Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
BELAKU

ಬದುಕಿಗಾಗಿ ಹರಸಾಹಸ ಪಡುತ್ತಿರೋ ಸಾವಿರಾರು ಮಂದಿ ವೃದ್ಧರಿಗೆ ಬೇಕಿದೆ ಪಿಂಚಣಿ ಹಣ

Public TV
Last updated: December 31, 2017 11:30 am
Public TV
Share
3 Min Read
CKB Belaku 1
SHARE

ಚಿಕ್ಕಬಳ್ಳಾಪುರ: ಸಾಮಾಜಿಕ ಭದ್ರತೆ ಹಿತದೃಷ್ಟಿಯಿಂದ ಸರ್ಕಾರ, ಆರ್ಥಿಕವಾಗಿ ಸಬರಲ್ಲದ, ದುರ್ಬಲ ವರ್ಗದ ವಯೋವೃದ್ಧರು, ವಿಕಲಚೇತನರು, ವಿಧವೆಯರು ಸೇರಿದಂತೆ ಅಸಹಾಯಕರಿಗೆ ಪ್ರತಿ ತಿಂಗಳು ಇಂತಿಷ್ಟು ಪಿಂಚಣಿ ಅಂತ ಹಣ ನೀಡಿ ಹಲವರ ಬದುಕಿಗೆ ಅಸರೆಯಾಗುತ್ತಿದೆ. ಆದ್ರೆ ಪ್ರತಿ ತಿಂಗಳು ಪಿಂಚಣಿ ಹಣ ಪಡೆದು ನೆಮ್ಮದಿಯ ನಿಟ್ಟುಸಿರು ಬಿಟ್ಟು ಬದುಕು ಸವೆಸುತ್ತಿದ್ದ ಸಾವಿರಾರು ಮಂದಿಯ ಬಾಳಿಗೆ ಆಧಾರ್ ಕಾರ್ಡ್ ಸಮಸ್ಯೆ ಈಗ ಅವರ ಬದುಕಿಗೇ ಆಧಾರವಾಗಿದ್ದಂತಹ ಪಿಂಚಣಿ ಹಣವೇ ಸಿಗದಂತೆ ಮಾಡಿ ಆಧಾರವೇ ಇಲ್ಲದಂತೆ ಮಾಡಿಬಿಟ್ಟಿದೆ.

ಹೌದು. ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಾಂತ ಸರಿಸುಮಾರು 40,000 ಮಂದಿ ವೃದ್ಧಾಪ್ಯವೇತನ, ವಿಕಲಚೇತನರ ಪಿಂಚಣಿ, ವಿಧವಾವೇತನ ಸೇರಿದಂತೆ ಹಲವು ಪಿಂಚಣಿ ಯೋಜನೆಯ ಫಲಾನುಭವಿಗಳಿದ್ದಾರೆ. ಆದ್ರೆ ಪಿಂಚಣಿ ಯೋಜನೆಗೆ ಆರ್ಹರಾಗಿರುವ ಫಲಾನುಭವಿಗಳು ತಮ್ಮ ಪಿಂಚಣಿ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕೆಂಬ ಕಾನೂನು ಬಂದಿರುವುದರಿಂದ ಇದೀಗ ಹಲವರ ಬಾಳಿಗೆ ಮುಳ್ಳಾಗಿ ಪರಿಣಮಿಸಿದೆ. ಅರಳುಮರುಳು ವಯಸ್ಸಲ್ಲಿ ಜೀವನಕ್ಕೆ ಆಧಾರವಾಗಿದ್ದ ಪಿಂಚಣಿ ಯೋಜನೆಯಿಂದಲೇ ವಂಚಿತರಾಗುವಂತೆ ಮಾಡಿದೆ.

CKB Belaku 2

ಚಿಕ್ಕಬಳ್ಳಾಪುರ ತಾಲೂಕೊಂದರಲ್ಲೇ 2,538 ಮಂದಿ ಫಲಾನುಭವಿಗಳು ಸೇರಿದಂತೆ ಜಿಲ್ಲೆಯ ಶಿಡ್ಲಘಟ್ಟ, ಚಿಂತಾಮಣಿ, ಬಾಗೇಪಲ್ಲಿ, ಗೌರಿಬಿದನೂರು ಹಾಗೂ ಗುಡಿಬಂಡೆ ತಾಲೂಕಿನಾದ್ಯಾಂತ ಕಳೆದ 3-4 ತಿಂಗಳನಿಂದ ಬರೋಬ್ಬರಿ 10,000ಕ್ಕೂ ಹೆಚ್ಚು ಮಂದಿ ವಿವಿಧ ಪಿಂಚಣಿ ಯೋಜನೆಗಳಿಂದ ಧಿಡೀರ್ ವಂಚಿತರಾಗಿದ್ದಾರೆ. ಇದ್ರಿಂದ ವಯೋವೃದ್ಧರು, ಕಣ್ಣು ಕಾಣದವರು, ಕಿವಿ ಕೇಳದವರು, ವಿಕಲಚೇತನರು, ಕನಿಷ್ಠ ನಡೆಯಲು ಆಗದವರು, ತೆವಳಿಕೊಂಡು ಬದುಕುತ್ತಿರುವ ಬಡ ಜೀವಗಳು, ಪಿಂಚಣಿ ಹಣ ಸಿಗದೆ ಕಣ್ಣಿರು ಹಾಕುತ್ತಾ ಪಡಬಾರದ ಕಷ್ಟ ಪಡುತ್ತಿದ್ದಾರೆ.

ಪಿಂಚಣಿ ಯೋಜನೆಯಿಂದ ವಂಚಿತರಾದ ಫಲಾನುಭವಿಗಳು ತಮ್ಮ ಪಿಂಚಣಿ ಹಣ ಬರ್ತಿಲ್ಲ ಅಂತ ಪ್ರತಿ ದಿನ ನಾಡಕಚೇರಿ, ತಾಲೂಕು ಕಚೇರಿ, ಅಂಚೆಕಚೇರಿ, ಜಿಲ್ಲಾಡಳಿತ ಭವನದ ಖಜಾನೆ ಇಲಾಖೆಯ ಪಿಂಚಣಿ ಶಾಖೆಗೆ ಅಲೆದು ಅಲೆದು ಸುಸ್ತಾಗಿ ಹೋಗಿದ್ದಾರೆ. ಅಲ್ಲದೇ ಹಳ್ಳಿಗಳಿಂದ ದೂರದ ತಾಲೂಕು ಕೇಂದ್ರ ಹಾಗೂ ಜಿಲ್ಲಾ ಕೇಂದ್ರದ ಕಚೇರಿ, ಅಧಿಕಾರಿಗಳ ಬಳಿ ಅಲೆದೂ ಅಲೆದೂ ತಮ್ಮ ಚಪ್ಪಲಿ ಸವೆಸುಕೊಂಡಿದ್ದಾರೆ ಹೊರೆತು ಪಿಂಚಣಿ ಹಣ ಮಾತ್ರ ಸಿಗ್ತಾ ಇಲ್ಲ. ಕನಿಷ್ಠ ಹಳ್ಳಿಗಳಿಂದ ಕಚೇರಿಗಳಿಗೆ ಬಂದು ಹೋಗೋಕೆ ಬಸ್ ಚಾರ್ಜ್ ಗೂ ಇವರ ಬಳಿ ಹಣ ಇಲ್ಲದ ಶೋಚನೀಯ ಸ್ಥಿತಿ.

CKB Belaku 3

ಅರಳು ಮರಳು ವಯಸ್ಸಲ್ಲಿ ಅನಾರೋಗ್ಯಪೀಡಿತರಾಗಿರೋ ಹಲವು ಮಂದಿ ವಯೋವೃದ್ಧರಿಗೆ ಪಿಂಚಣಿ ಹಣವೇ ಮಾತ್ರೆ-ಔಷಧಿಗಳ ಖರೀದಿಗೆ ಆಧಾರವಾದ್ರೇ, ಇನ್ನು ನಡೆಯಲಾಗದ ವಿಕಲಚೇತನರಿಗೆ ಊರಿಗೋಲಿನಂತೆ ಆಸರೆಯಾಗೋದು ಪಿಂಚಣಿ ಹಣವೇ. ಆದ್ರೆ ಅದೆಷ್ಟೋ ಮಂದಿಗೆ ಈಗ ಪಿಂಚಣಿ ಹಣವೇ ಸಿಗದೆ ಒಪ್ಪತ್ತೂ ಊಟ ಮಾಡಿ ಬದುಕುತ್ತಿದ್ದಾರೆ. ಹಲವು ಮಂದಿ ವಯೋವೃದ್ಧರು ಬರುತ್ತಿದ್ದ ಪಿಂಚಣಿ ಬಾರದೆ ಭಿಕ್ಷೆ ಬೇಡೋಕೆ ಮುಂದಾಗಿಬಿಟ್ಟಿದ್ದಾರೆ ಅನ್ನೋದೆ ದುರಂತ. ಇಂತಹ ಹತ್ತು ಹಲವು ನಿದರ್ಶನಗಳು ಪ್ರತಿನಿತ್ಯ ಕಣ್ಣು ಮುಂದೆ ನಮ್ಮನ್ನೇ ಕಾಡಿ ಕದಡಿ ಮನಕಲುಕತ್ತಿವೆ.

ಈ ಸಂಬಂಧ ಅಧಿಕಾರಿಗಳು ಮಾತ್ರ ಆಧಾರ್ ಸಮಸ್ಯೆ ಅಲ್ಲ ಬದಲಾಗಿ ಪಿಂಚಣಿ ಯೋಜನೆಯಿಂದ ರದ್ದಾದ ಫಲಾನುಭವಿಗಳು ಮರಣ ಹಾಗೂ ವಲಸೆ ಹೋಗಿದ್ದಾರೆ ಅಂತ ವರದಿ ಕೊಡುತ್ತಿದ್ದಾರೆ. ಆದ್ರೆ ಅಸಲಿಯತ್ತೇ ಬೇರೆ ಇದ್ದು, ಆಧಿಕಾರಿಗಳು ಸಮರ್ಪಕ ಪರಿಶೀಲನೆ ನಡೆಸದೆ ಕಾಟಚಾರದ ಕೆಲಸ ಮಾಡಿದ್ದು ಹಾಗೂ ತಾಂತ್ರಿಕ ಕಾರಣಗಳಿಂದ ಪಿಂಚಣಿ ಯೋಜನೆ ರದ್ದಾಗಿರೋದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇಲ್ಲಿನ ಪ್ರಮುಖ ಮತ್ತೊಂದು ಸಮಸ್ಯೆ ಅಂದರೆ ಯಾರೇ ಫಲಾನುಭವಿ ಕಾರಣಾಂತರಗಳಿಂದ ಒಮ್ಮೆ ಪಿಂಚಣಿ ಯೋಜನೆಯಿಂದ ರದ್ದಾದ್ರೇ ಮತ್ತೆ ಹತ್ತು ಹಲವು ಕಚೇರಿಗಳನ್ನ ಅಲೆದು ಮೊದಲಿನಿಂದ ಪಿಂಚಣಿ ಯೋಜನೆಗೆ ಅರ್ಜಿ ಸಲ್ಲಿಸಿಬೇಕಿದೆ. ಆದ್ರೆ ಅರಳು ಮರಳು ವಯಸ್ಸಲ್ಲಿ, ಕನಿಷ್ಠೂ ನಡೆಯಲೂ ಆಗದ ವೃದ್ದರ ಕೈಯಲ್ಲಿ ಇದೆಲ್ಲಾ ಮಾಡೋಕೆ ಸಾಧ್ಯಾನಾ..? ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಹಲವರ ಬಾಳಿಗೆ ಆಧಾರವಾಗಿದ್ದ ಪಿಂಚಣಿ ಯೋಜನೆ ಸೌಲಭ್ಯ ಮರಳಿ ಕಲ್ಪಿಸುವ ಮೂಲಕ ಪಬ್ಲಿಕ್ ಟಿವಿ ಬೆಳಕು ಕಾರ್ಯಕ್ರಮದ ಮೂಲಕ ಸಾವಿರಾರು ಮಂದಿಯ ಬಾಳಿಗೆ ಬೆಳಕು ನೀಡಬೇಕಿದೆ. ಒಟ್ಟಿನಲ್ಲಿ ಕೊನೆಗಾಲದ ಅವರ ಬದುಕಿನಲ್ಲಿ ನಗು ಮೂಡಿಸುವ ಕೆಲಸ ಮಾಡಬೇಕಿದೆ.

https://www.youtube.com/watch?v=L11yw0lYqqM

CKB Belaku 4

CKB Belaku 5

TAGGED:belakuchikkaballapurpensionsPublic TVಚಿಕ್ಕಬಳ್ಳಾಪುರಪಬ್ಲಿಕ್ ಟಿವಿಪಿಂಚಣಿಬೆಳಕು
Share This Article
Facebook Whatsapp Whatsapp Telegram

You Might Also Like

Crime
Bengaluru City

ಮಗುವಿಗೆ ಜನ್ಮ ನೀಡಿ ರಕ್ತಸ್ರಾವದಿಂದ ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿ ಸಾವು

Public TV
By Public TV
2 hours ago
kannadigas israel and iran return
Bengaluru City

ಇಸ್ರೇಲ್-ಇರಾನ್ ಸಂಘರ್ಷ; 18 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

Public TV
By Public TV
3 hours ago
Amit Shah in Benagluru
Bengaluru City

ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ – ತಡರಾತ್ರಿ ರೆಬೆಲ್ ನಾಯಕ ಸಭೆ

Public TV
By Public TV
3 hours ago
Chess Divya Deshmukh
Latest

ಚೆಸ್ | ದಿವ್ಯಾ ದೇಶಮುಖ್ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

Public TV
By Public TV
4 hours ago
TIGER
Chamarajanagar

ಹುಲಿ ದಾಳಿಗೆ ಕುರಿಗಾಹಿ ಮಹಿಳೆ ಬಲಿ- 9 ದಿನಕ್ಕೆ ಜಿಲ್ಲೆಯಲ್ಲಿ 2ನೇ ಸಾವು

Public TV
By Public TV
4 hours ago
Ramagara Murder
Court

ವರದಕ್ಷಿಣೆ ಕಿರುಕುಳದಿಂದ ಪತ್ನಿ ಸಾವು ಪ್ರಕರಣ – ಪತಿಗೆ ಜೀವಾವಧಿ ಶಿಕ್ಷೆ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?