Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಾದ್ಯಂತ ಭಾರೀ ಮಳೆ- ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಯುವಕ ಸಿಡಿಲಿಗೆ ಬಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ರಾಜ್ಯಾದ್ಯಂತ ಭಾರೀ ಮಳೆ- ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಯುವಕ ಸಿಡಿಲಿಗೆ ಬಲಿ

Belgaum

ರಾಜ್ಯಾದ್ಯಂತ ಭಾರೀ ಮಳೆ- ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಯುವಕ ಸಿಡಿಲಿಗೆ ಬಲಿ

Public TV
Last updated: May 29, 2018 8:46 am
Public TV
Share
3 Min Read
RAIN ALLOVER COLLAGE
SHARE

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಶುರುವಾಗಿದೆ. ಖಾಸಗಿ ಹವಾಮಾನ ಅಧ್ಯಯನ ಸಂಸ್ಥೆ ಸ್ಕೈಮೆಟ್ ಪ್ರಕಾರ ಸೋಮವಾರವೇ ಕೇರಳಕ್ಕೆ ಮುಂಗಾರು ಕಾಲಿಟ್ಟಿದೆ. ಆದರೆ ಹವಾಮಾನ ಇಲಾಖೆ ಪ್ರಕಾರ ಇವತ್ತು ಅಧಿಕೃತವಾಗಿ ಮಾನ್ಸೂನ್ ವರ್ಷಧಾರೆ ಶುರುವಾಗಲಿದೆ.

ರಾಜ್ಯಾದ್ಯಂತ ವರುಣನ ಆರ್ಭಟ ಮುಂದುವರೆದಿದ್ದು, ಬೆಳಗಾವಿ ಹಾಗೂ ಮಂಡ್ಯದಲ್ಲಿ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಉಡುಪಿ, ಚಾಮರಾಜನಗರ, ತುಮಕೂರು, ಕಾರವಾರದಲ್ಲೂ ಭಾರೀ ಮಳೆಯಿಂದ ಹಾನಿ ಸಂಭವಿಸಿದೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ನಿಚ್ಚಣಕಿ ಗ್ರಾಮದ ಹೊರವಲಯದಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಯುವಕನಿಗೆ ಸಿಡಿಲು ಬಡಿದು ಸಾವನ್ನಪ್ಪಿದ್ದಾನೆ. ಶಾಂತಪ್ಪ ಚುಳಕಿ(18) ಸಾವನ್ನಪ್ಪಿದ ಯುವಕನಾಗಿದ್ದು, ಈತ ಮರದ ಕೆಳಗೆ ಮೊಬೈಲ್ ನಲ್ಲಿ ಮಾತನಾಡುತ್ತಾ ನಿಂತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಕಿತ್ತೂರ ತಹಶಿಲ್ದಾರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಬಸವನಹಳ್ಳಿ ಗ್ರಾಮದಲ್ಲಿ ಸಿಡಿಲಿಗೆ ರೈತ ಮಹಿಳೆ ಗಿರಿಜಮ್ಮ(35) ಬಲಿಯಾಗಿದ್ದಾರೆ. ಸಂಜೆ ಆರು ಗಂಟೆಯಲ್ಲಿ ಈ ಅವಘಡ ನಡೆದಿದೆ. ಮನೆಯ ಹಿಂದಿನ ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

MND SIDILU DEATH

ಉಡುಪಿಯಲ್ಲಿಯೂ ವರ್ಷಧಾರೆ ಮತ್ತೆ ಮುಂದುವರಿದಿದೆ. ದಿನವಿಡೀ ಮೋಡ ಕವಿದಿದ್ದ ವಾತಾವರಣವಿದ್ದು, ಸೋಮವಾರ ತಡರಾತ್ರಿ ಗಾಳಿ ಸಹಿತ ಭಾರೀ ಮಳೆಯಾಗಿತ್ತು. ಸಂಜೆಯಾಗುತ್ತಿದ್ದಂತೆಯೇ ಮಳೆ ಸುರಿದಿದ್ದು, 24 ಗಂಟೆ ವಿದ್ಯುತ್ ಸಂಪರ್ಕವಿರಲಿಲ್ಲ. ಉಡುಪಿ, ಕಾಪು ತಾಲೂಕಿನಲ್ಲಿ ಇನ್ನೂ ವಿದ್ಯುತ್ ಪೂರೈಕೆ ಲಭ್ಯವಾಗಿಲ್ಲ. ಸದ್ಯ ಮೆಸ್ಕಾಂ ಸಿಬ್ಬಂದಿಗಳು ವಿದ್ಯುತ್ ಸಂಪರ್ಕ ರಿಪೇರಿಯಲ್ಲಿ ತೊಡಗಿದ್ದಾರೆ. ಮುಂದುವರೆದ ಮಳೆಯಿಂದಾಗಿ ಕರ್ತವ್ಯಕ್ಕೆ ಅಡ್ಡಿಯಾಗಿದ್ದು, ನಾಳೆಯವರೆಗೂ ವಿದ್ಯುತ್ ಪೂರೈಕೆ ಅಲಭ್ಯ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕಳೆದ ಒಂದು ವಾರದಿಂದ ಚಾಮರಾಜನಗರ ಜಿಲ್ಲೆಯಾದ್ಯಂತ ವರುಣ ಆರ್ಭಟ ಜೋರಾಗಿದೆ. ಮಳೆಯ ಆರ್ಭಟದಿಂದ ಜಿಲ್ಲೆಯ ಪ್ರಕೃತಿ ಸಂಪತ್ತು ಹಸಿರಾಗಿದೆ. ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಇನ್ನೂ ಮಳೆಯಿಂದಾಗಿ ರಸ್ತೆಗಳು ಕೆರೆಯಂತಾಗಿದೆ. ರಸ್ತೆ ಕಾಮಗಾರಿ ನಡೆಯುತ್ತಿರುವ ಕಾರಣ ರಸ್ತೆಗಳು ಕೆರೆಯಂತಾಗಿದೆ. ರಸ್ತೆಯಲ್ಲಿ ನೀರು ನಿಂತ ಕಾರಣ ಸವಾರರು ಪರದಾಟ ಅನುಭವಿಸುತ್ತಿದ್ದಾರೆ.

CNG RAIN

ಬಿಸಿಲ ಧಗೆಯಿಂದ ಬಸವಳಿದಿದ್ದ ಉತ್ತರ ಕನ್ನಡ ಜಿಲ್ಲೆಯ ಜನರಿಗೆ ಕಳೆದ ಎರಡು ದಿನದಿಂದ ವರುಣ ಕೃಪೆ ತೋರಿದ್ದಾನೆ. ಕಾರವಾರ ಜಿಲ್ಲೆಯಾದ್ಯಾಂತ ಮುಂಜಾನೆಯಿಂದ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಮಳೆಯಿಂದಾಗಿ ಕಾರವಾರ ನಗರದ ನಂದನಗದ್ದಾ ಅಂಬೇಡ್ಕರ್ ಕಾಲೋನಿಯ ದೀಪಕ್ ಗಣಪತಿ ಉಳ್ಸವಾರ್ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದಿದ್ದು, ಮನೆಯ ಮಾಡಿ ಸಂಪೂರ್ಣ ಜಖಂ ಆಗಿದೆ. ಪರಿಣಾಮ ಒಂದು ಲಕ್ಷ ರುಪಾಯಿಯಷ್ಟು ಹಾನಿಯಾಗಿದೆ. ಇನ್ನೂ ಕಾರವಾರ ಕಡಲತೀರದಲ್ಲಿ ಬಿರುಸಿನ ಗಾಳಿ ಬೀಸುತಿದ್ದು, 5 ಅಡಿಗಳಷ್ಟು ಅಲೆಗಳು ಅಪ್ಪಳಿಸುತ್ತಿದ್ದು, ಪ್ರವಾಸಿಗರಿಗೆ ಹಾಗೂ ಮೀನುಗಾರರಿಗೆ ಸಮುದ್ರದ ಬಳಿ ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ತುಮಕೂರು ಜಿಲ್ಲೆಯಲ್ಲಿ ಬಿರುಗಾಳಿ ಅವಾಂತರ ಸೃಷ್ಠಿಸಿದ್ದು, ತುರುವೇಕೆರೆ ತಾಲೂಕಿನ ದುಂಡಾ ಗ್ರಾಮದಲ್ಲಿ ಮರ ಮುರಿದು ಓರ್ವ ಸಾವು, ಮತ್ತೊರ್ವನಿಗೆ ಗಾಯ ಹಾಗೂ ಎರಡು ಎಮ್ಮೆಗಳು ಮೃತಪಟ್ಟಿವೆ. ನಡೆದಿದೆ. ಹೇಮಂತ್(38) ಸ್ಥಳದಲ್ಲೇ ಸಾವನ್ನಪ್ಪಿದ ಯುವಕನಾಗಿದ್ದು, ಮರ ಮುರಿದು ತಲೆ ಮೇಲೆ ಬಿದ್ದ ಪರಿಣಾಮ ಹೇಮಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೋಟದಿಂದ ಮನೆಗೆ ನಡೆದುಕೊಂಡು ಬರುವಾಗ ಈ ಅವಘಡ ಸಂಭವಿಸಿದೆ. ಇನ್ನೂ ಚೇಳೂರಿನಲ್ಲಿ ಎರಡು ಗುಡಿಸಲು ಮೇಲೆ ಬೇವಿನ ಮರ ಮುರಿದು ಬಿದ್ದಿದ್ದು, ರಂಗನಾಥ ಎಂಬವರಿಗೆ ಗಾಯ, ಎರಡು ಎಮ್ಮೆ-ಕರುಗಳು ಮೃತಪಟ್ಟಿದೆ. ಸೋಮವಾರ ರಾತ್ರಿ ಬಿಸಿದ ಬಿರುಗಾಳಿಯಲ್ಲಿ ಈ ಅವಘಡ ಸಂಭವಿಸಿದೆ.

CNG RAIN

TAGGED:bengalurudeathPublic TVrainwindಪಬ್ಲಿಕ್ ಟಿವಿಬಿರುಗಾಳಿಬೆಂಗಳೂರುಮಳೆಸಾವು
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

01 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-1

Public TV
By Public TV
3 seconds ago
02 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-2

Public TV
By Public TV
1 minute ago
03 8
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-3

Public TV
By Public TV
3 minutes ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
45 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
47 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?