ಅಂದು ಕಲ್ಲಡ್ಕ ಶಾಲೆ ಮಕ್ಕಳಿಗೆ ಬಿಸಿಯೂಟ ಕಟ್- ಈಗ ಕಾಂಗ್ರೆಸ್ ಸಮಾವೇಶಕ್ಕೆ ಕೊಲ್ಲೂರು ದೇಗುಲದ ಆಹಾರ, ಜನರ ಆಕ್ರೋಶ

Public TV
1 Min Read
udp 1

ಉಡುಪಿ: ರಾಜ್ಯ ಸರ್ಕಾರ ಮತ್ತೊಮ್ಮೆ ಪೇಚಿಗೆ ಸಿಲುಕಿದೆ. ಅಂದು ಶ್ರೀರಾಮ ಶಾಲೆಯ ಮಕ್ಕಳಿಂದ ಊಟ ಕಿತ್ತುಕೊಂಡವರು ಕಾಂಗ್ರೆಸ್ಸಿಗರಿಗೆ ಊಟ ಹಾಕುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

UDP KOLLURU FOOD

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರಲ್ಲಿ ಕಾಂಗ್ರೆಸ್ ಸಾಧನ ಸಮಾವೇಶ ನಡೆಯುತ್ತಿದೆ. ರಾಜ್ಯ ಸರ್ಕಾರದ ಸಮಾವೇಶಕ್ಕೆ ಕೊಲ್ಲೂರಿಂದ ಊಟದ ವ್ಯವಸ್ಥೆ ಮಾಡಲಾಗಿದೆ. ಟೆಂಪೋ- ಲಾರಿಗಳಲ್ಲಿ ಊಟ ಸಾಗಾಟ ಮಾಡುವ ದೃಶ್ಯ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕೆಎಸ್‍ಆರ್‍ಟಿಸಿ ಅಧ್ಯಕ್ಷ ಗೋಪಾಲ ಪೂಜಾರಿ ಕ್ಷೇತ್ರ ಬೈಂದೂರಲ್ಲಿ ನಡೆಯಲಿರುವ ಸಮಾವೇಶದಲ್ಲಿ ಜನರಿಗೆ ಈ ಊಟದ ವ್ಯವಸ್ಥೆ ಮಾಡಲಾಗಿದೆ.

udp kolluru food 2

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಸುಮಾರು 15 ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ಒಂದು ರೂಪಾಯಿಯೂ ನೀಡಿಲ್ಲ. ಕಳೆದ ರಾತ್ರಿಯಿಂದ ಅಡುಗೆ ಕಾರ್ಯ ನಡೆದಿದೆ. ಅಕ್ಕಿ, ಬೇಳೆ, ತರಕಾರಿಗೆ ದೇವಸ್ಥಾನದ ದಿನಸಿ ಬಳಸಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

UDP KOLLURU FOOD AV 9

ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಶುರುವಾಗಿದೆ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಶ್ರೀರಾಮಶಾಲೆಯ ಮಕ್ಕಳಿಂದ ಊಟ ಕಿತ್ತುಕೊಂಡಿದ್ದ ಸರ್ಕಾರ, ಈಗ ಕಾಂಗ್ರೆಸ್ ಕಾರ್ಯಕರ್ತರಿಗೇಕೆ ಊಟ ಕೊಡ್ತೀರಿ? ಎಂದು ಜನ ಪ್ರಶ್ನೆ ಮಾಡಿದ್ದಾರೆ. ವಾಟ್ಸಪ್- ಫೇಸ್ ಬುಕ್ ನಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

mng protest 3

ಇದನ್ನೂ ಓದಿ:  ಊಟ ಕಿತ್ಕೊಂಡ ಸರ್ಕಾರಕ್ಕೆ ಸೆಡ್ಡು – ತಾವೇ ಭತ್ತ ಬೆಳೆದ ಕಲ್ಲಡ್ಕ ಶಾಲೆ ಮಕ್ಕಳು

https://www.youtube.com/watch?v=vZeRdh2Q-kE

UDP KOLLURU FOOD AV 13

UDP KOLLURU FOOD AV 12

 

UDP KOLLURU FOOD AV 11

UDP KOLLURU FOOD AV 15

UDP KOLLURU FOOD AV 16

UDP KOLLURU FOOD 3

UDP KOLLURU FOOD 2

UDP KOLLURU FOOD AV 18

UDP KOLLURU FOOD AV 17

UDP KOLLURU FOOD 1

UDP KOLLURU FOOD AV 7

UDP KOLLURU FOOD AV 5

UDP KOLLURU FOOD

Share This Article
Leave a Comment

Leave a Reply

Your email address will not be published. Required fields are marked *