Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭಿಯಾನಕ್ಕೆ ಸಿಕ್ತು ಜಯ: ಕನ್ನಡದಲ್ಲೂ ಸಿಗುತ್ತೆ ರೈಲ್ವೇ ಟಿಕೆಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಭಿಯಾನಕ್ಕೆ ಸಿಕ್ತು ಜಯ: ಕನ್ನಡದಲ್ಲೂ ಸಿಗುತ್ತೆ ರೈಲ್ವೇ ಟಿಕೆಟ್

Bengaluru City

ಅಭಿಯಾನಕ್ಕೆ ಸಿಕ್ತು ಜಯ: ಕನ್ನಡದಲ್ಲೂ ಸಿಗುತ್ತೆ ರೈಲ್ವೇ ಟಿಕೆಟ್

Public TV
Last updated: March 1, 2018 1:28 pm
Public TV
Share
3 Min Read
indian railwy kannada ticket
SHARE

ಬೆಂಗಳೂರು: ಇನ್ನು ಮುಂದೆ ಕರ್ನಾಟಕದಲ್ಲಿ ಕನ್ನಡ ಭಾಷೆಯಲ್ಲಿ ಮುದ್ರಣಗೊಂಡಿರುವ  ಟಿಕೆಟ್ ರೈಲು ಪ್ರಯಾಣಿಕರಿಗೆ ಸಿಗಲಿದೆ.

ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಫೇಸ್‍ಬುಕ್, ಟ್ವಿಟ್ಟರ್ ನಲ್ಲಿ ಕನ್ನಡದಲ್ಲಿ ಮುದ್ರಣಗೊಂಡಿರುವ ಟಿಕೆಟ್ ಫೋಟೋ ಪ್ರಕಟಿಸಿ ಈ ವಿಚಾರವನ್ನು ತಿಳಿಸಿದ್ದಾರೆ. ಹೀಗಾಗಿ ಇನ್ನು ಮುಂದೆ ಇಂಗ್ಲಿಷ್, ಹಿಂದಿ ಅಲ್ಲದೇ ದಕ್ಷಿಣ ಭಾರತದಲ್ಲಿ ಆಯಾ ರಾಜ್ಯಗಳ ಭಾಷೆಯಲ್ಲಿ ಮುದ್ರಣಗೊಂಡಿರುವ ಟಿಕೆಟ್ ಸಿಗಲಿದೆ.

ಈ ವಿಚಾರದ ಬಗ್ಗೆ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ಕರ್ನಾಟಕದ ಎಲ್ಲ ಕೌಂಟರ್ ಗಳಲ್ಲಿ ಕನ್ನಡ ಭಾಷೆಯಲ್ಲಿ ಮುದ್ರಣಗೊಂಡಿರುವ ಟಿಕೆಟ್ ಸಿಗಲಿದೆ. ಆದರೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ ಮಾಡಿದವರಿಗೆ ಈ ಟಿಕೆಟ್ ಸಿಗುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಮೂಲಕ ಹಿಂದಿ ಹೇರಿಕೆ ವಿರುದ್ಧ ನಡೆಸಲಾಗಿದ್ದ ಅಭಿಯಾನಕ್ಕೆ ಜಯ ಸಿಕ್ಕಂತಾಗಿದೆ. ರೈಲ್ವೆ ಟಿಕೆಟ್‍ಗಳಲ್ಲಿ ಕನ್ನಡ ಇರಲಿದೆ ಎಂಬುದನ್ನು ಕೇಳಲು ಖುಷಿಯ ವಿಚಾರ ಎಂದು ಹಿಂದಿ ಹೇರಿಕೆಯನ್ನು ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದ ಕನ್ನಡರಿಗರು ಫೇಸ್‍ಬುಕ್ ಮತ್ತು ಟ್ವಿಟ್ಟರ್ ನಲ್ಲಿ ಸಂತಸವನ್ನು ಹಂಚಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಗೋವಾದಿಂದ ಮುಂಬೈಗೆ ಮರಳಿದ ತೇಜಸ್ ರೈಲಿನ ಸ್ಥಿತಿ ನೋಡಿ ಅಧಿಕಾರಿಗಳಿಗೆ ಶಾಕ್!

Govt introduces Automatic Ticket Vending Machines at railway stations in Karnataka to reduce congestion at ticket counters. For convenience of commuters, tickets will also have info. in Kannada.
Passengers can book tickets through UTS Mobile Ticketing app:https://t.co/JoqSCEgwbj pic.twitter.com/HJoAC0LjSi

— Piyush Goyal (@PiyushGoyal) February 28, 2018

ಕನ್ನಡ ಬಂದಿದ್ದು ಹೇಗೆ?
ದಕ್ಷಿಣ ಭಾರತದ ಜನರಿಗೆ ಆಯಾ ರಾಜ್ಯ ಭಾಷೆಯಲ್ಲಿ ರೈಲು ಟಿಕೆಟ್ ನೀಡಬೇಕೆಂದು ಜನ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದರು. ಈ ಅಭಿಯಾನಕ್ಕೆ ರೈಲ್ವೇ ಸಚಿವಾಲಯ 2017ರ ಜೂನ್ ನಲ್ಲಿ ಸಮ್ಮತಿ ಸೂಚಿಸಿತ್ತು. 2018ರಲ್ಲಿ ರೈಲ್ವೆ ಟಿಕೆಟ್‍ಗಳನ್ನು ಹಿಂದಿ ಹಾಗೂ ಇಂಗ್ಲಿಷ್ ಜೊತೆಗೆ ಸ್ಥಳೀಯ ಭಾಷೆಯಲ್ಲೂ ಮುದ್ರಿಸಲು ಭಾರತೀಯ ರೈಲ್ವೆ ಇಲಾಖೆ ಮುಂದಾಗಿದೆ ಪ್ರಯಾಣಿಕರ ಸೌಲಭ್ಯ ಸಮಿತಿ ಹೇಳಿತ್ತು.

ಮೊದಲಿಗೆ ಅಧಿಕಾರಿಗಳು ಮೂರನೇ ಭಾಷೆಯನ್ನ ಸೇರಿಸಲು ತಯಾರಿರಲಿಲ್ಲ. ಯಾಕೆಂದರೆ ದೀರ್ಘ ಕಾಲದಿಂದ ದ್ವಿಭಾಷಾ ನೀತಿಯ ಜೊತೆಗೆ ಕೆಲಸ ಮಾಡಿದ್ದರು. ಮತ್ತೊಂದು ಕಾರಣವೆಂದರೆ ಅವರು ಇನ್ನೂ ಆರ್ಕಿಯಾಕ್ ಕೊಬೊಲ್ ಸಾಫ್ಟ್ ವೇರ್ ಬಳಸುತ್ತಿದ್ದು, ಇದನ್ನು ಕೂಡಲೇ ಬದಲಾಯಿಸೋದು ಕಷ್ಟವಾಗಿತ್ತು. ಅದ್ರೆ ಡಿಜಿಟಲ್ ಯುಗದಲ್ಲಿ ಇದನ್ನ ಪರಿಗಣಿಸಲು ಸಾಧ್ಯವಿಲ್ಲ. ದೇಶದಲ್ಲಿ ರೈಲ್ವೇ ಇಲಾಖೆ ಅತ್ಯಂತ ದೊಡ್ಡ ಸೇವಾ ಪೂರೈಕೆದಾರ ಆಗಿದೆ. ಈಗಿನ ದಿನಗಳಲ್ಲಿ ಸೆಲ್‍ಫೋನ್ ಸಂಸ್ಥೆಗಳೂ ಕೂಡ ಶುಲ್ಕ ರಹಿತ ನಂಬರ್ ಗೆ ಕರೆ ಮಾಡಿದಾಗ 3 ಭಾಷೆಗಳಲ್ಲಿ ಸೇವೆ ನೀಡುತ್ತಿವೆ. ಹಿಂದಿ ಮಾತನಾಡದ ರಾಜ್ಯಗಳಲ್ಲಿ ಮೂರನೆಯ, ಸ್ಥಳೀಯ ಭಾಷೆಯನ್ನು ತರುವುದು ನಮ್ಮ ಕರ್ತವ್ಯವಲ್ಲವೇ ಎಂದು ರೈಲ್ವೇ ಪ್ರಯಾಣಿಕರ ಸೌಲಭ್ಯ ಸಮಿತಿಯ ಸದಸ್ಯ ಆಚಾರಿ ಈ ಹಿಂದೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದರು.

ದಕ್ಷಿಣ ಭಾರತದಲ್ಲಿ ಸಾಕಷ್ಟು ಜನ ರೈಲ್ವೆ ಟಿಕೆಟ್‍ನಿಂದ ತೊಂದರೆ ಅನುಭವಿಸುತ್ತಿದ್ದರು. ಕೆಲವರಿಗೆ ಅವರು ಸರಿಯಾದ ಟಿಕೆಟ್ ಹೊಂದಿದ್ದಾರಾ ಇಲ್ಲವಾ ಎಂಬುದೇ ಗೊತ್ತಿರುತ್ತಿರಲಿಲ್ಲ. ಟಿಕೆಟ್ ಮೇಲೆ ಮುದ್ರಣವಾಗಿರೋದನ್ನು ಓದಲು ಬಾರದೇ ಹಲವು ಬಾರಿ ತಮ್ಮದಲ್ಲದ ತಪ್ಪಿಗೆ ಜನ ದಂಡ ಕಟ್ಟಿದ್ದರು. ಈಗ ಸಾಫ್ಟ್ ವೇರ್ ಅಪ್‍ಡೇಟ್ ಆಗಿದ್ದು ಟಿಕೆಟ್ ವಿತರಿಸಲಾಗುವ ಪ್ರದೇಶಕ್ಕೆ ತಕ್ಕಂತೆ ಆಯಾ ರಾಜ್ಯದ ಭಾಷೆಯಲ್ಲಿ ಟಿಕೆಟ್ ಮುದ್ರಣವಿರಲಿದೆ. ಅಂದರೆ ನೀವು ಕನ್ಯಾಕುಮಾರಿಯಿಂದ ಶುರುವಾಗಿ 5 ರಾಜ್ಯಗಳನ್ನ ಸಂಚರಿಸುವ ರೈಲಿಗೆ ಕರ್ನಾಟಕದಲ್ಲಿ ರೈಲ್ವೇ ಟಿಕೆಟ್ ಬುಕ್ ಮಾಡಿದ್ರೆ ನಿಮ್ಮ ಟಿಕೆಟ್ ಕನ್ನಡದಲ್ಲೇ ಇರಲಿದೆ.

ಇದು ಎಲ್ಲಾ ವರ್ಗದ ಪ್ರಯಾಣಕ್ಕೆ ಹಾಗೂ ಕೌಂಟರ್ ಗಳಲ್ಲಿ ವಿತರಿಸಲಾಗುವ ಪ್ಯಾಸೆಂಜರ್ ರೈಲುಗಳ ಟಿಕೆಟ್‍ಗಳಿಗೆ ಮಾತ್ರ ಅನ್ವಯವಾಗಲಿದೆ. ಆದ್ರೆ ಆನ್‍ಲೈನ್‍ನಲ್ಲಿ ಬುಕ್ಕಿಂಗ್ ಮಾಡಿದಾಗ ಅನ್ವಯವಾಗುವುದಿಲ್ಲ. ಜಗತ್ತಿನ ಯಾವುದೇ ಭಾಗದಲ್ಲಿದ್ರೂ ಆನ್‍ಲೈನ್ ಟಿಕೆಟ್ ಬುಕ್ ಮಾಡಬಹುದಾಗಿದ್ದು, ಈ ವೇಳೆ ಸ್ಥಳೀಯ ಭಾಷೆಯನ್ನು ಅಳವಡಿಸುವುದು ಕಷ್ಟವಾದ ಹಿನ್ನೆಲೆಯಲ್ಲಿ ಆನ್‍ಲೈನ್ ಗ್ರಾಹಕರಿಗೆ ಈ ಸೇವೆ ಸಿಗುವುದಿಲ್ಲ. ಇದನ್ನೂ ಓದಿ: 42 ಕೋಟಿ ರೂ. ವೆಚ್ಚದಲ್ಲಿ 3,350 ಟ್ರಕ್ ಸಗಣಿ ಖರೀದಿಸಲಿದೆ ಭಾರತೀಯ ರೈಲ್ವೇ!

 

Thank you for printing tickets in KANNADA 🙏

— ಅಲೋಕ್ ಕಳಗಿ (@alokkalagi06) March 1, 2018

Thank you sir
ಕನ್ನಡಿಗರ ಮೇಲಿನ ನಿಮ್ಮ ಪ್ರೀತಿಗೆ ನನ್ನ ಧನ್ಯವಾದಗಳು Sir Thank you very much.

— Yadhu ( ಮೋದಿ ಕಾ ಪರಿವಾರ್ ) (@yadhuraj1100) March 1, 2018

TAGGED:kannadakarnatakapiyush goyalSouthern Railwayಕನ್ನಡಕರ್ನಾಟಕಪಿಯೂಶ್ ಗೋಯಲ್ಬೆಂಗಳೂರುರೈಲ್ವೇ ಟಿಕೆಟ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
3 seconds ago
Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
24 minutes ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
1 hour ago
mustafizur rahman 2
Cricket

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಆಡಲು ಬಿಸಿಸಿಐ ಗ್ರೀನ್‌ ಸಿಗ್ನಲ್‌?

Public TV
By Public TV
2 hours ago
BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
2 hours ago
Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?