ಬಿಬಿಎಂಪಿ ಕಾಂಗ್ರೆಸ್ ಪಾಲಿಕೆ ಸದಸ್ಯೆ ತಿರುಪತಿಯಲ್ಲಿ ನಿಧನ

Public TV
0 Min Read
BBMP

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸದಸ್ಯೆಯೊಬ್ಬರು ಹೃದಯಾಘಾತವಾಗಿ ನಿಧನರಾಗಿದ್ದಾರೆ.

ವಾರ್ಡ್ 121 ಬಿನ್ನಿಪೇಟೆಯ ಮಹದೇವಮ್ಮ ನಾಗರಾಜ್ ಮೃತಪಟ್ಟ ಸದಸ್ಯೆಯಾಗಿದ್ದು, ಇವರು ಕುಟುಂಬ ಸಮೇತ ಪ್ರಸಿದ್ಧ ಕ್ಷೇತ್ರ ತಿರುಪತಿಗೆ ಹೋಗಿದ್ದರು. ಇಂದು ಮುಂಜಾನೆ ದರ್ಶನ ಮುಗಿಸಿ ಹಿಂದಿರುಗುವಾಗ ಮಾರ್ಗ ಮಧ್ಯದಲ್ಲಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.

WhatsApp Image 2018 01 23 at 9.05.54 AM

ಮಹದೇವಮ್ಮ ಅವರ ಮೃತದೇಹವನ್ನು ತಿರುಪತಿಯಿಂದ ಬೆಂಗಳೂರಿಗೆ ರವಾನಿಸಲಾಗಿದೆ. ಬಿಬಿಎಂಪಿ ಮೇಯರ್, ಆಯುಕ್ತರು, ಪಾಲಿಕೆ ಸದಸ್ಯರು ಮಹದೇವಮ್ಮ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

download 2

 

Share This Article
Leave a Comment

Leave a Reply

Your email address will not be published. Required fields are marked *