ಕೊಪ್ಪಳ ಪೊಲೀಸ್ ಠಾಣೆಯಲ್ಲಿ ಹೈಡ್ರಾಮ – ಡಿವೈಎಸ್‍ಪಿ ಮೇಲೆ ಕೈ ಮಾಡಿದ ಸಂಸದ ಸಂಗಣ್ಣ ಕರಡಿ

Public TV
1 Min Read
Sanganna KPL

– ಅವಾಚ್ಯ ಶಬ್ಧಗಳಿಂದ ನಿಂದಿಸಿದ ಪುತ್ರ ಅಮರೇಶ್ ಕರಡಿ

ಕೊಪ್ಪಳ: ಬಿಜೆಪಿಯವರ ಆಟೋ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಸಂಸದ ಸಂಗಣ್ಣ ಕರಡಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.

ನೂರಾರು ಬೆಂಬಲಿಗರೊಂದಿಗೆ ನಗರ ಠಾಣೆಗೆ ಮುತ್ತಿಗೆ ಹಾಕಿದ ಬಿಜೆಪಿ ಸಂಸದ ಸಂಗಣ್ಣ ಕರಡಿ ಮತ್ತು ಪುತ್ರ ಅಮರೇಶ್, ಪೊಲಿಸರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಠಾಣೆಯಲ್ಲಿ ಕರ್ತವ್ಯ ನಿರತ ಡಿವೈಎಸ್‍ಪಿ ಎಸ್ ಎಮ್ ಸಂದಿಗವಾಡ್ ಅವರನ್ನು ಸಂಗಣ್ಣ ಕರಡಿ ಎಳೆದಾಡಿದ್ದಾರೆ. ಇತ್ತ ತಂದೆ ಜೊತೆಯಲ್ಲಿದ್ದ ಪುತ್ರ ಸಹ ಅಧಿಕಾರಿಗಳನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.

vlcsnap 2018 05 28 13h06m46s289

ಬೆಳಗ್ಗೆ ಒತ್ತಾಯಪೂರ್ವಕವಾಗಿ ಬಿಜೆಪಿಯವರು ಅಂಗಡಿಗಳನ್ನು ಬಂದ್ ಮಾಡಿಸ್ತಿದ್ರು. ಈ ವೇಳೆಯಲ್ಲಿ ಪರವಾನಿಗೆ ಇಲ್ಲದ ಆಟೋವನ್ನು ಪೊಲೀಸರು ವಶಪಡಿಸಿಕೊಂಡಿದ್ರು. ಇದರಿಂದ ಆಕ್ರೋಶಗೊಂಡ ಬಿಜೆಪಿ ಮುಖಂಡರು ನಗರ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ನಗರ ಠಾಣೆಯ ಇನ್ಸ್ ಪೆಕ್ಟರ್ ರವಿ ಉಕ್ಕುಂದ ವಿರುದ್ಧ ಘೋಷಣೆ ಕೂಗಿದ್ದಾರೆ. ನಗರ ಠಾಣೆಯ ಬಾಗಿಲು ಮುಂದೆ ಕುಳಿತು ಸಂಸದ ಸಂಗಣ್ಣ ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *