Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಾಲಾ ಕಾಮಗಾರಿಯಲ್ಲಿ 27 ಕೋಟಿ ರೂ. ಕಿಕ್‍ಬ್ಯಾಕ್, ಎಂ.ಬಿ ಪಾಟೀಲರನ್ನ ನೇಣು ಹಾಕಿ: ಬಿಎಸ್‍ವೈ ಆಕ್ರೋಶ

Public TV
Last updated: March 22, 2018 6:03 pm
Public TV
Share
3 Min Read
MB PATIL BSY
SHARE

ಬೆಂಗಳೂರು: ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ನಾಲಾ ಕಾಮಗಾರಿಯಲ್ಲಿ 27 ಕೋಟಿ ರೂ. ಲಂಚ ಪಡೆದಿದ್ದಾರೆಂದು ಬಿಎಸ್ ಯಡಿಯೂರಪ್ಪ ಆರೋಪ ಮಾಡಿದ್ದಾರೆ.

ಲಿಂಗಾಯತ ಸ್ವತಂತ್ರ ಧರ್ಮ ವಿಚಾರದಲ್ಲಿ ಮೇಲುಗೈ ಸಾಧಿಸಿದ್ದ ಎಂ.ಬಿ.ಪಾಟೀಲ್ ಮಣಿಸಲು ಬಿಜೆಪಿ ರಣತಂತ್ರ ಹೂಡಿದ್ದು, ಎಂ.ಬಿ ಪಾಟೀಲ್ ವಿರುದ್ಧ ದಾಖಲೆ ಸಮೇತ ಬಿಎಸ್‍ವೈ ಗಂಭೀರ ಆರೋಪ ಮಾಡಿದ್ದಾರೆ. ಕಳೆದ ಆರು ತಿಂಗಳಿನಿಂದ ಎಂ.ಬಿ.ಪಾಟೀಲ್ ವಿರುದ್ಧ ಗಂಭೀರ ಆರೋಪದ ದಾಖಲೆಯನ್ನ ಹುಡುಕಲು ಎನ್.ಆರ್.ರಮೇಶ್ ರನ್ನು ಬಿಟ್ಟಿದ್ದ ಬಿಎಸ್‍ವೈ, ಐದು ವರ್ಷದ ಕಾಂಗ್ರೆಸ್ ಆಡಳಿತದಲ್ಲಿ ಕೊನೆ ಕ್ಷಣದಲ್ಲಿ ಖಚಿತ ದಾಖಲೆ ಹಿಡಿದು ಬಾಂಬ್ ಹಾಕಿದ್ದಾರೆ.

ಈ ಬಗ್ಗೆ ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಎಸ್‍ವೈ, ದೇಶದಲ್ಲೇ ಅತ್ಯಂತ ಭ್ರಷ್ಟಾಚಾರಿ ಸರ್ಕಾರ ಎಂದೇ ಕುಖ್ಯಾತಿಯನ್ನ ಗಳಿಸಿರುವ ಸಿದ್ದರಾಮಯ್ಯ ಅವರ ಕಮಿಷನ್ ಸರ್ಕಾರಕ್ಕೆ ಕೊನೆ ಇಲ್ಲದಂತಾಗಿದೆ. ಸಿದ್ದರಾಮಯ್ಯನವರು ಯಾವಾಗಲು ತನಗೆಷ್ಟು ಪಾಲು ಕಮಿಷನ್ ಬರುತ್ತೆ ಅಂತಾ ಯೋಚನೆ ಮಾಡ್ತಿರುತ್ತಾರೆ. 2016 ರಲ್ಲಿ ಜಲಸಂಪನ್ಮೂಲ ಇಲಾಖೆಯಲ್ಲಿ ವಿಶ್ವೇಶ್ವರಯ್ಯ ಜಲ ನಿಗಮ ಸ್ಥಾಪನೆಯಾಗಿತ್ತು. ಭದ್ರಾ ಮೇಲ್ದಂಡೆ ಯೋಜನೆಯ ಹೆಸರಿನಲ್ಲಿ ಸಾವಿರಾರು ಕೋಟಿ ಕಾಮಗಾರಿಗಳನ್ನ ಟೆಂಡರ್ ಕರೆಯದೇ ಭ್ರಷ್ಟಾಚಾರ ನಡೆದಿದೆ. ಈ ಅಕ್ರಮಕ್ಕೆ ಎಂ.ಬಿ.ಪಾಟೀಲ್ ಅವರೇ ಹೊಣೆಗಾರರು, ಅವರ ಆದೇಶ ಇಲ್ಲದೆ ಒಂದು ಹುಲ್ಲುಕಡ್ಡಿಯೂ ಅಲ್ಲಾಡಲ್ಲ ಎಂದು ಕಿಡಿಕಾರಿದರು.

Cng bsy 2

ಇದಲ್ಲದೇ ಚಿತ್ರದುರ್ಗ ಜಿಲ್ಲೆಯ ನಾಲಾ ಕಾಮಗಾರಿಗೆ 157 ಕೋಟಿ ವರ್ಕ್ ಆರ್ಡರ್ ನೀಡಿದ್ದಾರೆ. ಆದರೆ ಟೆಂಡರ್ ಪ್ರಕ್ರಿಯೆಯಲ್ಲಿ ಕೇವಲ ಎರಡು ಕಂಪನಿಗಳು ಮಾತ್ರ ಭಾಗವಹಿಸಿದ್ದು, ಎಂ.ಬಿ.ಪಾಟೀಲ್ ಮತ್ತವರ ಆಪ್ತರು 27 ಕೋಟಿ ರೂ. ಕಿಕ್ ಬ್ಯಾಕ್ ಪಡೆದಿದ್ದಾರೆ. ಇದರಲ್ಲಿ ಸಿದ್ದರಾಮಯ್ಯ ಅವರೇ ನಿಮ್ಮ ಕಮಿಷನ್ ಎಷ್ಟು? ಎಂದು ಬಿಎಸ್‍ವೈ ಪ್ರಶ್ನಿಸಿದರು.

ರಸ್ತೆ ವಿಸ್ತೀರ್ಣದ ಹೆಸರಲ್ಲಿ ದಿನಾಂಕ 1-1-18 ರಂದು 157 ಕೋಟಿ 96 ಲಕ್ಷ ರೂ. ಅಕ್ರಮ ನಡೆದಿದೆ. ಎಸ್.ಎಸ್.ನ್ಯಾಷನಲ್ ಕನ್‍ಸ್ಟ್ರಕ್ಷನ್ ಲಿಮಿಟೆಡ್ ಕಂಪೆನಿಗೆ ಗುತ್ತಿಗೆ ನೀಡಲಾಗಿದ್ದು, ಟೆಂಡರ್ ನಲ್ಲಿ ಎರಡು ಕಂಪೆನಿ ಮಾತ್ರ ಭಾಗಿಯಾಗಿದೆ. ನಿಯಮದ ಪ್ರಕಾರದಲ್ಲಿ ಆಯಾ ಸಂಸ್ಥೆಗಳ ಕಾಮಗಾರಿಗೆ ದೃಢೀಕರಣದ ಪತ್ರವನ್ನ ಸಲ್ಲಿಸಿರಬೇಕು ಮತ್ತು 50 ಲಕ್ಷ ರೂ. ಕಾಮಗಾರಿ ಮಾಡಿರಬೇಕು. ಆದರೆ ಈ ಕಂಪೆನಿ ಸುಳ್ಳು ಪ್ರಮಾಣ ಪತ್ರ ನೀಡಿದೆ. ಇದರ ಜೊತೆಗೆ ಅಮ್ಮಾ ಕನ್‍ಸ್ಟ್ರಕ್ಷನ್ ಕಂಪೆನಿ ಕೂಡ ನಕಲಿ ಪ್ರಮಾಣ ಪತ್ರ ನೀಡಿದೆ ಎಂದು ಬಿಎಸ್‍ವೈ ಗಂಭೀರ ಆರೋಪ ಮಾಡಿದರು.

ಈ ವರ್ಕ್ ಡನ್ ಸರ್ಟಿಫಿಕೇಟ್ ಸುಳ್ಳು. ಈ ಕಂಪನಿಗಳು 626ಕಿ.ಮೀ. ವಿಸ್ತೀರ್ಣದ ರಸ್ತೆ ಕಾಮಗಾರಿಯನ್ನ ಮಾಡಿರೋದಾಗಿ ನಕಲಿ ಸರ್ಟಿಫಿಕೇಟ್ ನೀಡಿವೆ. ಮಣಿಪುರ, ತ್ರಿಪುರ ಎರಡರಲ್ಲೂ ನೀಡಿದ ಸರ್ಟಿಫಿಕೇಟ್‍ನಲ್ಲಿ ಒಬ್ಬರೇ ಎಂಜಿನಿಯರ್ ಸಹಿ ಇದೆ. ಇದರಿಂದ ಇದು ನಕಲಿ ಎಂಬುದು ಸ್ಪಷ್ಟ ಆಗಿದೆ. ಈ ಅಕ್ರಮದಲ್ಲಿ ಎಂ.ಬಿ ಪಾಟೀಲ್ ಮತ್ತು ಅವರ ಆಪ್ತರು 25 ಕೋಟಿ ರೂ. ಕಿಕ್ ಬ್ಯಾಕ್ ಪಡೆದಿದ್ದಾರೆ. ಈ ಎರಡು ಕಂಪನಿಗಳು ತಮಿಳುನಾಡಿಗೆ ಸೇರಿದ್ದು, ವರ್ಕ್ ಡನ್ ಸರ್ಟಿಫಿಕೇಟನ್ನು ಮಣಿಪುರ, ತ್ರಿಪುರದಿಂದ ತಂದಿದ್ದಾರೆ ಎಂದು ಆರೋಪಿಸಿದರು.

MB Patil

ಸಿಎಂ ಸಿದ್ದರಾಮಯ್ಯ ಸರ್ಕಾರ ಜನರ ದುಡ್ಡು ಹೀಗೆ ಲೂಟಿ ಹೊಡೆದು ಭ್ರಷ್ಟ ಸರ್ಕಾರ ಎಂದು ಸಾಬೀತುಪಡಿಸಿದ್ದಾರೆ. ಇದರಲ್ಲಿ ಸಿದ್ದರಾಮಯ್ಯ ಪಾತ್ರ ಎಷ್ಟು? ನೀವು ಎಷ್ಟು ಕಮಿಷನ್ ಪಡೆದಿದ್ದೀರಿ ಎಂದು ಪ್ರಶ್ನಿಸಿ, ದಾಖಲೆಗಳನ್ನ ರಿಲೀಸ್ ಮಾಡಿದ ಬಿಎಸ್‍ವೈ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.

ಜಲಸಂಪನ್ಮೂಲ ಇಲಾಖೆಯಲ್ಲಿ ಇದೇ ರೀತಿ ಹತ್ತಾರು ಪ್ರಕರಣಗಳು ನಡೆದಿವೆ. ಈ ಜಲಸಂಪನ್ಮೂಲ ಸಚಿವ ಇದಾನಲ್ಲ ಕಳೆದ 6 ತಿಂಗಳಿನಿಂದ ನನ್ನ ಮೇಲೆ ಐಟಿ ದಾಳಿ ಆಗುತ್ತೆ ಅಂತಾ ಹೇಳ್ತಿದ್ದ. ಈ ದೊಡ್ಡ ಮನುಷ್ಯನ ಮೇಲೆ ಇಲ್ಲಿಯವರೆಗೂ ಐಟಿ ದಾಳಿ ನಡೆದಿಲ್ಲ, ಅವನನ್ನ ಹ್ಯಾಂಗ್ ಮಾಡಬೇಕು ಎಂದು ಎಂ.ಬಿ ಪಾಟೀಲ್ ವಿರುದ್ಧ ಬಿಎಸ್‍ವೈ ಏಕವಚನದಲ್ಲಿಯೇ ವಾಗ್ದಾಳಿ ಮಾಡಿದ್ರು.

ಸಿದ್ದರಾಮಯ್ಯ ಹಗರಣ ಬಗ್ಗೆ ದಾಖಲೆ ಕೇಳಿದ್ರು, ಇವಾಗ ನಾವು ಬಿಡುಗಡೆ ಮಾಡಿರುವ ದಾಖಲೆ ನೋಡಿ ಹೇಳಲಿ. 24 ಗಂಟೆಯಲ್ಲಿ ನಮ್ಮ ಆರೋಪಕ್ಕೆ ಸರ್ಕಾರ ಉತ್ತರ ನೀಡಬೇಕು. ನಾಳೆ ಅಥವಾ ನಾಡಿದ್ದು ಇದಕ್ಕಿಂತ ದೊಡ್ಡ ಹಗರಣ ಬಯಲು ಮಾಡುತ್ತೇವೆ ಎಂದು ಬಿಎಸ್‍ವೈ ಸರ್ಕಾರಕ್ಕೆ ಸವಾಲು ಹಾಕಿದ್ರು.

TAGGED:bjpBSYcm siddaramaiahcongresscorruptionillegalkickbackMB PatilPublic TVworkಅಕ್ರಮಎಂ.ಬಿ.ಪಾಟೀಲ್ಕಾಂಗ್ರೆಸ್ಕಾಮಗಾರಿಕಿಕ್ ಬ್ಯಾಕ್ಪಬ್ಲಿಕ್ ಟಿವಿಬಿಎಸ್‍ವೈಬಿಜೆಪಿಭ್ರಷ್ಟಚಾರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
36 minutes ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
33 minutes ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
3 hours ago
Shivaraj Tangadagi
ಕಮಲ್ ಹಾಸನ್ ಕ್ಷಮೆ ಕೇಳೋವರೆಗೂ ಬಿಡೋದಿಲ್ಲ: ಶಿವರಾಜ್ ತಂಗಡಗಿ
3 hours ago

You Might Also Like

tumakuru outrage erupts against hemavati express link canal project work temporarily halted 1
Districts

ಹೇಮಾವತಿ ನೀರಿಗೆ 2 ಜಿಲ್ಲೆಗಳ ಕಿತ್ತಾಟ; ಡಿಕೆಶಿ ಒತ್ತಡಕ್ಕೆ ತುಮಕೂರು `ಕೈ’ ನಾಯಕರು ಮೌನ ಸಮ್ಮತಿ ಆರೋಪ

Public TV
By Public TV
4 minutes ago
Rajastan Bomb Threat
Crime

ರಾಜಸ್ಥಾನದ ಮೂವರು ಸಚಿವರಿದ್ದ ಹೋಟೆಲ್‌ಗೆ ಬಾಂಬ್ ಬೆದರಿಕೆ ಸಂದೇಶ

Public TV
By Public TV
35 minutes ago
chandra layout
Bengaluru City

ಬೆಂಗಳೂರು| ಬ್ಯಾಂಕ್ ಸಾಲ ಇದ್ದ ಕಟ್ಟಡವನ್ನ ಲೀಸ್‌ಗೆ ಪಡೆದು ಸಂಕಷ್ಟಕ್ಕೆ ಸಿಲುಕಿದ 17 ಕುಟುಂಬಗಳು

Public TV
By Public TV
1 hour ago
Mangaluru Landslide ASHWINI
Dakshina Kannada

Mangaluru Landslide | ಮಕ್ಕಳ ಅಗಲಿಕೆ ಮಧ್ಯೆ ಎರಡೂ ಕಾಲು ಕಳೆದುಕೊಂಡ ಅಶ್ವಿನಿ

Public TV
By Public TV
1 hour ago
madhu bangarappa 1
Belgaum

ಸರ್ಕಾರಿ ನೌಕರರಿಗೆ ಪ್ರತಿಭಟನೆ ಮಾಡುವ ಅವಕಾಶ ಇಲ್ಲ: ಮಧು ಬಂಗಾರಪ್ಪ

Public TV
By Public TV
2 hours ago
CRIME
Crime

ಅತ್ತಿಗೆಯ ಶಿರಚ್ಛೇದನ, ರುಂಡ ಹಿಡಿದು ಊರೆಲ್ಲಾ ಸುತ್ತಾಡಿ ಪೊಲೀಸರಿಗೆ ಶರಣಾದ ದುಷ್ಕರ್ಮಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?