ಪರೋಕ್ಷವಾಗಿ ತಮಿಳುನಾಡು ಕಾವೇರಿ ಪ್ರತಿಭಟನೆಯನ್ನು ಬೆಂಬಲಿಸಿದ ರಮ್ಯಾ: ಕನ್ನಡಿಗರಿಂದ ತರಾಟೆ

Public TV
1 Min Read
ramya

ನವದೆಹಲಿ: ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಕುರಿತಾಗಿ ಪ್ರಕಟವಾದ ಸುದ್ದಿಯನ್ನು ರಮ್ಯಾ ಟ್ವೀಟ್ ಮಾಡಿದ್ದನ್ನು ಕನ್ನಡಿಗರು ಖಂಡಿಸಿದ್ದಾರೆ.

ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ಆಗ್ರಹಿಸಿ ತಮಿಳುನಾಡಿನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಆನ್‍ಲೈನ್ ತಾಣವೊಂದು ಈ ಸುದ್ದಿಯನ್ನು ಪ್ರಕಟಿಸಿದ್ದು, ರಮ್ಯಾ ಅವರು ಈ ಸುದ್ದಿಯನ್ನು ಟ್ವಿಟ್ಟರ್ ನಲ್ಲಿ ಹಾಕಿ “Loud and clear ಎಂದು ಬರೆದುಕೊಂಡಿದ್ದಾರೆ.

ಈ ಟ್ವೀಟ್ ಅನ್ನು ಕನ್ನಡಿಗರು ಖಂಡಿಸಿದ್ದು, ಕನ್ನಡ ದ್ರೋಹಿ ರಮ್ಯಾ ಅವರಿಗೆ ಧಿಕ್ಕಾರ ಎಂದು ಬರೆದು ಟೀಕಿಸಿದ್ದಾರೆ. ನಿಮ್ಮ ಟ್ವೀಟ್ ನಿಂದಾಗಿ ಕಾಂಗ್ರೆಸ್‍ಗೆ ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕೆಂಬ ಆಗ್ರಹ ಇರುವುದು ಗೊತ್ತಾಯಿತು ಎಂದು ಬರೆದು ಜನ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ramya tweet

 

 

https://twitter.com/paivijay/status/984331150633021441

Share This Article
Leave a Comment

Leave a Reply

Your email address will not be published. Required fields are marked *