Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಮತದಾನ ಜಾಗೃತಿಗೆ ಭಟ್ಟರ ತಾಳ-ಮೇಳ..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಮತದಾನ ಜಾಗೃತಿಗೆ ಭಟ್ಟರ ತಾಳ-ಮೇಳ..!

Bengaluru City

ರಾಜ್ಯದಲ್ಲಿ ಮತದಾನ ಜಾಗೃತಿಗೆ ಭಟ್ಟರ ತಾಳ-ಮೇಳ..!

Public TV
Last updated: April 3, 2018 7:54 am
Public TV
Share
3 Min Read
Yogaraj Bhat 1
SHARE

– ಚುನಾವಣಾ ಗೀತೆಯ ಚಿತ್ರೀಕರಣದಲ್ಲಿ ಯೋಗರಾಜ್ ಭಟ್ ಮತ್ತು ತಂಡ ಬ್ಯುಸಿ

ಬೆಂಗಳೂರು: ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ನಡೆಯುವಂತೆ ಮಾಡಲು ಮತ್ತು ಮತದಾರರನ್ನು ಜಾಗೃತಿಗೊಳಿಸುವ ಸಲುವಾಗಿ ಚುನಾವಣಾ ಆಯೋಗ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಬಹಳ ಸುಲಭವಾಗಿ ಸಾಮಾನ್ಯ ಮತದಾರರನ್ನು ಸೆಳೆಯಲು ಚುನಾವಣಾ ಆಯೋಗ ಯೋಗರಾಜ್ ಭಟ್ಟರ ಗೀತೆಯ ಮೊರೆ ಹೋಗಿದೆ.

ಹೌದು. ಕನ್ನಡದ ಚಿತ್ರರಂಗದ ಜನಪ್ರಿಯ ನಿರ್ದೇಶಕ, ತಮ್ಮ ಸಾಲುಗಳ ಮೂಲಕ ಪ್ರೇಕ್ಷಕರನ್ನು ಸೆಳೆಯಬಲ್ಲ ಪ್ರಸಿದ್ಧ ಗೀತ ಸಾಹಿತಿ ಯೋಗರಾಜ್ ಭಟ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವಂತೆ ಪ್ರೇರೇಪಿಸಲು ಹೊಸ ಹಾಡೊಂದನ್ನು ರಚಿಸಿದ್ದಾರೆ. ಈ ಮೂಲಕ ಮೊಟ್ಟಮೊದಲ ಬಾರಿಗೆ ಕರ್ನಾಟಕ ವಿಧಾನಸಭಾ ಚುನಾವಣೆ 2018 ತನ್ನದೇ ಆದ ಗೀತೆ ಹೊಂದಿದ ಖ್ಯಾತಿಗೆ ಪಾತ್ರವಾಗಲಿದೆ.

Yogaraj Bhat 5

ಯೋಗರಾಜ್ ಭಟ್ ಬರೆದ ಈ ಚುನಾವಣಾ ಗೀತೆಗೆ ಖ್ಯಾತ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಮಾಡಲಿದ್ದು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಮತ್ತು ಇತರ ಗಾಯಕರು ಹಾಡಲಿದ್ದಾರೆ. ನೃತ್ಯ ನಿರ್ದೇಶಕ ಇಮ್ರಾನ್ ಸರ್ದಾರಿಯಾ ಈ ಹಾಡಿಗೆ ಕೊರಿಯೋಗ್ರಫಿ ಮಾಡುತ್ತಿದ್ದಾರೆ. ಈ ಚುನಾವಣಾ ಗೀತೆಯನ್ನು ಕಳೆದ ಐದು ದಿನಗಳಿಂದ ರಾಜ್ಯದಾದ್ಯಂತ ಚಿತ್ರೀಕರಿಸಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಕಂಠೀರವ ಸ್ಟೇಡಿಯಂ, ವಿಧಾನಸೌಧ ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಚಿತ್ರೀಕರಿಸಲಾಯಿತು. ವೀರಗಾಸೆ, ಡೊಳ್ಳು ಕುಣಿತ, ಕಂಸಾಳೆ, ಯಕ್ಷಗಾನ ಹೀಗೆ ಕರ್ನಾಟಕದ ಸಂಸ್ಕೃತಿಯನ್ನು ಪ್ರತಿನಿಧಿಸುವ ನೂರಾರು ಸಾಂಸ್ಕೃತಿಕ ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

Yogaraj Bhat 4

ಇನ್ನು ಈ ಚುನಾವಣಾ ಗೀತೆಯ ಬಗ್ಗೆ ಮಾತನಾಡಿರುವ ಯೋಗರಾಜ್ ಭಟ್, `ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರ ಪ್ರಯತ್ನದಿಂದ ಈ ಗೀತೆ ಮೂಡಿಬರುತ್ತಿದೆ. ಇದರ ಹಿಂದಿನ ಕೀರ್ತಿ ಅವರಿಗೆ ಸಲ್ಲಬೇಕು. ಅವರು ಈ ಚುನಾವಣಾ ಗೀತೆ ಸಿದ್ಧಪಡಿಸಲು ಉತ್ಸಾಹ ತೋರಿಸಿದ್ದರಿಂದ ನಾವು ಮಾಡಲು ಮುಂದಾದೆವು. ಇದರ ಚಿತ್ರೀಕರಣಕ್ಕೆ ವಿಕಲಚೇತನರು, ಆದಿವಾಸಿಗಳು, ತೃತೀಯ ಲಿಂಗಿಗಳು ಮತ್ತು ಯುವ ಮತದಾರರನ್ನು ಬಳಸಿಕೊಳ್ಳುತ್ತಿದ್ದೇವೆ. ಈ ಪ್ರಾಜೆಕ್ಟ್ ನನ್ನ ಹೃದಯಕ್ಕೆ ಹತ್ತಿರವಾಗಿದೆ. ಹಲವು ವರ್ಷಗಳಿಂದ ನಾನು ಸಮಾಜಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ಏನಾದರೂ ಮಾಡಬೇಕೆಂಬ ಬಯಕೆ ಹೊಂದಿದ್ದಾರೆ. ಈ ಚುನಾವಣಾ ಗೀತೆ ಅದನ್ನು ಈಡೇರಿಸಿದೆ. ಈ ಗೀತೆ ವಿಶಿಷ್ಟ ಪರಿಕಲ್ಪನೆಯಾಗಿದ್ದು ಜನರಿಗೆ ನೇರ ಭಾಷಣದ ಮೂಲಕ ನೀಡಲಾಗದ ಉತ್ತೇಜನವನ್ನು ಈ ಗೀತೆ ನೀಡುತ್ತದೆ. ಗೀತೆಗಳು ಸದಾ ಗ್ರಹಿಸಲು ಸುಲಭ ಮತ್ತು ಮನಸ್ಸಿನಲ್ಲಿ ದೀರ್ಘ ಕಾಲ ಉಳಿಯುವುದರಿಂದ ಇದು ಸಾಧ್ಯವಾಗುತ್ತದೆ. ಆದ್ದರಿಂದ ಜನರು ಚಿತ್ರಗೀತೆಗಳನ್ನು ಬಹಳ ಕಾಲ ನೆನಪಿನಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ಈ ಚುನಾವಣಾ ಗೀತೆ ಪ್ರತಿಯೊಬ್ಬರ ಮನದಲ್ಲೂ ಉಳಿದು ಅವರಿಗೆ ಪಾರದರ್ಶಕ ಚುನಾವಣೆಗಳ ಕುರಿತು ಅರಿವು ಮೂಡಿಸುತ್ತದೆ’ ಎಂದರು.

Yogaraj Bhat 3

ಈ ಗೀತೆಯ ಬಗ್ಗೆ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಈ ಚುನಾವಣಾ ಗೀತೆ ಆಯೋಗದ ಧ್ಯೇಯ- ಒಳಗೊಳ್ಳುವ, ಸುಗಮ ಮತ್ತು ನೈತಿಕ ಚುನಾವಣೆಗಳ ಅನುಸಾರ ಇದೆ. ಈ ಯೋಜನೆ ಕುರಿತು ನಾವು ಬಹಳ ಕಾಲ ಸಂಶೋಧನೆ ನಡೆಸಿದ್ದೇವೆ. ಈ ಗೀತೆ ಜಾಗೃತ ಮತ್ತು ನೈತಿಕ ಮತದಾನವನ್ನು ಉತ್ತೇಜಿಸಲಿದೆ ಮತ್ತು ಇದು ದೊಡ್ಡ ಸಂಖ್ಯೆಯಲ್ಲಿ ಮತದಾರರು ಆಗಮಿಸಿ ಮತದಾನ ಮಾಡಲು ಪ್ರೇರೇಪಿಸುತ್ತದೆ. ಈ ಗೀತೆಯನ್ನು ರೇಡಿಯೊ, ಟೀವಿ, ಚಲನಚಿತ್ರಗಳು ಮತ್ತಿತರೆ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಿದ್ದೇವೆ ಎಂದರು.

ಒಟ್ಟಾರೆ ಯೋಗರಾಜ್ ಭಟ್ಟರ ಈ ಚುನಾವಣಾ ಗೀತೆಯಲ್ಲಿ ಹೊಸ ಥರದ ಧಮ್, ರಿದಮ್ ಎರಡೂ ಇದ್ದು ಭಟ್ಟರ ಇತರೆ ಗೀತೆಗಳಂತೆ ಈ ಚುನಾವಣಾ ಗೀತೆ ಕೂಡಾ ಜನಪ್ರಿಯವಾಗುವ ನಿರೀಕ್ಷೆ ಇದೆ. ಈ ಚುನಾವಣಾ ಗೀತೆ ಮತದಾರರ ಮೇಲೆ ಎಷ್ಟು ಪರಿಣಾಮ ಬೀರಲಿದೆ ಎಂಬುದು ಕೆಲ ದಿನಗಳಲ್ಲೇ ಗೊತ್ತಾಗಲಿದೆ.

Yogaraj Bhat 2

DZtCdkOXUAE T3t

 

TAGGED:election commissionImran SardariaKarnataka ElectionKarnataka Election 2018namma electionSanjeev kumarState Chief Election OfficerYogaraj Bhatಇಮ್ರಾನ್ ಸರ್ದಾರಿಯಾಕರ್ನಾಟಕ ಚುನಾವಣೆಕರ್ನಾಟಕ ಚುನಾವಣೆ 2018ಚುನಾವಣಾ ಆಯೋಗನಮ್ಮ ಎಲೆಕ್ಷನ್ಯೋಗರಾಜ್ ಭಟ್ರಾಜ್ಯ ಮುಖ್ಯ ಚುನಾವಣಾಧಿಕಾರಿಸಂಜೀವ್ ಕುಮಾರ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
3 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
4 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
4 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
4 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
4 hours ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?