Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದರಸಾಗಳಿಂದ ಎಂಜಿನಿಯರ್, ಡಾಕ್ಟರ್ ತಯಾರಾಗ್ತಿಲ್ಲ, ಭಯೋತ್ಪಾದಕರ ಉತ್ಪಾದನೆ ಆಗ್ತಿದೆ: ಶಿಯಾ ವಕ್ಫ್ ಬೋರ್ಡ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮದರಸಾಗಳಿಂದ ಎಂಜಿನಿಯರ್, ಡಾಕ್ಟರ್ ತಯಾರಾಗ್ತಿಲ್ಲ, ಭಯೋತ್ಪಾದಕರ ಉತ್ಪಾದನೆ ಆಗ್ತಿದೆ: ಶಿಯಾ ವಕ್ಫ್ ಬೋರ್ಡ್

Latest

ಮದರಸಾಗಳಿಂದ ಎಂಜಿನಿಯರ್, ಡಾಕ್ಟರ್ ತಯಾರಾಗ್ತಿಲ್ಲ, ಭಯೋತ್ಪಾದಕರ ಉತ್ಪಾದನೆ ಆಗ್ತಿದೆ: ಶಿಯಾ ವಕ್ಫ್ ಬೋರ್ಡ್

Public TV
Last updated: January 9, 2018 7:43 pm
Public TV
Share
2 Min Read
madrassa
SHARE

ನವದೆಹಲಿ: ದೇಶದಲ್ಲಿರುವ ಮದರಸಾಗಳಿಂದ ಎಂಜಿನಿಯರ್ ಹಾಗೂ ಡಾಕ್ಟರ್ ಗಳು ತಯಾರಾಗುತ್ತಿಲ್ಲ. ಬದಲಾಗಿ ಭಯೋತ್ಪಾದಕರ ಉತ್ಪಾದನೆ ಕೇಂದ್ರವಾಗುತ್ತಿದೆ ಎಂದು ಶಿಯಾ ವಕ್ಫ್ ಬೋರ್ಡ್ ಹೇಳಿರುವುದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಶಿಯಾ ಕೇಂದ್ರ ವಕ್ಫ್ ಬೋರ್ಡ್ ಮುಖ್ಯಸ್ಥ ವಾಸೀಂ ರಿಜ್ವಿ ಈ ವಿಚಾರವಾಗಿ ಪತ್ರ ಬರೆದಿದ್ದು, ಎಲ್ಲ ಮದರಸಾಗಳನ್ನು ಶಿಕ್ಷಣ ಇಲಾಖೆಯ ಅಡಿಯಲ್ಲಿ ತರುವಂತೆ ಮನವಿ ಮಾಡಿದ್ದಾರೆ.

ani tweet madrasa 2

ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ವಾಸೀಂ ರಿಜ್ವಿ, ದೇಶದಲ್ಲಿರುವ ಎಷ್ಟು ಮದರಸಾಗಳು ಎಂಜಿನಿಯರ್, ಡಾಕ್ಟರ್, ಐಎಎಸ್ ಅಧಿಕಾರಗಳನ್ನು ತಯಾರಿಸಿವೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಕೆಲ ಮದರಸಾಗಳು ಭಯೋತ್ಪಾದಕರನ್ನು ಮಾತ್ರ ಉತ್ಪಾದಿಸುತ್ತಿವೆ ಎಂದು ಆರೋಪಿಸಿದ್ದಾರೆ. ತಮ್ಮ ಪತ್ರದಲ್ಲಿ ಅವರು ಮದರಸಾಗಳು ಸಿಬಿಎಸ್‍ಸಿ, ಐಸಿಎಸ್‍ಸಿ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಬೇಕು. ಮುಸ್ಲಿಂಯೇತರ ವಿದಾರ್ಥಿಗಳಿಗೆ ಧಾರ್ಮಿಕ ಶಿಕ್ಷಣವನ್ನು ಐಚ್ಛಿಕ ವಿಷಯವನ್ನಾಗಿ ಓದಲು ಅವಕಾಶ ಕಲ್ಪಿಸಿಕೊಡಬೇಕು ಎಂದು ತಿಳಿಸಿದ್ದಾರೆ.

ಮುಂದೆ ದೇಶವನ್ನು ಸದೃಢಗೊಳಿಸಲು ನಾನು ಈ ವಿಚಾರದ ಬಗ್ಗೆ ಪ್ರಧಾನಿ ಮೋದಿ ಮತ್ತು ಯೋಗಿಗೆ ಪತ್ರ ಬರೆದಿದ್ದೇನೆ ಎಂದು ರಿಜ್ವಿ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಈ ಪತ್ರದಲ್ಲಿ ಭಯೋತ್ಪದಕರನ್ನು ತಯಾರಿಸುತ್ತಿರುವ ಕೆಲವು ಮದರಸಾಗಳ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ani tweet madrasa 1

ವಾಸೀಂ ರಿಜ್ವಿ ಅವರ ಈ ಪತ್ರ ಹಲವು ಮುಸ್ಲಿಂ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಆಲ್ ಇಂಡಿಯಾ ಮಜ್ಲಿಸ್-ಇ-ಇಥೇಹಾದುಲ್ ಮುಸಲ್ಮಿನ್(ಎಐಎಂಐಎಂ) ಸಂಘಟನೆ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ರಿಜ್ವಿ ಅವರನ್ನು ಅವಕಾಶವಾದಿ ಹಾಗೂ ಮೂರ್ಖ ವ್ಯಕ್ತಿ ಎಂದು ಟೀಕಿಸಿದ್ದಾರೆ. ಅವಕಾಶವಾದಿಯಾಗಿರುವ ರಿಜ್ವಿ ತನ್ನನ್ನು ಆರ್ ಎಸ್‍ಎಸ್ ಗೆ ಮಾರಾಟ ಮಾಡಿಕೊಂಡಿದ್ದಾರೆ. ಒಂದು ವೇಳೆ ರಿಜ್ವಿ ಬಳಿ ಸಾಕ್ಷ್ಯವಿದ್ದರೆ ಅದನ್ನು ಗೃಹ ಇಲಾಖೆ ನೀಡಲಿ. ಅದನ್ನು ಬಿಟ್ಟು ಈ ರೀತಿ ಮೂರ್ಖ ಹೇಳಿಕೆ ನೀಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಉತ್ತರಾಖಂಡ ಸರ್ಕಾರ ಪ್ರಧಾನಿ ಮೋದಿ ಅವರ ಭಾವಚಿತ್ರವನ್ನು ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಹಾಕುವಂತೆ ಆದೇಶ ನೀಡಿತ್ತು. ಆದರೆ ಸರ್ಕಾರದ ಆದೇಶ ಷರಿಯಾ ಕಾನೂನಿಗೆ ವಿರುದ್ಧ ಎಂದು ಮುಸ್ಲಿಂ ಸಂಸ್ಥೆಗಳನ್ನು ವಿರೋಧಿಸಿತ್ತು. ಅಷ್ಟೇ ಅಲ್ಲದೇ ಯಾವುದೇ ಸರ್ಕಾರವು ಈ ರೀತಿಯ ಆದೇಶವನ್ನು ನೀಡಿಲ್ಲ ಎಂದು ಹೇಳಿತ್ತು.

ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರು ಮೋದಿ ದೇಶದ ಪ್ರಧಾನಿಯಾಗಿದ್ದಾರೆ. ನಮ್ಮ ಪುಸ್ತಕಗಳಲ್ಲಿಯೂ ಮಹಾನ್ ವ್ಯಕ್ತಿಗಳ ಭಾವಚಿತ್ರಗಳನ್ನು ಅಳವಡಿಸಿಕೊಳ್ಳುವುದು ಮುಖ್ಯ. ಅದ್ದರಿಂದ ಸರ್ಕಾರ ಆದೇಶಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯೇ ಎಂದು ಪ್ರಶ್ನಿಸಿ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು.

ani tweet madrasa 3

TAGGED:letterMuslim MadrasaNew Delhiprime minister modiPublic TVShia Wakf BoardYogi Adityanathನವದೆಹಲಿಪತ್ರಪಬ್ಲಿಕ್ ಟಿವಿಪ್ರಧಾನಿ ಮೋದಿಮುಸ್ಲಿಂ ಮದರಸಾಯೋಗಿ ಆದಿತ್ಯನಾಥಶಿಯಾ ವಕ್ಪ್ ಬೋರ್ಡ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
29 minutes ago
m.b.patil
Bengaluru City

ಬಳ್ಳಾರಿಯಲ್ಲಿ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಿಎಂ ಜೊತೆ ಚರ್ಚೆ: ಎಂ.ಬಿ.ಪಾಟೀಲ್

Public TV
By Public TV
1 hour ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
1 hour ago
Indira Canteen 1
Bengaluru City

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Public TV
By Public TV
1 hour ago
Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
2 hours ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?