Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ತಾರ್ಕಿಕ ಅಂತ್ಯ – ನಿರ್ವಹಣಾ ಮಂಡಳಿ ಅಧಿಕೃತಗೊಳಿಸಿದ ಕೇಂದ್ರ ಸರ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾವೇರಿ ನೀರು ಹಂಚಿಕೆ ವಿವಾದಕ್ಕೆ ತಾರ್ಕಿಕ ಅಂತ್ಯ – ನಿರ್ವಹಣಾ ಮಂಡಳಿ ಅಧಿಕೃತಗೊಳಿಸಿದ ಕೇಂದ್ರ ಸರ್ಕಾರ

Bengaluru City

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ತಾರ್ಕಿಕ ಅಂತ್ಯ – ನಿರ್ವಹಣಾ ಮಂಡಳಿ ಅಧಿಕೃತಗೊಳಿಸಿದ ಕೇಂದ್ರ ಸರ್ಕಾರ

Public TV
Last updated: June 1, 2018 10:25 pm
Public TV
Share
3 Min Read
KRS 5
SHARE

ನವದೆಹಲಿ: ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಕಾವೇರಿ ನೀರು ನಿರ್ವಹಣಾ ಸಮಿತಿಯನ್ನು ಭಾರತ ಸರ್ಕಾರದ ಗೆಜೆಟ್ ನಲ್ಲಿ ಅಧಿಕೃತವಾಗಿ ಇಂದು ಸೇರ್ಪಡೆ ಮಾಡಲಾಗಿದೆ. ಕೇಂದ್ರ ಜಲ ಸಂಪನ್ಮೂಲ ಇಲಾಖೆ ಗೆಜೆಟ್ ಸೇರಿಸಲು ಸೂಚಿಸಿದ ಬೆನ್ನೆಲ್ಲೇ ಕೇಂದ್ರ ಸರ್ಕಾರದ ತನ್ನ ಅಧಿಕೃತ ಗೆಜೆಟ್ ಗೆ ಕಾವೇರಿ ನೀರು ನಿರ್ವಹಣಾ ಸಮಿತಿಯನ್ನು ಸೇರ್ಪಡೆ ಮಾಡಿಕೊಂಡಿದೆ. ಈ ಮೂಲಕ ಮೂರು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ನಡುವೆ ಇದ್ದ ಹಗ್ಗ ಜಗ್ಗಾಟಕ್ಕೆ ಬ್ರೇಕ್ ಹಾಕುವ ಪ್ರಯತ್ನ ಮಾಡಲಾಗಿದೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಫೆಬ್ರವರಿ 16 ರಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ನೀರು ಹಂಚಿಕೆಗೆ ಸಮಿತಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಸುಪ್ರೀಂ ಸೂಚನೆ ಹಿನ್ನೆಲೆ ಅಂತರಾಜ್ಯ ನದಿ ನೀರು ವಿವಾದ 1956 ರ ಕಾಯ್ದೆ ಅನ್ವಯ ಕರಡು ತಯಾರಿಸಿದ್ದ ಕೇಂದ್ರ ಸರ್ಕಾರ ಮೇ ಮೊದಲ ವಾರದಲ್ಲಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿತ್ತು. ಈ ವೇಳೆ ಕೆಲ ಮಾರ್ಪಾಡುಗಳೊಂದಿಗೆ ಒಪ್ಪಿಗೆ ಸೂಚಿಸಿದ್ದ ಸುಪ್ರೀಂ ಕೋರ್ಟ್ ಸಮಿತಿ ಅನುಷ್ಠಾನಕ್ಕೆ ತರುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.

ಇಂದು ಗೆಜೆಟ್ ಮುದ್ರಣ ವಿಭಾಗದ ಹಿರಿಯ ಜಂಟಿ ಆಯುಕ್ತ ಆರ್ ಕೆ ಕನೋಡಿಯಾ ಭಾರತ ಸರ್ಕಾರಿ ಮುದ್ರಣದ ಮ್ಯಾನೇಜರ್‍ಗೆ ಪ್ರಾಧಿಕಾರ ರಚನೆ ಕುರಿತಾಗಿ ಗ್ಯಾಜೆಟ್ ನಲ್ಲಿ ಪ್ರಕಟಿಸಲು ನಿರ್ದೇಶನ ನೀಡಿದರು. ಅದರಂತೆ ಗೆಜೆಟ್ ಮುದ್ರಣವಾಗಿದ್ದು ಅಧಿಕೃತವಾಗಿ ಕಾವೇರಿ ನೀರು ನಿರ್ವಹಣಾ ಸಮಿತಿ ಕಾರ್ಯನಿರ್ವಹಿಸಲಿದೆ.

KRS DAM 1

ಸ್ಕೀಂ ಕರಡಿನ ಮುಖ್ಯಾಂಶಗಳೇನು..?

ಸ್ಕೀಂ ರಚನೆ: ನ್ಯಾಯಮಂಡಳಿ ಆದೇಶ ಮಾರ್ಪಡಿಸಿ ತೀರ್ಪನ ಅನ್ವಯ ಪ್ರಾಧಿಕಾರದ ಸ್ವರೂಪದ ಸ್ಕೀಂ ರಚನೆ ಮಾಡಲಾಗಿದೆ. ಪ್ರಾಧಿಕಾರವು ಕಾವೇರಿ ನೀರಿನ ಸಂಗ್ರಹ, ಹಂಚಿಕೆ ಮತ್ತು ನಿಯಂತ್ರಣ ಕುರಿತು ಗಮನಹರಿಸಲಿದೆ. ಜಲಾಶಯಗಳ ಮೇಲುಸ್ತುವಾರಿ ಹಾಗೂ ನೀರು ಬಿಡುಗಡೆಗೆ ಸಮಿತಿಯ ಸಹಕಾರ ಪಡೆಯಲಿದೆ. ಬಿಳಿಗುಂಡ್ಲು ಮಾಪಕ ಕೇಂದ್ರದ ಮೂಲಕ ನೀರಿನ ಅಳತೆ ಮಾಡುವ ಜವಾಬ್ದಾರಿ ಕೂಡ ಪ್ರಾಧಿಕಾರದ್ದಾಗಿರುತ್ತದೆ. ಪ್ರಾಧಿಕಾರ ತನ್ನ ಸಹಾಯಕ್ಕಾಗಿ ಒಂದು ಅಥವಾ ಎರಡು ಸಮಿತಿ ನೇಮಿಸಿಕೊಳ್ಳುವ ಅಧಿಕಾರ ಹೊಂದಿರುತ್ತದೆ. ನೀರಿನ ಒಳಹರಿವು, ಸಂಗ್ರಹ, ಬಳಕೆ ಮತ್ತು ಬಿಡುಗಡೆ ಕುರಿತಂತೆ ಪ್ರಾಧಿಕಾರವು 10 ದಿನಕ್ಕೊಮ್ಮೆ ಪರಿಶೀಲಿಸಿ, ಸಂಬಂಧಿಸಿದ ರಾಜ್ಯಗಳಿಗೆ ನಿಯಮಿತವಾಗಿ ನೀರನ್ನು ಪಡೆಯಲು ಅವಕಾಶ ನೀಡಲಿದೆ. ಹಂಚಿಕೆಯಾದ ನೀರನ್ನು ಸಂಬಂಧಿಸಿದ ರಾಜ್ಯಗಳಿಗೆ ಕೊಡಿಸಲು ಪ್ರಾಧಿಕಾರವು ಪ್ರಯತ್ನಿಸಲಿದೆ. ಮಳೆ ಕೊರತೆಯನ್ನು ಪರಿಶೀಲಿಸಿ ಅರಿಯಲಿರುವ ಪ್ರಾಧಿಕಾರವು ಕೊರತೆಗೆ ಅನುಗುಣವಾಗಿಯೇ ನೀರು ಹಂಚಲಿದೆ.

ಮಾಹಿತಿ ಹಂಚಿಕೆ: ಪ್ರಮುಖವಾಗಿ ಆಯಾ ರಾಜ್ಯಗಳ ಬೆಳೆಯ ಪ್ರಮಾಣ, ಬೆಳೆ ಪದ್ಧತಿ, ನೀರಾವರಿ ಅವಲಂಬನೆ ಅರಿತು ಮತ್ತು ಕುಡಿಯುವ ನೀರು ಹಾಗೂ ಕೈಗಾರಿಕೆಗೂ ಮಳೆಯ ಪ್ರಮಾಣ ಆಧರಿಸಿಯೇ ನಿರ್ಧರಿಸಲಿದೆ. ಪ್ರಾಧಿಕಾರವು ಅತ್ಯುತ್ತಮ ಸಂವಹನ ಜಾಲ ರೂಪಿಸಿ ಎಲ್ಲಾ ಅಂಕಿ ಅಂಶಗಳು ಕಣಿವೆ ವ್ಯಾಪ್ತಿಯ ನಾಲ್ಕು ರಾಜ್ಯಗಳಿಗೆ ಲಭ್ಯವಾಗುವಂತೆ ಮಾಡಲಿದೆ. ಇದಕ್ಕಾಗಿ ಕೇಂದ್ರ ಜಲ ಆಯೋಗ ಮತ್ತು ಕೇಂದ್ರ-ರಾಜ್ಯ ಸರ್ಕಾರದ ಸಂಬಂಧಿಸಿದ ಇಲಾಖೆಗಳ ನೆರವು ಪಡೆಯಲಿದೆ.

KRS 2

ಬೇಡಿಕೆ ಪಟ್ಟಿ: ಕಣಿವೆ ವ್ಯಾಪ್ತಿಯ ರಾಜ್ಯಗಳು ಆಯಾ ವರ್ಷದ ಬೇಡಿಕೆ ಪಟ್ಟಿಯನ್ನು ಜಲವರ್ಷದ ಆರಂಭದಲ್ಲೇ ಪ್ರಾಧಿಕಾರಕ್ಕೆ ನೀಡುವುದು ಕಡ್ಡಾಯ. ಬೇರೆ ಬೇರೆ ಜಲಾನಯನ ಪ್ರದೇಶಗಳಲ್ಲಿ ಬೇರೆ ಬೇರೆ ಸಂದರ್ಭಗಳಲ್ಲಿ ಸುರಿಯುವ ಮಳೆಯ ಪ್ರಮಾಣ ಆಧರಿಸಿ ಬೇಡಿಕೆ ಪಟ್ಟಿ ತಯಾರಿಸುವುದು ಕಡ್ಡಾಯ. ಕಾವೇರಿ ಕಣಿವೆಯಲ್ಲಿ ಕೈಗೊಳ್ಳುವ ಯಾವುದೇ ಕಾಮಗಾರಿಯನ್ನು ಪರಿಶೀಲಿಸುವ ಪ್ರಾಧಿಕಾರ ಹಾಗೂ ಅದರ ಸದಸ್ಯರಿಗೆ ಇರುತ್ತದೆ. ರಾಜ್ಯಗಳು ತೀರ್ಪಿನ ಅನುಷ್ಠಾನಕ್ಕೆ ಸಮ್ಮತಿಸದಿದ್ದರೆ ಮತ್ತೆ ಕೇಂದ್ರ ಸರ್ಕಾರದ ಮೊರೆ ಹೋಗುವುದು. ನೀರಿನ ಸದ್ಬಳಕೆ ಮತ್ತು ಸಂಗ್ರಹ ಕುರಿತಂತೆ ಪ್ರಾಧಿಕಾರವು ರಾಜ್ಯ ಸರ್ಕಾರಗಳಿಗೆ ಸಲಹೆ ನೀಡುವ ಅಧಿಕಾರ ಹೊಂದಿದೆ. ಕಾವೇರಿ ಜಲ ನಿಯಂತ್ರಣ ಸಮಿತಿ ಅಗತ್ಯ ಎಂದು ಕಂಡುಬಂದಲ್ಲಿ ಅದನ್ನು ರಚಿಸುವ ಅಧಿಕಾರ ಪ್ರಾಧಿಕಾರಕ್ಕೆ ಇರುತ್ತದೆ.

ಬೆಳೆ ಪದ್ಧತಿ: ಬೆಳೆಯ ಪದ್ಧತಿಯಲ್ಲಿ ಬದಲಾವಣೆ ಹಾಗೂ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ನೀರಿನ ನಿಯಮಿತ ಬಳಕೆ ಬಗ್ಗೆ ಪ್ರಾಧಿಕಾರವು ಸಲಹೆ ನೀಡಬೇಕು. ಪ್ರಾಧಿಕಾರವು ಪ್ರತಿವರ್ಷ ಸೆಪ್ಟೆಂಬರ್ 30ರೊಳಗೆ ತನ್ನ ಕಾರ್ಯಚಟುವಟಿಕೆಯನ್ನು ಒಳಗೊಂಡ ಪಟ್ಟಿಯನ್ನು ಕಣಿವೆ ವ್ಯಾಪ್ತಿಯ ನಾಲ್ಕು ರಾಜ್ಯಗಳಿಗೆ ನೀಡಬೇಕು. ಪ್ರಾಧಿಕಾರದಲ್ಲಿ ಇರುವ ಮಾಹಿತಿಯನ್ನು ರಾಜ್ಯಗಳು ಬಯಸಿದಾಗ ಕೊಡಬೇಕು.

ವೆಚ್ಚ: ನೀರಿನ ಸಂಗ್ರಹ, ಬಳಕೆ, ಬಿಡುಗಡೆ, ಮಾಪನ ಕೇಂದ್ರಗಳ ಅಳವಡಿಕೆಯ ಖರ್ಚು ವೆಚ್ಚವನ್ನು ಆಯಾ ವ್ಯಾಪ್ತಿಯ ರಾಜ್ಯಗಳೇ ಭರಿಸಬೇಕಿದೆ. ಪ್ರಾಧಿಕಾರದ ಸಭೆ ಮತ್ತು ಚಟುವಟಿಕೆಗಳ ಎಲ್ಲಾ ದಾಖಲೆಗಳು ಹಾಗೂ ಲೆಕ್ಕಪತ್ರ ಸಂಗ್ರಹಿಸಿಡಲು ಸೂಕ್ತವಾದ ಕಚೇರಿ ಸ್ಥಾಪಿಸಬೇಕು. ದಾಖಲೆಗಳು ಮತ್ತು ಮಾಪನ ದತ್ತಾಂಶಗಳು ಈ ಕಚೇರಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಲಭ್ಯ ಇರಬೇಕು. ಈ ಪ್ರಾಧಿಕಾರದಲ್ಲಿ ಕಾರ್ಯನಿರ್ವಹಿಸಲಿರುವ ಎಲ್ಲಾ ಸಿಬ್ಬಂದಿ ಹಾಗೂ ಅಧಿಕಾರಗಳು ನೇಮಕ ಪ್ರಕ್ರಿಯೆ ಕೇಂದ್ರ ಸರ್ಕಾರದ ನಿಯಾಮವಳಿಗಳ ಪ್ರಕಾರ ಆಗಬೇಕು ಹಾಗೂ ಪ್ರಾಧಿಕಾರದ ಕೇಂದ್ರ ಕಚೇರಿಯು ದೆಹಲಿಯಲ್ಲೇ ಇರಬೇಕು ಎಂಬ ಅಂಶಗಳಿವೆ.

KRS 3

TAGGED:Cauvery RiverNew DelhiPublic TVSupreme Courtwater managementಕಾವೇರಿಕಾವೇರಿ ನೀರು ನಿರ್ವಹಣಾ ಮಂಡಳಿನದಿನವದೆಹಲಿನೀರು ಹಂಚಿಕೆಪಬ್ಲಿಕ್ ಟಿವಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Narendra Modi great friend of mine Donald Trump Announces 26 percentage Discounted Reciprocal Tariff On India
Latest

ಟ್ರಂಪ್ ಟ್ಯಾರಿಫ್‌ ಗೆ ಭಾರೀ ಹಿನ್ನಡೆ – ಸುಂಕ ಹೇರಲು ಅಧಿಕಾರ ಇಲ್ಲ; ಯುಎಸ್‌ ಸುಪ್ರೀಂ ಕೋರ್ಟ್‌ ಆದೇಶ

Public TV
By Public TV
4 minutes ago
Pralhad Joshi 2
Bagalkot

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ – ಕಾಂಗ್ರೆಸ್‌ ಸರ್ಕಾರ ಇದ್ದಾಗಲೇ ಯಾಕೆ ಹೀಗಾಗುತ್ತೆ: ಜೋಶಿ ಪ್ರಶ್ನೆ

Public TV
By Public TV
21 minutes ago
Yathindra Siddaramaiah 1
Latest

ಆಧಾರರಹಿತ ಆರೋಪ ಮಾಡಿ ಅವಮಾನಿಸಿದ್ದರೆ ಸ್ನೇಹಮಯಿ ವಿರುದ್ಧ ಕ್ರಮ ಆಗ್ಬೇಕು: ಯತೀಂದ್ರ ಸಿದ್ದರಾಮಯ್ಯ

Public TV
By Public TV
1 hour ago
Contractors Association
Dharwad

ಬಾಕಿ ಬಿಲ್​ 37,000 ಕೋಟಿ ಬಿಡುಗಡೆಗೆ ಆಗ್ರಹ – ಮಾ.6 ರಂದು ಬೆಂಗಳೂರಲ್ಲಿ ಮುಷ್ಕರಕ್ಕೆ ಗುತ್ತಿಗೆದಾರರ ಸಂಘ ಕರೆ

Public TV
By Public TV
1 hour ago
Bagalkote 1
Bagalkot

ಬಾಗಲಕೋಟೆಯಲ್ಲಿ ಉದ್ವಿಗ್ನ – ಮುಸ್ಲಿಂ ಮುಖಂಡರು ಗೈರು, ಶಾಂತಿ ಸಭೆ ವಿಫಲ

Public TV
By Public TV
1 hour ago
wife also hangs herself a week after husband suicide in bhadravati
Crime

ಪತಿ ಆತ್ಮಹತ್ಯೆ ಮಾಡಿಕೊಂಡ ವಾರದಲ್ಲೆ ಪತ್ನಿಯೂ ನೇಣಿಗೆ ಶರಣು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?