ಚುನಾವಣಾ ಆಯೋಗದಿಂದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸಂಕಷ್ಟ!

Public TV
1 Min Read
REDDY 1

ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸಹೋದರರ ವಿರುದ್ಧ ಈ ಹಿಂದೆ ಆಂಬುಲೆನ್ಸ್ ನಲ್ಲಿ ಹಣ ಸಾಗಾಟ ಮಾಡಿದ ಆರೋಪ ಕೇಳಿ ಬಂದಿತ್ತು. ಹೀಗಾಗಿಯೇ ಈ ಬಾರಿಯ ಚುನಾವಣೆಯಲ್ಲಿ ಚುನಾವಣಾ ಆಯೋಗ ರೆಡ್ಡಿ- ರಾಮುಲು ನಡೆಯ ಮೇಲೆ ಹದ್ದಿನ ಕಣ್ಣಿಟ್ಟಿದೆ.

ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀರಾಮುಲು ಅವರನ್ನು ಗೆಲ್ಲಿಸುವ ಸಂಪೂರ್ಣ ಹೊಣೆ ಹೊತ್ತಿರುವ ಜನಾರ್ದನ ರೆಡ್ಡಿ, ಚುನಾವಣೆಯಲ್ಲಿ ಅಕ್ರಮ ಮಾಡದಂತೆ ಚುನಾವಣಾ ಆಯೋಗ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಇದಕ್ಕಾಗಿಯೇ ರೆಡ್ಡಿ ವಾಸವಿರುವ ಮೊಳಕಾಲ್ಮೂರು ತಾಲೂಕಿನ ಮೇಗಲಹಟ್ಟಿ ಮನೆಯ ಮುಂದೆಯೇ ಇದೀಗ ಚೆಕ್ ಪೋಸ್ಟ್ ನಿರ್ಮಿಸಿದೆ.

reddy

ಈ ಮೂಲಕ ಜನಾರ್ದನ ರೆಡ್ಡಿ ಮನೆಗೆ ಬಂದು ಹೋಗುವ ಎಲ್ಲ ವಾಹನಗಳನ್ನು ಚುನಾವಣಾಧಿಕಾರಿಗಳು ತೀವ್ರ ತಪಾಸಣೆಗೆ ಒಳಪಡಿಸುತ್ತಿದ್ದಾರೆ. ಅಲ್ಲದೇ ರೆಡ್ಡಿ ಮನೆಗೆ ಬಂದೂ ಹೋಗುವ ವ್ಯಕ್ತಿಗಳ ಮೇಲೂ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದು, ಅಕ್ರಮ ನಡೆಯದಂತೆ ಮುಂಜಾಗ್ರತೆ ವಹಿಸುತ್ತಿದ್ದಾರೆ.

ಸದ್ಯ ರೆಡ್ಡಿಗೆ ಇದೀಗ ಮನೆಯ ಮುಂದೆಯೇ ಚೆಕ್ ಪೋಸ್ಟ್ ನಿರ್ಮಿಸಿರುವುದು ದೊಡ್ಡ ತಲೆನೋವಾಗಿ ಪರಿಗಣಿಸಿದೆ.

reddy

 

Share This Article
Leave a Comment

Leave a Reply

Your email address will not be published. Required fields are marked *