ಮುನಿಯಾಲು ಉದಯ್ ಕುಮಾರ್ ಶೆಟ್ಟಿಗೆ ತಪ್ಪಿದ ಕೈ ಟಿಕೆಟ್- ಕಾರ್ಯಕರ್ತ ಆತ್ಮಹತ್ಯೆಗೆ ಯತ್ನ

Public TV
1 Min Read
UDP 6

ಉಡುಪಿ: ಕಾರ್ಕಳ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರಿಗೆ ಈ ಬಾರಿ ಹೈಕಮಾಂಡ್ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕಾರ್ಯಕರ್ತನೊಬ್ಬ ಇಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

UDP CONG SUICIDE ATTEMPT AV 3

ಉದಯ್ ಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡ ಕಾಂಗ್ರೆಸ್ ಕಾರ್ಯಕರ್ತರು ಇಂದು ಹೆಬ್ರಿಯಲ್ಲಿ ಪ್ರತಿಭಟನೆ ನಡೆಸಿದರು. ಉದಯಕುಮಾರ್ ಶೆಟ್ಟಿ ಬೆಂಬಲಿಗರು ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಕಾರ್ಯಕರ್ತ ಆಸಿಫ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದನ್ನೂ ಓದಿ: ಕಾರ್ಕಳ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ- ವೀರಪ್ಪ ಮೊಯ್ಲಿ ವಿರುದ್ಧ ಅಸಮಾಧಾನ

UDP CONG SUICIDE ATTEMPT AV 2

ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ನೆರೆದಿದ್ದ ಇತರ ಕಾರ್ಯಕರ್ತರು ಘಟನೆಯನ್ನು ತಡೆದಿದ್ದಾರೆ. ಸೋಮವಾರವೂ ಕಾರ್ಕಳದಲ್ಲಿ ಉದಯ ಕುಮಾರ್ ಶೆಟ್ಟಿ ಬೆಂಬಲಿಗರಿಂದ ಪ್ರತಿಭಟನೆ ನಡೆದಿತ್ತು. ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಬಂದ ಟಿಕೆಟ್ ಆಕಾಂಕ್ಷಿ ಉದಯಕುಮಾರ್ ಶೆಟ್ಟಿ ಕಾರ್ಯಕರ್ತರನ್ನು ಸಮಾಧಾನಪಡಿಸಿದ್ದರು.

UDP CONG SUICIDE ATTEMPT AV 4

Share This Article
Leave a Comment

Leave a Reply

Your email address will not be published. Required fields are marked *