Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಿಚ್ಚ ಸುದೀಪ್ ಜೆಡಿಎಸ್ ನಿಂದ ಸ್ಪರ್ಧಿಸುತ್ತಾರಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಿಚ್ಚ ಸುದೀಪ್ ಜೆಡಿಎಸ್ ನಿಂದ ಸ್ಪರ್ಧಿಸುತ್ತಾರಾ?

Bengaluru City

ಕಿಚ್ಚ ಸುದೀಪ್ ಜೆಡಿಎಸ್ ನಿಂದ ಸ್ಪರ್ಧಿಸುತ್ತಾರಾ?

Public TV
Last updated: April 2, 2018 10:07 pm
Public TV
Share
2 Min Read
HDK SUDEEP COLLAGE
SHARE

ಬೆಂಗಳೂರು: ಇಡೀ ಕರ್ನಾಟಕ ವಿಧಾನಸಭಾ ಚುನಾವಣೆಯ ಬಿಸಿಯೇರಿಸಿಕೊಂಡಿದೆ. ಇಂಥಾ ವಾತಾವರಣದಲ್ಲಿ ರಾಜಕೀಯ ವಲಯದಲ್ಲಿ ಬಿರುಸಿನ ವಾತಾವರಣ ಇರೋದು ಸಹಜವೇ. ಆದರೆ ಈ ಸಲ ಚಿತ್ರರಂಗದಲ್ಲಿಯೂ ಚುನಾವಣಾ ಪ್ರಭಾವ ಬಲು ಜೋರಾಗಿದೆ. ಆ ಸ್ಟಾರ್ ರಾಜಕೀಯಕ್ಕಿಳೀತಾರೆ, ಮತ್ಯಾರಿಗೋ ಟಿಕೆಟು ಪಕ್ಕಾ ಆಗಿದೆ ಎಂಬೆಲ್ಲ ರೂಮರ್ ಮಾಮೂಲಿ. ಆದರೆ ಈ ಸಲ ಈ ರೇಸಿನಲ್ಲಿ ಕಿಚ್ಚ ಸುದೀಪ್ ಅವರ ಹೆಸರೂ ಚಾಲ್ತಿಯಲ್ಲಿರೋದು ನಿಜವಾದ ವಿಶೇಷ!

ಸುದೀಪ್ ರಾಜಕೀಯಕ್ಕೆ ಬರುತ್ತಾರೆಂಬ ಅಂತೆ ಕಂತೆಯಾಗಲಿ, ಅವರನ್ನು ಸೆಳೆದುಕೊಳ್ಳಲು ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಒಳಗೊಳಗೇ ಕಸರತ್ತು ನಡೆಸೋದಾಗಲಿ ಹೊಸದೇನೂ ಅಲ್ಲ. ಆದರೆ ಒಂದು ಮೂಲದ ಪ್ರಕಾರ ಈ ಸಲ ರಾಜಕೀಯಕ್ಕೆ ಅಡಿಯಿರಿಸಲು ತೀರ್ಮಾನ ಮಾಡಿಕೊಂಡಿರೋ ಸುದೀಪ್ ಅದಕ್ಕಾಗಿ ತಯಾರಾಗಲಾರಂಭಿಸಿದ್ದಾರಂತೆ!

HDK SUDEEP 2

ಹಾಗಾದರೆ ಅವರು ಯಾವ ಪಕ್ಷದಿಂದ ಸ್ಪರ್ಧಿಸ್ತಾರೆ, ಕ್ಷೇತ್ರ ಯಾವುದು ಅಂತೆಲ್ಲ ಸಾಲು ಸಾಲು ಪ್ರಶ್ನೆಗಳೇಳೋದು ಸಹಜವೇ. ಈ ನಿಟ್ಟಿನಲ್ಲಿ ನೋಡ ಹೋದರೆ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸಲು ಸ್ವತಃ ಸುದೀಪ್ ಇಚ್ಛೆ ಹೊಂದಿದ್ದಾರೆ ಎಂಬ ಮಾತೂ ಕೇಳಿಬಂದಿತ್ತು. ಸುದೀಪ್ ಅವರ ರಾಜಕೀಯ ಎಂಟ್ರಿ ಮತ್ತು ಅವರು ಬಯಸೋ ಕ್ಷೇತ್ರವನ್ನು ನೀಡಲು ರಾಹುಲ್ ಗಾಂಧಿಯನ್ನು ಒಪ್ಪಿಸೋ ಜವಾಬ್ದಾರಿಯನ್ನು ನಟಿ ರಮ್ಯಾ ವಹಿಸಿಕೊಂಡಿದ್ದಾರಂತೆ ಎಂಬೆಲ್ಲಾ ಅಂತೆಕಂತೆಗಳೂ ಹರಿದಾಡಿದ್ದವು.

ಆದರೆ ದಿಢೀರ್ ಅಂತಾ ಇವತ್ತು ಬೆಳಬೆಳಿಗ್ಗೆಯೇ ಸುದೀಪ್ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರನ್ನು ಸ್ವತಃ ಕುಮಾರಣ್ಣನ ಮನೆಯಲ್ಲೇ ಭೇಟಿ ಮಾಡಿ ಸರಿಸುಮಾರು ಎರಡು ಗಂಟೆಗಳ ಕಾಲ ಮಾತುಕತೆ ನಡೆಸಿರೋದು ರಾಜಕೀಯ ಪಂಡಿತರ ತಲೆ ಕೆಡಿಸಿದೆ. ಈ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಮತ್ತು ಶಾಸಕ ಸಾರಾ ಮಹೇಶ್ ಮುಂತಾದವರು ಹಾಜರಿದ್ದರು.

HDK SUDEEP 1

ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ?: ಈ ಕ್ಷೇತ್ರದಲ್ಲಿ 90 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ನಾಯಕ ಸಮಾಜದ ಮತದಾರರಿದ್ದಾರೆ. ಇದೂ ಕೂಡಾ ಸುದೀಪ್ ಗೆಲುವಿಗೆ ಸಹಕಾರಿಯಾಗುತ್ತದೆ ಎಂಬ ಲೆಕ್ಕಾಚಾರ ಜೆಡಿಎಸ್ ಪಾಳೆಯದಲ್ಲಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಮೂಲದ ನೇರಳಗುಂಟೆ ತಿಪ್ಪೇಸ್ವಾಮಿ ಕಳೆದ ಬಾರಿ ಬಿಎಸ್‍ಆರ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಬಾರಿ ಯೂಥ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಹಾಲಿ ಜಿಲ್ಲಾ ಪಂಚಾಯತ್ ಸದಸ್ಯರೋರ್ವರು ಈ ಬಾರಿ ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ಕ್ಷೇತ್ರಕ್ಕೆ ಅನೇಕರು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಅದರಲ್ಲಿ ಮಾಜಿ ಎಂಪಿ ನಟ ಶಶಿಕುಮಾರ್ ಕೂಡಾ ಒಬ್ಬರು. ಅವರೂ ಕೂಡಾ ಈ ಬಾರಿ ಹೇಗಾದರೂ ಮಾಡಿ ಕಾಂಗ್ರೆಸ್ ಟಿಕೆಟ್ ಪಡೆದು ಶಾಸಕನಾಗೋ ಹಂಬಲ ಹೊಂದಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಚಳ್ಳಕೆರೆ ಕ್ಷೇತ್ರದಿಂದ ಶಶಿಕುಮಾರ್ ಟಿಕೆಟ್ ಬಯಸಿದ್ದರಾದರೂ ಸಿಕ್ಕಿರಲಿಲ್ಲ. ಆಗ ಟಿಕೆಟ್ ರಘುಮೂರ್ತಿ ಪಾಲಾಗಿತ್ತು. ಹೀಗಾಗಿ ಕಿಚ್ಚ ಸುದೀಪ್ ಜೆಡಿಎಸ್ ನಿಂದ ಸ್ಪರ್ಧಿಸುತ್ತಾರಾ ಎಂಬ ಅನುಮಾನ ಮೂಡಿದೆ.

ಇನ್ನು ಇದೇ ಚಿತ್ರದುರ್ಗದಿಂದ ಮೊಗವೀರ ಸಮುದಾಯದ ನಟಿ ಭಾವನಾ ಕೂಡಾ ಆಕಾಂಕ್ಷಿಯಾಗಿದ್ದಾರಂತೆ. ಆದರೆ ಬೇರೆಲ್ಲರ ಕಥೆ ಏನೋ ಹೇಳಲು ಬರೋದಿಲ್ಲ. ಕಿಚ್ಚ ಸುದೀಪ್ ಮನಸು ಬದಲಾವಣೆ ಮಾಡಿಕೊಳ್ಳದೆ ರಾಜಕೀಯಕ್ಕಿಳಿದರೆ ಅವರು ಮೊಳಕಾಲ್ಮೂರು ಕ್ಷೇತ್ರದಿಂದಲೇ ಕಣಕ್ಕಿಳಿಯೋದು ಖಚಿತ ಅನ್ನೋದು ಕೆಲವರ ಅಭಿಪ್ರಾಯವಾದರೆ ಇನ್ನು ಕೆಲವರು ಜೆಡಿಎಸ್ ಪ್ರಚಾರಕ್ಕಷ್ಟೇ ಕಿಚ್ಚ ಒಪ್ಪಿದ್ದಾರೆ ಅನ್ನೋ ಮಾತುಗಳೂ ವ್ಯಕ್ತವಾಗುತ್ತಿವೆ. ಒಟ್ಟಾರೆ ಕಿಚ್ಚ ಕುಮಾರಣ್ಣ ಭೇಟಿಯ ಅಂತಿಮ ಸೀಕ್ರೆಟ್ ಏನೆನ್ನುವುದು ಶೀಘ್ರದಲ್ಲೇ ಹೊರಬೀಳಲಿದೆ.

HDK SUDEEP

TAGGED:assembly electionbengaluruhd kumaraswamyjdsKichcha SudeepPublic TVಎಚ್ ಡಿ ಕುಮಾರಸ್ವಾಮಿಕಿಚ್ಚ ಸುದೀಪ್ಜೆಡಿಎಸ್ಪಬ್ಲಿಕ್ ಟಿವಿಬೆಂಗಳೂರುವಿಧಾನಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post
Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories

You Might Also Like

C.T. Ravi
Chikkamagaluru

ಅಲ್ಪಸಂಖ್ಯಾತ ನಿಗಮ ಮಂಡಳಿ ಸಾಲದ ಬಡ್ಡಿ ಮನ್ನಾ – ಇದು ಸಂವಿಧಾನ ವಿರೋಧಿ ನಡೆ: ಸಿ.ಟಿ.ರವಿ ಕಿಡಿ

Public TV
By Public TV
9 minutes ago
DK Shivakumar 1 1
Bengaluru City

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿ.ಕೆ. ಶಿವಕುಮಾರ್‌

Public TV
By Public TV
33 minutes ago
T20WorldCup Scotland
Cricket

T20 World Cup – ಇಟಲಿ ವಿರುದ್ಧ 73 ರನ್‌ಗಳ ಭರ್ಜರಿ ಜಯಗಳಿಸಿದ ಸ್ಕಾಟ್ಲೆಂಡ್

Public TV
By Public TV
2 hours ago
Ramalinga Reddy
Bengaluru City

ಕೇಂದ್ರದಿಂದಲೇ ಮೆಟ್ರೋ ಟಿಕೆಟ್‌ ದರ ಹೆಚ್ಚಳ, ಸುಳ್ಳು ಹೇಳೋದ್ರಲ್ಲಿ ಬಿಜೆಪಿಗರು ನಿಸ್ಸೀಮರು: ರಾಮಲಿಂಗಾರೆಡ್ಡಿ

Public TV
By Public TV
2 hours ago
DK Shivakumar 1 1
Bengaluru City

ದೆಹಲಿಗೆ ಹೋಗೋದು ರಾಜಕಾರಣ; ಹೈಕಮಾಂಡ್ ನಾಯಕರೊಬ್ಬರು ಕರೆದಿದ್ದಾರೆ – ಡಿಕೆಶಿ

Public TV
By Public TV
2 hours ago
R Ashok
Bengaluru City

ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸಂಪುಟ ದರ್ಜೆ ಸ್ಥಾನ ವಾಪಸ್ ಪಡೆಯಬೇಕು – ಆರ್.ಅಶೋಕ್ ಆಗ್ರಹ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?