ಡಿಕೆಶಿ ಮೇಲೆ ಸಿಬಿಐ, ಐಟಿ ದಾಳಿ ನಿಲ್ಲದೇ ಹೋದ್ರೆ ಒಕ್ಕಲಿಗ ಸಂಘದಿಂದ ರಾಜ್ಯಾದ್ಯಂತ ಪ್ರತಿಭಟನೆ!

Public TV
1 Min Read
okkaliga sangha

ಬೆಂಗಳೂರು: ಡಿ.ಕೆ.ಶಿವಕುಮಾರ್ ಮೇಲೆ ಸಿಬಿಐ, ಐಟಿ ದಾಳಿ ನಿಲ್ಲದೇ ಹೋದ್ರೆ ರಾಜ್ಯಾದ್ಯಂತ ಒಕ್ಕಲಿಗರ ಸಂಘ ಪ್ರತಿಭಟನೆಗೆ ನಿರ್ಧಾರ ಮಾಡಿದೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡ ಹೇಳಿದ್ದಾರೆ.

ಮೋದಿ ವಿರುದ್ದ ಪ್ರತಿಭಟನೆ ಗೆ ನಿರ್ಧಾರ ಮಾಡಿರುವ ರಾಜ್ಯ ಒಕ್ಕಲಿಗರ ಸಂಘ ಇದೇ ರೀತಿ ದಾಳಿ ಮುಂದುವರಿದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ಮಾಡುವ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು. ಇದೇ ವೇಳೆ ಡಿ.ಕೆ.ಶಿವಕುಮಾರ್ ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ ಮಾಡಿದರು.

ನೋಟು ನಿಷೇಧಗೊಂಡ ಸಂದರ್ಭದಲ್ಲಿ ಅವ್ಯವಹಾರ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಸಿಬಿಐ ವಿಶೇಷ ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ನಿನ್ನೆ ಬೆಂಗಳೂರು ಸೇರಿದಂತೆ ರಾಜ್ಯದ 11 ಕಡೆ ದಾಳಿ ನಡೆಸಿದ್ದರು. ರಾಮನಗರ ಕಾರ್ಪೋರೇಶನ್ ಬ್ಯಾಂಕ್ ಮ್ಯಾನೇಜರ್ ಬಿ ಪ್ರಕಾಶ್ ಮನೆ ಹಾಗೂ ಕಚೇರಿಗಳ ಮೇಲೆ ಕೂಡ ದಾಳಿ ಮಾಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *