ಬಿಜೆಪಿ ಹೈಕಮಾಂಡ್‍ನಿಂದ ಅನಂತ್‍ಕುಮಾರ್, ಅಶೋಕ್‍ಗೆ ಅಗ್ನಿಪರೀಕ್ಷೆ!

Public TV
1 Min Read
Ananthkumar R Ashok

ಬೆಂಗಳೂರು: ಬಿಜೆಪಿ ಕರ್ನಾಟಕದಲ್ಲಿ ಅಧಿಕಾರ ಹಿಡಿಯಬೇಕೆಂದು ಪ್ರಯತ್ನ ಮಾಡುತ್ತಿದೆ. ಹೀಗಾಗಿ ಅಷ್ಟೇ ಚುರುಕಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಹ ಹೊಸ ಲೆಕ್ಕಾಚಾರಗಳ ಮೂಲಕ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗ್ತಿದ್ದಾರೆ.

ಬೆಂಗಳೂರು ಗೆಲ್ಲಲು ಅಮಿತ್ ಶಾ ಪ್ಲಾನ್ ಮಾಡಿಕೊಂಡಿದ್ದು, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಎರಡು ಸಮಾವೇಶಗಳನ್ನು ಆಯೋಜನೆ ಮಾಡಲಾಗಿದೆ. ಮೇ 3 ಮತ್ತು 8 ರಂದು ಮೋದಿ ಬೆಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಎರಡು ಸಮಾವೇಶಗಳ ಮೂಲಕ ಬೆಂಗಳೂರಿನಲ್ಲಿ 20 ಕ್ಷೇತ್ರಗಳನ್ನು ಗೆಲ್ಲುವುದು ಅಮಿತ್ ಶಾ ಪ್ಲಾನ್ ಆಗಿದೆ. ಇದನ್ನೂ ಓದಿ: ಕೊಪ್ಪಳದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಅಮಿತ್ ಶಾ ಫುಲ್ ಕ್ಲಾಸ್

ಬೆಂಗಳೂರಿನಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲಿಸುವ ಗುರಿಯನ್ನು ಕೇಂದ್ರ ಸಚಿವ ಅನಂತ್ ಕುಮಾರ್ ಮತ್ತು ಮಾಜಿ ಡಿಸಿಎಂ ಆರ್. ಅಶೋಕ್ ಅವರಿಗೆ ನೀಡಲಾಗಿದೆ. ಬೆಂಗಳೂರಿನಲ್ಲಿ 20 ಸೀಟ್ ಗಳನ್ನು ಗೆಲ್ಲಿಸುವುದಕ್ಕಾಗಿ ಅನಂತ್ ಕುಮಾರ್, ಅಶೋಕ್ ಇಬ್ಬರಿಗೂ ಅಮಿತ್ ಶಾ ಕಟ್ಟಾಜ್ಞೆ ಮಾಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸಮಾವೇಶ 2, ಸೀಟು 20 ಅಮಿತ್ ಶಾ ಮಾಸ್ಟರ್ ಪ್ಲಾನ್!

BJP Flag 3

Share This Article
Leave a Comment

Leave a Reply

Your email address will not be published. Required fields are marked *