ಪ್ರಜ್ವಲ್ ರೇವಣ್ಣಗೆ ಟಿಕೆಟ್ ಸಿಗುತ್ತೋ? ಇಲ್ವೋ?: ಎಚ್‍ಡಿಕೆ ಹೇಳಿದ್ದು ಹೀಗೆ

Public TV
1 Min Read
hdk svg

ಶಿವಮೊಗ್ಗ: ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡುವುದಿಲ್ಲ ಎಂದು ದೇವೇಗೌಡರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಪ್ರಜ್ವಲ್‍ರನ್ನು ಚುನಾವಣೆಗೆ ನಿಲ್ಲಿಸಬಾರದು ಎಂದು ನಾನು ಹೇಳಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಎಚ್‍ಡಿ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಪ್ರವೇಶ ಕುರಿತಂತೆ ಇಂದು ಪ್ರತಿಕ್ರಿಯಿಸಿದ ಅವರು, ನಮ್ಮ ಕುಟುಂಬದಲ್ಲಿಯೇ ಈ ವಿಚಾರದಲ್ಲಿ ಕಲಹವಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ. ಆದರೇ ಈ ಕುರಿತ ತೀರ್ಮಾನವನ್ನು ಎಚ್‍ಡಿ ದೇವೇಗೌಡ ಅವರು ಅಂತಿಮಗೊಳಿಸುತ್ತಾರೆ. ಈ ಬಾರಿಯ ಚುನಾವಣೆಯ ಟಿಕೆಟ್ ನೀಡುವ ವಿಚಾರವಾದಲ್ಲಿ ಯಾವುದೇ ಟೀಕೆಗಳಿಗೂ ಅವಕಾಶ ನೀಡದೇ ಎಚ್ಚರಿಕೆಯಿಂದ ಆಯ್ಕೆ ಮಾಡುತ್ತೇವೆ ಎಂದು ಹೇಳಿದರು.

hdk 3

ಪ್ರತಿ ಕ್ಷೇತ್ರದಲ್ಲಿಯು 4 ರಿಂದ 5 ಜನ ಟಿಕೆಟ್ ಅಕಾಂಕ್ಷಿಗಳು ಇರುವುದರಿಂದ ಒಬ್ಬರಿಗಷ್ಟೇ ಟಿಕೆಟ್ ನೀಡಲು ಸಾಧ್ಯ. ಈ ಕುರಿತು ನವೆಂಬರ್ 16 ರ ನಂತರ ಕೋರ್ ಕಮಿಟಿ ಸಭೆ ನಡೆಸಿ ಪಕ್ಷದ 150 ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಬಿಡುಗಡೆಗೊಳಿಸುತ್ತೇವೆ. ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಗೆ ಚುನಾವಣಾ ಕಾರ್ಯಗಳಲ್ಲಿ ತೊಡಗಿಕೊಳ್ಳುವಂತೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.

prajwal revanna 1

ಈ ಹಿಂದೆ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿ, ತನ್ನ ಮಗ ಪ್ರಜ್ವಲ್ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುವುದು ಇನ್ನೂ ಖಚಿತವಾಗಿಲ್ಲ. ದೇವೇಗೌಡರಿಂದ ಗ್ರೀನ್ ಸಿಗ್ನಲ್ ಸಿಗಬೇಕಾಗಿದೆ ಎಂದು ಹೇಳಿದ್ದರು.

ಭವಾನಿ ರೇವಣ್ಣ ಅವರ ಹೇಳಿಕೆ ಬೆನ್ನಲ್ಲೇ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ ದೇವೇಗೌಡ ಅವರು ರೇವಣ್ಣನ ಪುತ್ರ ಪ್ರಜ್ವಲ್ ಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅನುವತಿ ನೀಡಿಲ್ಲ. ನಮ್ಮ ಕುಟುಂಬದಿಂದ ರೇವಣ್ಣ ಮತ್ತು ಕುಮಾರಸ್ವಾಮಿ ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಹೇಳಿದ್ದರು.

HDK MSR 10

hdk svg5

hdk svg4

hdk svg3

hdk svg2

hdk svg1

 

hdk svg6

Share This Article
Leave a Comment

Leave a Reply

Your email address will not be published. Required fields are marked *