2018ರ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲ್ವಂತೆ ಬಿಎಸ್‍ವೈ ಪುತ್ರ..!

Public TV
1 Min Read
BSY BSR

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಕಣಕ್ಕಿಳಿಯಲ್ವಂತೆ. ಹೀಗಂತಾ ಸ್ವತಃ ಬಿಎಸ್ ಯಡಿಯೂರಪ್ಪನವ್ರೇ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ಹೇಳಲಾಗುತ್ತದೆ.

ನನ್ನ ಮಗ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲ್ಲ. ಆದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾನೆ. ಆಗ ಬೇಕಾದ್ರೆ ನೋಡೋಣ ಅಂತ ಪಕ್ಷದ ಹೈಕಮಾಂಡ್‍ಗೂ ತಿಳಿಸಿದ್ದಾರೆ. ಈ ಮಧ್ಯೆ ತಾವು ಉತ್ತರ ಕರ್ನಾಟಕದಿಂದ ಸ್ಪರ್ಧಿಸುವ ನಿರ್ಧಾರದಿಂದಲೂ ಬಿಎಸ್‍ವೈ ಹಿಂದೆ ಸರಿದಿದ್ದು, ಶಿಕಾರಿಪುರದಿಂದಲೇ ಸ್ಪರ್ಧಿಸೋದಾಗಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಗೆ ಇಂದು ಚಾಲನೆ ಸಿಗಲಿದೆ. ಬೆಳಗ್ಗೆ ಸುಮಾರು 11 ಗಂಟೆಗೆ ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದ ಆವರಣದಲ್ಲಿ ಬೃಹತ್ ಸಮಾವೇಶವನ್ನು ಏರ್ಪಡಿಸಿದ್ದು, ಈ ಸಮಾವೇಶಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಲನೆ ನೀಡಲಿದ್ದಾರೆ.

bsy son 1

bsy son

bs raghavendra

Share This Article
Leave a Comment

Leave a Reply

Your email address will not be published. Required fields are marked *