Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೈ ಶಾಸಕಾಂಗ ಸಭೆಯಲ್ಲಿ ಲಿಂಗಾಯತ ಶಾಸಕರ ಅಸಮಾಧಾನ ಸ್ಫೋಟ!

Public TV
Last updated: May 21, 2018 5:50 pm
Public TV
Share
2 Min Read
Congress HYD Meeting 2
SHARE

ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರದ ಆರಂಭಕ್ಕೂ ಮುನ್ನವೇ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಮಂತ್ರಿ ಸ್ಥಾನಕ್ಕಾಗಿ ನಾಯಕರ ನಡುವೆ ಜಟಾಪಟಿ ಆರಂಭವಾಗಿದೆ.

ನೂತನ ಸರ್ಕಾರ ರಚನೆ ಸಂಬಂಧ ಇಂದು ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಎಂ.ಬಿ.ಪಾಟೀಲ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಅಥವಾ ಸಚಿವ ಸ್ಥಾನ ನೀಡುವ ಕುರಿತು ಜಟಾಪಟಿ ನಡೆದಿದೆ ಎಂದು ಕಾಂಗ್ರೆಸ್ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿದೆ.

ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಕಾಂಗ್ರೆಸ್ ಪಕ್ಷಕ್ಕೆ ಲಭಿಸಿರುವುದರಿಂದ ಎಂಬಿ ಪಾಟೀಲ್ ಅವರಿಗೆ ಡಿಸಿಎಂ ಸ್ಥಾನ ನೀಡುವ ಕುರಿತು ಅಭಿಪ್ರಾಯ ವ್ಯಕ್ತವಾಗಿತ್ತು. ಆದರೆ ಈ ಸಲಹೆಗೆ ವಿಜಯಪುರದ ಇಬ್ಬರು ಲಿಂಗಾಯತ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ತಮ್ಮ ಮಾತಿಗೆ ಪಕ್ಷದ ನಾಯಕರು ಬೆಲೆ ನೀಡದೇ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಭೆಯಲ್ಲಿ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.

Congress HYD Meeting 1

ಪ್ರಮುಖವಾಗಿ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಹಾಗೂ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್ ರಾಜೀನಾಮೆಗೆ ಮುಂದಾಗಿದ್ದು, ಲಿಂಗಾಯತ ಪ್ರತ್ಯೇಕ ಧರ್ಮದ ಹೆಸರಲ್ಲಿ ಸಮುದಾಯವನ್ನು ಒಡೆದವರು ಎಂ.ಬಿ.ಪಾಟೀಲ್ ಎಂದು ಆರೋಪಿಸಿದ್ದಾರೆ. ಅಲ್ಲದೇ ಚುನಾವಣೆಯ ವೇಳೆ ಪ್ರತ್ಯೇಕ ಧರ್ಮಕ್ಕೆ ಬೆಂಬಲ ನೀಡದ ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಸ್ಪರ್ಧೆ ಮಾಡಿದ್ದ ಬೇರೆ ಪಕ್ಷದ ಅಭ್ಯರ್ಥಿಗಳಿಗೆ ಎಂಬಿ ಪಾಟೀಲ್ ಹಣ ಸಹಾಯ ಮಾಡಿ ಸೋಲಿಸುವ ಪ್ರಯತ್ನ ಮಾಡಿದ್ದಾರೆ ಎಂದು ಸಭೆಯಲ್ಲಿ ಲಿಂಗಾಯತ ಶಾಸಕರ ಆರೋಪ ಮಾಡಿದ್ದಾರೆ ಎನ್ನಲಾಗಿದೆ.

ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈ ಸ್ಥಿತಿ ಬರಲು ಕಾರಣ ಎಂಬಿ ಪಾಟೀಲ್ ಕಾರಣ ಎಂದು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿರುವ ಶಾಸಕರು ಒಟ್ಟು 17 ಜನ ಲಿಂಗಾಯತ ಶಾಸಕರು ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರಲ್ಲಿ ಶಾಮನೂರು ಶಿವಶಂಕರಪ್ಪ ಅವರಿಗೆ ವಯಸ್ಸಾಗಿದೆ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಸದ್ಯ ಅವರವನ್ನು ಹೊರತುಪಡಿಸಿ ಯಾವುದೇ ಕಾರಣಕ್ಕೂ ಎಂಬಿ ಪಾಟೀಲ್ ಅವರಿಗೆ ಯಾವುದೇ ಸ್ಥಾನಮಾನ ಕೊಡಬಾರದು. ಉಳಿದ 15 ಲಿಂಗಾಯತ ಶಾಸಕರಲ್ಲಿ ಯಾರಿಗಾದರೂ ಸಚಿವ ಸ್ಥಾನ ಅಥವಾ ಉಪಮುಖ್ಯಮಂತ್ರಿ ಸ್ಥಾನ ನೀಡಿ ಎಂದು ಪಟ್ಟು ಹಿಡಿದಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ವ್ಯಕ್ತವಾಗಿರುವ ಅಭಿಪ್ರಾಯವನ್ನ ಅಲಿಸಿರುವ ಕಾಂಗ್ರೆಸ್ ಮುಖಂಡರು ಈ ಕುರಿತು ಕೇಂದ್ರ ಹೈಕಮಾಂಡ್ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

vlcsnap 2018 03 24 21h06m40s989

ವೀರಶೈವ ಲಿಂಗಾಯತರಿಂದ ಬೇಡಿಕೆ: ಲಿಂಗಾಯತರಿಗೆ ಉಪಮುಖ್ಯಮಂತ್ರಿ ಪಟ್ಟ ನೀಡಬೇಕು ಎನ್ನುವ ಕೂಗು ಸದ್ಯ ಜೋರಾಗಿದ್ದು, ಈ ಕುರಿತು ಲಾಬಿ ನಡೆಸಲು ಲಿಂಗಾಯತ ಸಮಾಜದ ಪ್ರಮುಖದ ಸ್ವಾಮೀಜಿಗಳೇ ಈಗ ಅಖಾಡಕ್ಕೆ ಇಳಿದಿದ್ದಾರೆ. ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಈಗಾಗಲೇ ನಮಗೆ ಸೋಲಾಗಿದ್ದು, ಸಚಿವರು ಸೋತಿದ್ದಾರೆ. ಈಗ ಆಗಿರುವ ನಷ್ಟವನ್ನು ಸರಿಪಡಿಸಲು ಸಮಾಜಕ್ಕೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕೆಂಬ ಆಗ್ರಹವನ್ನು ಮುಂದಿಟ್ಟಿದ್ದಾರೆ.

ಒಂದು ವೇಳೆ ಉಪಮುಖ್ಯಮಂತ್ರಿ ಪಟ್ಟವನ್ನು ನೀಡದೇ ಇದ್ದರೆ 2019ರ ಲೋಕಸಭಾ ಚುನಾವಣೆಯಲ್ಲಿ ಏಟು ಬೀಳುವ ಸಾಧ್ಯತೆಯಿದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ. ಹೀಗಾಗಿ ಮುಂದೆ ಈ ಸಮಸ್ಯೆ ಆಗದೇ ಇರಲು ಉಪಮುಖ್ಯಮಂತ್ರಿ ಪಟ್ಟವನ್ನು ನೀಡುವಂತೆ ಲಿಂಗಾಯತರು ಬೇಡಿಕೆ ಇಟ್ಟಿದ್ದಾರೆ.

TAGGED:bengalurucongressDeputy Chief MinisterLingayat VeerashaivaMB PatilministerPublic TVSeparate Religionಉಪಮುಖ್ಯಮಂತ್ರಿಎಂಬಿ ಪಾಟೀಲ್ಕಾಂಗ್ರೆಸ್ಪಬ್ಲಿಕ್ ಟಿವಿಪ್ರತ್ಯೇಕ ಧರ್ಮಬೆಂಗಳೂರುಮಂತ್ರಿಲಿಂಗಾಯತ ವೀರಶೈವಸಚಿವ
Share This Article
Facebook Whatsapp Whatsapp Telegram

Cinema news

balaramana dinagalu
ಬಹುಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ಬಲರಾಮನ ದಿನಗಳು
Cinema Latest South cinema Top Stories
ashwini gowda
ʻನನ್ ತಲೇಲಿ ಬುದ್ಧಿ ಇಲ್ಲ’ ಹೇಳಲು ಅಶ್ವಿನಿ ಒಪ್ಪಲ್ಲ!
Cinema Latest TV Shows
Bigg Boss
ಗಿಲ್ಲಿ ಜೊತೆ ಕಿರಿಕ್ ಮಾಡ್ಕೊಂಡ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳು
Cinema Latest Sandalwood Top Stories
Sathish Ninasam 2
ʻಏಳೋ ಏಳೋ ಮಾದೇವʼ ಸಾಂಗ್ – ಸತೀಶ್ ನೀನಾಸಂ ಸೂಪರ್
Cinema Latest Sandalwood

You Might Also Like

Nirmalanandanatha Swamiji
Districts

ಶಿವಕುಮಾರ್‌ ಮುಖ್ಯಮಂತ್ರಿಯಾಗಬೇಕು: ನಿರ್ಮಲಾನಂದನಾಥ ಸ್ವಾಮೀಜಿ ಶಂಖನಾದ

Public TV
By Public TV
8 minutes ago
Shalini Rajneesh 1
Bengaluru City

ಹೂವುಗಳ ಮಾರಾಟದಂತೆ ಔಷಧೀಯ ಗಿಡಮೂಲಿಕೆಗಳಿಗೂ ಹರಾಜು ಅವಶ್ಯಕ – ಡಾ.ಶಾಲಿನಿ ರಜನೀಶ್

Public TV
By Public TV
15 minutes ago
modi stadium ahmedabad
Latest

ಅಹಮದಾಬಾದ್‌ನಲ್ಲಿ 2030ರ ಕಾಮನ್‌ವೆಲ್ತ್‌ ಗೇಮ್ಸ್‌ – ಈಗ ಅಧಿಕೃತ ಘೋಷಣೆ

Public TV
By Public TV
41 minutes ago
Hong Kong Buildings Fire
Latest

ಹಾಂಕಾಂಗ್ ಏಳು ಬಹುಮಹಡಿ ಕಟ್ಟಡಗಳಲ್ಲಿ ಬೆಂಕಿ ಅವಘಡ; 13 ಸಾವು

Public TV
By Public TV
42 minutes ago
karnataka high court
Court

KSCA ಚುನಾವಣೆ |ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿ ನಾಳೆಯವರೆಗೆ ಪ್ರಕಟಿಸುವಂತಿಲ್ಲ: ಹೈಕೋರ್ಟ್‌

Public TV
By Public TV
1 hour ago
cyclone montha rain weather Coast beach
Latest

ಬರ್ತಿದೆ `ಸೆನ್ಯಾರ್’ ಚಂಡಮಾರುತ – ತಮಿಳುನಾಡು, ಕೇರಳ ಸೇರಿ ಕೆಲ ರಾಜ್ಯಗಳಿಗೆ ಮಳೆ ಮುನ್ನೆಚ್ಚರಿಕೆ: IMD

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?