ಸಮಿತಿ ರಚನೆ: ಏನಿದು ವಿವಾದ? ಸಮಿತಿಯಲ್ಲಿ ಯಾರು ಇರುತ್ತಾರೆ?

Public TV
Last updated: October 24, 2017 6:20 pm
Public TV
Share
3 Min Read
cm k f
SHARE

ಕಾರವಾರ: ಮುಜರಾಯಿ ಆಡಳಿತಕ್ಕೆ ಒಳಪಟ್ಟ ದೇವಸ್ಥಾನಗಳಲ್ಲಿ ರಾಜ್ಯಸರ್ಕಾರ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲು ಮುಂದಾಗಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಉತ್ತರ ಕನ್ನಡ ಜಿಲ್ಲೆಯ ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆ ಪ್ರಕ್ರಿಯೆ ಚುರುಕು ಗೊಂಡಿದೆ. ಈ ಹಿನ್ನೆಲೆಯಲ್ಲಿ ಇದನ್ನು ವಿರೋಧಿಸಿ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ಬುಧವಾರ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ವಿವಾದ ಏನು?
ಈ ಹಿಂದೆ ಮುಜರಾಯಿ ಇಲಾಖೆಯ ಕಾಯ್ದೆಯು ಕರ್ನಾಟಕದಲ್ಲಿ ಒಂದೊಂದು ಭಾಗಕ್ಕೆ ಅದರದೇ ಆದ ಕಾಯ್ದೆಯನ್ನು ಮಾಡಲಾಗಿತ್ತು. ಇದರಂತೆ ರಾಜ್ಯದಲ್ಲಿ ಮದ್ರಾಸ್, ಕೊಡಗು, ಮೈಸೂರು, ಹೈದರಾಬಾದ್, ಮುಂಬೈ ಕರ್ನಾಟಕ ದತ್ತಿ ನಿಯಮಗಳು ಜಾರಿಯಲ್ಲಿದ್ದು. ಒಂದೊಂದು ಭಾಗಕ್ಕೆ ಅದರದೇ ಆದ ಹಕ್ಕುಗಳು ಜಾರಿಯಲ್ಲಿದ್ದ ಕಾರಣ ಹಲವು ಆಡಳಿತಾತ್ಮಕ ಸಮಸ್ಯೆಗಳು ಎದುರಾಗಿತ್ತು. ಈ ತೊಂದರೆಯನ್ನು ನೀಗಿಸಲು ಏಕರೂಪ ಶಾಸನ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡಿತ್ತು. ಇದರಂತೆ 1997 ಮತ್ತು ನಿಯಮಗಳು 20002 ಎಂಬ ಏಕರೂಪ ಮುಜರಾಯಿ ಕಾಯ್ದೆಯನ್ನು 2003ರ ಮೇ 1 ರಂದು ಜಾರಿಗೆ ತಂದಿದೆ. ಆದರೇ ಇದನ್ನು ಪ್ರಶ್ನಿಸಿ ಜಿಲ್ಲಾ ಹಿಂದೂ ಧಾರ್ಮಿಕ ದೇವಾಲಯಗಳ ಮಹಾ ಮಂಡಳಿ ಧಾರವಾಡ ಕೋರ್ಟ ನಲ್ಲಿ ದಾವೇ ಹೂಡಿ ಈ ಕಾಯ್ದೆ ರದ್ದಾಗುವಂತಾಯ್ತು. ಇನ್ನು ಅಂದಿನ ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿಗಳಾದ ರಾಮಜೋಯಿಸ್ ನೇತೃತ್ವದಲ್ಲಿ ಸಮಿತಿ ರಚಿಸಿ ಕಾಯ್ದೆಯನ್ನು ಜಾರಿಗೊಳಿಸಿತ್ತು.

ಇನ್ನು ಈ ಬಗ್ಗೆ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿ ಕಾಯ್ದೆ ರದ್ದಾಗುವಂತೆ ಜಿಲ್ಲಾ ಹಿಂದೂ ಧಾರ್ಮಿಕ ದೇವಾಲಯದ ಮಹಾಮಂಡಳಿಗಳು ಪ್ರಯತ್ನಿಸಿದ್ದವು, ಆದರೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‍ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಿ ತಡೆಯಾಜ್ಞೆ ಪಡೆದಿದೆ. ಅಲ್ಲದೇ ಕಾಯ್ದೆಯ ಕಾಲಂ 25, 29 ರ ಅಡಿಯಲ್ಲಿ ದೇವಸ್ಥಾನದ ಆಡಳಿತ ಸುಗಮವಾಗಿ ನಡೆಯಲು ಸಮಿತಿ ರಚನೆಗೆ ಅನುವು ಮಾಡಿಕೊಟ್ಟಿದೆ.

ಈ ಕಾಯ್ದೆಯನ್ನು ಸದುಪಯೋಗ ಪಡಿಸಿಕೊಂಡ ಅಂದಿನ ಬಿಜೆಪಿ ಸರ್ಕಾರ ಉಡುಪಿಯ ಕೃಷ್ಣ ದೇವಸ್ಥಾನ, ಗೋಕರ್ಣದ ಮಹಾಭಲೇಶ್ವರ ದೇವಸ್ಥಾನ ಮುಜರಾಯಿ ಇಲಾಖೆಯಿಂದ ಕೈ ತಪ್ಪುವಂತೆ ಮಾಡಿತ್ತು. ಪ್ರಸ್ತುತ ಸಿಎಂ ಸಿದ್ಧರಾಮಯ್ಯ ನವರ ಸರ್ಕಾರ ಇದೇ ನಿಟ್ಟಿನಲ್ಲಿ ಮುಂದುವರೆದಿದ್ದು ದೇವಸ್ಥಾನದ ಆಡಳಿತ ಸುಗಮವಾಗಿ ನಡೆಯಲು ಮೂರು ವರ್ಷ ಅಧಿಕಾರಾವಧಿಯ 9 ಜನರ ಸಮಿತಿ ರಚನೆಗೆ ಮುಂದಾಗಿದ್ದು ಈಗ ವಿವಾದಕ್ಕೆ ಕಾರಣವಾಗಿದೆ.

ಸಮಿತಿ ಹೇಗೆ ರಚನೆಯಾಗುತ್ತೆ..?
ವ್ಯವಸ್ಥಾಪನಾ ಸಮಿತಿ ರಚನೆಯಲ್ಲಿ ಒಂದು ಎಸ್‍ಸಿ, ಎಸ್‍ಟಿ, ಪ್ರತಿನಿಧಿ, 1 ಮಹಿಳೆ, ದೇವಸ್ಥಾನದ ಅರ್ಚಕ ಸೇರಿದಂತೆ ಅರ್ಜಿ ಸಲ್ಲಿಸಿದ ಸಾರ್ವಜನಿಕರಿಗೆ ಅವಕಾಶ ಮಾಡಿಕೊಟ್ಟಿದೆ. ಈ ಸಮಿತಿಯನ್ನು ಜಿಲ್ಲಾಧಿಕಾರಿ, ಜಿಲ್ಲಾ ಧಾರ್ಮಿಕ ನ್ಯಾಯ ಸಮಿತಿಯ ಸದಸ್ಯರೊಳಗೊಂಡ ನಿರ್ದೇಶಿತ ಸದಸ್ಯರು ನೇರ ಸಂದರ್ಶನದಲ್ಲಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಿದ್ದಾರೆ. ಈ ಸಮಿತಿಯು ದೇವಸ್ಥಾನದ ಆಡಳಿತ, ಅಭಿವೃದ್ಧಿ, ಕೆಲಸಗಾರರ ನೇಮಕ ಮುಂತಾದ ಅಧಿಕಾರವನ್ನು ಹೊಂದಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ 622 ಮುಜರಾಯಿ ದೇವಸ್ಥಾನಗಳಲ್ಲಿ 10 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ 113 ಸಿ ಮತ್ತು ಬಿ ಹಂತದ ಧಾರ್ಮಿಕ ಪರಿಷತ್ ಗೆ ಒಳಪಟ್ಟ ದೇವಸ್ಥಾನಗಳಿಗೆ 9 ಜನ ಸದಸ್ಯರಿರುವ ಸಮಿತಿಯನ್ನು ರಚಿಸುವ ಪ್ರಕ್ರಿಯೆಯಲ್ಲಿದೆ. ಇದರಲ್ಲಿ 30 ದೇವಸ್ಥಾನಗಳಿಗೆ ಸಮಿತಿ ಸದಸ್ಯತ್ವಕ್ಕಾಗಿ ಸಾರ್ವಜನಿಕರಿಂದ ಅರ್ಜಿ ಬಂದಿದ್ದು ಉಳಿದ 83 ದೇವಸ್ಥಾನಗಳಿಗೆ ಯಾರೊಬ್ಬರೂ ಅರ್ಜಿ ಸಲ್ಲಿಸಿಲ್ಲ. ಇನ್ನು ಬಿ ವರ್ಗದ 9 ದೇವಸ್ಥಾನಗಳಲ್ಲಿ 5 ದೇವಸ್ಥಾನಗಳಿಗೆ ಸಮಿತಿ ರಚಿಸಲಾಗಿದ್ದು ಉಳಿದ 4 ದೇವಸ್ಥಾನದ ಆಡಳಿತವರ್ಗ ಕೋರ್ಟ್ ಮೆಟ್ಟಿಲೇರಿದೆ.

ಪರ, ವಿರೋಧ ಯಾಕೆ..?
ದೇವಸ್ಥಾನಗಳಲ್ಲಿ ನಡೆಯುವ ಭ್ರಷ್ಟಾಚಾರ ತಡೆಯಲು ಈ ಸಮಿತಿ ರಚನೆಯಾಗಿದ್ದರೂ ಈ ಸಮಿತಿಯಲ್ಲಿ ತಮಗೆ ಬೇಕಾದವರನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಹಿಂದೂಗಳ ಧಾರ್ಮಿಕ ಹಕ್ಕಿಗೆ ತೊಂದರೆಯಾಗುತ್ತಿದ್ದು, ಸಮಿತಿ ರಚನೆಯಿಂದ ದೇವಸ್ಥಾನಕ್ಕೆ ಬರುವ ಹಣ ಕೂಡ ದುರುಪಯೋಗವಾಗಬಹುದು ಎಂಬುದು ಕೆಲವರ ವಾದವಾಗಿದೆ. ಜಿಲ್ಲೆಯ ಹಲವು ದೇವಸ್ಥಾನದಲ್ಲಿ ಈ ಹಿಂದೆ ವಂಶಪಾರಂಪರ್ಯವಾಗಿ ಆಡಳಿತ ಮಾಡುತ್ತಿದ್ದ ಕೆಲವರು ದೇವಸ್ಥಾನದ ಹಕ್ಕಿನ ಜಾಗವನ್ನೇ ಮಾರಿ ತಮ್ಮ ಸ್ವಂತಕ್ಕೆ ಬಳಸಿಕೊಂಡ ನಿದರ್ಶನಗಳಿದ್ದು ಇದನ್ನು ತಪ್ಪಿಸಲು ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಇಂತಹ ಘಟನೆಗಳು ಜರುಗಿದ್ದರಿಂದಾಗಿ ತಕ್ಷಣದಲ್ಲಿ ಸಮಿತಿ ರಚಿಸಲು ಕ್ರಮ ಕೈಗೊಂಡಿದೆ. ಶೀಘ್ರದಲ್ಲಿ ಸಮಿತಿ ರಚಿಸುತ್ತಿರುವುದರಿಂದ ಜಿಲ್ಲಾ ಹಿಂದೂ ಧಾರ್ಮಿಕ ದೇವಾಲಯದ ಮಹಾ ಮಂಡಲಿ ಬುಧವಾರ ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ಪ್ರತಿಭಟನಾ ಸಭೆ ನಡೆಸಿ ಮುಂದೆ ಕಾನೂನಿನ ಹೋರಾಟಕ್ಕೆ ಸಜ್ಜಾಗಿದೆ.

ವ್ಯವಸ್ಥಾಪನಾ ಸಮಿತಿ ರಚನೆಯಿಂದ ದೇವಾಲಯಗಳಲ್ಲಿ ರಾಜಕೀಯ ಹಸ್ತಕ್ಷೇಪ ಹೆಚ್ಚಾಗುವುದರ ಜೊತೆಗೆ ಹಿಂದು ಧಾರ್ಮಿಕ ಹಕ್ಕಿಗೆ ಚ್ಯುತಿ ಬರುತ್ತದೆ.
ಈಗಾಗಲೇ ಸುಪ್ರೀಂ ಕೋರ್ಟ ನಲ್ಲಿ ದಾವೆ ಇರುವುದರಿಂದ ಒಂದು ವೇಳೆ ಕೋರ್ಟ್ ಸರ್ಕಾರದ ಪರವಾಗಿ ಆದೇಶ ನೀಡಿದರೆ, ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಗಳು ಮುಜರಾಯಿ ಕೈ ಸೇರುವುದರಲ್ಲಿ ಅನುಮಾನವಿಲ್ಲ ಎಂಬುದು ಧಾರ್ಮಿಕ ಮುಖಂಡರ ವಾದ. ಆದರೆ ಸರ್ಕಾರ ಭ್ರಷ್ಟಾಚಾರ ರಹಿತ ಉತ್ತಮ ಆಡಳಿತ ನೀಡಲು ಈ ಸಮಿತಿ ಅಗತ್ಯವಿದೆ ಎಂದು ಹೇಳಿದೆ.

vlcsnap 2017 10 24 18h08m56s141

Gokarnatheshwara

cm k f

vlcsnap 2017 10 24 18h06m56s205

vlcsnap 2017 10 24 18h07m06s67

vlcsnap 2017 10 24 18h07m46s207

TAGGED:AdministrationkarwarMuzarai DepartmentPublic TVReligious CouncilSupreme Courttempleಆಡಳಿತಕಾರವಾರದೇವಸ್ಥಾನಧಾರ್ಮಿಕ ಪರಿಷತ್ಪಬ್ಲಿಕ್ ಟಿವಿಮುಜರಾಯಿ ಇಲಾಖೆಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
36 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
37 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
1 hour ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
1 hour ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?