Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ಮುಖಗಳಿಗೆ ಸಿಕ್ತು ಕೈ ಟಿಕೆಟ್: 2013ರಲ್ಲಿ ಇಲ್ಲಿ ಗೆದ್ದವರು ಯಾರು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೊಸ ಮುಖಗಳಿಗೆ ಸಿಕ್ತು ಕೈ ಟಿಕೆಟ್: 2013ರಲ್ಲಿ ಇಲ್ಲಿ ಗೆದ್ದವರು ಯಾರು?

Bengaluru City

ಹೊಸ ಮುಖಗಳಿಗೆ ಸಿಕ್ತು ಕೈ ಟಿಕೆಟ್: 2013ರಲ್ಲಿ ಇಲ್ಲಿ ಗೆದ್ದವರು ಯಾರು?

Public TV
Last updated: April 16, 2018 3:47 pm
Public TV
Share
5 Min Read
sowmya reddy anjali nimblkar bbmp padmvati
SHARE

ಬೆಂಗಳೂರು: 2018ರ ಚುನಾವಣೆಗೆ ರಣತಂತ್ರ ಹೆಣೆಯುತ್ತಿರುವ ಕಾಂಗ್ರೆಸ್ ಈಗ 12 ಕ್ಷೇತ್ರಗಳಲ್ಲಿ ಹೊಸ ಮುಖಗಳನ್ನು ಪರಿಚಯಿಸುವ ಮೂಲಕ ಎದುರಾಳಿ ಪಕ್ಷಗಳಿಗೆ ಪ್ರಬಲ ಪೈಪೋಟಿ ನೀಡಲು ಮುಂದಾಗಿದೆ.

ಕಲಬುರಗಿ ಗ್ರಾಮೀಣ, ಕಲಬುರಗಿ ಉತ್ತರ, ಖಾನಾಪುರ, ಕೆಜಿಎಫ್ ಮತ್ತು ಚಿಂತಾಮಣಿ, ಜಗಳೂರು, ಬೇಲೂರು, ಬೆಂಗಳೂರಿನ ಮಹಾಲಕ್ಷ್ಮಿಲೇಔಟ್, ರಾಜಾಜಿನಗರ, ಸಿ.ವಿ.ರಾಮನ್‍ನಗರ, ಬೊಮ್ಮನಹಳ್ಳಿ, ಜಯನಗರ ಕ್ಷೇತ್ರಗಳಿಂದ ಹೊಸ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.

1 ಕಲಬುರಗಿ ಗ್ರಾಮೀಣ: 2008ರಲ್ಲಿ ರಚನೆಯಾದ ವಿಧಾನಸಭಾ ಕ್ಷೇತ್ರ ಇದಾಗಿದ್ದು, ಮೊದಲ ಚುನಾವಣೆಯಲ್ಲಿಯೇ ಬಿಜೆಪಿ ಅಭ್ಯರ್ಥಿ ರೇಣು ನಾಯಕ್ ಬೆಳಮಗಿ ಗೆಲುವು ಸಾಧಿಸಿದ್ದರು. 2013 ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ರಾಮಕೃಷ್ಣ ಅವರು 40,075 ಮತ ಪಡೆದರೆ, ರೇಣು ನಾಯಕ್ 32,866 ಮತ ಪಡೆದು ಪರಾಭವಗೊಂಡರು. ಆದರೆ, ಕೆಲ ದಿನಗಳ ಹಿಂದೆ ಬಿಜೆಪಿ ಸೇರಿದ್ದ ಅವರು ಮತ್ತೆ ಕಾಂಗ್ರೆಸ್‍ಗೆ ಸೇರಿಕೊಂಡರೂ ಅವರ ಬದಲಾಗಿ ಸ್ಥಳೀಯ ಕಾಂಗ್ರೆಸ್ ಮುಖಂಡ ವಿಜಯಕುಮಾರ್ ಅವರಿಗೆ ಟಿಕೆಟ್ ನೀಡಿಲಾಗಿದೆ.

2 ಕಲಬುರಗಿ ಉತ್ತರ: 2008ರಲ್ಲಿ ರಚನೆಯಾದ ವಿಧಾನಸಭಾ ಕ್ಷೇತ್ರ ಇದಾಗಿದ್ದು, ಪ್ರಾರಂಭದಿಂದಲೇ ಇದು ಕಾಂಗ್ರೆಸ್ ಭದ್ರಕೋಟೆಯಾಗಿದೆ. 2008 ಮತ್ತು 2013ರ ಚುನಾವಣೆಯಲ್ಲಿ ಖಮರ್ ಉಲ್ಲ್ ಇಸ್ಲಾಂ ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. 2013ರ ಚುನಾವಣೆಯಲ್ಲಿ ಖಮರ್ ಉಲ್ ಇಸ್ಲಾಂ 50,498 ಮತ ಪಡೆದರೆ, ಕೆಜೆಪಿ ಅಭ್ಯರ್ಥಿ ನಾಶಿರ್ ಹುಸೇನ್ ಉಸ್ತಾದ್ 30,377 ಮತ ಗಳಿಸಿದ್ದರು. ಇತ್ತೀಚೆಗೆ ಖಮರ್ ಉಲ್ಲ್ ಇಲ್ಸಾಂ ನಿಧನರಾಗಿದ್ದರಿಂದ ಅವರ ಪತ್ನಿ ಫಾತೀಮಾ ಅವರಿಗೆ ಟಿಕೆಟ್ ನೀಡಲಾಗಿದೆ.

3 ಬೇಲೂರು: ಹಾಸನದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿರುವ ಈ ಕ್ಷೇತ್ರದಲ್ಲಿ ಕಳೆದ ಎರಡು ಚುನಾವಣೆಯಲ್ಲಿ ವೈ.ಎನ್.ರುದ್ರೇಶ್‍ಗೌಡ ಆಯ್ಕೆಯಾಗಿದ್ದರು. 2013ರ ಚುನಾವಣೆಯಲ್ಲಿ ರುದ್ರೇಶ್‍ಗೌಡ ಅವರು 48,802 ಮತ ಪಡೆದಿದ್ದರೆ, ಜೆಡಿಎಸ್ ಅಭ್ಯರ್ಥಿ ಕೆ.ಎಸ್. ಲಿಂಗೇಶ 41,273 ಮತ ಗಳಿಸಿದ್ದರು. ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ರುದ್ರೇಶ್‍ಗೌಡ ಪತ್ನಿ ಕೀರ್ತನಾ ಅವರಿಗೆ ಅನುಕಂಪದ ಆಧಾರದ ಮೇಲೆ ಟಿಕೆಟ್ ನೀಡಲಾಗಿದೆ.

4 ಮಹಾಲಕ್ಷ್ಮಿಲೇಔಟ್: 2008ರಲ್ಲಿ ರಚನೆಯಾದ ವಿಧಾನಸಭಾ ಕ್ಷೇತ್ರದ ಇದಾಗಿದೆ. ಮೊದಲ ಚುನಾವಣೆಯಲ್ಲಿಯೇ ಸ್ಥಾನ ಪಡೆದುಕೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಎನ್.ಎಲ್.ನರೇಂದ್ರಬಾಬು ಅವರು 2015ರ ಚುನಾವಣೆಯಲ್ಲಿ 50,757 ಮತ ಪಡೆದು ಸೋತರು. ಜೆಡಿಎಸ್ ಅಭ್ಯರ್ಥಿ ಗೋಪಾಲಯ್ಯ. ಕೆ. 66,127 ಮತ ಗಳಿಸಿ ಗೆಲವು ಸಾಧಿಸಿದ್ದರು. ಆದರೆ, ಎನ್.ಎಲ್.ನರೇಂದ್ರಬಾಬು ಅವರು ಬಿಜೆಪಿಗೆ ಸೇರಿದ್ದರಿಂದ ಎನ್.ಎಸ್.ಯು.ಐ ಮಂಜುನಾಥ್ ಗೌಡ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

5 ರಾಜಾಜಿನಗರ: ಕಳೆದ ಎರಡು ವರ್ಷಗಳಿಂದ ಈ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಹೆಚ್ಚು ಮತಗಳ ಅಂತರದಲ್ಲಿ ಸೋಲುತ್ತಿರುವ ಕಾಂಗ್ರೆಸ್ ಈ ಬಾರಿ ಬಿಬಿಎಂಪಿ ಮಾಜಿ ಮೇಯರ್ ಪದ್ಮಾವತಿ ಅವರನ್ನು ಕಣಕ್ಕಿಳಿಸುತ್ತಿದೆ. 2013ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಸುರೇಶಕುಮಾರ ಅವರು 39,297 ಮತ ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಆರ್.ಮಂಜುಳಾ ನಾಯ್ಡು 24,482 ಮತ ಗಳಿಸಿದ್ದರು.

6 ಸಿ.ವಿ.ರಾಮನ್‍ನಗರ: 2008ರಲ್ಲಿ ರಚನೆಯಾದ ವಿಧಾನಸಭಾ ಕ್ಷೇತ್ರ ಇದಾಗಿದೆ. ಈ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದ್ದು, ಅದನ್ನು ಈ ಬಾರಿ ಒಡೆಯಲು ಕಾಂಗ್ರೆಸ್ ಬಿಬಿಎಂಪಿ ಮೇಯರ್ ಸಂಪತ್‍ರಾಜ್ ಅವರನ್ನು ಕಣಕ್ಕಿಳಿಸಿದೆ. 2013ರ ಚುನಾವಣೆಯಲ್ಲಿ ಎಸ್.ರಾಹುಲ್ ಅವರು 53,364 ಮತ ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಪಿ.ರಮೇಶ ಅವರು 44,945 ಮತ ಗಳಿಸಿದ್ದರು.

7 ಬೊಮ್ಮನಹಳ್ಳಿ: 2008ರಲ್ಲಿ ರಚನೆಯಾದ ವಿಧಾನಸಭಾ ಕ್ಷೇತ್ರ ಇದಾಗಿದ್ದು, ಕಳೆದ ಎರಡು ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿ ಎಂ.ಸತೀಶರೆಡ್ಡಿ ಆಯ್ಕೆಯಾಗಿದ್ದಾರೆ. ಈ ಭದ್ರಕೋಟೆ ಒಡೆಯಲು ಕಾಂಗ್ರೆಸ್ ಸುಷ್ಮಾರಾಜ್ ಗೋಪಾಲರೆಡ್ಡಿ ಅವರನ್ನು ಕಣಕ್ಕಿಳಿಸುತ್ತಿದೆ. 2013ರ ಚುನಾವಣೆಯಲ್ಲಿ ಎಂ.ಸತೀಶ್‍ರೆಡ್ಡಿ 86,552 ಮತಗಳನ್ನು ಪಡೆದಿದ್ದರೆ, ರಾಗಭೂಷನ್.ಸಿ 60,700 ಮತ ಗಳಿಸಿದ್ದರು.

8 ಜಗಳೂರು: ದಾವಣಗೆರೆಯ ಕಾಂಗ್ರೆಸ್ ಭದ್ರಕೋಟೆಯಾಗಿರುವ ಈ ಕ್ಷೇತ್ರದಿಂದ 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ. ರಾಜೇಶ್ ಆಯ್ಕೆಯಾಗಿದ್ದರು. ಆದರೆ ಈ ಬಾರಿ ಟಿಕೆಟ್ ಕೈ ತಪ್ಪಿದ್ದು, ಪುಷ್ಪಾ ಅವರಿಗೆ ನೀಡಲಾಗಿದೆ. 2013ರ ಚುನಾವಣೆಯಲ್ಲಿ ಎಚ್.ಪಿ. ರಾಜೇಶ್ ಅವರು 77,805 ಮತ ಪಡೆದಿದ್ದರೆ, ಕೆಜಿಪಿ ಅಭ್ಯರ್ಥಿ ಎಸ್.ವಿ. ರಾಮಚಂದ್ರ 40,915 ಮತ ಗಳಿಸಿದ್ದರು.

9 ಖಾನಾಪುರ: ಪಕ್ಷೇತರ ಅಭ್ಯರ್ಥಿಗಳೇ ಹೆಚ್ಚಾಗಿ ಆಯ್ಕೆಯಾಗಿರುವ ಈ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಎರಡನೇ ಸ್ಥಾನ ಪಡೆದಿದ್ದ ಕಾಂಗ್ರೆಸ್ ಈ ಬಾರಿ ಹೊಸ ಆಯ್ಕೆ ಎನ್ನುವಂತೆ ಐಪಿಎಸ್ ಅಧಿಕಾರಿ ಹೇಮಂತ್ ನಿಬಾಳ್ಕರ್ ಪತ್ನಿ ಅಂಜಲಿ ನಿಂಬಾಳ್ಕರ್ ಅವರನ್ನು ಕಣಕ್ಕಿಳಿಸುತ್ತಿದೆ. 2013ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರವಿಂದ ಚಂದ್ರಕಾಂತ ಪಾಟೀಲ 37,055 ಮತ ಪಡೆದಿದ್ದರೆ, ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ರಫಿಕ್ ಖತಲಬ್ ಖಾನಾಪುರಿ 20,903 ಮತಗಳನ್ನು ಗಳಿಸಿದ್ದರು.

10 ಜಯನಗರ: ಕಳೆದ ಎರಡು ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎನ್.ವಿಜಯಕುಮಾರ ಅವರು ಆಯ್ಕೆಯಾಗಿದ್ದು, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುವ ಉದ್ದೇಶದಿಂದ ಗೃಹ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಅವರನ್ನು ಕಣಕ್ಕಿಳಿಸಲಾಗುತ್ತಿದೆ. 2013ರ ಚುನಾವಣೆಯಲ್ಲಿ ಬಿ.ಎನ್.ವಿಜಯಕುಮಾರ 43,990 ಮತ ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ವೇಣುಗೋಪಾಲ 31,678 ಮತ ಗಳಿಸಿದ್ದರು.

11 ಕೆಜಿಎಫ್: 1967ರ ವಿಧಾನ ಸಭಾ ಚುನಾವಣೆಯಲ್ಲಿ ಮಾತ್ರ ಕಾಂಗ್ರೆಸ್ ಈ ಮತಕ್ಷೇತ್ರದಲ್ಲಿ ಅಧಿಕಾರ ಸಾಧಿಸಿತ್ತು. ಈ ಬಾರಿ ಕಾಂಗ್ರೆಸ್ ಅಧಿಕಾರ ಸ್ಥಾಪಿಸುವ ಉದ್ದೇಶದಿಂದ ರೂಪಾ ಶಶಿಧರ್ ಅವರನ್ನು ಕಣಕ್ಕಿಳಿಸುತ್ತಿದೆ. 2013ರ ಚುನಾವಣೆಯಲ್ಲಿ ವೈ.ರಾಮಕ್ಕ 55,014 ಮತ ಪಡೆದಿದ್ದರೆ, ಜೆಡಿಎಸ್ ಎಮ್. ಭಕ್ತವತ್ಸಲಂ 28,992 ಮತ ಗಳಿಸಿದ್ದರು.

12 ಚಿಂತಾಮಣಿ: ಪಕ್ಷೇತರ ಅಭ್ಯರ್ಥಿಗಳೇ ಹೆಚ್ಚಾಗಿ ಆಯ್ಕೆಯಾಗಿರುವ ಕೋಲಾರದ ಈ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರ ಸ್ಥಾಪಿಸಲು ವಾಣಿ ಕೃಷ್ಣಾರೆಡ್ಡಿ ಅವರನ್ನು ಕಣಕ್ಕಿಳಿಸಲಾಗುತ್ತಿದೆ. 2013ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಜೆ.ಕೆ.ಕೃಷ್ಣಾರೆಡ್ಡಿ ಅವರು 68,950 ಮತ ಪಡೆದಿದ್ದರೆ, ಪಕ್ಷೇತರ ಅಭ್ಯರ್ಥಿ ಡಾ.ಎಂ.ಸಿ. ಸುಧಾಕರ 67254 ಮತ ಗಳಿಸಿದ್ದರು.

ಹೊಸ ಮುಖಗಳು
* ಗುಲ್ಬರ್ಗಾ ಗ್ರಾಮೀಣ – ವಿಜಯಕುಮಾರ್
* ಗುಲ್ಬರ್ಗಾ ಉತ್ತರ – ಫಾತೀಮ, ಖಮರುಲ್ಲಾ ಇಸ್ಲಾಂ ಪತ್ನಿ
* ಬೇಲೂರು – ಕೀರ್ತನಾ, ರುದ್ರೇಶ್‍ಗೌಡ ಪತ್ನಿ
* ಮಹಾಲಕ್ಷ್ಮಿಲೇಔಟ್ – ಎನ್.ಎಸ್.ಯು.ಐ ಮಂಜುನಾಥ್ ಗೌಡ
* ರಾಜಾಜಿನಗರ – ಪದ್ಮಾವತಿ, ಮಾಜಿ ಮೇಯರ್
* ಸಿ.ವಿ ರಾಮನ್‍ನಗರ – ಸಂಪತ್‍ರಾಜ್, ಮೇಯರ್
* ಬೊಮ್ಮನಹಳ್ಳಿ – ಸುಷ್ಮಾರಾಜ್ ಗೋಪಾಲರೆಡ್ಡಿ
* ಜಗಳೂರು – ಪುಷ್ಪಾ
* ಖಾನಾಪುರ – ಶ್ರೀ. ಅಂಜಲಿ ನಿಂಬಾಳ್ಕರ್
* ಜಯನಗರ – ಸೌಮ್ಯ ರೆಡ್ಡಿ
* ಬೊಮ್ಮನಹಳ್ಳಿ – ಸುಷ್ಮಾರಾಜಗೋಪಾಲರೆಡ್ಡಿ
* ಬೇಲೂರು – ಕೀರ್ತನಾ
* ಕೆಜಿಎಫ್ – ರೂಪಾ ಶಶಿಧರ್
* ಚಿಂತಾಮಣಿ – ವಾಣಿ ಕೃಷ್ಣಾರೆಡ್ಡಿ

TAGGED:congressFresh facesKarnataka ElectionPublic TVಕರ್ನಾಟಕ ಚುನಾವಣೆಕಾಂಗ್ರೆಸ್ಪಬ್ಲಿಕ್ ಟಿವಿಹೊಸ ಮುಖಗಳು
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
4 hours ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
4 hours ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
5 hours ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
5 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
6 hours ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?