Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ನಿ, ಮಕ್ಕಳಿಗೆ ಚಿಕನ್ ತಯಾರಿಸಿ ಉಣಬಡಿಸಿದ ಕಾರವಾರ ಶಾಸಕ ಸತೀಶ್ ಸೈಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪತ್ನಿ, ಮಕ್ಕಳಿಗೆ ಚಿಕನ್ ತಯಾರಿಸಿ ಉಣಬಡಿಸಿದ ಕಾರವಾರ ಶಾಸಕ ಸತೀಶ್ ಸೈಲ್

Districts

ಪತ್ನಿ, ಮಕ್ಕಳಿಗೆ ಚಿಕನ್ ತಯಾರಿಸಿ ಉಣಬಡಿಸಿದ ಕಾರವಾರ ಶಾಸಕ ಸತೀಶ್ ಸೈಲ್

Public TV
Last updated: May 13, 2018 6:08 pm
Public TV
Share
3 Min Read
KWR RELAX
SHARE

ಕಾರವಾರ: ಒಂದೆಡೆ ಅಬ್ಬರದ ಪ್ರಚಾರ, ಸದಾ ತುಂಬಿ ತುಳುಕುತಿದ್ದ ಜನರ ಸಂತೆ, ಟೀಕೆ ಟಿಪ್ಪಣಿಗಳ ನಡುವೆ ತಾನು ಗೆಲ್ಲಬೇಕೆಂಬ ಹಂಬಲದಲ್ಲಿ ವಿಧಾನಸಭಾ ಚುನಾವಣೆಯ ರಂಗಿನ ರಣರಂಗದಲ್ಲಿ ಸದಾ ಬಿಸಿಯಾಗಿದ್ದ ಪ್ರತಿಷ್ಠಿತ ಕಣವಾದ ಕಾರವಾರ ವಿಧಾನಸಭಾ ಕ್ಷೇತ್ರದ ಮೂರು ಪಕ್ಷದ ನಾಯಕರು ಈಗ ರಿಲ್ಯಾಕ್ಸ್ ಮೂಡಿನಲ್ಲಿದ್ದಾರೆ.

ಸದಾ ಜನರ ಮಧ್ಯೆ ಇರುವ ನಾಯಕರು ತಮ್ಮ ವೈಯಕ್ತಿಕ ಬದುಕಿಗೆ ಸಮಯ ಕೊಟ್ಟದ್ದು ಅಲ್ಪ ಸಮಯ. ಇದೇ ತಿಂಗಳ 15 ರಂದು ಫಲಿತಾಂಶದ ನಿರೀಕ್ಷೆಯಲ್ಲಿರುವ ಈ ನಾಯಕರು ಇಂದು ತಮ್ಮ ಒತ್ತಡವನ್ನು ಕಮ್ಮಿ ಮಾಡಿಕೊಳ್ಳಲು ಅಡುಗೆ ಮಾಡಿ ಕುಟುಂಬವರಿಗೆ ಬಡಿಸಿದ್ದಾರೆ.

ಕಳೆದ ಎರಡು ತಿಂಗಳ ಚುನಾವಣಾ ಕುರುಕ್ಷೇತ್ರಕ್ಕೆ ಪೂರ್ಣ ವಿರಾಮ ಬಿದ್ದಿದೆ. ಇನ್ನು 15ನೇ ದಿನಾಂಕದಂದು ಜನರ ನಿರ್ಧಾರದ ಫಲಿತಾಂಶ ಬರಬೇಕಿದೆ. ತಾವು ಪಟ್ಟ ಶ್ರಮದ ನಿರೀಕ್ಷೆಯಲ್ಲಿ ನಾಯಕರು ಒತ್ತಡದಲ್ಲಿ ಇರೋದು ಸಹಜವಾಗಿದೆ. ತ್ರಿಕೋನ ಸ್ಪರ್ಧೆ ಇರುವ ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಹಾಲಿ ಪಕ್ಷೇತರ ಶಾಸಕ ಸತೀಶ್ ಸೈಲ್, ಜೆಡಿಎಸ್ ನಿಂದ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಮತ್ತು ಬಿಜೆಪಿಯಿಂದ ರೂಪಾಲಿ ನಾಯ್ಕ ಸ್ಪರ್ಧಿಸಿದ್ದರು.

asnotikar 4

ಸದ್ಯ ಇಂದು ಮತ್ತು ನಾಳೆ ಮನಸ್ಸಿನಲ್ಲಿ ಅಳುಕು ಮತ್ತು ಒತ್ತಡ ಇದ್ದರು ಮೂವರು ಅಭ್ಯರ್ಥಿಗಳು ಈ ಒತ್ತಡ ಮರೆಯಲು ಹರಸಾಹಸ ಪಡುತಿದ್ದಾರೆ. ಕಳೆದ ಎರಡು ತಿಂಗಳಿಂದ ಕ್ಷೇತ್ರ ಸುತ್ತಿ ಪ್ರಚಾರ ನಡೆಸಿ ದಣಿದಿರುವ ಜೆಡಿಎಸ್ ಅಭ್ಯರ್ಥಿ ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಗೋವಾಕ್ಕೆ ತೆರಳಿ ರಿಲ್ಯಾಕ್ಸ್ ಮಾಡುತ್ತಿದ್ದು, ಅವರ ಅಧಿಕೃತ ನಿವಾಸ ಜನರಿಲ್ಲದೇ ಬಿಕೋ ಎನ್ನುತಿತ್ತು. ಒತ್ತಡ ಮರೆಯಲು ಜನರಿಂದ ದೂರ ವಿರಲು ಬಯಸಿರುವ ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ ಕಾರವಾರದ ಸೋನಾರವಾಡದಲ್ಲಿರುವ ಮನೆಯ ಮುಂಭಾಗಕ್ಕೆ ಬೀಗ ಹಾಕಿ ಒಳ ಸೇರಿದ್ದಾರೆ. ಮನೆಯ ಬಳಿ ಬಂದ ಜನರ ಸಂಪರ್ಕಕ್ಕೆ ಸಿಗಲಿಲ್ಲ.

ಇನ್ನು ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಹಾಲಿ ಪಕ್ಷೇತರ ಶಾಸಕ ಸತೀಶ್ ಸೈಲ್ ರವರ ಮಾಜಾಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ಮನೆ ಕೂಡ ಯಾವುದೇ ಕಾರ್ಯಕರ್ತರ ಸದ್ದಿಲ್ಲದೇ ತಟಸ್ಥವಾಗಿತ್ತು. ಶಾಂತವಾಗಿದ್ದ ಮನೆಯಲ್ಲಿ ಸತೀಶ್ ಸೈಲ್ ಪತ್ನಿ ಕಲ್ಪನಾರೊಂದಿಗೆ ಅಡುಗೆ ಮನೆ ಸೇರಿ ಮಧ್ಯಾಹ್ನದ ಊಟಕ್ಕಾಗಿ ಚಿಕನ್ ತಯಾರಿಸಿದ್ದಾರೆ. ಅವರ ಕುಷಲೋಪರಿ ವಿಚಾರಿಸಲು ಬಂದವರಿಗೆ ತಮ್ಮ ಕೈಯಾರೆ ಟೀ ಮಾಡಿ ನೀಡಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾನು ರಾಜಕೀಯ ಕ್ಷೇತ್ರಕ್ಕೆ ಬಂದಾಗಿನಿಂದ ಸಂಸಾರಕ್ಕೆ ಹೆಚ್ಚು ಸಮಯ ಕೊಡಲಾಗುತಿಲ್ಲ. ಮಕ್ಕಳೊಂದಿಗೆ ಬೆರೆಯದೇ ಎಷ್ಟೂ ದಿನಗಳಾಗಿವೆ. ಒಂದು ದಿನವಾದರೂ ನನ್ನ ಒತ್ತಡ ಮರೆತು ಮಕ್ಕಳು ಸಂಸಾರದೊಂದಿಗೆ ಬೆರೆಯಬೇಕೆಂದು ತೀರ್ಮಾನಿಸಿ ಜಂಜಾಟದಿಂದ ರಿಲಾಕ್ಸ್ ಮಾಡುತ್ತಿದ್ದೇನೆ ಎಂದು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.

Sail 3

ನನ್ನ ತಂದೆ ಕ್ಯಾನ್ಸರ್ ನಿಂದ ತೀರಿಕೊಂಡರು. ಆಗ ಅವರಿಗೆ ಕ್ಯಾನ್ಸರ್ ಇದೇ ಎಂದು ತಿಳಿದುಕೊಳ್ಳವ ವೇಳೆ ಅವರು ನಮ್ಮನ್ನು ಅಗಲಿದ್ದರು. ಕಾರವಾರ ಕ್ಷೇತ್ರದಲ್ಲಿ ಕೈಗಾ ಅಣು ಸ್ಥಾವರ, ಆದಿತ್ಯ ಬಿರ್ಲಾ ಕೆಮಿಕಲ್ ಕಾರ್ಖಾನೆಗಳಿವೆ. ಇವುಗಳಿಂದ ಸಾಕಷ್ಟು ಜನರಿಗೆ ಕ್ಯಾನ್ಸರ್ ನಂತಹ ರೋಗಗಳು ಬಂದಿವೆ. ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆ ವ್ಯವಸ್ಥೆ ಸರಿಯಾಗಿ ಇಲ್ಲ. ನನ್ನ ಅವಧಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಮಾಡಿಸುವ ಪ್ರಯತ್ನ ಮಾಡಿದ್ದೇನೆ. ಈಗ ಅದು ಸಫಲವಾಗಿದೆ ಎಂದು ತಮ್ಮ ತಂದೆಯನ್ನು ನೆನೆದು ಭಾವುಕರಾದ್ರು.

ನನ್ನ ಕ್ಷೇತ್ರದ ಜನರಿಗೆ ಉದ್ಯೋಗ ಇಲ್ಲಿಯೇ ಸಿಗುವಂತೆ ಮಾಡಬೇಕು. ಅದಕ್ಕಾಗಿ ಈ ಬಾರಿ ಚುನಾವಣಾ ಕಣದಲ್ಲಿದ್ದೇನೆ. ನನ್ನ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿರುವೆ ಎಂದು ನಾಲ್ಕು ವರ್ಷದ ತಮ್ಮ ಸಾಧನೆಯ ಬಗ್ಗೆ ಮನದ ಮಾತು ಹಂಚಿಕೊಂಡ್ರು. ಕಾರವಾರ ಕ್ಷೇತ್ರದ ಮೂರು ಪಕ್ಷದ ಅಭ್ಯರ್ಥಿಗಳು ಇಂದು ಜನರ, ಕಾರ್ಯಕರ್ತರ ಜಂಜಾಟದಿಂದ ದೂರ ಉಳಿದು ತಮ್ಮ ದಣಿವನ್ನು ನೀಗಿಸಿಕೊಂಡಿದ್ದು, 15ರ ಅಗ್ನಿ ಪರೀಕ್ಷೆಗೆ ರಿಫ್ರೆಶ್ ಆಗುತ್ತಿದ್ದಾರೆ.

roopali naik home

TAGGED:Anand AsnotikarKarnataka ElectionKarnataka Election 2018karwarNamma ElectionsPublic TVRelaxRoopali NaikaSatish Sailಆನಂದ್ ಆಸ್ನೋಟಿಕರ್ಕರ್ನಾಟಕ ಚುನಾವಣೆಕರ್ನಾಟಕ ಚುನಾವಣೆ 2018ಕಾರವಾರನಮ್ಮ ಚುನಾವಣೆಪಬ್ಲಿಕ್ ಟಿವಿರಿಲ್ಯಾಕ್ಷ್ರೂಪಾಲಿ ನಾಯ್ಕಸತೀಶ್ ಸೈಲ್
Share This Article
Facebook Whatsapp Whatsapp Telegram

Cinema news

MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post

You Might Also Like

ksrtc bmtc transport strike
Bengaluru City

ನಾಳೆ ಸಾರಿಗೆ ಮುಷ್ಕರ ಇಲ್ಲ| ಸರ್ಕಾರಕ್ಕೆ ಮತ್ತೊಂದು ಡೆಡ್‌ಲೈನ್‌ – ಇಂದು ಏನಾಯ್ತು?

Public TV
By Public TV
1 minute ago
TAX
Bengaluru City

ಗ್ರಾ.ಪಂ ತೆರಿಗೆ ಸಂಗ್ರಹದಲ್ಲಿ ಹಿಂದೆ ಬಿದ್ದ ಗ್ರಾಮೀಣಾಭಿವೃದ್ಧಿ ಇಲಾಖೆ – ಈ ವರ್ಷ 71% ಮಾತ್ರ ಸಂಗ್ರಹ

Public TV
By Public TV
37 minutes ago
PM Modi AI MANAV vision sundar pichai Sam altman Dario Amode 1
Latest

ದೆಹಲಿಯಲ್ಲಿ ಎಐ ದಿಗ್ಗಜರು – ಏನಿದು ಮೋದಿಯ MANAV ವಿಷನ್‌?

Public TV
By Public TV
1 hour ago
Shalini Rajneesh
Bengaluru City

ಮುಡಾ ಮಾಜಿ ಆಯುಕ್ತ ನಟೇಶ್‌ ಮುಂಬಡ್ತಿಗೆ ಲಂಚ ಆರೋಪ – ಆಧಾರ ರಹಿತ ಆರೋಪಕ್ಕೆ ಕ್ರಮ: ಸ್ನೇಹಮಯಿಗೆ ಸಿಎಸ್‌ ಎಚ್ಚರಿಕೆ

Public TV
By Public TV
2 hours ago
Magadi road psi koushik
Bengaluru City

ನಿರೀಕ್ಷಣಾ ಜಾಮೀನು ಪಡೆದು ಠಾಣೆಗೆ ಹೋದ ವ್ಯಕ್ತಿ ಮೇಲೆ ಪಿಎಸ್‌ಐ ಹಲ್ಲೆ – ಎಫ್‌ಐಆರ್ ದಾಖಲು

Public TV
By Public TV
2 hours ago
d.k.shivakumar
Bengaluru City

ಮತದಾರರ ಪಟ್ಟಿ ದೋಷ ಸರಿಪಡಿಸಲು ಬೀದಿ, ಮನೆವಾರು ಮ್ಯಾಪಿಂಗ್ ಮಾಡಿ: ಚುನಾವಣಾ ಆಯೋಗಕ್ಕೆ ಡಿಕೆಶಿ ಪತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?